ನವದೆಹಲಿ, ಜೂನ್ 23: ಆಯುರ್ವೇದ ಉತ್ಪನ್ನಗಳ ತಯಾರಿಕೆ ಸಂಸ್ಥೆಯಾದ ಪತಂಜಲಿ ಕೋವಿಡ್ -19 ಚಿಕಿತ್ಸೆಗಾಗಿ ಕೊರೊನಿಲ್ ಎಂಬ ಔಷಧಿ ಕಂಡು ಹಿಡಿದಿದ್ದೇವೆ ಎಂದು ಹೇಳಿದೆ. ಆದರೆ, ಔಷಧಿಯನ್ನು ಸಂಪೂರ್ಣವಾಗಿ ಪರೀಕ್ಷಿಸುವವರೆಗೆ ಅದರ ಬಗ್ಗೆ ಪ್ರಚಾರ ಮಾಡುವುದನ್ನು ನಿಲ್ಲಿಸುವಂತೆ ಆಯುಷ್ ಸಚಿವಾಲಯ ಮಂಗಳವಾರ ಪತಂಜಲಿ ಸಂಸ್ಥೆಗೆ ಆದೇಶಿಸಿದೆ.
ಪತಂಜಲಿ ಸಂಶೋಧನೆಯ ವೈಜ್ಞಾನಿಕ ಅಧ್ಯಯನದ ಹಕ್ಕು ಮತ್ತು ವಿವರಗಳು ಆಯುಷ್ ಸಚಿವಾಲಯಕ್ಕೆ ತಿಳಿದಿಲ್ಲ ಮತ್ತು ಔಷಧಿಯ ಸಂಪೂರ್ಣ ವಿವರಗಳನ್ನು ಕೋರಲಾಗಿದೆ ಎಂದು ಆಯುಷ್ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಏಳು ದಿನಗಳಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ರೋಗವನ್ನು ಗುಣಪಡಿಸುವ ಕೊರೊನಿಲ್ ಔಷಧದ ಹಕ್ಕು ಪಡೆಯಲು ಯಾವುದೇ ವೈದ್ಯಕೀಯ ಪ್ರಾಧಿಕಾರವು ಭರವಸೆ ನೀಡಿಲ್ಲ ಎಂದೂ ಸಹ ಆಯುಷ್ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಕಾಯ್ದೆ 1954 ರ ಅಡಿಯಲ್ಲಿ ನಿಯಂತ್ರಿಸಲಾಗುತ್ತದೆ
ಯೋಗ ಗುರು ರಾಮದೇವ್ ಅವರ ಪತಂಜಲಿ ಕಂಪನಿಯ ಕೊರೊನಾವೈರಸ್ಗೆ ಪರಿಹಾರವನ್ನು ಕಂಡುಹಿಡಿದಿದೆ ಎಂದು ಹೇಳಿಕೊಂಡಿದೆ. ಆದರೆ, ಪತಂಜಲಿಯವರ ಔಷಧಿಗಳ ಜಾಹೀರಾತನ್ನು ಡ್ರಗ್ಸ್ ಮತ್ತು ಮ್ಯಾಜಿಕ್ ರೆಮಿಡೀಸ್ (ಆಕ್ಷೇಪಾರ್ಹ ಜಾಹೀರಾತುಗಳು) ಕಾಯ್ದೆ 1954 ರ ಅಡಿಯಲ್ಲಿ ನಿಯಂತ್ರಿಸಲಾಗುತ್ತದೆ ಎಂದು ಆಯುಷ್ ಸಚಿವಾಲಯ ತಿಳಿಸಿದೆ. ಹಕ್ಕುಗಳನ್ನು ಸಂಪೂರ್ಣವಾಗಿ ಪರಿಶೀಲಿಸುವವರೆಗೆ ಔಷಧಿ ಪ್ರಚಾರ ಮಾಡದಂತೆ ಆಯುಷ್ ಸಚಿವಾಲಯವು ಪತಂಜಲಿಯನ್ನು ಕೇಳಿದೆ.
ಈಗಾಗಲೇ ಎರಡು ಆಯುರ್ವೇದ ಕಂಪನಿಗಳು ಯಶಸ್ವಿ
ಮೇ ತಿಂಗಳಲ್ಲಿ, ಕೊರೊನಾ ಚಿಕಿತ್ಸೆಗಾಗಿ ಆಯುಷ್ ಸಚಿವಾಲಯವು ನಾಲ್ಕು ಆಯುರ್ವೇದ ರಸಾಯನಗಳ ಕ್ಲಿನಿಕಲ್ ಪ್ರಯೋಗಗಳನ್ನು ಚಿಕಿತ್ಸೆಗಾಗಿ ಅನುಮತಿಸಿತ್ತು. ಈ ವೇಳೆ ವೆಂಟಿಲೇಟರ್ ವ್ಯವಸ್ಥೆಯಲ್ಲಿರುವ ರೋಗಿಗಳನ್ನು ಹೊರತುಪಡಿಸಿ ಉಳಿದ ರೋಗಿಗಳ ಮೇಲೆ ಪ್ರಾಯೋಗಿಕ ಪರೀಕ್ಷೆಗಳಲ್ಲಿ ಎರಡು ಆಯುರ್ವೇದ ಆಧಾರಿತ ಔಷಧಿಗಳು ಶೇಕಡಾ 100 ರಷ್ಟು ಫಲಿತಾಂಶಗಳನ್ನು ತೋರಿಸಿದೆ ಎಂದು ಆಯುಷ್ ಸಚಿವಾಲಯ ತಿಳಿಸಿದೆ.
ಕೊರೊನಿಲ್ ಬಿಡುಗಡೆ
ಹರಿದ್ವಾರದ ಪತಂಜಲಿ ಯೋಗಪೀಠದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಕೊರೊನಿಲ್ (Coronil) ಎಂಬ ಆಯುರ್ವೇದ ಔಷಧಿಯನ್ನು ಕೋವಿಡ್ 19 ಗಾಗಿ ಬಿಡುಗಡೆ ಮಾಡಿದ್ದೇವೆ ಎಂದು ಬಾಬಾ ರಾಮದೇವ್ ಹಾಗೂ ಪತಂಜಲಿ ಯೋಗ ಪೀಠದ ಆಚಾರ್ಯ ಬಾಲಕೃಷ್ಣ ಅವರು ಹೇಳಿದ್ದಾರೆ.
ಒಂದು ಮಾತ್ರೆಗೆ 545 ರುಪಾಯಿ
ಕೊರೊನಿಲ್ ಆಯುರ್ವೇದ ಮಾತ್ರೆಗಳ ಕಿಟ್ನ್ನು ಪತಂಜಲಿ ಕೋವಿಡ್ 19 ರೋಗಿಗಳಿಗೆ ರೂಪಿಸಿದೆ. ಈ ಕಿಟ್ನಲ್ಲಿ ಹತ್ತು ಮಾತ್ರೆಗಳು ಇರುತ್ತವೆ. ಒಂದು ಮಾತ್ರೆಗೆ 545 ರುಪಾಯಿ. ಈ ಮಾತ್ರೆಗಳು ಕೋವಿಡ್ 19 ರೋಗಿಗಳನ್ನು ಗುಣಪಡಿಸಲು ಸಮರ್ಥವಾಗಿದೆ ಎಂದು ಬಾಬಾ ರಾಮದೇವ್ ಅವರು ಹೇಳಿದ್ದಾರೆ.
More From GoodReturns

NSE ಆಯಿಲ್ ಫ್ಯೂಚರ್ಸ್ ಆರಂಭ: ಹೂಡಿಕೆದಾರರಿಗೆ ಸಿಗಲಿದೆ ಭಾರಿ ಲಾಭ?

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಸಗಟು ಬೆಲೆ ಸೂಚ್ಯಂಕ: ನಿಮ್ಮ ಜೇಬಿಗೆ ಕಾದಿದೆಯಾ ಶಾಕ್?

ಚಿನ್ನದ ಬೆಲೆ ಏರಿಕೆ: ಅಕ್ಷಯ ತೃತೀಯಕ್ಕೆ ಹೂಡಿಕೆ ಮಾಡುವುದು ಹೇಗೆ?

ನಿಫ್ಟಿ ಏರಿಕೆ: ಈಗಲೇ ಹೂಡಿಕೆ ಮಾಡಬೇಕಾ ಅಥವಾ ಕಾಯಬೇಕಾ?

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಭಾರತೀಯ ಷೇರು ಮಾರುಕಟ್ಟೆ: ಇಂದಿನ ವಹಿವಾಟಿನಲ್ಲಿ ಅಡಗಿದೆ ಅಚ್ಚರಿಯ ತಿರುವು!

ಅಂಬೇಡ್ಕರ್ ಜಯಂತಿ ರಜೆ: ನಿಮ್ಮ ಎಸ್ಐಪಿ ಹಣಕ್ಕೆ ಕಾದಿದೆಯಾ ಸಂಕಷ್ಟ?

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!



Click it and Unblock the Notifications