ರಾಷ್ಟ್ರೀಯ ಸಾಂಖ್ಯಿಕ ಇಲಾಖೆ (NSO) ಸೋಮವಾರ ಬಿಡುಗಡೆ ಮಾಡಿರುವ ದತ್ತಾಂಶದಲ್ಲಿ ಆಗಸ್ಟ್ ತಿಂಗಳ ಚಿಲ್ಲರೆ ಹಣದುಬ್ಬರ ದರವು 6.69%ನಷ್ಟು ಇದೆ ಎಂದು ತಿಳಿದುಬಂದಿದೆ. ಅದರ ಹಿಂದಿನ ತಿಂಗಳಾದ ಜುಲೈನಲ್ಲಿ 6.73% ಇತ್ತು. ಗ್ರಾಹಕ ದರ ಸೂಚ್ಯಂಕದ (ಸಿಪಿಐ) ಮುಖ್ಯ ಹಣದುಬ್ಬರ ದರವು 5.8% ಇದ್ದು, ಜುಲೈನಲ್ಲಿ 5.7% ದಾಖಲಾಗಿತ್ತು.
ಆಗಸ್ಟ್ ನಲ್ಲಿ ಆಹಾರ ಹಣದುಬ್ಬರ ದರವು 9.05%ಗೆ ಇಳಿದಿದೆ. ಜುಲೈನಲ್ಲಿ ಇದು 9.27% ಇತ್ತು. ಭಾರತದ ನಗರ ಪ್ರದೇಶಗಳಲ್ಲಿ ಹಣದುಬ್ಬರವು 6.8% ಇದ್ದರೆ, ಗ್ರಾಮೀಣ ಭಾಗದಲ್ಲಿ 6.66% ದಾಖಲಾಗಿದೆ. ಮಾರ್ಚ್ ನಲ್ಲಿ ಲಾಕ್ ಡೌನ್ ಘೋಷಣೆ ಆದ ಮೇಲೆ ನಗರ ಪ್ರದೇಶಕ್ಕಿಂತ ಗ್ರಾಮೀಣ ಭಾಗದ ಹಣದುಬ್ಬರವು ಹೆಚ್ಚಾಗಿತ್ತು.
ಹೆಚ್ಚುತ್ತಿರುವ ಆಹಾರ ಪದಾರ್ಥಗಳ ಬೆಲೆಯ ಕಾರಣಕ್ಕೆ ಜುಲೈನಲ್ಲಿ ಹಣದುಬ್ಬರವು 6.9% ತಲುಪಿತ್ತು. ಭಾರತೀಯ ರಿಸರ್ವ್ ಬ್ಯಾಂಕ್ ನಿಂದ ಹಣದುಬ್ಬರವನ್ನು 2ರಿಂದ 6% ಮಧ್ಯೆ ಇರುವಂತೆ ನೋಡಿಕೊಳ್ಳಬೇಕು ಎಂಬ ಗುರಿ ಹಾಕಿಕೊಳ್ಳಲಾಗಿದೆ. ಆದರೆ ಹಣದುಬ್ಬರ ದರವು ಗುರಿ ಹಾಕಿಕೊಂಡಿದ್ದಕ್ಕಿಂತ ಆಚೆ ದಾಟಿ ಹೋಗಿದೆ.

ತರಕಾರಿಗಳ ಹಣದುಬ್ಬರವು 11.41%ರಿಂದ 11.29%ಗೆ ಅಲ್ಪ ಪ್ರಮಾಣದಲ್ಲಿ ಇಳಿಕೆ ಕಂಡಿದ್ದರೆ, ತೈಲ ಹಾಗೂ ವಿದ್ಯುತ್ ಕ್ರಮವಾಗಿ 3.10% ಹಾಗೂ 2.80%ಗೆ ಹೆಚ್ಚಳವಾಗಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications