ಕಳೆದ ಕೆಲವು ತಿಂಗಳಿನಿಂದ ಗ್ರಾಹಕರಿಗೆ ಕಣ್ಣೀರು ತರಿಸುತ್ತಿದ್ದ ಈರುಳ್ಲಿ ಬೆಲೆ ಗಣನೀಯವಾಗಿ ಇಲ್ಲದಿದ್ದರೂ, ತಕ್ಕ ಮಟ್ಟಿಗೆ ಕಮ್ಮಿಯಾಗಿದೆ. ಕೆಜಿಯೊಂದಕ್ಕೆ 120-150ರೂಪಾಯಿಗೆ ಮಾರಾಟವಾಗುತ್ತಿದ್ದ ಈರುಳ್ಳಿ ಸದ್ಯ ಕೆಜಿಗೆ 50-60 ರೂಪಾಯಿಗೆ ಸಿಗುತ್ತಿದೆ.
ದೇಶದ ವಿವಿಧ ಎಪಿಎಂಸಿ ಮಾರುಕಟ್ಟೆಯಲ್ಲಿ ಬಂದು ಬೀಳುತ್ತಿರುವ ಈರುಳ್ಳಿಯ ಪ್ರಮಾಣದ ಆಧಾರದಲ್ಲಿ ಬೆಲೆ ಇನ್ನೂ ಕಮ್ಮಿಯಾಗ ಬೇಕಾಗಿದ್ದರೂ, ಗ್ರಾಹಕರಿಗೆ ಇದರ ಲಾಭ ಸಿಗುತ್ತಿಲ್ಲ, ಜೊತೆಗೆ, ರೈತರಿಗೆ ಕೂಡಾ..
ಎಲ್ಲೋ ಕೆಲವೊಂದು ಅಪವಾದಗಳನ್ನು ಬಿಟ್ಟರೆ, ರೈತರಿಗೆ ಬೆಲೆ ಏರಿಕೆಯ ಲಾಭ ಸಿಕ್ಕ ಉದಾಹರಣೆಗಳು ಕಮ್ಮಿ. ಮಧ್ಯವರ್ತಿಗಳೇ ಪರಿಸ್ಥಿತಿಯನ್ನು ತಮ್ಮ ಅನುಕೂಲಕ್ಕೆ ತಕ್ಕಂತೇ ಬಳಸಿಕೊಳ್ಳುವುದು ಜಾಸ್ತಿ.
ಕೆಲವು ತಿಂಗಳಿನಿಂದ ಕ್ವಿಂಟಾಲ್ ಒಂದಕ್ಕೆ ಇಪ್ಪತ್ತು ಸಾವಿರಕ್ಕೂ ಅಧಿಕ ಇದ್ದ ಈರುಳ್ಳಿ ಬೆಲೆ, ಎಪಿಎಂಸಿ ಮಾರುಕಟ್ಟೆಯಲ್ಲಿ 2-3ಸಾವಿರ ರೂಪಾಯಿವರೆಗೆ ಇಳಿದು ಹೋಗಿದೆ. ಇದಕ್ಕೆ ಕಾರಣ?
ಟರ್ಕಿಯಿಂದ 11,000 ಟನ್ ಈರುಳ್ಳಿ
ದಿನೇ ದಿನೇ ಗಗನಕ್ಕೇರುತ್ತಿದ್ದ ಈರುಳ್ಳಿ ಬೆಲೆ ನಿಯಂತ್ರಿಸಲು ಕೇಂದ್ರ ಸರ್ಕಾರ, ಟರ್ಕಿಯಿಂದ 11,000 ಟನ್ ಈರುಳ್ಳಿಯನ್ನು ಆಮದು ಮಾಡಿಕೊಂಡಿತ್ತು. ಈರುಳ್ಳಿ ಆಮದು ಮಾಡಿಕೊಳ್ಳಲು ಸರ್ಕಾರಿ ಸ್ವಾಮ್ಯದ ಎಂಎಂಟಿಸಿಗೆ ಆದೇಶ ನೀಡಿತ್ತು. ಆದರೂ, ಬೆಲೆಯಲ್ಲಿ ಹೆಚ್ಚಿನ ಸುಧಾರಣೆ ಕಂಡು ಬಂದಿರಲಿಲ್ಲ. ಈಗ, ಏಕಾಏಕಿ ಬೆಲೆಯಲ್ಲಿ ಕುಸಿತ ಕಾಣಬಹುದಾಗಿದೆ.
ಅತಿದೊಡ್ಡ ಈರುಳ್ಳಿ ಎಪಿಎಂಸಿ ಮಾರುಕಟ್ಟೆಯಾಗಿರುವ ಮಹಾರಾಷ್ಟ್ರದ ನಾಸಿಕ್
ದೇಶದ ಅತಿದೊಡ್ಡ ಈರುಳ್ಳಿ ಎಪಿಎಂಸಿ ಮಾರುಕಟ್ಟೆಯಾಗಿರುವ ಮಹಾರಾಷ್ಟ್ರದ ನಾಸಿಕ್ ನಲ್ಲಿ ಒಂದೇ ಸಮನೆ ಈರುಳ್ಳಿ ಬಂದು ಬೀಳುತ್ತಿದೆ. ಇಲ್ಲಿನ ಲಾಸಲ್ಗಾಂವ್ ಮಂಡಿಗೆ ಹಲವು ಬೆಳೆಗಳು ಹೆಚ್ಚಿನ ಪ್ರಮಾಣದಲ್ಲಿ ಫಸಲು ನೀಡಿದ್ದರಿಂದ, ಹೇರಳ ಪ್ರಮಾಣದ ಈರುಳ್ಳಿಗಳು ನಾಸಿಕ್ ಮಂಡಿಯಲ್ಲಿ ಶೇಖರಣೆಗೊಂಡಿದೆ.
ಈರುಳ್ಳಿ ಬೆಲೆ ಒಂದೇ ಸಮನೆ 2,300 ರೂಪಾಯಿಗೆ ಕುಸಿದಿದೆ
ಎಪಿಎಂಸಿ ಅಧಿಕಾರಿಗಳ ಪ್ರಕಾರ "ಈರುಳ್ಳಿ ಬೆಲೆಯಲ್ಲಿ ಪ್ರತೀ ವಾರದಲ್ಲಿ ಏರಿಳಿತ ಕಾಣುತ್ತಿದೆ. 950 ರೂಪಾಯಿಯಿಂದ 4,300ವರೆಗಿದ್ದ ಈರುಳ್ಳಿ ಬೆಲೆ ಒಂದೇ ಸಮನೆ 2,300 ರೂಪಾಯಿಗೆ ಕುಸಿದಿದೆ. ನಾಸಿಕ್ ಮಾರುಕಟ್ಟೆಯಲ್ಲಿ ಇದುವರೆಗಿನ ಇತಿಹಾಸದಲ್ಲಿ ಕಾಣದಷ್ಟು ಮಟ್ಟಿಗೆ ಈರುಳ್ಳಿ ಬೆಲೆ ಏರಿಕೆ ಮತ್ತು ಇಳಿಕೆಯನ್ನು ಕಂಡಿದೆ" ಎಂದು ಹೇಳುತ್ತಾರೆ.
ಈರುಳ್ಳಿ ಬೆಲೆಯಲ್ಲಿ ಇನ್ನಷ್ಟು ಇಳಿಕೆಯಾಗುವ (20-35ರೂಪಾಯಿವರೆಗೆ) ಸಾಧ್ಯತೆ
ಹಿಂಗಾರು ಕಟಾವು ಆರಂಭಗೊಂಡಿದ್ದರಿಂದ ನಾಸಿಕ್, ಪೂನಾ, ಸತಾರ, ಸಾಂಗ್ಲಿ ಮುಂತಾದ ಕಡೆಯಿಂದ ಈರುಳ್ಳಿಗಳು, ಕರ್ನಾಟಕದ ಮಾರುಕಟ್ಟೆಗೆ ಬರಲಾರಂಭಿಸಿದೆ. ಈರುಳ್ಳಿ ಬೆಲೆಯಲ್ಲಿ ಗಣನೀಯ ಇಳಿಕೆಯಾಗಿದ್ದರೂ, ಅದರ ಲಾಭ,ಇನ್ನೂ ಗ್ರಾಹಕರಿಗಾಗಲಿ ಅಥವಾ ಚಿಲ್ಲರೆ ವ್ಯಾಪಾರಿಗಳಿಗಾಗಲಿ ಸಿಗುತ್ತಿಲ್ಲ. ಉತ್ತರ ಕರ್ನಾಟಕದ ಭಾಗದ ಈರುಳ್ಳಿಗಳೂ ಖಟಾವ್ ಗೆ ಬರುವುದರಿಂದ, ಮುಂದಿನ ದಿನಗಳಲ್ಲಿ ಈರುಳ್ಳಿ ಬೆಲೆಯಲ್ಲಿ ಇನ್ನಷ್ಟು ಇಳಿಕೆಯಾಗುವ (20-35ರೂಪಾಯಿವರೆಗೆ) ಸಾಧ್ಯತೆಯಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Hosur Airport: ಬೆಂಗಳೂರು ಹತ್ತಿರ ಹೊಸೂರು ಏರ್ಪೋರ್ಟ್ಗಾಗಿ 2,979 ಎಕರೆ ಭೂಸ್ವಾಧೀನ-ಎಲ್ಲೆಂದು ತಿಳಿಯಿರಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Ramanagara Silk Industry: ರಾಮನಗರ ರೇಷ್ಮೆ ಉದ್ಯಮದಲ್ಲಿ ಕ್ರಾಂತಿ...ವಿಶ್ವದ ಪ್ರಮುಖ ರೇಷ್ಮೆ ಕೇಂದ್ರವಾಗುವ ಹಾದಿಯಲ್ಲಿ



Click it and Unblock the Notifications