ಬೆಂಗಳೂರು ಪಿಜಿಗಳಿಗೆ ಮತ್ತೊಮ್ಮೆ ಕಂಟಕ ಬಂದಂತಾಗಿದೆ. ಅಂದರೆ ಬೆಂಗಳೂರು ಪೂರ್ವ ನಗರಪಾಲಿಕೆ ವ್ಯಾಪ್ತಿಯಲ್ಲಿ ಪೇಯಿಂಗ್ ಗೆಸ್ಟ್ (ಪಿಜಿ) ವಸತಿ ಗೃಹಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಇತ್ತೀಚಿನ ಪರಿಶೀಲನೆಗಳಲ್ಲಿ ಶೇ. 60ಕ್ಕೂ ಹೆಚ್ಚು ಪಿಜಿಗಳು ಅಗತ್ಯ ಅನುಮತಿ ಮತ್ತು ದಾಖಲೆಗಳಿಲ್ಲದೆ ಕಾರ್ಯನಿರ್ವಹಿಸುತ್ತಿರುವುದು ಕಂಡುಬಂದಿದೆ. ಇದರಿಂದ ಸಾರ್ವಜನಿಕ ಸುರಕ್ಷತೆ, ಆರೋಗ್ಯ ಹಾಗೂ ಕಟ್ಟಡ ಭದ್ರತೆ ಬಗ್ಗೆ ಆತಂಕ ವ್ಯಕ್ತವಾಗಿದೆ. ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ನಗರಪಾಲಿಕೆ, ನಿಯಮ ಉಲ್ಲಂಘನೆ ತಡೆಯಲು ವಿಶೇಷ ಕ್ರಮ ಆರಂಭಿಸಿದೆ.

ಹೈಕೋರ್ಟ್ ಆದೇಶದಂತೆ ಆರೋಗ್ಯ ಇಲಾಖೆ ಮತ್ತು ನಗರಾಭಿವೃದ್ಧಿ ಯೋಜನೆ ಇಲಾಖೆ ಅಧಿಕಾರಿಗಳನ್ನು ಒಳಗೊಂಡ ಜಂಟಿ ಪರಿಶೀಲನಾ ತಂಡವನ್ನು ರಚಿಸಲಾಗಿದೆ. ಈ ತಂಡವು ಪೂರ್ವ ನಗರಪಾಲಿಕೆ ವ್ಯಾಪ್ತಿಯಲ್ಲಿರುವ ಪಿಜಿ ವಸತಿ ಗೃಹಗಳನ್ನು ನೇರವಾಗಿ ಭೇಟಿ ಮಾಡಿ ಪರಿಶೀಲಿಸಲಿದೆ. 15 ದಿನಗಳೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ಕಟ್ಟಡವು ಅನುಮೋದಿತ ನಕ್ಷೆಯಂತೆ ನಿರ್ಮಾಣವಾಗಿದೆಯೇ, ವಾಣಿಜ್ಯ ವಲಯದಲ್ಲಿದೆಯೇ ಮತ್ತು ಅಗ್ನಿಶಾಮಕ ಇಲಾಖೆಯಿಂದ ನಿರಾಕ್ಷೇಪಣಾ ಪತ್ರ ಪಡೆದಿದೆಯೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸಲಿದ್ದಾರೆ.
ಪಿಜಿಗಳಲ್ಲಿ ಭದ್ರತಾ ವ್ಯವಸ್ಥೆ ಕಡ್ಡಾಯವಾಗಿರಬೇಕು. ಸಿಸಿಟಿವಿ ಕ್ಯಾಮೆರಾಗಳು ಅಳವಡಿಸಲಾಗಿದ್ದು ಕನಿಷ್ಠ 90 ದಿನಗಳ ದಾಖಲೆ ಸಂಗ್ರಹ ಇರಬೇಕು. ಪ್ರತಿ ವ್ಯಕ್ತಿಗೆ ಕನಿಷ್ಠ 70 ಚದರ ಅಡಿ ವಿಸ್ತೀರ್ಣ ಒದಗಿಸಬೇಕು. ಕೊಠಡಿಗಳು ಗಾಳಿಯಾಟ ಮತ್ತು ಬೆಳಕಿಗೆ ಅನುಕೂಲವಾಗಿರಬೇಕು. ತುರ್ತು ಪರಿಸ್ಥಿತಿಯಲ್ಲಿ ಸುರಕ್ಷಿತ ನಿರ್ಗಮನ ದ್ವಾರಗಳಿರಬೇಕು. ಅಗ್ನಿ ಅವಘಡ ತಡೆಗೆ ಅಗತ್ಯ ಉಪಕರಣಗಳು ಲಭ್ಯವಿರಬೇಕು.
ಆರೋಗ್ಯದ ದೃಷ್ಟಿಯಿಂದ ಪ್ರಥಮ ಚಿಕಿತ್ಸಾ ಕಿಟ್, ಮೂಲ ವೈದ್ಯಕೀಯ ಸೌಲಭ್ಯಗಳು ಮತ್ತು ಸುರಕ್ಷಿತ ಕುಡಿಯುವ ನೀರಿನ ವ್ಯವಸ್ಥೆ ಇರಬೇಕು. ಅಡುಗೆಮನೆ ಇರುವ ಪಿಜಿಗಳಲ್ಲಿ ಆಹಾರ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಆಹಾರ ತಯಾರಿಸುವ ಸ್ಥಳ ಸ್ವಚ್ಛವಾಗಿರಬೇಕು. ಗ್ಯಾಸ್ ಮತ್ತು ವಿದ್ಯುತ್ ಸಂಪರ್ಕಗಳು ಸುರಕ್ಷಿತವಾಗಿರಬೇಕು. ಕಸದ ವಿಂಗಡಣೆ ಮತ್ತು ಸರಿಯಾದ ವಿಲೇವಾರಿ ಕ್ರಮ ಪಾಲಿಸಬೇಕು. ತುರ್ತು ಸಂಪರ್ಕ ಸಂಖ್ಯೆಗಳ ಫಲಕಗಳನ್ನು ಸ್ಪಷ್ಟವಾಗಿ ಪ್ರದರ್ಶಿಸಬೇಕು.
ನಿಯಮ ಉಲ್ಲಂಘನೆ ಕಂಡುಬಂದಲ್ಲಿ ಪಿಜಿ ಮಾಲೀಕರಿಗೆ ನೋಟಿಸ್ ನೀಡಲಾಗುತ್ತದೆ. ಗಂಭೀರ ಉಲ್ಲಂಘನೆಗಳಿದ್ದಲ್ಲಿ ಪರವಾನಗಿ ರದ್ದುಪಡಿಸುವುದು ಅಥವಾ ವಸತಿ ಗೃಹವನ್ನು ಮುಚ್ಚುವ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ. ಸಾರ್ವಜನಿಕ ಸುರಕ್ಷತೆಗಾಗಿ ಯಾವುದೇ ತಾರತಮ್ಯವಿಲ್ಲದೆ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.
ಇದೇ ವೇಳೆ ನಗರಪಾಲಿಕೆ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ರಾಷ್ಟ್ರೀಯ ಜನಗಣತಿ-2027 ಸಿದ್ಧತೆಗೂ ಒತ್ತು ನೀಡಲಾಗಿದೆ. ಜನಗಣತಿ ಕಾರ್ಯಕ್ಕೆ ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಿ ತರಬೇತಿ ನೀಡುವಂತೆ ಸೂಚಿಸಲಾಗಿದೆ. ಚಾರ್ಜ್ ಅಧಿಕಾರಿ, ಸಹಾಯಕ ಚಾರ್ಜ್ ಅಧಿಕಾರಿ, ಎಣಿಕೆ ಮೇಲ್ವಿಚಾರಕರು ಮತ್ತು ಎಣಿಕೆದಾರರು ತಮ್ಮ ಜವಾಬ್ದಾರಿಯನ್ನು ನಿಭಾಯಿಸಲು ಸಜ್ಜಾಗಬೇಕು ಎಂದು ತಿಳಿಸಲಾಗಿದೆ.
ಅದರ ಜೊತೆಗೆ ನ್ಯಾಯಾಲಯ ನಿಂದನೆ ಪ್ರಕರಣಗಳ ಬಾಕಿ ಕಡತಗಳನ್ನು ಶೀಘ್ರ ವಿಲೇವಾರಿ ಮಾಡಲು ಹಾಗೂ ಮೇಲ್ವಿಚಾರಣಾ ವ್ಯವಸ್ಥೆಯನ್ನು ಬಲಪಡಿಸಲು ಸೂಚಿಸಲಾಗಿದೆ. ಆಡಳಿತದಲ್ಲಿ ಪಾರದರ್ಶಕತೆ ಮತ್ತು ಜವಾಬ್ದಾರಿತನ ಹೆಚ್ಚಿಸಲು ಈ ಕ್ರಮಗಳು ಸಹಕಾರಿಯಾಗಲಿವೆ.
ಒಟ್ಟಾರೆ, ಸಾರ್ವಜನಿಕ ಸುರಕ್ಷತೆ ಮತ್ತು ಆರೋಗ್ಯವನ್ನು ಕಾಪಾಡುವ ಉದ್ದೇಶದಿಂದ ಪೂರ್ವ ನಗರಪಾಲಿಕೆ ವ್ಯಾಪ್ತಿಯಲ್ಲಿ ಸಮಗ್ರ ಪರಿಶೀಲನೆ ಮತ್ತು ನಿಯಂತ್ರಣ ಕ್ರಮಗಳು ಆರಂಭಗೊಂಡಿವೆ. ನಿಯಮಗಳನ್ನು ಪಾಲಿಸುವ ಮೂಲಕ ಪಿಜಿ ವಸತಿ ಗೃಹಗಳು ಸುರಕ್ಷಿತ ವಾತಾವರಣ ಒದಗಿಸಬೇಕೆಂಬುದು ನಗರಪಾಲಿಕೆಯ ಸ್ಪಷ್ಟ ಸಂದೇಶವಾಗಿದೆ.
More From GoodReturns

Bengaluru: ಬೀದಿ ಬದಿ ವ್ಯಾಪಾರಕ್ಕೆ ಅವಕಾಶವಿಲ್ಲ; ಈ ರಸ್ತೆಯ ವ್ಯಾಪಾರಿಗಳಿಗೆ ದೊಡ್ಡ ಸಂಕಷ್ಟ

Ugadi 2026 Wishes: ಈ ವರ್ಷದ ‘ಯುಗಾದಿ’ ಹೊಸ ಬೆಳಕು ತರಲಿ- ನಿಮ್ಮ ಪ್ರೀತಿ ಪಾತ್ರರಿಗೆ ಈ ರೀತಿ ಶುಭಾಶಯ ತಿಳಿಸಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ ಸ್ಥಳ ಆಯ್ಕೆ ಬಗ್ಗೆ ಹೊಸ ಅಪ್ಡೇಟ್; ಡಿ.ಕೆ ಶಿವಕುಮಾರ್ ಬಳಿ ಸುಳಿವು

Gold Rate: ಚಿನ್ನಪ್ರಿಯರಿಗೆ ‘ಯುಗಾದಿ’ ಸಿಹಿ; ಬೆಂಗಳೂರಿನಲ್ಲಿ 24K ಬಂಗಾರದ ಬೆಲೆಯಲ್ಲಿ 27,800 ರೂ. ಕುಸಿತ

Credit Score: ಸಾಲ ಪಡೆಯಲಷ್ಟೇ ಅಲ್ಲ, ಬ್ಯಾಂಕ್ ಉದ್ಯೋಗಕ್ಕೂ ಬೇಕಿದೆ ಕ್ರೆಡಿಟ್ ಸ್ಕೋರ್; ಈ ಬಗ್ಗೆ ತಿಳಿಯಿರಿ

Gold Rates & Silver Rates Today Live: ಚಿನ್ನ-ಬೆಳ್ಳಿ ದರದಲ್ಲಿ ಭಾರಿ ಏರಿಕೆ-ಮಾರುಕಟ್ಟೆಯ ಲೈವ್ ಅಪ್ಡೇಟ್ ತಿಳಿಯಿರಿ

Karnataka Rain: ರಾಜ್ಯದಲ್ಲಿ ಸದ್ಯಕ್ಕೆ ನಿಲ್ಲಲ್ಲ ವರುಣಾರ್ಭಟ; ಎಷ್ಟು ದಿನ ಈ ಮಳೆ ಎಂದು ತಿಳಿಯಿರಿ

Ballari Airport: ಬಳ್ಳಾರಿ ವಿಮಾನ ನಿಲ್ದಾಣಕ್ಕೆ ಈ ವಿಚಾರಕ್ಕೆ ಅಡ್ಡಿಯಾಗ್ತಿದ್ಯಾ-ಏನದು ಹೊಸ ವಿಚಾರ ತಿಳಿಯಿರಿ

Bank Holiday: ನಾಳೆ ಕರ್ನಾಟಕದಲ್ಲಿ ಬ್ಯಾಂಕ್ ತೆರೆದಿರುತ್ತೋ, ಇಲ್ಲವೋ? ಸ್ಪಷ್ಟ ಮಾಹಿತಿ ತಿಳಿಯಿರಿ

Silver Price Today: ಬೆಳ್ಳಿ ದರದಲ್ಲಿ ಇಂದು 5,000 ಕುಸಿತ; ಭಾರತದಲ್ಲಿ ಇಂದಿನ ಬೆಲೆ ತಿಳಿಯಿರಿ

LPG Crisis Bengaluru: ಕೋಳಿ ವ್ಯಾಪಾರಕ್ಕೂ ತಟ್ಟಿದ LPG ಕೊರತೆ ಬಿಸಿ; ಬೆಂಗಳೂರಲ್ಲಿ ಮಾರಾಟ ಭಾರಿ ಕುಸಿತ



Click it and Unblock the Notifications