ನವದೆಹಲಿ: ಕೋವಿಡ್ ಮಹಾಮಾರಿಗೆ ಆಯುರ್ವೇದ ಉತ್ಪನ್ನಗಳ ತಯಾರಿಕೆ ಸಂಸ್ಥೆಯಾದ ಪತಂಜಲಿ ಕೊರೊನಿಲ್ ಎಂಬ ಔಷಧಿ ಕಂಡು ಹಿಡಿದಿದ್ದೇವೆ ಎಂದು ನಿನ್ನೆಯಷ್ಟೇ ಹೇಳಿಕೊಂಡಿತ್ತು.
ಆದರೆ, ಪತಂಜಲಿಯ ಈ ನಡೆಗೆ ಆಯುಷ್ ಇಲಾಖೆ ಹಾಗೂ ಸರ್ಕಾರದಿಂದ ವಿರೋಧ ಕೇಳಿ ಬಂದಿದೆ. ಪತಂಜಲಿಗೆ ನೋಟಿಸ್ ಕೂಡ ನೀಡಲಾಗಿದೆ. ಇದರಿಂದ ಪತಂಜಲಿಯ ಮಹತ್ವಾಕಾಂಕ್ಷೆಯ ಕೊರೊನಿಲ್ ಮಾತ್ರೆಗೆ ಆರಂಭದಲ್ಲೇ ವಿಘ್ನ ಎದುರಾಗಿದೆ.
ಉತ್ತರಾಖಂಡದ ಆಯುಷ್ ಸಚಿವಾಲಯವು ಹರಿದ್ವಾರದ ಪತಂಜಲಿಗೆ ನೋಟಿಸ್ ನೀಡಿದೆ. ರೋಗನಿರೋಧಕ ಬೂಸ್ಟರ್ ಕಿಟ್ಗಳು ಮತ್ತು ಜ್ವರದ ಔಷಧಿಗಳ ಉತ್ಪಾದನೆಗೆ ಮಾತ್ರ ಪರವಾನಗಿ ನೀಡಲಾಗಿತ್ತು. ಕೋವಿಡ್ಗೆ ಔಷಧಿ ತಯಾರಿಸಲು ಪರವಾನಗಿ ನೀಡಿರಲಿಲ್ಲ ಎಂದು ಹೇಳಿದೆ.
ಪರವಾನಗಿಗಳನ್ನು ರದ್ದುಗೊಳಿಸಲಾಗುತ್ತದೆ
ಪತಂಜಲಿ ದಿವ್ಯಾ ಫಾರ್ಮಸಿ ಕೊರೊನಾಗೆ ಸಂಬಂಧಿಸಿದ ಯಾವುದೇ ರೀತಿಯ ಔಷಧದ ಪರವಾನಗಿಗಾಗಿ ಅರ್ಜಿ ಸಲ್ಲಿಸಿರಲಿಲ್ಲ ಅಥವಾ ಈ ನಿಟ್ಟಿನಲ್ಲಿ ಅವರಿಗೆ ಯಾವುದೇ ಪರವಾನಗಿ ನೀಡಲಾಗಿಲ್ಲ. ಪರವಾನಗಿ ನೀಡಿದ್ದು ರೋಗನಿರೋಧಕ ಬೂಸ್ಟರ್ ಕಿಟ್ಗಳಿಗೆ ಮಾತ್ರ. ಪತಂಜಲಿ ದಿವ್ಯಾ ಫಾರ್ಮಸಿಗೆ ನೋಟಿಸ್ ನೀಡಲಾಗುವುದು. ಅವರ ಉತ್ತರ ತೃಪ್ತಿಕರವಾಗಿಲ್ಲ ಎಂದರೆ ಆಗ ಅವರ ಪ್ರಸ್ತುತ ಪರವಾನಗಿಗಳನ್ನು ರದ್ದುಗೊಳಿಸಲಾಗುತ್ತದೆ ಎಂದು ಉತ್ತರಾಖಂಡದ ಆಯುಷ್ ಸಚಿವಾಲಯ ಹೇಳಿದೆ.
ಮೊದಲು ಆಯುಷ್ ಸಚಿವಾಲಯಕ್ಕೆ ಬರಬೇಕಾಗಿದೆ
ಈ ಬಗ್ಗೆ ಇಂದು ಕೇಂದ್ರ ಆಯುಷ್ ಸಚಿವ ಶ್ರೀಪಾದ್ ನಾಯಕ್ ಅವರು ಕೂಡ ಪ್ರತಿಕ್ರಿಯಿಸಿದ್ದಾರೆ. ಬಾಬಾ ರಾಮದೇವ್ ಕೊರೊನಾವೈರಸ್ಗೆ ಔಷಧಿ ನೀಡಿರುವುದು ಒಳ್ಳೆಯದು. ಆದರೆ, ನಿಯಮಗಳ ಪ್ರಕಾರ ಅದು ಮೊದಲು ಆಯುಷ್ ಸಚಿವಾಲಯಕ್ಕೆ ಬರಬೇಕಾಗಿದೆ. ಪತಂಜಲಿಯವರು ವರದಿಯನ್ನು ನಮಗೆ ಕಳುಹಿಸಿದ್ದಾರೆ. ನಾವು ಅದನ್ನು ಪರಿಶೀಲಿಸುತ್ತೇವೆ ವರದಿಯನ್ನು ನೋಡಿದ ನಂತರ ಅನುಮತಿ ನೀಡಲಾಗುವುದು ಎಂದು ಹೇಳಿದ್ದಾರೆ.
ಒಂದು ಮಾತ್ರೆಗೆ 545 ರುಪಾಯಿ
ಕೊರೊನಿಲ್ ಆಯುರ್ವೇದ ಮಾತ್ರೆಗಳ ಕಿಟ್ನ್ನು ಪತಂಜಲಿ ಕೋವಿಡ್ 19 ರೋಗಿಗಳಿಗೆ ರೂಪಿಸಿದೆ. ಈ ಕಿಟ್ನಲ್ಲಿ ಹತ್ತು ಮಾತ್ರೆಗಳು ಇರುತ್ತವೆ. ಒಂದು ಮಾತ್ರೆಗೆ 545 ರುಪಾಯಿ. ಈ ಮಾತ್ರೆಗಳು ಕೋವಿಡ್ 19 ರೋಗಿಗಳನ್ನು ಗುಣಪಡಿಸಲು ಸಮರ್ಥವಾಗಿದೆ ಎಂದು ಬಾಬಾ ರಾಮದೇವ್ ಅವರು ಹೇಳಿದ್ದಾರೆ.
ಇಲಿಗಳ ಮೇಲೆ ಸಂಶೋಧನೆ
ಪತಂಜಲಿ ರಿಸರ್ಚ್ ಇನ್ಸ್ಟಿಟ್ಯೂಟ್ ಸಂಶೋಧಕರು ಹಾಗೂ ಜೈಪುರದ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಜಂಟಿಯಾಗಿ Coronil ಔಷಧಿಯನ್ನು ಸಿದ್ಧಪಡಿಸಿದ್ದಾರೆ. ಔಷಧಿಯನ್ನು ತಯಾರಿಸುವ ಕೆಲಸ ಪತಂಜಲಿ ಹಾಗೂ ದಿವ್ಯ ಫಾರ್ಮಸಿ ಜಂಟಿಯಾಗಿ ನಡೆಸಲಿವೆ ಎನ್ನಲಾಗಿದೆ. ಪತಂಜಲಿ ಸಂಶೋಧಕರು ಇಲಿಗಳ ಮೇಲೆ ಸಂಶೋಧನೆ ಕೈಗೊಂಡು ಕಳೆದ 6 ತಿಂಗಳ ನಿರಂತರ ಪರಿಶ್ರಮದಿಂದ ಕೋವಿಡ್ಗೆ ಮದ್ದು ಅರಿದಿದ್ದಾರೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications