ಧಾರಾಕಾರ ಮಳೆಯಿಂದಾಗಿ ಬೆಂಗಳೂರು ನಗರದ ಹಲವು ಭಾಗಗಳು ಜಲಾವೃತಗೊಂಡಿವೆ. ಸಿಲಿಕಾನ್ ಸಿಟಿ ಭಾಗದಲ್ಲಿ ರಸ್ತೆಗಳು ಜಲಾವೃತವಾಗಿದೆ. ಪ್ರವಾಹಕ್ಕೆ ಒಳಗಾದ ಪ್ರದೇಶದಲ್ಲಿ ಸಿಲುಕಿದ ಜನರನ್ನು ಸ್ಥಳಾಂತರ ಮಾಡಲು ಟ್ರಾಕ್ಟರ್ ಅನ್ನು ಬಳಕೆ ಮಾಡಲಾಗುತ್ತಿದೆ. ಟ್ರಾಕ್ಟರ್ ಮೂಲಕ ಜನರ ಸ್ಥಳಾಂತರ ಕಾರ್ಯ ಮಾಡಲಾಗುತ್ತಿದೆ. ಈ ನಡುವೆ ಅನಾಕಾಡೆಮಿ ಸಿಇಒ ಗೌರವ್ ಮುಂಜಾಲ್ ಕುಟುಂಬವನ್ನು ಕೂಡಾ ಟ್ರಾಕ್ಟರ್ ಮೂಲಕ ಸ್ಥಳಾಂತರ ಮಾಡಲಾಗಿದ್ದು ಈ ವಿಡಿಯೋವನ್ನು ಗೌರವ್ ಮುಂಜಾಲ್ ಹಂಚಿಕೊಂಡಿದ್ದಾರೆ.
ಇನ್ನು ನೀರು ತುಂಬಿರುವ ಕಾರಣದಿಂದಾಗಿ ಹಲವಾರು ಐಟಿ ಉದ್ಯೋಗಿಗಳು ಟ್ರ್ಯಾಕ್ಟರ್ಗಳನ್ನು ಬಳಸಿ ಕೆಲಸಕ್ಕೆ ತೆರಳಿದ್ದಾರೆ. ಸೆಪ್ಟೆಂಬರ್ 5 ರಂದು, ಐಟಿ ಉದ್ಯೋಗಿಗಳು ಹೆಚ್ಚಾಗಿ ಟ್ರ್ಯಾಕ್ಟರ್ ಮೂಲಕ ಪ್ರಯಾಣಿಸಿದ್ದಾರೆ.
"ನಾವು ನಮ್ಮ ಕಚೇರಿಗೆ ಅಥವಾ ಉದ್ಯೋಗಕ್ಕೆ ಹಲವಾರು ದಿನಗಳ ಕಾಲ ರಜೆಯನ್ನು ಹಾಕಲು ಸಾಧ್ಯವಿಲ್ಲ. ನಾವು ತುಂಬಾ ದಿನಗಳ ಕಾಲ ರಜೆ ಮಾಡುವುದು ನಮ್ಮ ಕೆಲಸದ ಮೇಲೆ ಪರಿಣಾಮವನ್ನು ಉಂಟು ಮಾಡುತ್ತದೆ. ನಾವು ಅದಕ್ಕಾಗಿ 50 ರೂಪಾಯಿ ಪಡೆದು ನಮ್ಮನ್ನು ಆಫೀಸ್ಗೆ ಕರೆದೊಯ್ಯುವ ಟ್ರ್ಯಾಕ್ಟರ್ಗಳನ್ನು ಕಾಯುತ್ತಿದ್ದೇವೆ," ಎಂದು ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುವ ಮಹಿಳೆಯೊಬ್ಬರು ಎಎನ್ಐಗೆ ತಿಳಿಸಿದ್ದಾರೆ.

ಅನಾಕಾಡೆಮಿ ಸಿಇಒ ಗೌರವ್ ಮುಂಜಾಲ್ ಟ್ವೀಟ್; ಈ ನಡುವೆ ಅನಾಕಾಡೆಮಿ ಸಿಇಒ ಗೌರವ್ ಮುಂಜಾಲ್ ತಮ್ಮ ಕುಟುಂಬವನ್ನು ಟ್ರ್ಯಾಕ್ಟರ್ ಮೂಲಕ ಸ್ಥಳಾಂತರ ಮಾಡುವ ವಿಡಿಯೋವನ್ನು ಟ್ವೀಟ್ ಮಾಡಿದ್ದಾರೆ. ತಮ್ಮ ನಿವಾಸ ಇರುವ ಪ್ರದೇಶವು ನೀರಿನಲ್ಲಿ ಮುಳುಗಿರುವ ಕಾರಣದಿಂದಾಗಿ ಗೌರವ್ ಮುಂಜಾಲ್ರ ಕುಟುಂಬ ಮತ್ತು ಸಾಕುಪ್ರಾಣಿಗಳನ್ನು ಟ್ರ್ಯಾಕ್ಟರ್ನಲ್ಲಿ ಸ್ಥಳಾಂತರಿಸುವ ವೀಡಿಯೊವನ್ನು ಹಂಚಿಕೊಳ್ಳಲಾಗಿದೆ.
ಹೆಚ್ಚಿನ ಕಾಳಜಿ ವಹಿಸಲು ಮತ್ತು ಯಾವುದೇ ಸಹಾಯದ ಅಗತ್ಯವಿದ್ದಲ್ಲಿ ತಮ್ಮನ್ನು ಸಂಪರ್ಕ ಮಾಡುವಂತೆಯೂ ಗೌರವ್ ಮುಂಜಾಲ್ ತಿಳಿಸಿದ್ದಾರೆ. ಟ್ವಿಟ್ಟರ್ನಲ್ಲಿ ವೀಡಿಯೊವನ್ನು ಹಂಚಿಕೊಂಡ ಗೌರವ್ ಮುಂಜಾಲ್, "ಕುಟುಂಬ ಮತ್ತು ನನ್ನ ಸಾಕುಪ್ರಾಣಿ ಆಲ್ಬಸ್ ಅನ್ನು ಈಗ ನೀರಿನಿಂದ ಆವರಿಸಿರುವ ನಮ್ಮ ಸೊಸೈಟಿಯಿಂದ ಟ್ರ್ಯಾಕ್ಟರ್ನಲ್ಲಿ ಸ್ಥಳಾಂತರಿಸಲಾಗಿದೆ. ಪ್ರಸ್ತುತ ಸ್ಥಿತಿ ಕೆಟ್ಟದಾಗಿದೆ. ದಯವಿಟ್ಟು ಕಾಳಜಿ ವಹಿಸಿ. ನಿಮಗೆ ಯಾವುದೇ ಸಹಾಯ ಬೇಕಾದರೆ ನನಗೆ ಡಿಎಂ ಮಾಡಿ, ಸಹಾಯ ಮಾಡಲು ನಾನು ನನ್ನ ಕೈಲಾದಷ್ಟು ಪ್ರಯತ್ನಿಸುತ್ತೇನೆ," ಎಂದು ತಿಳಿಸಿದ್ದಾರೆ.
ಇನ್ನು ಟ್ವೀಟ್ಗೆ ಪ್ರತಿಕ್ರಿಯಿಸಿದ ಟ್ವಿಟ್ಟರ್ ಬಳಕೆದಾರರು, "ಇದು ಕ್ರೇಜಿ ಸ್ಥಿತಿ ಟೇಕ್ ಕೇರ್ ಭಾಯ್," ಎಂದು ಹೇಳಿದ್ದಾರೆ. ಇನ್ನೊಬ್ಬ ನೆಟ್ಟಿಗರು, "ಮುಂಜಾಲ್ ಸರ್ ನಿಮ್ಮ ಸ್ಥಿತಿ ಹೀಗಿದ್ದರೆ ಸಾಮಾನ್ಯ ಜನರ ಸ್ಥಿತಿ ಏನು? ದಯವಿಟ್ಟು ನಿಮ್ಮ ಮುಖ್ಯ ಕಚೇರಿಯನ್ನು ಜೈಪುರಕ್ಕೆ ಸ್ಥಳಾಂತರಿಸಿ," ಎಂದಿದ್ದಾರೆ. ಮತ್ತೋರ್ವ ನೆಟ್ಟಿಗರು "ಸರ್ವಶಕ್ತ ಟ್ರಾಕ್ಟರ್ಗಳು ಬೆಂಗಳೂರಿನಂತಹ ಮಹಾನಗರವನ್ನು ಸ್ವಾಧೀನಪ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications