For Quick Alerts
ALLOW NOTIFICATIONS  
For Daily Alerts

ಬ್ಯಾಂಕ್‌ ಠೇವಣಿ ವಿಮೆ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಚಿಂತನೆ

|

ಬ್ಯಾಂಕ್‌ಗಳಲ್ಲಿನ ಠೇವಣಿಗಳಿಗೆ ಸದ್ಯಕ್ಕೆ ಇರುವ ವಿಮೆ ಪರಿಹಾರ ಮೊತ್ತವನ್ನು ಹೆಚ್ಚಿಸಲು ಚಿಂತನೆ ನಡೆಸಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಿರ್ಮಲಾ ಸೀತಾರಾಮನ್ ಸದ್ಯ ಬ್ಯಾಂಕ್‌ಗಳಲ್ಲಿನ ಠೇವಣಿಗಳಿಗೆ ಇರುವ 1 ಲಕ್ಷ ರುಪಾಯಿ ವಿಮೆ ಪರಿಹಾರ ಮೊತ್ತವನ್ನು ಹೆಚ್ಚಿಸಲು ಯೋಜಿಸಲಾಗುತ್ತಿದೆ ಎಂದಿದ್ದಾರೆ.

ಬ್ಯಾಂಕ್‌ ಠೇವಣಿ ವಿಮೆ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಚಿಂತನೆ

ಇತ್ತೀಚೆಗಷ್ಟೇ ಮುಂಬೈ ಮೂಲದ ನಗರ ಸಹಕಾರಿ ಬ್ಯಾಂಕ್, ಪಿಎಂಸಿ (ಪಂಜಾಬ್ ಮಹಾರಾಷ್ಟ್ರ ಸಹಕಾರ) ಬ್ಯಾಂಕ್‌ನಲ್ಲಿನ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ನಿರ್ಮಲಾ ಸೀತಾರಾಮನ್ ಅವರ ಈ ಅಭಿಪ್ರಾಯಗಳು ಬಂದಿದೆ. ಆರ್ಥಿಕ ಬಿಕ್ಕಟ್ಟಿನಿಂದ ಬಳಲುತ್ತಿರುವ ಬ್ಯಾಂಕಿನ ಗ್ರಾಹಕರಿಗೆ ವಾಪಸಾತಿ ಮಿತಿಯನ್ನು ಇತ್ತೀಚೆಗೆ 50 ಸಾವಿರ ರುಪಾಯಿಗೆ ಹೆಚ್ಚಿಸಲಾಯಿತು.

ಹಣಕಾಸು ಸಂಸ್ಥೆ, ಸಹಕಾರಿ ಬ್ಯಾಂಕ್‌ಗಳು ದಿವಾಳಿ ಎದ್ದ ಅಥವಾ ಆರ್‌ಬಿಐ ಅವುಗಳ ಲೈಸೆನ್ಸ್ ರದ್ದುಪಡಿಸಿದ ಸಂದರ್ಭದಲ್ಲಿ ಠೇವಣಿ ಮೇಲಿನ ವಿಮೆ ಪರಿಹಾರ 1 ಲಕ್ಷ ರುಪಾಯಿ ಇದೆ. ಈ ಹಿಂದೆ 1993ರಲ್ಲಿ 30 ಸಾವಿರದಿಂದ 1 ಲಕ್ಷ ರುಪಾಯಿಗೆ ಹೆಚ್ಚಿಸಲಾಗಿತ್ತು. ಆದರೆ ಈಗ 26 ವರ್ಷಗಳ ಬಳಿಕ ವಿಮೆ ಮೊತ್ತವನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.

ಈ ಸಂಬಂಧ ಮುಂದಿನ ವಾರದಿಂದ ಆರಂಭವಾಗುತ್ತಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಪರಿಷ್ಕರಿಸಿದ ಹಣಕಾಸು ಪರಿಹಾರ ಮತ್ತು ಠೇವಣಿ ವಿಮೆ(ಎಫ್‌ಆರ್‌ಡಿಐ) ಮಸೂದೆಯನ್ನು ಮಂಡಿಸಲಾಗುತ್ತಿದೆ.

English summary

Bank Deposit Insurance Limit To Be Increased: FM

Finance Minister Nirmala Sitharaman said that the government is planning to raise the deposit guarantee limit from existing Rs 1 lakh.
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X