ಜನವರಿ 21ರಂದು ಎಸ್ಬಿಐ ಸಂಶೋಧನಾ ವರದಿಯನ್ನು ಬಿಡುಗಡೆ ಮಾಡಿದೆ. ಈ ಸಂಶೋಧನಾ ವರದಿಯು ಅಯೋಧ್ಯೆಯಲ್ಲಿನ ರಾಮಮಂದಿರದಿಂದಾಗಿ ಭಾರತದ ಆರ್ಥಿಕತೆಯು ಬೆಳವಣಿಗೆಯಾಗಲಿದೆ ಎಂದು ಹೇಳಿದೆ.
ಕೇಂದ್ರದ ತೀರ್ಥಯಾತ್ರೆ ಪುನರುಜ್ಜೀವನ ಮತ್ತು ಆಧ್ಯಾತ್ಮಿಕ ಪರಂಪರೆ ವರ್ಧನೆ ಅಭಿಯಾನ (ಪಿಆರ್ಎಎಸ್) ಯೋಜನೆಯ ವಿವಿಧ ರಾಜ್ಯ ಸರ್ಕಾರದ ಉಪಕ್ರಮಗಳೊಂದಿಗೆ ಭಾರತದಲ್ಲಿ ಆಧ್ಯಾತ್ಮಿಕ ಪ್ರಯಾಣ ಉದ್ಯಮವನ್ನು ಅಭಿವೃದ್ಧಿಪಡಿಸುವಲ್ಲಿ ಪಾತ್ರವನ್ನು ವಹಿಸುತ್ತದೆ ಎಂದು ಎಸ್ಬಿಐ ಸಂಶೋಧನಾ ವರದಿ ಉಲ್ಲೇಖಿಸಿದೆ.

ಭಾರತದಲ್ಲಿ ರಾಮಮಂದಿರದಿಂದಾಗಿ ಪ್ರವಾಸೋದ್ಯಮ ಬೆಳೆದು ಅದರ ಪ್ರಭಾವ ಭಾರತದ ಆರ್ಥಿಕತೆಯ ಮೇಲೆ ಅಧಿಕವಾಗಿರಲಿದೆ. ರಾಮ ಮಂದಿರದಿಂದಾಗಿ ಉತ್ತರ ಪ್ರದೇಶ ಸರ್ಕಾರದ ತೆರಿಗೆ ಆದಾಯವನ್ನು ಹೆಚ್ಚಿಸಲಿದೆ. ಹಣಕಾಸು ವರ್ಷ 2025ರ ವೇಳೆಗೆ ಆದಾಯ ತೆರಿಗೆ ಭಾರೀ ಅಧಿಕವಾಗಲಿದೆ ಎಂದು ಸಂಶೋಧನೆ ಹೇಳಿದೆ.
ಭಾರತದ ಆರ್ಥಿಕತೆ ಬೂಸ್ಟ್ ಮಾಡುವ ಆಧ್ಯಾತ್ಮಿಕ ಪ್ರವಾಸೋದ್ಯಮ
ಆಧ್ಯಾತ್ಮಿಕ ಪ್ರವಾಸೋದ್ಯಮದ ಬೆಳವಣಿಗೆಯು ಉತ್ತರ ಪ್ರದೇಶದಲ್ಲಿ ಪ್ರವಾಸೋದ್ಯಮವನ್ನು ಗಣನೀಯವಾಗಿ ಪರಿವರ್ತನೆ ಮಾಡಲಿದೆ ಎಂದು ವರದಿಯಲ್ಲಿ ಸೇರಿಸಲಾಗಿದೆ. ಆಧ್ಯಾತ್ಮಿಕ ಪ್ರವಾಸೋದ್ಯಮದ ಬೆಳವಣಿಗೆ ಆದಂತೆ ಭೌತಿಕ ಮತ್ತು ಡಿಜಿಟಲ್ ಮೂಲಸೌಕರ್ಯ ಹೆಚ್ಚಾಗಲಿದೆ. ಇದರಿಂದಾಗಿ ಪ್ರಯಾಣಿಕರ ಪ್ರಮಾಣವು ಕೂಡಾ ಹೆಚ್ಚಳವಾಗಲಿದೆ.
ಉತ್ತರಪ್ರದೇಶದಲ್ಲಿ ಹಲವಾರು ಗಂಗಾ ನದಿ, ತಾಜ್ ಮಹಲ್ ಮತ್ತು ಈಗ ಅಯೋಧ್ಯೆಯಲ್ಲಿನ ರಾಮ ಮಂದಿರದಂತಹ ಪವಿತ್ರ ತಾಣಗಳಿದೆ. ಹಾಗಾಗಿ ರಾಜ್ಯದಲ್ಲಿ ಪ್ರವಾಸೋದ್ಯಮ ಇನಷ್ಟು ಬೆಳೆಯಲಿದೆ, ಅದರೊಂದಿಗೆ ದೇಶೀಯ ಪ್ರವಾಸೋದ್ಯಮವೂ ಕೂಡಾ ಗಮನಾರ್ಹ ಏರಿಕೆಯನ್ನು ಕಾಣುತ್ತಿದೆ ಎಂದು ಸಂಶೋಧನ ವರದಿ ಹೇಳಿದೆ.
ರಾಜ್ಯ ಸರ್ಕಾರದ ಅಂದಾಜಿನ ಪ್ರಕಾರ ಸುಮಾರು 2022 ರಲ್ಲಿ ಸುಮಾರು 32 ಕೋಟಿ ಪ್ರವಾಸಿಗರು ರಾಜ್ಯಕ್ಕೆ ಭೇಟಿ ನೀಡಿದ್ದು, ಅಯೋಧ್ಯೆಯಲ್ಲಿಯೇ 2.21 ಕೋಟಿ ಜನರು ಭೇಟಿ ನೀಡಿದ್ದಾರೆ. ಈ ಪ್ರವಾಸಿಗರ ಒಟ್ಟು ಖರ್ಚು 2 ಲಕ್ಷ ಕೋಟಿ ರೂಪಾಯಿಯನ್ನು ಮೀರಿದೆ. ಇನ್ನು ನಾವು ವಿದೇಶಿ ಪ್ರವಾಸಿಗರ ಲೆಕ್ಕಾಚಾರಕ್ಕೆ ಹೋದಾಗ ಭಾರತದಲ್ಲಿ ಹೆಚ್ಚು ಭೇಟಿ ನೀಡುವ ಐದನೇ ರಾಜ್ಯ ಉತ್ತರ ಪ್ರದೇಶ ಎಂದು ಹೇಳಬಹುದು.
ರಾಜ್ಯದ ಆರ್ಥಿಕತೆಗೆ ಹೆಚ್ಚುವರಿ 10,500 ಕೋಟಿ ರೂಪಾಯಿಯಷ್ಟು ಕೊಡುಗೆಯನ್ನು ವಿದೇಶಿ ಪ್ರವಾಸಿಗರು ನೀಡಿದ್ದಾರೆ. ಪ್ರವಾಸೋದ್ಯಮ ಬೆಳವಣಿಗೆಯು ಗಣನೀಯ ಆರ್ಥಿಕ ಪ್ರಯೋಜನಗಳನ್ನು ಪಡೆಯಲು ಉತ್ತರ ಪ್ರದೇಶಕ್ಕೆ ಅವಕಾಶ ನೀಡಿದೆ, ಸ್ಥಾನವನ್ನು ನೀಡಿದೆ ಎಂದು ವರದಿ ಉಲ್ಲೇಖಿಸಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications