ನಗರದ ಅತ್ಯಂತ ಶ್ರೀಮಂತ ದೇವಾಲಯವಾದ ದಕ್ಷಿಣ ಬೆಂಗಳೂರಿನ ಬನಶಂಕರಿ ದೇವಸ್ಥಾನ ಭವ್ಯವಾದ 'ಬನದ ಹುಣ್ಣಿಮೆ' ಉತ್ಸವವನ್ನು ಆಚರಿಸಲು ಸಿದ್ಧವಾಗಿದೆ. ಈ ನಡುವೆ ಸುಮಾರು 107 ವರ್ಷಗಳ ನಂತರ ಹೊಚ್ಚಹೊಸ ರಥವನ್ನು ಕೂಡಾ ಸ್ವಾಗತಿಸಲು ದೇವಾಲಯವು ಸಜ್ಜಾಗಿದೆ.
ಬನದ ಹುಣ್ಣಿಮೆಯ 108ನೇ ವರ್ಷದ ಸಂಭ್ರಮಾಚರಣೆಯ ಹಿನ್ನಲೆಯಲ್ಲಿ ಕಳೆದ ಕೆಲವು ವರ್ಷಗಳಿಂದ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಅದ್ಧೂರಿಯಾಗಿ ರೂಪುಗೊಂಡಿರುವ ಬನಶಂಕರಿ ದೇವಸ್ಥಾನವು ಬುಧವಾರದಂದು ಸ್ವೀಕರಿಸಿದ ನೂತನ ಮರದ ರಥವನ್ನು ಅನಾವರಣಗೊಳಿಸಲಿದೆ.

ಧಾರ್ಮಿಕ ದತ್ತಿ (ಮುಜರಾಯಿ) ಇಲಾಖೆಯ ಅಧಿಕಾರಿಗಳು ಟೈಮ್ಸ್ ಆಫ್ ಇಂಡಿಯಾಕ್ಕೆ ಗುರುವಾರ ಮಹಾರಥೋತ್ಸವದ ಸಮಯದಲ್ಲಿ ರಥವು ದೇವಾಲಯದ ಸುತ್ತಲೂ ದೇವರನ್ನು ಕೊಂಡೊಯ್ಯುತ್ತದೆ ಎಂದು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಸುಮಾರು 50 ಸಾವಿರಕ್ಕೂ ಹೆಚ್ಚು ಭಕ್ತರು ಪಾಲ್ಗೊಳ್ಳುವ ನಿರೀಕ್ಷೆಯಿದೆ.
ರಥದ ಬಗ್ಗೆ ತಿಳಿಯಿರಿ
ರಥವನ್ನು ಉತ್ತಮ ಗುಣಮಟ್ಟದ ತೇಗದ ಮರದಿಂದ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಉಡುಪಿ ಜಿಲ್ಲೆಯ ಕುಂದಾಪುರದ ಕುಂಭಾಶಿಯಲ್ಲಿರುವ ಶ್ರೀ ವಿಶ್ವಕರ್ಮ ಕರಕುಶಲ ಮತ್ತು ಶಿಲ್ಪಕಲಾ ಕೇಂದ್ರದಲ್ಲಿ ರಥವನ್ನು ಕೆತ್ತಲಾಗಿದೆ. ಅಯೋಧ್ಯೆಯ ಶ್ರೀರಾಮ ದೇಗುಲಕ್ಕೆ ರಥ ಕೆತ್ತಿರುವ ಶಿಲ್ಪಿ ಲಕ್ಷ್ಮೀನಾರಾಯಣ ಆಚಾರ್ಯ ದಾಖಲೆ ಸಮಯದಲ್ಲಿ ಈ ರಥವನ್ನು ಕೆತ್ತಿದ್ದಾರೆ ಎಂದು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮಿ ತಿಳಿಸಿದರು.
ಈ ದೇವಾಲಯವು ವಾರ್ಷಿಕ 4 ಕೋಟಿ ರೂಪಾಯಿಗೂ ಹೆಚ್ಚು ವಹಿವಾಟು ನಡೆಸುತ್ತದೆ ಮತ್ತು ಬೆಂಗಳೂರಿನಲ್ಲಿರುವ ಕೆಲವೇ ಕೆಲವು 'ಎ' ದರ್ಜೆಯ ದೇವಾಲಯಗಳಲ್ಲಿ ಇದು ಒಂದಾಗಿದೆ. ಸಾಮಾನ್ಯವಾಗಿ, ಕುಶಲಕರ್ಮಿಗಳು ಮರದ ರಥವನ್ನು ಕೆತ್ತಲು ಸುಮಾರು ಒಂದು ವರ್ಷ ತೆಗೆದುಕೊಳ್ಳುತ್ತಾರೆ ಎಂದು ಅಧಿಕಾರಿಯೊಬ್ಬರು ಹೇಳಿದರು.
"ಕೇವಲ ಎರಡೂವರೆ ತಿಂಗಳಲ್ಲಿ ಶಿಲ್ಪಿಗಳು ಕೆಲಸವನ್ನು ಪೂರ್ಣಗೊಳಿಸಿದ್ದು ಇದೇ ಮೊದಲು. ಒಟ್ಟು 70.8 ಲಕ್ಷ ರೂಪಾಯಿ ವೆಚ್ಚವಾಗಿದೆ. ಕೇವಲ ಮರದ ಅಥವಾ ಲೋಹದ ಚಕ್ರಗಳನ್ನು ಹೊಂದಿರುವ ಸಾಂಪ್ರದಾಯಿಕ ರಥಗಳಿಗಿಂತ ಭಿನ್ನವಾಗಿ, ಇದು ಹೊಸದಾಗಿ ಎರಡು-ಮೂರು ಇಂಚು ದಪ್ಪದ ರಬ್ಬರ್ ಹಾಳೆಗಳಿಂದ ಮುಚ್ಚಿದ ಮರದ ಚಕ್ರಗಳನ್ನು ಹೊಂದಿದೆ. ರಥವು ಅಸಮ ಮೇಲ್ಮೈಗಳಲ್ಲಿ ಚಲಿಸಿದರೂ, ದೇವರಿಗೆ ತೊಂದರೆಯಾಗುವುದಿಲ್ಲ," ಎಂದು ಟೈಮ್ಸ್ ಆಫ್ ಇಂಡಿಯಾಕ್ಕೆ ತಿಳಿಸಿದರು.
More From GoodReturns

Hotel Bandh: ಬೆಂಗಳೂರಿಗೂ ತಟ್ಟಿದ ಯುದ್ಧದ ಬಿಸಿ; ಇಂದಿನಿಂದ ಹಲವು ಹೋಟೆಲ್ ಬಂದ್

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಇರಲ್ಲ ಕರೆಂಟ್! ಎಲ್ಲೆಲ್ಲಿ ಗೊತ್ತಾ?

Bengaluru: ಬೆಂಗಳೂರಿಗೆ 5,000 ರೂ. ಕೋಟಿ ಪ್ರವಾಹ ಯೋಜನೆ, 41 ಕಿ.ಮೀ ಮೆಟ್ರೋ, 450 ಕಿ.ಮೀ ರಸ್ತೆ ಅಭಿವೃದ್ಧಿ!

Bengaluru: ಬೆಂಗಳೂರು ಮೂಲಸೌಕರ್ಯ ಮತ್ತು ಸ್ಮಾರ್ಟ್ ಸಿಟಿ ಯೋಜನೆಗಳಿಗೆ 7000 ಕೋಟಿ ರೂ. ಹೂಡಿಕೆ!

BMTC Bus: ಬೆಂಗಳೂರು-ರಾಮನಗರ ಮತ್ತು ಕನಕಪುರಕ್ಕೆ ಬಿಎಂಟಿಸಿ ಬಸ್… ಬಸ್ ನಿಲ್ದಾಣಗಳ ಬಗ್ಗೆ ತಿಳಿಯಿರಿ

Bengaluru-Mangaluru Flight: ಬೆಂಗಳೂರು-ಮಂಗಳೂರು ವಿಮಾನ ಪ್ರಯಾಣಿಕರಿಗೆ ಬಂಪರ್ ಸುದ್ದಿ! ಇನ್ಮೇಲೆ ತಡರಾತ್ರಿಯೂ ವಿಮಾನ ಸೇವೆ

Bengaluru Special Trains: ಮಾರ್ಚ್ 11 ರಿಂದ ಬೆಂಗಳೂರಿಗೆ ಬರಲಿದೆ ಮತ್ತೊಂದು ಸ್ಪೆಷಲ್ ರೈಲು! ಎಲ್ಲಿಂದ ಎಲ್ಲಿಗೆ?

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ



Click it and Unblock the Notifications