ಈ ಸಂದರ್ಭದಲ್ಲಿ ಹೆಚ್ಚಿನ ಬ್ಯಾಂಕ್ ಸಾಲ ನೀಡಿ, ಮತ್ತಿತರ ಕ್ರಮಗಳ ಮೂಲಕ ಆರ್ಥಿಕತೆಯಲ್ಲಿ ಪೂರೈಕೆ ಚೇತರಿಸಿಕೊಳ್ಳುವಂತೆ ಮಾಡಬಹುದು. ಆದರೆ ಆಂತರಿಕವಾಗಿ ಬೇಡಿಕೆ ಸೃಷ್ಟಿಯಾಗುವ ಮೂಲಕವೇ ಆರ್ಥಿಕತೆ ಬೆಳವಣಿಗೆಗೆ ಉತ್ತೇಜನ ಸಿಗಬೇಕು ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮಂಡಳಿ ನಿರ್ದೇಶಕ ಎಸ್. ಗುರುಮೂರ್ತಿ ಅಭಿಪ್ರಾಯ ಪಟ್ಟಿದ್ದಾರೆ.
ಎರಡನೇ ತ್ರೈಮಾಸಿಕದ ಕೊನೆಗೆ ಮತ್ತೊಂದು ಸುತ್ತಿನ ಆರ್ಥಿಕ ಪ್ಯಾಕೇಜ್ ನಿರೀಕ್ಷೆ ಮಾಡಬಹುದು. ಅಷ್ಟರಲ್ಲಿ ಕೊರೊನಾ ಒಂದು ಹಂತಕ್ಕೆ ನಿಯಂತ್ರಣದಲ್ಲಿ ಇರುತ್ತದೆ. ಇದರಿಂದ ಬೇಡಿಕೆ ಸೃಷ್ಟಿಯಾಗಲು ನೆರವಾಗುತ್ತದೆ. ಆದರೆ ಈ ಆರ್ಥಿಕ ಉತ್ತೇಜನ ನೀಡಬೇಕು ಅಂದರೆ, ಸರ್ಕಾರದ ವಿತ್ತೀಯ ಕೊರತೆ ಭರಿಸಿಕೊಳ್ಳಬೇಕು. ಈಗಾಗಲೇ ಆರ್ಥಿಕ ಸ್ಥಿತಿ ಒತ್ತಡದಲ್ಲಿದೆ ಎಂದಿದ್ದಾರೆ.
ಬ್ಯಾಂಕ್ ಗಳು ಆರ್ಥಿಕತೆ ಕುಸಿಯದಂತೆ ತಡೆಯಬಹುದು
ಬ್ಯಾಂಕ್ ಗಳಿಂದ ಬೆಳವಣಿಗೆಗೆ ಚಾಲನೆ ನೀಡುವುದಕ್ಕೆ ಸಾಧ್ಯವಿಲ್ಲ. ಆದರೆ ಆರ್ಥಿಕತೆ ಇನ್ನಷ್ಟು ಕುಸಿಯದಂತೆ ತಡೆಯಬಹುದು. ಆಂತರಿಕ ಬೇಡಿಕೆಯಿಂದಷ್ಟೇ ಉತ್ತೇಜನ ಸಿಗಬಹುದು. ಅದು ಅಂತಿಮವಾಗಿ ಆರ್ಥಿಕವಾಗಿ ಪ್ಯಾಕೇಜ್ ಘೋಷಣೆ ಆದ ಮೇಲೆ ಸಾಧ್ಯವಾಗುತ್ತದೆ ಎಂದು ಗುರುಮೂರ್ತಿ ಮಂಗಳವಾರ ಹೇಳಿದ್ದಾರೆ.
ಆರ್ಥಿಕತೆ ಮೇಲಿನ ಪರಿಣಾಮ ಹೇಳುವುದು ಕಷ್ಟ
ಭಾರತ್ ವಾಣಿಜ್ಯ ಮಂಡಳಿಯು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಡಿಯೋ ಕಾಲ್ ಮೂಲಕ ಮಾತನಾಡಿ, ಕೇಂದ್ರ ಸರ್ಕಾರ ಘೋಷಣೆ ಮಾಡಿದ 20 ಲಕ್ಷ ಕೋಟಿ ರುಪಾಯಿ ಪ್ಯಾಕೇಜ್ ಅಂತಿಮವಲ್ಲ. ಕೊರೊನಾ ಬಿಕ್ಕಟ್ಟು ಈಗಲೂ ಇದೆ. ಆರ್ಥಿಕತೆಯ ಮೇಲೆ ಅದರ ಪರಿಣಾಮ ಯಾವ ಮಟ್ಟಕ್ಕೆ ಇರುತ್ತದೆ ಎಂದು ಹೇಳುವುದು ಕಷ್ಟ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ಬೇರೆಲ್ಲ ದೇಶಗಳಿಗಿಂತ ಬೇಗ ಚೇತರಿಕೆ
ಬೇರೆಲ್ಲ ದೇಶಗಳಿಗಿಂತ ಭಾರತದ ಆರ್ಥಿಕತೆ ವೇಗವಾಗಿ ಚೇತರಿಸಿಕೊಳ್ಳಲಿದೆ ಹಾಗೂ ಮುಂದಿನ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದಿಂದಲೇ ಕಾಣಿಸಲು ಆರಂಭವಾಗುತ್ತದೆ. ಆರ್ಥಿಕತೆಯು ತಾನಾಗಿಯೇ ಆರೋಗ್ಯ ಹಾಗೂ ಅದಕ್ಕೆ ಸಂಬಂಧಿಸಿದ ವಲಯಗಳ ಬದಲಾವಣೆ ಮೂಲಕ ಚೇತರಿಕೆ ಕಾಣುತ್ತದೆ. ಜಾಗತಿಕ ಆರ್ಥಿಕತೆಯಲ್ಲಿನ ಬದಲಾವಣೆಯೂ ಇದಕ್ಕೆ ನೆರವಾಗುವ ಬಗ್ಗೆ ಮಾತನಾಡಿದ್ದಾರೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications