ಬೆಂಗಳೂರಿಗರೇ ಇಲ್ಲಿ ಕೇಳಿ.. ಬೆಂಗಳೂರಿನ ಹಲವಾರು ಪ್ರದೇಶಗಳಲ್ಲಿ ನಾಳೆ( ಜೂನ್.29 ಭಾನುವಾರ)ದಂದು ವಿದ್ಯುತ್ ಸರಬರಾಜಿನಲ್ಲಿ ಅಡಚರಣೆ ಉಂಟಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ಮಾಹಿತಿಯನ್ನು ತಿಳಿಸಿದೆ. ಹಾಗಿದ್ರೆ ನಾಳೆ ಯಾವೆಲ್ಲಾ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ..? ಎಷ್ಟು ಗಂಟೆಗಳ ಕಾಲ ವಿದ್ಯುತ್ ಸ್ಥಗಿತಗೊಳ್ಳುತ್ತದೆ ಎಂಬ ಹೆಚ್ಚಿನ ವಿವರ ಇಲ್ಲಿದೆ ನೋಡಿ..
ಬೆಂಗಳೂರಿನಲ್ಲಿ ನಾಳೆ ವಿದ್ಯುತ್ ಸರಬರಾಜು ಸಂಸ್ಥೆಯು ಕೆಲವು ನಿಗದಿತ ತ್ರೈಮಾಸಿಕ ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ನಾಳೆ ಬೆಳಿಗ್ಗೆ 10:00 ರಿಂದ ಸಂಜೆ 5:00 ರವರೆಗೆ ಏಳು ಗಂಟೆಗಳ ಕಾಲ ಕರೆಂಟ್ ತೆಗೆಯುವಂತಹ ಸಾಧ್ಯತೆ ಇದೆ.

ವರದಿಯ ಪ್ರಕಾರ ನಾಳೆ ಬೆಂಗಳೂರಿನಲ್ಲಿ ವಿದ್ಯುತ್ ಸಂಸ್ಥೆಯು ಕೆಲವು ನಿಗದಿತ ತ್ರೈಮಾಸಿಕ ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿದೆ.ಇದರಿಂದಾಗಿ 66/11 ಕಿಲೋವೋಲ್ಟ್ (ಕೆವಿ) ಎ ಸ್ಟೇಷನ್ ಅಡಿಯಲ್ಲಿ ಬರುವ ಪ್ರದೇಶಗಳ ಮೇಲೆ ಪರಿಣಾಮ ಬೀರುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ.
ವಾರಾಂತ್ಯದಲ್ಲಿ ಬೆಂಗಳೂರಿನಲ್ಲಿ ಬಹುತೇಕ ಕಚೇರಿಗಳು, ಕೈಗಾರಿಕೆಗಳು ಮತ್ತು ಶಾಲೆಗಳು ಮುಚ್ಚಿರುವುದರಿಂದ ವಿದ್ಯುತ್ ಬಳಕೆಯನ್ನು ಸಾರ್ವಜನಿಕರು ಕಡಿಮಡ ಬಳಕೆ ಮಾಡುತ್ತಾರೆ. ನಾವು ಈ ಸಮಯದಲ್ಲಿ ಬೆಸ್ಕಾಂ ನಿರ್ವಹಣಾ ಕಾಮಗಾರಿಗನ್ನು ಮಾಡುವುದು ಸೂಕ್ತ.ಯಾಕೆಂದರೆ ಗ್ರಾಹಕರ ಇದು ಕಡಿಮೆಯ ಪರಿಣಾಮವನ್ನು ಬೀರುತ್ತದೆ ಅದಕ್ಕಾಗಿ
ಬೆಸ್ಕಾಂ ವಾರಾಂತ್ಯದಲ್ಲಿ ಕೆಲಸ ಮಾಡಲಾಗುತ್ತದೆ ಎಂದು ಮಾಹಿತಿಯನ್ನು ತಿಳಿಸಿಸಲಾಗಿದೆ.
ಯಾವೆಲ್ಲಾ ಏರಿಯಾಗಳಲ್ಲಿ ವಿದ್ಯುತ್ ಇರುವುದಿಲ್ಲ
ಬೆಸ್ಕಾಮ್ ನೀಡಿರುವ ಮಾಹಿತಿಯ ಪ್ರಕಾರ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಬಹುದು ಎಂದು ಹೇಳಿದೆ ಅವುಗಳೆಂದರೆ, ಶೇಷಾದ್ರಿ ರಸ್ತೆ, ಕುರುಬರ ಸಂಘದ ವೃತ್ತ, 1ನೇ ಮುಖ್ಯರಸ್ತೆ, ಗಾಂಧಿ ನಗರ 1ನೇ ಕ್ರಾಸ್, 2ನೇ ಕ್ರಾಸ್ ಭಾಗಗಳು, ಕ್ರೆಸೆಂಟ್ ರಸ್ತೆ, ಶೇಷಾದ್ರಿಪುರಂ, ವಿನಾಯಕ ವೃತ್ತ, ಕೆಂಪೇಗೌಡ ರಸ್ತೆ, ಟ್ಯಾಂಕ್ ಬಂಡ್ ರಸ್ತೆ, ಸುಬೇದಾರ್ ಛತ್ರಂ ರಸ್ತೆ, ಲಕ್ಷ್ಮಣಪುರಿ ಸ್ಲಂ ಏರಿಯಾ, ಕಬ್ಬನ್ಪೇಟೆ, ಚಲುಕೂರ್ಪೇಟೆ, ಚಲುಕೂರ್ಪೇಟೆ, ಸಿ.ಸಿ. ಹೈಗ್ರೌಂಡ್ಸ್, ಮಲ್ಲೇಶ್ವರಂ ಮತ್ತು ಶೇಷಾದ್ರಿಪುರಂನ ಭಾಗಗಳಲ್ಲಿ ವಿದ್ಯುತ್ ವ್ಯತ್ಯಾಯವಾಗಲಿದೆ.
ಜೂನ್ 24, 2025 ರಂದು ಬೆಂಗಳೂರು ನಗರದೆಲ್ಲೆಡೆ ನಿಗದಿತ ವಿದ್ಯುತ್ ಕಡಿತವನ್ನು ಮಾಡಲಾಗಿತ್ತು. ಇದರಿಂದ ಹಲವಾರು ನಿವಾಸಿ ಮತ್ತು ವಾಣಿಜ್ಯ ಪ್ರದೇಶಗಳು ತಾತ್ಕಾಲಿಕ ವಿದ್ಯುತ್ ವ್ಯತ್ಯಯದ ಪರಿಣಾಮಗಳನ್ನು ಎದುರಿಸಲಾಗುತ್ತು. ಬೆಸ್ಕಾಂ (BESCOM) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಲಿಮಿಟೆಡ್ (KPTCL) ಒಟ್ಟಿಗೆ ಅನೇಕ ನಿರ್ವಹಣಾ ಮತ್ತು ಬದಲಾವಣೆ ಕಾಮಗಾರಿಗಳನ್ನು ನೆರವಿಗೆ ನಿಗದಿಪಡಿಸಿದೆ.
ಇವುಗಳಲ್ಲಿ ಮರಗಳನ್ನು ಕತ್ತರಿಸುವುದು, ಓವರ್ಹೆಡ್ ಕೇಬಲ್ಗಳ ಭೂಗತೀಕರಣ, ಜಲಸಿರಿ 24x7 ನೀರು ಸರಬರಾಜು ಯೋಜನೆ, ಹೈ-ಟೆನ್ಷನ್ (ಎಚ್ಟಿ) ಲೈನ್ಗಳ ಮರುಕಂಡಕ್ಟರ್, ರಿಂಗ್ ಮುಖ್ಯ ಘಟಕಗಳ (ಆರ್ಎಂಯು) ಸೇವೆ, ಎಚ್ಟಿ ಸಂಪರ್ಕಗಳನ್ನು ದುರಸ್ತಿ ಮಾಡುವುದು ಮತ್ತು ಬದಲಾಯಿಸುವುದು, ಸಿಸ್ಟಮ್ ನವೀಕರಣಗಳು ಮತ್ತು ಇತರ ಅಗತ್ಯ ದುರಸ್ತಿಗಳನ್ನು ಒಳಗೊಂಡಿತ್ತು.
ಜೂನ್ 30: ಬೆಂಗಳೂರಿನಲ್ಲಿ ವಿದ್ಯುತ್ ವ್ಯತ್ಯಯವಾಗುವ ಸಾಧ್ಯತೆ
ಬೆಂಗಳೂರಿನಲ್ಲಿ ಜೂನ್ 30 ಸೋಮವಾರದಂದು ಕೂಡ ವಿದ್ಯುತ್ ಸ್ಥಗಿತವಾಗುವಂತಹ ಸಾಧ್ಯತೆ ಇದೆ. ಬೆಳಿಗ್ಗೆ 10 ಗಂಟೆಯಿಂದ ಸಂಜೆ 4ರವರೆಗೆ ಪವರ್ ಕಟ್ ಆಗಬಹುದು. ಫೋರಂ ಮಾಲ್, ಪ್ರೆಸ್ಟೀಜ್ ಫಾಲ್ಕನ್ ಸಿಟಿ ಅಪಾರ್ಟ್ಮೆಂಟ್, ದೊಡ್ಡಕಲ್ಲಸಂದ್ರ, ಕನಕಪುರ ಮುಖ್ಯರಸ್ತೆ, ನಾರಾಯಣ ನಗರ 3ನೇ ಬ್ಲಾಕ್, ಮುನಿ ರೆಡ್ಡಿ ಲೇಔಟ್, ಕುಮಾರನ್ಸ್ ಸ್ಕೂಲ್, ಜ್ಯೋತಿ ಲೇಔಟ್, ಗಂಗಾಪತಿಪುರ, ಸುಪ್ರಜಾ ನಗರ, ಜೆಎಸ್ಎಸ್ ಶಾಲೆ, ಜರಗನಹಳ್ಳಿ ಪಾರ್ಕ್, ಗಂಗಾಧರೇಶ್ವರ ದೇವಸ್ಥಾನ, ಸರಕಳ್ಳಾ ರಸ್ತೆ, ಸರಕಟ್ಟಿ ಲಾಯೌಟ್, ಸರಕಳ್ಳಿ ರಸ್ತೆ, ಆಶಾನಕಟ್ಟೆ ರಸ್ತೆ. ಸಿಗ್ನಲ್, ನಾಗಾರ್ಜುನ ಪ್ರೀಮಿಯರ್ ಅಪಾರ್ಟ್ಮೆಂಟ್, ಚೊಂಚನಗಟ್ಟಾ ಗ್ರಾಮ, ಶ್ರೀನಿಧಿ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ ಎಂದು ಮಾಹಿತಿ ತಿಳಿದು ಬಂದಿದೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications