ಬಳ್ಳಾರಿ, ಅಕ್ಟೋಬರ್ 29: ಸಮಾಜದಲ್ಲಿ ದುರ್ಬಲರಿಗೆ, ಅದ್ಯತಾ ವಲಯಕ್ಕೆ ಸಾಲ ಸೌಲಭ್ಯ ಒದಗಿಸುವ ಮೂಲಕ ಆ ವಲಯಗಳ ಬೆಳವಣಿಗೆಗೆ ಬ್ಯಾಂಕ್ಗಳು ಸಹಕಾರ ನೀಡಬೇಕು ಎಂದು ಜಿಪಂ ಸಿಇಒ ನಂದಿನಿ ಕೆ.ಆರ್ ಅವರು ಹೇಳಿದರು.
ಅಜಾದಿ ಕಾ ಅಮೃತ್ ಮಹೋತ್ಸವ ಅಂಗವಾಗಿ ನಗರದ ಕಮ್ಮ ಭವನದಲ್ಲಿ ಜಿಲ್ಲಾ ಬ್ಯಾಂಕರ್ಸ್ ಸಮಿತಿಯ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಸಾಲ ಸಂಪರ್ಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಬ್ಯಾಂಕ್ಗಳು ಮಹಿಳಾ ಸ್ವಸಹಾಯ ಗುಂಪುಗಳು, ರೈತರು ಒಳಗೊಂಡಂತೆ ಆದ್ಯತಾ ವಲಯಗಳಿಗೆ ಸಾಲ ಸೌಲಭ್ಯ ಕಲ್ಪಿಸಬೇಕು. ಸಾಲ ಸೌಲಭ್ಯ ಪಡೆಯುವ ಪ್ರತಿಯೊಬ್ಬರು ಪಡೆದ ಸಾಲವನ್ನು ಎನ್ಇಪಿ (ಅನುತ್ಪಾದಕ ಆಸ್ತಿ ಅಥವಾ ವಸೂಲಾಗದ ಸಾಲ) ಮಾಡದೇ, ಮರು ಪಾವತಿ ಮಾಡಿದರೆ ಮತ್ತಷ್ಟು ಜನರಿಗೆ ಅನುಕೂಲವಾಗಲಿದೆ ಎಂದರು.
ಬ್ಯಾಂಕ್ಗಳು ಸಾರ್ವಜನಿಕರಿಗೆ ಸುಲಭವಾಗಿ ಸೌಲಭ್ಯ ಒದಗಿಸುವ ಕೆಲಸ ಮಾಡುವ ಮೂಲಕ ಜನರ ಅಲೆದಾಟವನ್ನು ತಪ್ಪಿಸಬೇಕು. ಸರ್ಕಾರಿ ಇಲಾಖೆಗಳ ಮುಖಾಂತರ ಬ್ಯಾಂಕ್ನಿಂದ ತುಂಬಾ ಜನರು ಸಾಲ ಸೌಲಭ್ಯ ಪಡೆಯುತ್ತಿದ್ದು, ಇಲಾಖೆಗಳು ಗುರುತಿಸುವ ಫಲಾನುಭವಿಗಳು, ಸಾಲ ಮರು ಪಾವತಿ ಮಾಡುವವರೇ ಎನ್ನುವುದನ್ನು ಗಮನಿಸಿ, ಅರ್ಹರಾದವರಿಗೆ ಸಾಲ ಕೊಡಿಸುವ ಕೆಲಸ ಮಾಡಿ ಎಂದು ಸೂಚಿಸಿದರು.

ಆರ್ಥಿಕ ಅಭಿವೃದ್ಧಿ, ಸುಸ್ಥಿರ ಬೆಳವಣಿಗೆಗೆ, ಆರ್ಥಿಕ ಸ್ಥಿತಿ ಸುಧಾರಣೆಗೆ ಇಂತಹ ಕಾರ್ಯಕ್ರಮ ನೆರವಾಗಲಿದೆ. ಸ್ವಸಹಾಯ ಗುಂಪುಗಳು ಪಡೆದ ಸಾಲವನ್ನು ಆದಾಯ ವೃದ್ಧಿಸುವ ಕೆಲಸಕ್ಕೆ ಬಳಕೆ ಮಾಡುವ ಮೂಲಕ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಿ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ಅವರು ಮಾತನಾಡಿ, ''ಸಾಲಕ್ಕಾಗಿ ರೈತರು ಅಲೆದಾಡುವುದನ್ನು ತಪ್ಪಿಸಿ, ರೈತ ಸಮುದಾಯಕ್ಕೆ ಸರಿಯಾದ ಸಮಯಕ್ಕೆ ಸಾಲ ಸೌಲಭ್ಯ ನೀಡುವ ಕೆಲಸ ಬ್ಯಾಂಕ್ಗಳಿಂದ ನಡೆಯಬೇಕು. ಸೂಕ್ತ ಸಮಯಕ್ಕೆ ಸಾಲ ನೀಡಿದರೆ ರೈತರಿಗೆ ಅನುಕೂಲವಾಗಲಿದೆ,'' ಎಂದರು.
ಸೈಬರ್ ಕ್ರೈಂ ಬಗ್ಗೆ ಬ್ಯಾಂಕ್ ಗ್ರಾಹಕರು, ಸಾರ್ವಜನಿಕರು ಎಚ್ಚರಿಕೆಯಿಂದಿರಿ. ಫೇಸ್ಬುಕ್, ವಾಟ್ಸ್ಯಾಪ್ಗಳಲ್ಲಿ ಬರುವ ಸಂದೇಶ ಮತ್ತು ನಕಲಿ ಕರೆಗಳ ಬಗ್ಗೆ ಜಾಗೃತಿ ಅಗತ್ಯ. ಇಂತಹ ಕಾರ್ಯಕ್ರಮಗಳು ತಾಲೂಕು ಮಟ್ಟದಲ್ಲಿ ನಡೆದರೆ ತುಂಬಾ ಜನರಿಗೆ ಅನುಕೂಲವಾಗಲಿದೆ ಎಂದರು.
ಆನ್ಲೈನ್ ಮೂಲಕ ಎಲ್ಲಾ ಸೌಲಭ್ಯಗಳು ಬೆರಳಂಚಿನಲ್ಲಿ ಸಿಗಲಿದ್ದು, ಇದರ ಜೊತೆಗೆ ಸೈಬರ್ ಕ್ರೈಂಗಳು ಕೂಡ ಜಾಸ್ತಿಯಾಗುತ್ತಿವೆ. ಇದನ್ನು ತಡೆಯಲು ಸಾರ್ವಜನಿಕರು ಗಮನಹರಿಸಬೇಕಿದೆ ಎಂದರು.
ಲೀಡ್ ಬ್ಯಾಂಕ್ ಮ್ಯಾನೇಜರ್ ನವೀನ್ಕುಮಾರ್ ಪ್ರಾಸ್ತವಿಕವಾಗಿ ಮಾತನಾಡಿ, ''ಎಲ್ಲಾ ಬ್ಯಾಂಕ್ಗಳು ಒಂದೇ ವೇದಿಕೆಯಲ್ಲಿ ಗ್ರಾಹಕರ ಸೇವೆಗೆ ಲಭ್ಯವಾಗಲಿದ್ದು, ಜಿಲ್ಲೆಯ ಸಾರ್ವಜನಿಕರಿಗೆ ವಿವಿಧ ಬ್ಯಾಂಕ್ಗಳಿಂದ ದೊರೆಯುವ ಸಾಲ ಸೌಲಭ್ಯಗಳ ಬಗ್ಗೆ ಜನ ಜಾಗೃತಿ ಹಾಗೂ ಅರಿವು ಮೂಡಿಸಲಾಗುತ್ತದೆ'' ಎಂದರು.
ಸುರಕ್ಷಾ ಭೀಮಾ ಯೋಜನೆ, ಪ್ರಧಾನ ಮಂತ್ರಿ ಆವಾಸ್ ಯೋಜನೆ, ಸ್ವ ಸಹಾಯ ಗುಂಪುಗಳಿಗೆ ಸಾಲ ವಿತರಣೆ, ಬೀದಿ ಬದಿ ವ್ಯಾಪಾರಿಗಳಿಗೆ ಸಾಲ, ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲ ಸೌಲಭ್ಯ ಸೇರಿದಂತೆ ಹಲವು ವಿಷಯಗಳ ಕುರಿತು ಗ್ರಾಹಕರಿಗೆ ಅರಿವು, ಸೈಬರ್ ಕ್ರೈಮ್ ಕುರಿತು ಜಾಗೃತಿ, ಡಿಜಿಟಲ್ ಸೇವೆಯ ಸದುಪಯೋಗ ಸೇರಿ ಹತ್ತು ವಿಷಯಗಳ ಮಾಹಿತಿ ಪಡೆಯಿರಿ ಎಂದರು.
ಈ ಸಂದರ್ಭದಲ್ಲಿ ಕೆನರಾ ಬ್ಯಾಂಕ್ನ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಡಿ.ಸಿ.ಮೋಹನ್ ಕುಮಾರ್, ಎಸ್ಬಿಐ ಡೆಪ್ಯೂಟಿ ಜನರಲ್ ಮ್ಯಾನೇಜರ್ ಪ್ರದೀಪ್ ನಾಯರ್, ಹುಬ್ಬಳ್ಳಿಯ ಕೆನರಾ ಬ್ಯಾಂಕ್ ವೃತ್ತ ಕಚೇರಿಯ ಜನರಲ್ ಮ್ಯಾನೇಜರ್ ಜೆ.ಎಸ್. ರವಿಸುಧಾಕರ್ ಸೇರಿದಂತೆ ಇತರರು ಇದ್ದರು.
ಎಲ್ಲಾ ಬ್ಯಾಂಕುಗಳ ಸಹಯೋಗದೊಂದಿಗೆ ಗ್ರಾಹಕರಿಗೆ ಸಾಲ ಸಂಪರ್ಕ (ಕ್ರೆಡಿಟ್ ಔಟ್ ರೀಚ್) ಕಾರ್ಯಕ್ರಮವನ್ನು ಜಿಲ್ಲಾ ಕೇಂದ್ರಗಳಲಿ ಆಯೋಜಿಸಲಾಗುತ್ತದೆ. ಈ ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ವಿವಿಧ ಸಾಲ ಯೋಜನೆ, ಬ್ಯಾಂಕ್ ಗ್ರಾಹಕರಿಗೆ ಉಪಯುಕ್ತ ಮಾಹಿತಿ ಹಂಚಿಕೆಗೆ ಸಹಕಾರಿಯಾಗಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications