ಬೆಂಗಳೂರು: ಬೆಂಗಳೂರಿನಲ್ಲಿ (Bengaluru) ಇತ್ತೀಚೆಗೆ ನಿರಂತರ ವಿದ್ಯುತ್ ವ್ಯತ್ಯಯದ (Power Cut) ಸಮಸ್ಯೆಗಳು ಎದುರಾಗುತ್ತಿದೆ. ದಿನ ಬೆಳಗಾದ್ರೆ ಸಾಕು ಬೆಸ್ಕಾಂ ಇಲಾಖೆಯಿಂದ (BESCOM), ಈ ನಗರದಲ್ಲಿ ಇಂದು, ನಾಳೆ ಕರೆಂಟ್ ಇರಲ್ಲ ಎಂಬ ಸೂಚನೆ ಹೊರಡಿಸಲಾಗುತ್ತದೆ. ಅದೇ ರೀತಿ ಬೆಂಗಳೂರಿನ ಜನರಿಗೆ ಶಾಕಿಂಗ್ ಸುದ್ದಿಯೊಂದಿದೆ. ಮುಂದಿನ 5 ದಿನ ಈ ನಗರಗಳಲ್ಲಿ ಕರೆಂಟ್ ಇರಲ್ಲ ಎಂದು ಹೇಳಲಾಗಿದೆ.

ಹೌದು, ಬೆಂಗಳೂರಿನಲ್ಲಿ ಮುಂದಿನ 5 ದಿನ ಕರೆಂಟ್ ಇರುವುದಿಲ್ಲ ಎಂದು ವರದಿಯಾಗಿದೆ. ಹಾಗಿದ್ರೆ ಯಾವೆಲ್ಲಾ ನಗರಗಳಲ್ಲಿ, ಎಷ್ಟು ದಿನ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.
ಎಷ್ಟು ದಿನ ಇರಲ್ಲ ಕರೆಂಟ್?
ಬೆಸ್ಕಾಂ ಸೂಚನೆಯ ಪ್ರಕಾರ, ಇಂದಿನಿಂದ ಅಂದರೆ ಫೆಬ್ರವರಿ 4 ರಿಂದ 9 ರವರೆಗೆ, ಪ್ರತಿದಿನ ಬೆಳಿಗ್ಗೆ 6 ರಿಂದ ರಾತ್ರಿ 10 ರವರೆಗೆ ಕರೆಂಟ್ ಇರುವುದಿಲ್ಲ ಎಂದು ಹೇಳಲಾಗಿದೆ. ಅದರಲ್ಲೂ ಮುಖ್ಯವಾಗಿ ಹೆಬ್ಬಾಳ ಮತ್ತು ಉತ್ತರ ಬೆಂಗಳೂರು ಸುತ್ತಮುತ್ತ ವಿದ್ಯುತ್ ವ್ಯತ್ಯಯವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಬೆಸ್ಕಾಂ ಮಾಹಿತಿ ಪ್ರಕಾರ, 66/11 ಕೆವಿ ಎಚ್ಬಿಆರ್ ವಿದ್ಯುತ್ ಲೈನ್ನಲ್ಲಿ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಕರೆಂಟ್ ಇರುವುದಿಲ್ಲ ಎನ್ನಲಾಗಿದೆ. ಮುಂದಿನ ದಿನಗಳಲ್ಲಿ, ವಿದ್ಯುತ್ ಸೇವೆಯ ಗುಣಮಟ್ಟಕ್ಕಾಗಿ, ವಿದ್ಯುತ್ ಪೂರೈಕೆ ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ.
ಇನ್ನು ಬೆಸ್ಕಾಂ ಇಲಾಖೆಯ ಈ ಕಾಮಗಾರಿ ಸಂದರ್ಭದಲ್ಲಿ, ಕೆಲವು ಪ್ರದೇಶಗಳಲ್ಲಿ ದಿನವಿಡೀ ವಿದ್ಯುತ್ ಅಡಚಣೆ ಉಂಟಾಗಲಿದೆ ಎನ್ನಲಾಗಿದೆ. ಈ ವಿದ್ಯುತ್ ವ್ಯತ್ಯಯದಿಂದ ನಿವಾಸಿಗಳು, ಸರ್ಕಾರಿ-ಖಾಸಗಿ ಕಚೇರಿಗಳು ಹಾಗೂ ಅಂಗಡಿಗಳಿಗೆ ಸಮಸ್ಯೆಯಾಗಲಿದೆ ಎನ್ನಲಾಗಿದೆ..
ಇಂದು ಇಲ್ಲೆಲ್ಲಾ ಇರಲ್ಲ ಕರೆಂಟ್!
ಇನ್ನು ಹಲವು ಮಾಧ್ಯಮಗಳ ವರದಿ ಪ್ರಕಾರ, ಬೆಸ್ಕಾಂ ಪ್ರಕಟಣೆಯಂತೆ, ಫೆಬ್ರವರಿ 4 ರಂದು ಕಾವಲ್ಬೈರಸಂದ್ರ, ಎಲ್.ಆರ್. ಬ್ಯಾಂಡ್ ಮುಖ್ಯ ರಸ್ತೆ, ಗಾಂಧಿನಗರ, ಚಿನ್ನಣ್ಣ ಲೇಔಟ್, ಅಂಬೇಡ್ಕರ್ ಲೇಔಟ್, ಅನ್ವರ್ ಲೇಔಟ್, ಕಾವೇರಿ ನಗರ, ಅಂಬೇಡ್ಕರ್ ವೈದ್ಯಕೀಯ ಕಾಲೇಜು ಪ್ರದೇಶ, ಸುಲ್ತಾನ್ ಪಾಳ್ಯ, ರಾಂಕಾ ನಗರ, ಕನಕನಗರ, ಕೆಎಚ್ಬಿ ಮುಖ್ಯ ರಸ್ತೆ, ಭುವನೇಶ್ವರಿ ನಗರ, ಡಿ.ಜಿ.ಎ. ಹಳ್ಳಿ, ಕೆ.ಜೆ. ಹಳ್ಳಿ, ಕೆ.ಜೆ. ಕಾಲೋನಿಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಅದೇ ದಿನ ಆದರ್ಶ ನಗರ, ವಿ. ನಾಗೇನಹಳ್ಳಿ, ಪೆರಿಯಾರ್ ನಗರ, ಪೆರಿಯಾರ್ ವೃತ್ತ, ಶಾಮಪುರ, ಕುಶಾಲ್ ನಗರ, ಮೋದಿ ರಸ್ತೆ, ಮೋದಿ ಗಾರ್ಡನ್, ದೊಡ್ಡಣ್ಣ ನಗರ, ಮುನಿವೀರಪ್ಪ ಲೇಔಟ್, ಶುಗರ್ ಮಂಡಿ, ಸಾಲ್ಟ್ ಮಂಡಿ ಮತ್ತು ಮುನೇಶ್ವರ ನಗರದಲ್ಲೂ ಪವರ್ ಕಟ್ ಇರಲಿದೆ.
ಫೆ. 4 ರಿಂದ 9 ರ ಸಮಯದಲ್ಲಿ ದಿವ್ಯ ಶಾಂತಿ, ಗೋವಿಂದಪುರ, ಕರ್ಳೆ, ಬೃಂದಾವನ ನಗರ, ಟೈಟಾನ್ ಗ್ಯಾರೇಜ್, ಭೈರವಿ ಅಪಾರ್ಟ್ಮೆಂಟ್ಸ್, ಹೆಗ್ಗಡೆ ನಗರ, ಚಂದ್ರಿಕಾ ಸೋಪ್ ಫ್ಯಾಕ್ಟರಿ, ಬಿಎಂಟಿಸಿ ಡಿಪೋ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲೂ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ವರದಿಯಾಗಿದೆ.
More From GoodReturns

Bengaluru: ಬೆಂಗಳೂರು ಮೂಲಸೌಕರ್ಯ ಮತ್ತು ಸ್ಮಾರ್ಟ್ ಸಿಟಿ ಯೋಜನೆಗಳಿಗೆ 7000 ಕೋಟಿ ರೂ. ಹೂಡಿಕೆ!

Bengaluru-Mangaluru Flight: ಬೆಂಗಳೂರು-ಮಂಗಳೂರು ವಿಮಾನ ಪ್ರಯಾಣಿಕರಿಗೆ ಬಂಪರ್ ಸುದ್ದಿ! ಇನ್ಮೇಲೆ ತಡರಾತ್ರಿಯೂ ವಿಮಾನ ಸೇವೆ

Bengaluru Special Trains: ಮಾರ್ಚ್ 11 ರಿಂದ ಬೆಂಗಳೂರಿಗೆ ಬರಲಿದೆ ಮತ್ತೊಂದು ಸ್ಪೆಷಲ್ ರೈಲು! ಎಲ್ಲಿಂದ ಎಲ್ಲಿಗೆ?

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

BMTC Bus: ಬೆಂಗಳೂರು-ರಾಮನಗರ ಮತ್ತು ಕನಕಪುರಕ್ಕೆ ಬಿಎಂಟಿಸಿ ಬಸ್… ಬಸ್ ನಿಲ್ದಾಣಗಳ ಬಗ್ಗೆ ತಿಳಿಯಿರಿ

Bengaluru Airport: ಬೆಂಗಳೂರು ಏರ್ಪೋರ್ಟ್ಗೆ 2025ರ ACI ಪ್ರಶಸ್ತಿ... ಪ್ರಯಾಣಿಕರ ಹೃದಯ ಗೆದ್ದ ವಿಮಾನ ನಿಲ್ದಾಣ!

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Rapido Ownly: ರ್ಯಾಪಿಡೋದಿಂದ ಹೊಸ ಫುಡ್ ಡೆಲಿವರಿ ಆಪ್ ಲಾಂಚ್! ಏನಿದರ ವಿಶೇಷತೆ?

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?



Click it and Unblock the Notifications