ಮಾಧ್ಯಮ ಸಂಸ್ಥೆ ಬ್ರಿಟಿಷ್ ಬ್ರಾಡ್ ಕಾಸ್ಟಿಂಗ್ ಕಾರ್ಪೊರೇಷನ್ ನಿಂದ (ಬಿಬಿಸಿ) ನಾನೂರಾ ಐವತ್ತು ಮಂದಿ ಸುದ್ದಿಮನೆ (ನ್ಯೂಸ್ ರೂಮ್) ಉದ್ಯೋಗ ಕಡಿತ ಮಾಡಲಾಗುವುದು ಎಂದು ಬುಧವಾರ ತಿಳಿಸಲಾಗಿದೆ. ವೀಕ್ಷಕರ ಅಗತ್ಯಗಳಿಗೆ ತಕ್ಕಂತೆ ಬದಲಾಗಲು ಮತ್ತು ಉಳಿತಾಯದ ಗುರಿಯನ್ನು ತಲುಪುವ ಸಲುವಾಗಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಹೇಳಲಾಗಿದೆ.
ಬಿಬಿಸಿ ಮುಖ್ಯಸ್ಥ ಹುದ್ದೆಯಿಂದ ಕೆಳಗಿಳಿಯುವುದಾಗಿ ಟೋನಿ ಹಾಲ್ ಘೋಷಣೆ ಮಾಡಿದ ವಾರದ ನಂತರ ಈ ಉದ್ಯೋಗ ಕಡಿತದ ಸುದ್ದಿ ಹೊರಬಿದ್ದಿದೆ. ವೇತನ ಬೇಡಿಕೆ ಮತ್ತು ಭವಿಷ್ಯದಲ್ಲಿ ಹೇಗೆ ಹಣಕಾಸು ಹೊಂದಿಸಬೇಕು ಎಂಬ ಬಗ್ಗೆ ಬಿಬಿಸಿ ಚಿಂತನೆ ನಡೆಸುತ್ತಿದೆ.
"ವಿಶ್ವದ ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮವಾಗಿ ನಾವು ಮುಂದುವರಿಯಬೇಕಿದೆ. ಆದರೆ ತುಂಬ ಮುಖ್ಯವಾಗಿ ಸದ್ಯಕ್ಕೆ ನಾವು ಯಾವ ಜನರನ್ನು ತಲುಪುತ್ತಿಲ್ಲವೋ ಅವರನ್ನು ತಲುಪಬೇಕಿದೆ ಎಂದು ಸುದ್ದಿ ಮತ್ತು ಪ್ರಸಕ್ತ ವಿದ್ಯಮಾನಗಳ ನಿರ್ದೇಶಕಿ ಫ್ರಾನ್ ಉನ್ಸ್ ವರ್ತ್ ಮಾಹಿತಿ ನೀಡಿದ್ದಾರೆ.

ಬಿಬಿಸಿಗೆ ಎಂಬತ್ತು ಮಿಲಿಯನ್ ಪೌಂಡ್ ಉಳಿತಾಯದ ಗುರಿ ಇದೆ. ಜತೆಗೆ ಸಾಂಪ್ರದಾಯಿಕ ಸುದ್ದಿ ತಲುಪಿಸುವ ವಿಧಾನಕ್ಕೆ ಹೆಚ್ಚು ಖರ್ಚು ಮಾಡಲಾಗುತ್ತಿದೆ. ಆದರೆ ಡಿಜಿಟಲ್ ಮೇಲೆ ಹೆಚ್ಚಿನ ಗಮನ ನೀಡಲಾಗುತ್ತಿಲ್ಲ ಎಂಬ ಭಾವನೆ ಇದೆ.
ಬಿಬಿಸಿ ಸುದ್ದಿಮನೆಯನ್ನು ವರದಿ ಆಧಾರಿತ ಮಾದರಿಯಾಗಿ ರೂಪಿಸಲು ನಿರ್ಧರಿಸಲಾಗಿದೆ. ಸುದ್ದಿ ವರದಿಗಳ ಮೇಲೆ ಹೆಚ್ಚು ಗಮನ ಹರಿಸಲಾಗುವುದು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಭವಿಷ್ಯದಲ್ಲಿ ಬಿಬಿಸಿ ಪತ್ರಕರ್ತರು ಲಂಡನ್ ನ ಹೊರ ಭಾಗದಲ್ಲಿ ಇರಲಿದ್ದಾರೆ. ಇದರಿಂದ ಬಿಬಿಸಿ ಆ ದೇಶದ (ಯುಕೆ) ನಂಟು ಕಳೆದುಕೊಳ್ಳುತ್ತದೆ ಎಂಬ ಟೀಕೆ ವ್ಯಕ್ತವಾಗುತ್ತಿದೆ.
ಸುದ್ದಿ ಮತ್ತು ಮನರಂಜನೆ ಗ್ರಾಹಕರ ಬದಲಾದ ಹವ್ಯಾಸದ ಕಾರಣಕ್ಕೆ ಜಗತ್ತಿನ ಅತಿ ದೊಡ್ಡ ಮಾಧ್ಯಮ ಸಂಸ್ಥೆ ಬಿಬಿಸಿಯು ಹೊಸ ವೀಕ್ಷಕರು- ಓದುಗರನ್ನು ಸೆಳೆಯಲು ಹೊಸ ದಾರಿಗಳಿಗಾಗಿ ಹೋರಾಡುತ್ತಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications