ರಾಜಸ್ಥಾನದ ಝುಂಝುನುನಿಂದ ವರದಿಯೊಂದು ಬಂದಿದೆ. ಅದರ ಪ್ರಕಾರ, ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್ ವೊಂದು ವ್ಯಕ್ತಿಯೊಬ್ಬರ ಮನೆ ಬಾಗಿಲಿಗೆ ನೋಟಿಸ್ ಹಚ್ಚಿದೆಯಂತೆ; ಅದು ಕೂಡ ಐವತ್ತು ಪೈಸೆ ಬಾಕಿ ಉಳಿಸಿಕೊಂಡಿದ್ದಾರೆ ಎಂಬ ಕಾರಣಕ್ಕೆ. ಸರಿ, ಆ ಐವತ್ತು ಪೈಸೆ ಮರುಪಾವತಿಸುವುದಕ್ಕೆ ಅಂತ ಹೋದರೆ ಬ್ಯಾಂಕ್ ನವರು ಅದನ್ನು ಕೂಡ ತೆಗೆದುಕೊಂಡಿಲ್ಲ. ಇದೀಗ ಆ ಬ್ಯಾಂಕ್ ವಿರುದ್ಧ ಪ್ರಕರಣ ದಾಖಲಿಸಲು ನಿರ್ಧರಿಸಲಾಗಿದೆ.
ಈ ಘಟನೆ ನಡೆದಿರುವುದು ಝುಂಝುನು ಜಿಲ್ಲೆಯ ಖೇಟ್ರಿಯಲ್ಲಿ. ಜಿತೇಂದ್ರ ಸಿಂಗ್ ಎಂಬುವರ ಮನೆ ಬಾಗಿಲಿಗೆ ರಾತ್ರೋರಾತ್ರಿ ನೋಟಿಸ್ ಹಚ್ಚಿರುವ ಬ್ಯಾಂಕ್, ಹಣ ಪಾವತಿಸದಿದ್ದರೆ ಕಾನೂನು ಕ್ರಮ ತೆಗೆದುಕೊಳ್ಳುವ ಎಚ್ಚರಿಕೆ ನೀಡಿದೆ.
ಆದರೆ, ಜಿತೇಂದ್ರ ಸಿಂಗ್ ಅವರಿಗೆ ಬೆನ್ನು ಹುರಿಯ ಸಮಸ್ಯೆ. ತಾವು ಖೇಟ್ರಿಯಲ್ಲಿ ಲೋಕ್ ಅದಾಲತ್ ಭಾಗಿಯಾಗಲು ಸಾಧ್ಯವಿಲ್ಲ ಎಂದು ತಂದೆ ವಿನೋದ್ ಸಿಂಗ್ ರನ್ನು ಜಿತೇಂದ್ರ ಕಳುಹಿಸಿದ್ದಾರೆ. ಆದರೆ ಬ್ಯಾಂಕ್ ನವರು ವಿನೋದ್ ರಿಂದ ಹಣ ಪಡೆಯಲು ನಿರಾಕರಿಸಿದ್ದಾರೆ. ತಮ್ಮ ಮಗನ ಅನಾರೋಗ್ಯ ಸ್ಥಿತಿಯನ್ನು ವಿವರಿಸಿದ ನಂತರವೂ ಅವರು ಕರಗಿಲ್ಲ.

"ಐವತ್ತು ಪೈಸೆಗಾಗಿ ನನ್ನ್ ಕಕ್ಷೀದಾರರಿಗೆ ಬ್ಯಾಂಕ್ ನವರು ನೋಟಿಸ್ ಕಳುಹಿಸಿದ್ದಾರೆ. ಹಣ ಕಟ್ಟಿ ನಿರಾಕ್ಷೇಪಣಾ ಪತ್ರ (ಎನ್ ಒಸಿ) ಪಡೆಯಲು ಹೋದರೆ ಅದನ್ನು ಒಪ್ಪಿಕೊಂಡಿಲ್ಲ. ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ" ಎಂದು ವಕೀಲ ವಿಕ್ರಮ್ ಸಿಂಗ್ ಹೇಳಿದ್ದಾರೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications