ನವದೆಹಲಿ, ಜೂನ್ 23: ಆಯುರ್ವೇದ ಉತ್ಪನ್ನಗಳ ತಯಾರಿಕೆ ಸಂಸ್ಥೆಯಾದ ಪತಂಜಲಿ ಕೋವಿಡ್ -19 ಚಿಕಿತ್ಸೆಗಾಗಿ ಕೊರೊನಿಲ್ ಎಂಬ ಔಷಧಿ ಕಂಡು ಹಿಡಿದಿದ್ದೇವೆ ಎಂದು ಹೇಳಿದೆ. ಆದರೆ, ಔಷಧಿಯನ್ನು ಸಂಪೂರ್ಣವಾಗಿ ಪರೀಕ್ಷಿಸುವವರೆಗೆ ಅದರ ಬಗ್ಗೆ ಪ್ರಚಾರ ಮಾಡುವುದನ್ನು ನಿಲ್ಲಿಸುವಂತೆ ಆಯುಷ್ ಸಚಿವಾಲಯ ಮಂಗಳವಾರ ಪತಂಜಲಿ ಸಂಸ್ಥೆಗೆ ಆದೇಶಿಸಿದೆ.
ಪತಂಜಲಿ ಸಂಶೋಧನೆಯ ವೈಜ್ಞಾನಿಕ ಅಧ್ಯಯನದ ಹಕ್ಕು ಮತ್ತು ವಿವರಗಳು ಆಯುಷ್ ಸಚಿವಾಲಯಕ್ಕೆ ತಿಳಿದಿಲ್ಲ ಮತ್ತು ಔಷಧಿಯ ಸಂಪೂರ್ಣ ವಿವರಗಳನ್ನು ಕೋರಲಾಗಿದೆ ಎಂದು ಆಯುಷ್ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಏಳು ದಿನಗಳಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ರೋಗವನ್ನು ಗುಣಪಡಿಸುವ ಕೊರೊನಿಲ್ ಔಷಧದ ಹಕ್ಕು ಪಡೆಯಲು ಯಾವುದೇ ವೈದ್ಯಕೀಯ ಪ್ರಾಧಿಕಾರವು ಭರವಸೆ ನೀಡಿಲ್ಲ ಎಂದೂ ಸಹ ಆಯುಷ್ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಕಾಯ್ದೆ 1954 ರ ಅಡಿಯಲ್ಲಿ ನಿಯಂತ್ರಿಸಲಾಗುತ್ತದೆ
ಯೋಗ ಗುರು ರಾಮದೇವ್ ಅವರ ಪತಂಜಲಿ ಕಂಪನಿಯ ಕೊರೊನಾವೈರಸ್ಗೆ ಪರಿಹಾರವನ್ನು ಕಂಡುಹಿಡಿದಿದೆ ಎಂದು ಹೇಳಿಕೊಂಡಿದೆ. ಆದರೆ, ಪತಂಜಲಿಯವರ ಔಷಧಿಗಳ ಜಾಹೀರಾತನ್ನು ಡ್ರಗ್ಸ್ ಮತ್ತು ಮ್ಯಾಜಿಕ್ ರೆಮಿಡೀಸ್ (ಆಕ್ಷೇಪಾರ್ಹ ಜಾಹೀರಾತುಗಳು) ಕಾಯ್ದೆ 1954 ರ ಅಡಿಯಲ್ಲಿ ನಿಯಂತ್ರಿಸಲಾಗುತ್ತದೆ ಎಂದು ಆಯುಷ್ ಸಚಿವಾಲಯ ತಿಳಿಸಿದೆ. ಹಕ್ಕುಗಳನ್ನು ಸಂಪೂರ್ಣವಾಗಿ ಪರಿಶೀಲಿಸುವವರೆಗೆ ಔಷಧಿ ಪ್ರಚಾರ ಮಾಡದಂತೆ ಆಯುಷ್ ಸಚಿವಾಲಯವು ಪತಂಜಲಿಯನ್ನು ಕೇಳಿದೆ.
ಈಗಾಗಲೇ ಎರಡು ಆಯುರ್ವೇದ ಕಂಪನಿಗಳು ಯಶಸ್ವಿ
ಮೇ ತಿಂಗಳಲ್ಲಿ, ಕೊರೊನಾ ಚಿಕಿತ್ಸೆಗಾಗಿ ಆಯುಷ್ ಸಚಿವಾಲಯವು ನಾಲ್ಕು ಆಯುರ್ವೇದ ರಸಾಯನಗಳ ಕ್ಲಿನಿಕಲ್ ಪ್ರಯೋಗಗಳನ್ನು ಚಿಕಿತ್ಸೆಗಾಗಿ ಅನುಮತಿಸಿತ್ತು. ಈ ವೇಳೆ ವೆಂಟಿಲೇಟರ್ ವ್ಯವಸ್ಥೆಯಲ್ಲಿರುವ ರೋಗಿಗಳನ್ನು ಹೊರತುಪಡಿಸಿ ಉಳಿದ ರೋಗಿಗಳ ಮೇಲೆ ಪ್ರಾಯೋಗಿಕ ಪರೀಕ್ಷೆಗಳಲ್ಲಿ ಎರಡು ಆಯುರ್ವೇದ ಆಧಾರಿತ ಔಷಧಿಗಳು ಶೇಕಡಾ 100 ರಷ್ಟು ಫಲಿತಾಂಶಗಳನ್ನು ತೋರಿಸಿದೆ ಎಂದು ಆಯುಷ್ ಸಚಿವಾಲಯ ತಿಳಿಸಿದೆ.
ಕೊರೊನಿಲ್ ಬಿಡುಗಡೆ
ಹರಿದ್ವಾರದ ಪತಂಜಲಿ ಯೋಗಪೀಠದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಕೊರೊನಿಲ್ (Coronil) ಎಂಬ ಆಯುರ್ವೇದ ಔಷಧಿಯನ್ನು ಕೋವಿಡ್ 19 ಗಾಗಿ ಬಿಡುಗಡೆ ಮಾಡಿದ್ದೇವೆ ಎಂದು ಬಾಬಾ ರಾಮದೇವ್ ಹಾಗೂ ಪತಂಜಲಿ ಯೋಗ ಪೀಠದ ಆಚಾರ್ಯ ಬಾಲಕೃಷ್ಣ ಅವರು ಹೇಳಿದ್ದಾರೆ.
ಒಂದು ಮಾತ್ರೆಗೆ 545 ರುಪಾಯಿ
ಕೊರೊನಿಲ್ ಆಯುರ್ವೇದ ಮಾತ್ರೆಗಳ ಕಿಟ್ನ್ನು ಪತಂಜಲಿ ಕೋವಿಡ್ 19 ರೋಗಿಗಳಿಗೆ ರೂಪಿಸಿದೆ. ಈ ಕಿಟ್ನಲ್ಲಿ ಹತ್ತು ಮಾತ್ರೆಗಳು ಇರುತ್ತವೆ. ಒಂದು ಮಾತ್ರೆಗೆ 545 ರುಪಾಯಿ. ಈ ಮಾತ್ರೆಗಳು ಕೋವಿಡ್ 19 ರೋಗಿಗಳನ್ನು ಗುಣಪಡಿಸಲು ಸಮರ್ಥವಾಗಿದೆ ಎಂದು ಬಾಬಾ ರಾಮದೇವ್ ಅವರು ಹೇಳಿದ್ದಾರೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications