ಬೆಂಗಳೂರು: ಬೆಂಗಳೂರಿನಲ್ಲಿ (Bengaluru) ಇತ್ತೀಚೆಗೆ ನಿರಂತರ ವಿದ್ಯುತ್ ವ್ಯತ್ಯಯದ (Power Cut) ಸಮಸ್ಯೆಗಳು ಎದುರಾಗುತ್ತಿದೆ. ದಿನ ಬೆಳಗಾದ್ರೆ ಸಾಕು ಬೆಸ್ಕಾಂ ಇಲಾಖೆಯಿಂದ (BESCOM), ಈ ನಗರದಲ್ಲಿ ಇಂದು, ನಾಳೆ ಕರೆಂಟ್ ಇರಲ್ಲ ಎಂಬ ಸೂಚನೆ ಹೊರಡಿಸಲಾಗುತ್ತದೆ. ಅದೇ ರೀತಿ ಬೆಂಗಳೂರಿನ ಜನರಿಗೆ ಶಾಕಿಂಗ್ ಸುದ್ದಿಯೊಂದಿದೆ. ಮುಂದಿನ 5 ದಿನ ಈ ನಗರಗಳಲ್ಲಿ ಕರೆಂಟ್ ಇರಲ್ಲ ಎಂದು ಹೇಳಲಾಗಿದೆ.

ಹೌದು, ಬೆಂಗಳೂರಿನಲ್ಲಿ ಮುಂದಿನ 5 ದಿನ ಕರೆಂಟ್ ಇರುವುದಿಲ್ಲ ಎಂದು ವರದಿಯಾಗಿದೆ. ಹಾಗಿದ್ರೆ ಯಾವೆಲ್ಲಾ ನಗರಗಳಲ್ಲಿ, ಎಷ್ಟು ದಿನ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.
ಎಷ್ಟು ದಿನ ಇರಲ್ಲ ಕರೆಂಟ್?
ಬೆಸ್ಕಾಂ ಸೂಚನೆಯ ಪ್ರಕಾರ, ಇಂದಿನಿಂದ ಅಂದರೆ ಫೆಬ್ರವರಿ 4 ರಿಂದ 9 ರವರೆಗೆ, ಪ್ರತಿದಿನ ಬೆಳಿಗ್ಗೆ 6 ರಿಂದ ರಾತ್ರಿ 10 ರವರೆಗೆ ಕರೆಂಟ್ ಇರುವುದಿಲ್ಲ ಎಂದು ಹೇಳಲಾಗಿದೆ. ಅದರಲ್ಲೂ ಮುಖ್ಯವಾಗಿ ಹೆಬ್ಬಾಳ ಮತ್ತು ಉತ್ತರ ಬೆಂಗಳೂರು ಸುತ್ತಮುತ್ತ ವಿದ್ಯುತ್ ವ್ಯತ್ಯಯವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಬೆಸ್ಕಾಂ ಮಾಹಿತಿ ಪ್ರಕಾರ, 66/11 ಕೆವಿ ಎಚ್ಬಿಆರ್ ವಿದ್ಯುತ್ ಲೈನ್ನಲ್ಲಿ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಕರೆಂಟ್ ಇರುವುದಿಲ್ಲ ಎನ್ನಲಾಗಿದೆ. ಮುಂದಿನ ದಿನಗಳಲ್ಲಿ, ವಿದ್ಯುತ್ ಸೇವೆಯ ಗುಣಮಟ್ಟಕ್ಕಾಗಿ, ವಿದ್ಯುತ್ ಪೂರೈಕೆ ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ.
ಇನ್ನು ಬೆಸ್ಕಾಂ ಇಲಾಖೆಯ ಈ ಕಾಮಗಾರಿ ಸಂದರ್ಭದಲ್ಲಿ, ಕೆಲವು ಪ್ರದೇಶಗಳಲ್ಲಿ ದಿನವಿಡೀ ವಿದ್ಯುತ್ ಅಡಚಣೆ ಉಂಟಾಗಲಿದೆ ಎನ್ನಲಾಗಿದೆ. ಈ ವಿದ್ಯುತ್ ವ್ಯತ್ಯಯದಿಂದ ನಿವಾಸಿಗಳು, ಸರ್ಕಾರಿ-ಖಾಸಗಿ ಕಚೇರಿಗಳು ಹಾಗೂ ಅಂಗಡಿಗಳಿಗೆ ಸಮಸ್ಯೆಯಾಗಲಿದೆ ಎನ್ನಲಾಗಿದೆ..
ಇಂದು ಇಲ್ಲೆಲ್ಲಾ ಇರಲ್ಲ ಕರೆಂಟ್!
ಇನ್ನು ಹಲವು ಮಾಧ್ಯಮಗಳ ವರದಿ ಪ್ರಕಾರ, ಬೆಸ್ಕಾಂ ಪ್ರಕಟಣೆಯಂತೆ, ಫೆಬ್ರವರಿ 4 ರಂದು ಕಾವಲ್ಬೈರಸಂದ್ರ, ಎಲ್.ಆರ್. ಬ್ಯಾಂಡ್ ಮುಖ್ಯ ರಸ್ತೆ, ಗಾಂಧಿನಗರ, ಚಿನ್ನಣ್ಣ ಲೇಔಟ್, ಅಂಬೇಡ್ಕರ್ ಲೇಔಟ್, ಅನ್ವರ್ ಲೇಔಟ್, ಕಾವೇರಿ ನಗರ, ಅಂಬೇಡ್ಕರ್ ವೈದ್ಯಕೀಯ ಕಾಲೇಜು ಪ್ರದೇಶ, ಸುಲ್ತಾನ್ ಪಾಳ್ಯ, ರಾಂಕಾ ನಗರ, ಕನಕನಗರ, ಕೆಎಚ್ಬಿ ಮುಖ್ಯ ರಸ್ತೆ, ಭುವನೇಶ್ವರಿ ನಗರ, ಡಿ.ಜಿ.ಎ. ಹಳ್ಳಿ, ಕೆ.ಜೆ. ಹಳ್ಳಿ, ಕೆ.ಜೆ. ಕಾಲೋನಿಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಅದೇ ದಿನ ಆದರ್ಶ ನಗರ, ವಿ. ನಾಗೇನಹಳ್ಳಿ, ಪೆರಿಯಾರ್ ನಗರ, ಪೆರಿಯಾರ್ ವೃತ್ತ, ಶಾಮಪುರ, ಕುಶಾಲ್ ನಗರ, ಮೋದಿ ರಸ್ತೆ, ಮೋದಿ ಗಾರ್ಡನ್, ದೊಡ್ಡಣ್ಣ ನಗರ, ಮುನಿವೀರಪ್ಪ ಲೇಔಟ್, ಶುಗರ್ ಮಂಡಿ, ಸಾಲ್ಟ್ ಮಂಡಿ ಮತ್ತು ಮುನೇಶ್ವರ ನಗರದಲ್ಲೂ ಪವರ್ ಕಟ್ ಇರಲಿದೆ.
ಫೆ. 4 ರಿಂದ 9 ರ ಸಮಯದಲ್ಲಿ ದಿವ್ಯ ಶಾಂತಿ, ಗೋವಿಂದಪುರ, ಕರ್ಳೆ, ಬೃಂದಾವನ ನಗರ, ಟೈಟಾನ್ ಗ್ಯಾರೇಜ್, ಭೈರವಿ ಅಪಾರ್ಟ್ಮೆಂಟ್ಸ್, ಹೆಗ್ಗಡೆ ನಗರ, ಚಂದ್ರಿಕಾ ಸೋಪ್ ಫ್ಯಾಕ್ಟರಿ, ಬಿಎಂಟಿಸಿ ಡಿಪೋ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲೂ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ವರದಿಯಾಗಿದೆ.
More From GoodReturns

Karnataka Rain: ರಾಜ್ಯದಲ್ಲಿ ಸದ್ಯಕ್ಕೆ ನಿಲ್ಲಲ್ಲ ವರುಣಾರ್ಭಟ; ಎಷ್ಟು ದಿನ ಈ ಮಳೆ ಎಂದು ತಿಳಿಯಿರಿ

Bank Holiday: ನಾಳೆ ಕರ್ನಾಟಕದಲ್ಲಿ ಬ್ಯಾಂಕ್ ತೆರೆದಿರುತ್ತೋ, ಇಲ್ಲವೋ? ಸ್ಪಷ್ಟ ಮಾಹಿತಿ ತಿಳಿಯಿರಿ

Silver Price Today: ಬೆಳ್ಳಿ ದರದಲ್ಲಿ ಇಂದು 5,000 ಕುಸಿತ; ಭಾರತದಲ್ಲಿ ಇಂದಿನ ಬೆಲೆ ತಿಳಿಯಿರಿ

LPG Crisis Bengaluru: ಕೋಳಿ ವ್ಯಾಪಾರಕ್ಕೂ ತಟ್ಟಿದ LPG ಕೊರತೆ ಬಿಸಿ; ಬೆಂಗಳೂರಲ್ಲಿ ಮಾರಾಟ ಭಾರಿ ಕುಸಿತ

Bengaluru: ಬೀದಿ ಬದಿ ವ್ಯಾಪಾರಕ್ಕೆ ಅವಕಾಶವಿಲ್ಲ; ಈ ರಸ್ತೆಯ ವ್ಯಾಪಾರಿಗಳಿಗೆ ದೊಡ್ಡ ಸಂಕಷ್ಟ

Eid-ul-Fitr 2026: ರಂಜಾನ್ ಹಬ್ಬ ಇಂದೋ, ನಾಳೆಯೋ; ಕೇರಳದಲ್ಲಿ ಮಾತ್ರ ಇಂದು ಆಚರಣೆ ಯಾಕೆ?

Oil Price Tension: ಮದ್ಯಪ್ರಾಚ್ಯ ಉದ್ವಿಗ್ನತೆ ನಡುವೆ ತೈಲ ಮಾರುಕಟ್ಟೆ ತಲ್ಲಣ, ಭಾರತಕ್ಕೆ ಸವಾಲು; ಎಚ್ಚರಿಕೆ ಸೂಚನೆ

Petrol Price Hike: ಪ್ರೀಮಿಯಂ ಪೆಟ್ರೋಲ್ ದರ ಏರಿಕೆ-ಲೀಟರ್ಗೆ 2 ಹೆಚ್ಚಳ, ಸಾಮಾನ್ಯ ಇಂಧನ ದರ ಸ್ಥಿರ

Good Friday 2026: ಈ ವರ್ಷ ಗುಡ್ ಫ್ರೈಡೇ ಯಾವಾಗ? ಈಸ್ಟರ್ ದಿನಾಂಕ ಮತ್ತು ಸಂಪೂರ್ಣ ಮಾಹಿತಿ ತಿಳಿಯಿರಿ

Gold Price Today India: ಯುಗಾದಿ ಬಳಿಕ ಏರಿಕೆ ಹಾದಿ ಹಿಡಿದ ಚಿನ್ನದ ಬೆಲೆ-24K/100gನಲ್ಲಿ 6,500 ರೂ. ಜಿಗಿತ!

8th Pay Commission: 8ನೇ ವೇತನ ಆಯೋಗದಿಂದ ಮಹತ್ವದ ಅಪ್ಡೇಟ್; ಪ್ರಶ್ನಾವಳಿ ಸಲ್ಲಿಸಲು ಮಾ.31ರ ವರೆಗೂ ಅವಕಾಶ



Click it and Unblock the Notifications