ದಿನದಿಂದ ದಿನಕ್ಕೆ ವಸ್ತುಗಳ ಬೆಲೆಯು ಗಗನಕ್ಕೇರುತ್ತಿದೆ. ಈರುಳ್ಳಿ ಬೆಲೆಯಂತೂ ಕೈಗೆಟುಕದಂತಾಗುತ್ತಿದೆ. ಈರುಳ್ಳಿ ಖರೀದಿಸಲು ಹೋದವರು ರೇಟ್ ಕೇಳಿ ಗಾಬರಿಯಾಗುತ್ತಿದ್ದಾರೆ. ಜನಸಾಮಾನ್ಯರಿಗೆ ತಟ್ಟಿದ ಈರುಳ್ಳಿ ದರ ಏರಿಕೆ ಬಿಸಿ, ಹೋಟೆಲ್ ಉದ್ಯಮಕ್ಕೂ ವಿಸ್ತರಿಸಿದೆ.
ಸಿಲಿಕಾನ್ ಸಿಟಿಯಲ್ಲಿ ಈರುಳ್ಳಿ ಬೆಲೆಯು 100 ರುಪಾಯಿ ಗಡಿ ದಾಟಿದೆ. 1 ಕೆಜಿ ಈರುಳ್ಳಿ ಖರೀದಿಸುವವರು ರೇಟ್ ಕೇಳಿ ಅರ್ಧ ಕೆಜಿ ಈರುಳ್ಳಿ ಸಾಕು ಎಂದು ಹಿಂದಿರುಗುತ್ತಿದ್ದಾರೆ. ಹೋಟೆಲ್ಗಳಲ್ಲಂತೂ ಈರುಳ್ಳಿ ಖಾದ್ಯಗಳಿಗೆ ಸದ್ಯಕ್ಕೆ ಬ್ರೇಕ್ ಹಾಕಲಾಗಿದೆ.

ಈರುಳ್ಳಿ ಬೆಲೆ ಏರಿಕೆಯ ಬಳಿಕ ಬೆಂಗಳೂರಿನ ಕೆಲವು ರೆಸ್ಟೋರೆಂಟ್ಗಳಲ್ಲಿ ಈರುಳ್ಳಿ ಬಳಕೆಯನ್ನೇ ಕಡಿಮೆ ಮಾಡಿದ್ದು, ಈರುಳ್ಳಿ ದೋಸೆ ಸೇವೆಯನ್ನು ನಿಲ್ಲಿಸಿವೆ. ಸೆಟ್ ದೋಸೆ, ಮಸಾಲೆ ದೋಸೆ ಬೇಕಾದ್ರೆ ಕೇಳಿ, ಈರುಳ್ಳಿ ದೋಸೆ ಸದ್ಯಕ್ಕೆ ಮಾತ್ರ ಕೇಳಬೇಡಿ ಎಂದು ಹೋಟೆಲ್ನವರು ಗ್ರಾಹಕರಿಗೆ ತಿಳಿಸುತ್ತಿದ್ದಾರೆ.

'ಬೆಲೆ ಏರಿಕೆಯಿಂದಾಗಿ ನಾವು ಈರುಳ್ಳಿ ಬಳಕೆಯನ್ನು ಕಡಿಮೆ ಮಾಡಿದ್ದೇವೆ. ಬೇಕಾದರೆ ಆಹಾರ ಪದಾರ್ಥಗಳ ದರವನ್ನು ಹೆಚ್ಚಿಸಬಹುದು, ಆದರೆ ಮಧ್ಯಮ ವರ್ಗದ ಗ್ರಾಹಕರಿಗೆ ಇದು ಹೆಚ್ಚು ಹೊರೆಯಾಗಿ ಕಾಣಬಹುದು' ಎಂದು ವಿ.ಕಾಮತ್, ಹೋಟೆಲ್ ಅಸೋಸಿಯೇಶನ್ ತಿಳಿಸಿದೆ.
ಬಹುತೇಕ ಖಾದ್ಯಗಳಲ್ಲಿ ಹೆಚ್ಚಾಗಿ ಬಳಸುವ ಈರುಳ್ಳಿಯ ಬೆಲೆ ಏರಿಕೆಯು, ಜನಸಾಮಾನ್ಯರನ್ನು ಕಂಗೆಡೆಸಿದೆ. ಈರುಳ್ಳಿ ಕತ್ತರಿಸಿ ಕಣ್ಣೀರು ಬರುವುದರ ಜೊತೆಗೆ, ಈರುಳ್ಳಿ ಖರೀದಿ ಮಾಡುವಾಗಲೂ ಕಣ್ಣೀರು ಬರುವ ಪರಿಸ್ಥಿತಿ ಎದುರಾಗಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications