ಬೆಂಗಳೂರು ನಗರದಲ್ಲಿರುವ ಅಕ್ರಮ ಕಟ್ಟಡಗಳನ್ನು ಪತ್ತೆ ಮಾಡಲು 'ಕೃತಕ ಬುದ್ಧಿಮತ್ತೆ (ಎಐ)' ತಂತ್ರಜ್ಞಾನವನ್ನು ಬಳಸುವುದಾಗಿ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಮನೆ ಬಾಗಿಲಿಗೆ ಉಚಿತವಾಗಿ ಖಾತೆಗಳನ್ನು ವಿತರಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.
2025- 26 ನೇ ಸಾಲಿನ ಬಿಬಿಎಂಪಿ ಬಜೆಟ್ ಕುರಿತು ಬೆಂಗಳೂರು ನಗರದ ಶಾಸಕರ ಜತೆ ಸಭೆ ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗೋಷ್ಠಿಯಲ್ಲಿ ಈ ವಿಚಾರ ತಿಳಿಸಿದರು.

ನಗರದಲ್ಲಿ ಸುಮಾರು 7 ಲಕ್ಷ ಮನೆಗಳು ತೆರಿಗೆಯನ್ನು ಕಟ್ಟಿರಲಿಲ್ಲ. ಅವುಗಳಲ್ಲಿ ಕೇವಲ 1 ಲಕ್ಷ ಮನೆಗಳು ಮಾತ್ರ ತೆರಿಗೆ ವ್ಯಾಪ್ತಿಗೆ ಬಂದಿವೆ. ಇನ್ನೂ 6 ಲಕ್ಷ ಮನೆಗಳನ್ನು ತೆರಿಗೆ ವ್ಯಾಪ್ತಿಗೆ ತರುವುದು ಬಾಕಿ ಇದೆ. ಈ ಕಾರಣದಿಂದಾಗಿ, ಒಂದು ಬಾರಿ ಪಾವತಿಗೆ (ಓಟಿಎಸ್) ಅವಕಾಶವನ್ನು ನೀಡಲಾಗಿದೆ. ಅಕ್ರಮ ಕಟ್ಟಡಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಅವಕಾಶ ಪಾಲಿಕೆಗೆ ಇರಲಿಲ್ಲ. ಆದರೆ, ಕಳೆದ ವಾರ ಸದನದಲ್ಲಿ ಈ ಸಂಬಂಧ ವಿಧೇಯಕವನ್ನು ಅಂಗೀಕರಿಸಲಾಗಿದೆ. ಇದರ ಜೊತೆಗೆ, ಕಂದಾಯ ಬಡಾವಣೆಗಳಲ್ಲಿರುವ ಖಾಸಗಿ ರಸ್ತೆಗಳನ್ನು ಸಹ ಸರ್ಕಾರಿ ರಸ್ತೆಗಳೆಂದು ಪರಿಗಣಿಸಲಾಗುವುದು ಎಂದು ತಿಳಿಸಿದರು.
ಎಐ ಮೂಲಕ ಅಕ್ರಮ ನಿರ್ಮಾಣಗಳ ಪತ್ತೆ
ನಗರದಲ್ಲಿ ಉತ್ತಮ ತೆರಿಗೆ ಸಂಗ್ರಹವಾಗುವುದು ಅತ್ಯಗತ್ಯ. ಇಲ್ಲಿನ ಜನರಿಗೆ ನೀರು, ರಸ್ತೆ ಸೇರಿದಂತೆ ಅನೇಕ ಮೂಲಭೂತ ಸೌಕರ್ಯಗಳನ್ನು ಒದಗಿಸಿದ್ದೇವೆ. ಆದರೆ, ಅನೇಕ ಜನರು ಅದಕ್ಕೆ ತಕ್ಕಂತೆ ತೆರಿಗೆ ಪಾವತಿಸುತ್ತಿಲ್ಲ. ಕೆಲವರು ಅನುಮತಿ ನೀಡಿದ್ದಕ್ಕಿಂತ ಹೆಚ್ಚು ವಿಸ್ತೀರ್ಣದಲ್ಲಿ ಮತ್ತು ಹೆಚ್ಚು ಮಹಡಿಗಳನ್ನು ಅಕ್ರಮವಾಗಿ ನಿರ್ಮಿಸಿಕೊಂಡಿದ್ದಾರೆ. ಇಂತಹ ಅಕ್ರಮಗಳನ್ನು ಪತ್ತೆಹಚ್ಚಲು 'ಕೃತಕ ಬುದ್ಧಿಮತ್ತೆ (ಎಐ)' ತಂತ್ರಜ್ಞಾನವನ್ನು ಬಳಸುವ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು. ಈ ತಂತ್ರಜ್ಞಾನದಿಂದ ಕಟ್ಟಡದ ವಿಸ್ತೀರ್ಣ ಮತ್ತು ಎತ್ತರದ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯುತ್ತದೆ. ಜೊತೆಗೆ, ಪ್ರತಿಯೊಂದು ಮನೆಯ ದಾಖಲೆಗಳು ಲಭ್ಯವಾಗುತ್ತವೆ ಎಂದು ವಿವರಿಸಿದ್ದಾರೆ.
ಅಧಿಕಾರಿಗಳ ಅಕ್ರಮದಲ್ಲಿ ಶಾಮೀಲು ; ಅಮಾನತು ಮಾಡಿ
"ಮನೆ, ನಿವೇಶನ ಮಾಲೀಕರ ಜೊತೆ ಕೈ ಜೋಡಿಸಿ ಒಳ ಒಪ್ಪಂದ ಮಾಡಿಕೊಂಡು ಕಂದಾಯ ಬಡಾವಣೆ ಅಕ್ರಮಗಳಲ್ಲಿ ಅಧಿಕಾರಿಗಳು ಭಾಗಿಯಾಗಿದ್ದರೆ ಇಂತಹ ಅಧಿಕಾರಿಗಳನ್ನು ನನ್ನ ಗಮನಕ್ಕೆ ತರದೆ ತಕ್ಷಣ ಅಮಾನತು ಮಾಡಿ ಎಂದು ಉನ್ನತ ಅಧಿಕಾರಿಗಳಿಗೆ ತಿಳಿಸಿದ್ದೇನೆ. ಇತ್ತೀಚೆಗೆ ಅನೇಕ ದಂಡ ಶುಲ್ಕಗಳ ಮೊತ್ತವನ್ನು ಕೂಡ ಕಡಿಮೆ ಮಾಡಲಾಗಿದೆ. ನಗರದ ವ್ಯಾಪ್ತಿಯ ಎಲ್ಲಾ ಮನೆಗಳು ತೆರಿಗೆ ವ್ಯಾಪ್ತಿಗೆ ಬರಲೇಬೇಕು, ಅವರು ತೆರಿಗೆ ಕಟ್ಟಲೇಬೇಕು. ಇದರಲ್ಲಿ ರಾಜಿಯಾಗುವುದಿಲ್ಲ" ಎಂದು ತಿಳಿಸಿದರು. ಇದೇ ವೇಳೆ ಮನೆ ನಿರ್ಮಾಣ ವಿಚಾರದಲ್ಲಿ ಶೇ. 50 ರಷ್ಟು ಗುಂಪು ಮನೆಗಳು, ಶೇ. 50 ರಷ್ಟು ಒಂಟಿ ಮನೆಗಳು ಮಾಡಬೇಕು ಎನ್ನುವ ಸಲಹೆಯನ್ನು ಶಾಸಕರು ನೀಡಿದ್ದಾರೆ" ಎಂದು ಹೇಳಿದರು
ಮನೆ ಬಾಗಿಲಿಗೆ ಉಚಿತ ಖಾತೆ ಏಪ್ರಿಲ್ ನಿಂದ ಜಾರಿ
"ಮನೆ ಬಾಗಿಲಿಗೆ ತೆರಳಿ ಉಚಿತವಾಗಿ ಖಾತೆ ನೀಡುವ ವಿನೂತನ ವ್ಯವಸ್ಥೆಯನ್ನು ಇಡೀ ದೇಶದಲ್ಲಿಯೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಜಾರಿಗೆ ತರಲಾಗಿದೆ. ಈ ಕಾರ್ಯಕ್ರಮಕ್ಕೆ ಏಪ್ರಿಲ್ ತಿಂಗಳಿನಿಂದ ಚಾಲನೆ ದೊರೆಯಲಿದೆ. ಪ್ರತಿಯೊಂದು ಆಸ್ತಿ ದಾಖಲೆಗಳನ್ನು ಡಿಜಿಟಲೀಕರಣ ಮಾಡಲಾಗಿದೆ. ಅಕಸ್ಮಾತ್ ತಪ್ಪಿಹೋಗಿದ್ದಲ್ಲಿ ಅಂತವರು ತಮ್ಮ ದಾಖಲೆಗಳನ್ನು ಮತ್ತೆ ನೀಡಬಹುದು ಎಂದರು.
ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಿಬಿಎಂಪಿಗೆ ನೀಡುತ್ತಿರುವ ಅನುದಾನವನ್ನು 4 ಸಾವಿರ ಕೋಟಿ ರೂಪಾಯಿಯಿಂದ ಯಿಂದ 7 ಸಾವಿರ ಕೋಟಿಗೆ ಹೆಚ್ಚಳ ಮಾಡಿದೆ ಎಂಬ ಮಾಹಿತಿಯನ್ನು ನೀಡದರು.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications