ಜೈಪುರ, ಜೂನ್ 12: ಅಮೇರಿಕಾ ಮೂಲದ ಮಹಿಳೆಗೆ ₹ 300 ಮೌಲ್ಯದ ಕೃತಕ ಆಭರಣವನ್ನು 6 ಕೋಟಿ ರೂ. ಮೌಲ್ಯದ ಆಭರಣ ಎಂದು ವ್ಯಾಪಾರಿಯೊಬ್ಬ ಪಂಗನಾಮ ಹಾಕಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದ್ದು ಇದೀಗ ಪೊಲೀಸ್ ದೂರು ದಾಖಲಾಗಿದೆ.
ಅಮೆರಿಕದ ಪ್ರಜೆಯಾದ ಚೆರಿಶ್ ಭಾರತಕ್ಕೆ ಬಂದಿದ್ದಾಗ ರಾಜಸ್ಥಾನದ ಜೈಪುರದ ಜೊಹ್ರಿ ಬಜಾರ್ನಲ್ಲಿರುವ ಅಂಗಡಿಯೊಂದರಲ್ಲಿ ಆಭರಣಗಳನ್ನು ಖರೀದಿಸಿದ್ದರು. ಅತ್ಯಮೂಲ್ಯ ಅಭರಣ ಎಂದು ನಂಬಿದ್ದ ಚೆರಿಶ್ ಅವರು ಈ ವರ್ಷ ಏಪ್ರಿಲ್ನಲ್ಲಿ ಅಮೇರಿಕಾದಲ್ಲಿ ನಡೆದ ಪ್ರದರ್ಶನದಲ್ಲಿ ಆಭರಣಗಳನ್ನು ಪ್ರದರ್ಶಿಸಿದ್ದರು. ಈ ವೇಳೆ ಇದು ನಕಲಿ ಅಭರಣ ಎಂದು ತಿಳಿದುಬಂದಿದೆ.

ಚಿನ್ನದ ಪಾಲಿಶ್ ಹಾಕಲಾಗಿದ್ದ ಬೆಳ್ಳಿ ಆಭರಣವನ್ನು 6 ಕೋಟಿ ರೂ. ಖರೀದಿಸಿದ್ದು ಮೋಸ ಹೋದ ಬಗ್ಗೆ ಗೊತ್ತಾಗುತ್ತಿದ್ದಂತೆಯೇ ಚೆರಿಶ್ ಮತ್ತೆ ಭಾರತಕ್ಕೆ ಮರಳಿ ಬಂದಿದ್ದಾರೆ. ಜೈಪುರಕ್ಕೆ ಆಗಮಿಸಿದ ತನಗೆ ಆಭರಣಗಳನ್ನು ಮಾರಾಟ ಮಾಡಿದ್ದ ವ್ಯಾಪಾರಿ ಗೌರವ್ ಸೋನಿ ಬಳಿ ವಿಚಾರಿಸಿದ್ದಾರೆ. ಆದರೆ ಈ ವೇಳೆ ಚೆರಿಶ್ ಮಾಡಿರುವ ಆರೋಪಗಳನ್ನು ತಳ್ಳಿಹಾಕಿದ್ದಾನೆ.
ಬೇರೆ ದಾರಿ ಕಾಣದೆ ಅಮೇರಿಕಾ ಪ್ರಜೆ ಚೆರಿಶ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಜೊತೆಗೆ ಯುಎಸ್ ರಾಯಭಾರ ಕಚೇರಿಯಿಂದ ಸಹಾಯವನ್ನು ಪಡೆದಿದ್ದು , ಈ ವಿಷಯದ ಬಗ್ಗೆ ತನಿಖೆ ನಡೆಸುವಂತೆ ಜೈಪುರ ಪೊಲೀಸರನ್ನು ಒತ್ತಾಯಿಸಿದ್ದಾರೆ.
2022 ರಲ್ಲಿ ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಗೌರವ್ ಸೋನಿ ಕಳೆದ ಎರಡು ವರ್ಷಗಳಲ್ಲಿ ಈತನಿಗೆ 6 ಕೋಟಿ ರೂಪಾಯಿ ಪಾವತಿ ಮಾಡಿದ್ದೆ. ಆದರೆ ಆತ ನನಗೆ ಕೃತಕ ಆಭರಣಗಳನ್ನು ನೀಡಿದ್ದಾನೆ ಎಂದು ಮಹಿಳೆ ಮನಕ್ ಚೌಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದಕ್ಕೆ ವಿರುದ್ದವಾಗಿ ಆರೋಪಿಗಳು ಆಕೆಯ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ್ದರು. ಈ ವೇಳೆ ಅಮೇರಿಕಾ ರಾಯಭಾರಿ ಕಚೇರಿ ಮದ್ಯಪ್ರವೇಶಿಸಿದ ಹಿನ್ನಲೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಪರಾರಿಯಾಗಿರುವ ಗೌರವ್ ಮತ್ತು ಆತನ ತಂದೆ ರಾಜೇಂದ್ರ ಸೋನಿಗಾಗಿ ಶೋಧ ನಡೆಸಲಾಗುತ್ತಿದ್ದು, ಇಬ್ಬರು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಬ್ಬರು ವ್ಯಕ್ತಿಗಳ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆಭರಣಕ್ಕೆ ನಕಲಿ ಪ್ರಮಾಣಪತ್ರ ನೀಡಿದ ವ್ಯಕ್ತಿ ನಂದ್ ಕಿಶೋರ್ ಎಂಬಾತನನ್ನು ಬಂಧಿಸಲಾಗಿದೆ. ಆರೋಪಿಗಳ ಬಂಧನಕ್ಕೆ ಜೈಪುರ ಪೊಲೀಸರ ವಿಶೇಷ ತಂಡ ರಚಿಸಲಾಗಿದೆ.
ಅಂಗಡಿ ಮಾಲೀಕರು ಇತ್ತೀಚೆಗೆ 3 ಕೋಟಿ ರೂಪಾಯಿ ಮೌಲ್ಯದ ಅಪಾರ್ಟ್ಮೆಂಟ್ ಖರೀದಿಸಿದ್ದಾರೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications