ಮುಂದಿನ ವಾರ ಬ್ಯಾಂಕ್ಗೆ ಸಂಬಂಧಿಸಿದ ಕೆಲಸಗಳು ಇದ್ಯಾ..? ಹಾಗಿದ್ದರೆ ಬ್ಯಾಂಕಿಗೆ ಬೇಟಿ ನೀಡುವ ಮುನ್ನ ಬ್ಯಾಕ್ ಓಪನ್ ಇರುತ್ತೋ ಅಥವಾ ಇಲ್ಲವೋ ಎಂಬುವುದನ್ನು ತಿಳಿದುಕೊಳ್ಳವುದು ತುಂಬಾನೇ ಮುಖ್ಯ. ಹಾಗಿದ್ದರೆ ಮುಂದಿನ ವಾರ ಎಷ್ಟು ದಿನಗಳ ಕಾಲ ಬ್ಯಾಂಕ್ ರಜೆ ಇರುತ್ತದೆ ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.
ಹೌದು, ಮುಂದಿನ ವಾರ 6, 12, 13 ರಂದು ಮೂರು ದಿನಗಳ ಕಾಲ ಬ್ಯಾಂಕ್ಗಳಿಗೆ ರಜೆ ಇರುತ್ತದೆ. ಆರ್ಬಿಐ ರಜೆ ಕ್ಯಾಲೆಂಡರ್ ಪ್ರಕಾರ,ಭಾರತದಾದ್ಯಂತ ಬ್ಯಾಂಕುಗಳು ಮುಂದಿನ ವಾರ ಶನಿವಾರ ಮತ್ತು ಭಾನುವಾರ ಸಾಪ್ತಾಹಿಕ ರಜೆಯ ಕಾರಣದಿಂದ ಬಂದ್ ಆಗಿರುತ್ತೇವೆ.

ಭಾರತದ ಎಲ್ಲಾ ಸಾರ್ವಜನಿಕ ಮತ್ತು ಖಾಸಗಿ ಬ್ಯಾಂಕುಗಳಿಗೆ ಎರಡನೇ ಮತ್ತು ನಾಲ್ಕನೇ ಶನಿವಾರದಂದು ರಜೆಯನ್ನು ನೀಡಲಾಗಿದೆ. ಎಲ್ಲಾ ಭಾನುವಾರಗಳು ಸಾಪ್ತಾಹಿಕ ರಜೆಯಾಗಿರುತ್ತವೆ. ಒಟ್ಟು ಜುಲೈ ತಿಂಗಳಲ್ಲಿ ಏಳು ದಿನಗಳ ಸಾಪ್ತಾಹಿಕ ರಜೆಯನ್ನು ಹೋಂದಿದೆ. ಈ ದಿನಗಳು ಬ್ಯಾಂಕ್ಗೆ ಸಂಬಂಧಿಸಿದ ಯಾವುದೇ ವ್ಯವಹಾರಗಳು ಸಹ ನಡೆಯುವುದಿಲ್ಲ.
ರಾಷ್ಟ್ರೀಯ ಮತ್ತು ಸ್ಥಳೀಯ ಆಚರಣೆಗಳು, ಧಾರ್ಮಿಕ ಆಚರಣೆಗಳು ಮತ್ತು ಇತರ ಸಾಂಸ್ಕೃತಿಕ ಆಚರಣೆಗಳನ್ನು ಗಣನೆಗೆ ತೆಗೆದುಕೊಂಡು ಆರ್ಬಿಐ ಮತ್ತು ರಾಜ್ಯ ಸರ್ಕಾರಗಳು ಬ್ಯಾಂಕುಗಳಿಗೆ ರಜಾದಿನಗಳ ಪಟ್ಟಿಯನ್ನು ರಚನೆ ಮಾಡುತ್ತದೆ.
ಮುಂದಿನ ವಾರ ಬ್ಯಾಂಕ್ ರಜಾದಿನಗಳು ಯಾವುವು..?
ಜುಲೈ 6 ಭಾನುವಾರ: ವಾರದ ರಜೆ ಇರುವ ಕಾರಣವಾಗಿ ಬ್ಯಾಂಕ್ಗಳು ದೇಶಾದ್ಯಂತ ರಜೆ ಇರುತ್ತದೆ.
ಜುಲೈ 12 ಶನಿವಾರ: ಜುಲೈ 12 ಎರಡನೇ ಶನಿವಾರವಾಗಿರುವ ಕಾರಣದಿಂದ ದೇಶಾದ್ಯಂತ ಬ್ಯಾಂಕುಗಳಿಗೆ ರಜೆ ಇರುತ್ತದೆ.
ಜುಲೈ 13 ಭಾನುವಾರ: ವಾರದ ರಜೆಯ ಕಾರಣದಿಂದಾಗಿ ಬ್ಯಾಂಕ್ಗಳು ದೇಶಾದ್ಯಂತ ಕ್ಲೋಸ್ ಇರುತ್ತದೆ.
ಈ ರಜಾದಿನಗಳು ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತವೆ. ದೇಶದ ಇತರ ರಾಜ್ಯಗಳಲ್ಲಿನ ಬ್ಯಾಂಕ್ ಶಾಖೆಗಳು ಆ ದಿನಗಳಲ್ಲಿ ತೆರೆದಿರುತ್ತವೆ.
ಬ್ಯಾಂಕ್ ರಜೆದಿನದಂದು ಯಾವೆಲ್ಲಾ ಸೇವೆಗಳು ಲಭ್ಯ..?
ಈ ರಜಾದಿನಗಳ ಸಮಯದಲ್ಲಿ ಬ್ಯಾಂಕ್ಗಳು ಆನ್ಲೈನ್ ಮೂಲಕ ಜನರಿಗೆ ಸೇವೆಗಳನ್ನ ನೀಡಲಿವೆ. ಮೊಬೈಲ್ ಬ್ಯಾಂಕಿಂಗ್ ಮೂಲಕ ನೀವು ನಿಮ್ಮ ಬ್ಯಾಂಕಿಂಗ್ ಸೇವೆಗಳನ್ನ ಮಾಡಿಕೊಳ್ಳಬಹುದು. ಅಲ್ಲದೆ ರಜಾದಿನಗಳಲ್ಲಿ ಸಹಜವಾಗಿ ಎಟಿಎಂಗಳು ತೆರೆದಿರುತ್ತವೆ. ನಿಮಗೆ ತ್ವರಿತ ಸೇವೆಗಳು ಬೇಕಿದ್ದಲ್ಲಿ ನೆಟ್ಬ್ಯಾಂಕಿಂಗ್ ಬಳಕೆ ಮಾಡಿಕೊಂಡು ನೀವು ನಿಮ್ಮ ಹಣವನ್ನ ಪಡೆಯಬಹುದು ಅಥವಾ ಕಳುಹಿಸಬಹುದು.
ಜುಲೈ 2025 ತಿಂಗಳ ಬ್ಯಾಂಕ್ ರಜೆ ದಿನಗಳ ಪಟ್ಟಿ
ಜುಲೈ 3 ರಂದು ಗುರುವಾರ: ಖರ್ಚಿ ಪೂಜೆಯ ಸಂದರ್ಭದಲ್ಲಿ ತ್ರಿಪುರಾದ ಅಗರ್ತಲಾದಲ್ಲಿ ಬ್ಯಾಂಕುಗಳು ಕ್ಲೋಸ್ ಆಗಿರುತ್ತಾವೆ.ಇತರ ರಾಜ್ಯಗಳಲ್ಲಿ ಬ್ಯಾಂಕುಗಳು ತೆರೆದಿರುತ್ತವೆ.
ಜುಲೈ 5 ರಂದು ಶನಿವಾರ: ಗುರು ಹರ್ಬಿಂದ ಜಿ ಜಯಂತಿಯಂದು ಜಮ್ಮು ಮತ್ತು ಕಾಶ್ಮೀರ ಮುಚ್ಚಲ್ಪಡುತ್ತದೆ. ಇತರ ರಾಜ್ಯಗಳಲ್ಲಿ ಬ್ಯಾಂಕುಗಳು ಎಂದಿನಂತೆ ಬ್ಯಾಂಕ್ ಸೇವೆಗಳು ಲಾಭ್ಯವಿರುತ್ತದೆ.
ಜುಲೈ 6 ರಂದು ಭಾನುವಾರ: ದೇಶಾದ್ಯಂತ ಭಾನುವಾರ ಬ್ಯಾಂಕುಗಳಿಗೆ ರಜೆ ಇರುತ್ತದೆ.
ಜುಲೈ 12ರಂದು ಶನಿವಾರ: ಎರಡನೇ ಶನಿವಾರ ದೇಶಾದ್ಯಂತ ಬ್ಯಾಂಕುಗಳು ಕ್ಲೋಸ್ ಆಗಿರುತ್ತದೆ.
ಜುಲೈ 13ರಂದು ಭಾನುವಾರ: ಭಾನುವಾರದಂದು ದೇಶಾದ್ಯಂತ ಬ್ಯಾಂಕುಗಳು ಮುಚ್ಚಲ್ಪಡುತ್ತವೆ.
ಜುಲೈ 14 ರಂದು ಸೋಮವಾರ: ಬೆಹ್ ಡೆಂಖ್ಲಾಮ್ ಹಬ್ಬದ ಸಂದರ್ಭದಲ್ಲಿ ಮೇಘಾಲಯದ ಶಿಲ್ಲಾಂಗ್ನಲ್ಲಿ ಬ್ಯಾಂಕುಗಳಿಗೆ ರಜೆ ಇರುತ್ತದೆ. ಇತರ ರಾಜ್ಯಗಳಲ್ಲಿ ಬ್ಯಾಂಕುಗಳು ತೆರೆದಿರುತ್ತವೆ.
ಜುಲೈ 16 ರಂದು ಬುಧವಾರ: ಹರೇಲಾ ಹಬ್ಬದ ಸಂದರ್ಭದಲ್ಲಿ ಉತ್ತರಾಖಂಡದ ಡೆಹ್ರಾಡೂನ್ನಲ್ಲಿ ಬ್ಯಾಂಕುಗಳು ಮುಚ್ಚಲ್ಪಡುತ್ತವೆ. ಇತರ ರಾಜ್ಯಗಳಲ್ಲಿ ಬ್ಯಾಂಕುಗಳು ತೆರೆದಿರುತ್ತವೆ.
ಜುಲೈ 17 ರಂದು ಗುರುವಾರ: ಯು ತಿರೋತ್ ಸಿಂಗ್ ಅವರ ಪುಣ್ಯತಿಥಿಯಂದು ಶಿಲ್ಲಾಂಗ್, ಮೇಘಾಲಯದಲ್ಲಿ ಬ್ಯಾಂಕುಗಳು ಮುಚ್ಚಲ್ಪಡುತ್ತವೆ. ಇತರ ರಾಜ್ಯಗಳಲ್ಲಿಯೂ ಬ್ಯಾಂಕುಗಳಿಗೆ ರಜೆ ಇರುವುದಿಲ್ಲ.
ಜುಲೈ 19ರಂದು ಶನಿವಾರ: ಕೇರ್ ಪೂಜೆಯ ಸಂದರ್ಭದಲ್ಲಿ ತ್ರಿಪುರಾದ ಅಗರ್ತಲಾದಲ್ಲಿ ಬ್ಯಾಂಕುಗಳು ಮುಚ್ಚಲ್ಪಡುತ್ತವೆ. ಇತರ ರಾಜ್ಯಗಳಲ್ಲಿ ಬ್ಯಾಂಕುಗಳು ತೆರೆದಿರುತ್ತವೆ.
ಜುಲೈ 20 ರಂದು ಭಾನುವಾರ: ದೇಶಾದ್ಯಂತ ಬ್ಯಾಂಕುಗಳು ಮುಚ್ಚಲ್ಪಡುತ್ತವೆ.
ಜುಲೈ 26 ರಂದು ಶನಿವಾರ: ನಾಲ್ಕನೇ ಶನಿವಾರದಂದು ದೇಶಾದ್ಯಂತ ಬ್ಯಾಂಕುಗಳು ಮುಚ್ಚಲ್ಪಡುತ್ತವೆ.
ಜುಲೈ 27 ರಂದು ಭಾನುವಾರ: ಭಾನುವಾರದಂದು ದೇಶಾದ್ಯಂತ ಬ್ಯಾಂಕುಗಳು ಮುಚ್ಚಲ್ಪಡುತ್ತವೆ.
ಜುಲೈ 28 ರಂದು ಸೋಮವಾರ: ಡ್ರುಕ್ಪಾ ತ್ಶೆ-ಜಿ ಸಂದರ್ಭದಲ್ಲಿ ಸಿಕ್ಕಿಂನ ಗ್ಯಾಂಗ್ಟಾಕ್ನಲ್ಲಿ ಬ್ಯಾಂಕುಗಳು ಮುಚ್ಚಲ್ಪಡುತ್ತವೆ. ಇತರ ರಾಜ್ಯಗಳಲ್ಲಿ ಬ್ಯಾಂಕುಗಳು ಎಂದಿನಂತೆ ಕಾರ್ಯನಿರ್ವಹಿಸುತ್ತವೆ.
ಒಟ್ಟು ಜುಲೈ ತಿಂಗಳಲ್ಲಿ 13 ದಿನಗಳ ಬ್ಯಾಂಕ್ಗಳಿಗೆ ರಜೆ ಇರುತ್ತದೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications