ಏರ್ಪೋರ್ಟ್ ನಿರ್ಮಾಣವಾಗುತ್ತಿದೆ ಅಂದ್ರೆ ಅಲ್ಲಿ ಇರುವ ಭೂಮಿಗೆ ಬಂಗಾರ ಬೆಲೆ ಸಿಗುತ್ತದೆ ಹೌದು, ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಿದ್ಧತೆ ಜೋರಾಗಿದೆ. ರಾಜ್ಯ ಸರ್ಕಾರವು ಸಹ ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣ ಪ್ರಾರಂಭಿಸುವುದಕ್ಕೆ ಸಜ್ಜಾಗಿದೆ. ಈ ಸಂಬಂಧ ನಾಲ್ಕರಿಂದ ಐದು ಪ್ರದೇಶಗಳನ್ನು ಫೈನಲ್ ಲಿಸ್ಟ್ ಮಾಡಿದೆ. ಆಯ್ಕೆ ಮಾಡಿರುವ ಪ್ರದೇಶದಲ್ಲಿ ಯಾವುದೇ ಜಾಗದಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣವಾದರೂ, ರಿಯಲ್ ಎಸ್ಟೇಟ್ ಗೆ ಭರ್ಜರಿ ಆದಾಯ ಹರಿದು ಬರಲಿದೆ.
ಕರ್ನಾಟಕ ಹಾಗೂ ತಮಿಳುನಾಡಿನ ಪ್ರಮುಖ ಜಿಲ್ಲೆಗಳಲ್ಲಿ ರಿಯಲ್ ಎಸ್ಟೇಟ್ಗೆ ಬಂಗಾರದ ಬೆಲೆ ಬರುತ್ತಿದೆ. ಇದಕ್ಕೆ ಮುಖ್ಯ ಕಾರಣ ಎರಡೂ ರಾಜ್ಯಗಳಲ್ಲಿ ಹೊಸದಾಗಿ ನಿರ್ಮಾಣ ಆಗುತ್ತಿರುವ ವಿಮಾನ ನಿಲ್ದಾಣಗಳೇ ಎಂದು ಹೇಳಬಹುದು.ಕರ್ನಾಟಕದ ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ಹಾಗೂ ತಮಿಳುನಾಡಿನ ಹೊಸೂರಿನ ವಿಮಾನ ನಿಲ್ದಾಣದಿಂದ ನಿರ್ಮಾಣವಾಗುತ್ತಿರುವುದರಿಂದ ರಿಯಲ್ ಎಸ್ಟೇಟ್ ಚಟುವಟಿಕೆ ಮಾಡುವವರಿಗೆ ಸಿಹಿ ಸುದ್ದಿ ಸಿಕ್ಕಿದೆ.

ಭೂಮಿಗೆ ಬಂಗಾರದ ಬೆಲೆ ಸಿಗುತ್ತಿದೆ
ವಿಮಾನ ನಿಲ್ದಾಣವಾಗುತ್ತಿರುವ ಪ್ರದೇಶದಲ್ಲಿ ಚಿನ್ನದ ಬೆಲೆ ಸಿಗುತ್ತಿದೆ. ರಿಯಲ್ ಎಸ್ಟೇಟ್ದಾರರು ವಿಮಾನ ಬಳಿ ಇರುವ ರೈತರ ಭೂಮಿಯನ್ನು ಖರೀದಿ ಮಾಡಿ ಹೆಚ್ಚಿನ ಬೆಲೆಗೆ ಮಾರಾಟಮಾಡುತ್ತಿದ್ದಾರೆ. ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣಕ್ಕೆ ನಾಲ್ಕರಿಂದ ಐದು ಜಾಗಗಳನ್ನು ಈಗಲೇ ಗುರುತು ಮಾಡಲಾಗಿದೆ. ಆದರೆ ಎರಡನೇ ವಿಮಾನ ನಿಲ್ದಾಣದ ಜಾಗ ಇನ್ನೂ ಫೈನಲ್ ಆಗಿಲ್ಲ.ಈಗಲೇ ಹೊಸೂರು ವಿಮಾನ ನಿಲ್ದಾಣಕ್ಕೆ 2 ಜಾಗಗಳನ್ನು ಫೈನಲ್ ಮಾಡಲಾಗಿದ್ದು, ರಿಯಲ್ ಎಸ್ಟೇಟ್ ಚಟುವಟಿಕೆಗಳು ನಡೆಯುತ್ತಿವೆ.
ರಿಯಲ್ ಎಸ್ಟೇಟ್ಗೆ ಡಬಲ್ ಧಮಾಕಾ
ಎರಡೂ ರಾಜ್ಯಗಳಲ್ಲಿ ಏಕಕಾಲದಲ್ಲಿ ಎರಡು ವಿಮಾನ ನಿಲ್ದಾಣವನ್ನು ನಿರ್ಮಾಣ ಮಾಡುವುದಕ್ಕೆ ಚರ್ಚೆ ನಡೆಯುತ್ತೀವೆ. ಈ ಹಿನ್ನೆಲೆಯಲ್ಲಿ ವಿವಿಧ ಪ್ರದೇಶದಲ್ಲಿ ರಿಯಲ್ ಎಸ್ಟೇಟ್ಗೆ ಡಬಲ್ ಧಮಾಕಾ ಆದಾಯ ಸಿಗುತ್ತದೆ. ಎರಡೂ ರಾಜ್ಯಗಳ ವಿಮಾನ ನಿಲ್ದಾಣದ ಅಕ್ಕಪಕ್ಕದಲ್ಲಿ ಮತ್ತು ವಿಮಾನ ನಿಲ್ದಾಣದ ಕೆಲವೇ ಕಿ.ಮೀ ದೂರದಲ್ಲಿ ಇರುವ ಜಾಗಗಳಲ್ಲಿ ಜಮೀನು, ಭೂಮಿ ಹಾಗೂ ಆಸ್ತಿಗೆ ಬಂಪರ್ ಬೆಲೆಗೆ ಮಾರಾಟವಾಗುತ್ತಾವೆ. ಈಗಲೇ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಕ್ಕೆ ಚರ್ಚೆ ನಡೆಯುತ್ತಿರುವಾಗಲೇ ಆ ಜಾಗದ ಆಸ್ತಿದಾರರು ಎಚ್ಚರದಿಂದ ಇದ್ದಾರೆ ಆಗಿದ್ದಾರೆ. ಅಲ್ಲಿ ಜಾಗ ಮಾರಾಟ ಮಾಡುವವರು ಮುಂದೂಡುತ್ತಿದ್ದಾರೆ.
ತಮಿಳುನಾಡು ಸರ್ಕಾರ ವಿಮಾನ ನಿಲ್ದಾಣಕ್ಕೆ ಎರಡು ಜಾಗಗಳನ್ನು ಶಾರ್ಟ್ ಲಿಸ್ಟ್
ತಮಿಳುನಾಡು ಸರ್ಕಾರವು ಹೊಸೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಟ ಮಾಡುವುದಕ್ಕೆ ಎರಡು ಜಾಗಗಳನ್ನು ಶಾರ್ಟ್ ಲಿಸ್ಟ್ ಮಾಡಿದೆ. ಹೊಸೂರು ಗ್ರೀನ್ಫೀಲ್ಡ್ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಕ್ಕೆ ಸಂಬಂಧಿಸಿದಂತೆ ತನೇಜಾ ಏರೋಸ್ಪೇಸ್ ಹಾಗೂ ಏವಿಯೇಷನ್ ಎನ್ನುವ ಜಾಗದಿಂದ 10 ಕಿ.ಮೀ ದೂರದಲ್ಲಿ ಒಂದು ಜಾಗವನ್ನು ತಮಿಳುನಾಡು ಸರ್ಕಾರ ಶಾರ್ಟ್ಲಿಸ್ಟ್ ಮಾಡಿದೆ.
ಈ ಸ್ಥಳವು ದಕ್ಷಿಣ ಭಾರತದ ಎರಡು ಪ್ರಮುಖ ನಗರಗಳಾದ ಬೆಂಗಳೂರು ಹಾಗೂ ಚೆನ್ನೈಗೆ ಸಮೀಪದಲ್ಲಿ ಇದೆ. ಈ ವಿಮಾನ ನಿಲ್ದಾಣದಿಂದ ಬೆಂಗಳೂರಿನ ದಕ್ಷಿಣ ಭಾಗದ ರಿಯಲ್ ಎಸ್ಟೇಟ್ಗೆ ಹಾಗೂ ಹೊಸೂರಿನ ಭಾಗದಲ್ಲಿ ಭೂಮಿ ಬೆಲೆ ಹೆಚ್ಚಾಗುತ್ತಿದೆ. ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ಯೋಜನೆಯಿಂದ ಬೆಂಗಳೂರು ಹಾಗೂ ಸುತ್ತಮುತ್ತಿನ ಜಾಗದಲ್ಲಿ ಹಾಗೂ ಕೆಲವು ಜಿಲ್ಲೆಗಳ ಭೂಮಿಗೆ ಬಂಪರ್ ಲಾಭವಾಗುವ ನಿರೀಕ್ಷೆ ಹೆಚ್ಚು ಇದೆ ಎಂದೇ ಹೇಳಬಹುದು.
ಈ ಭಾಗಗಳಲ್ಲಿ ಭೂಮಿ ಬೆಲೆ ಏರಿಕೆ ಆಗುತ್ತಲ್ಲೇ ಇದೆ.
ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ನಿರ್ಮಾಟಕ್ಕೆ ಕೇಳಿ ಬರುತ್ತಿರುವ ಸ್ಥಳಗಳೆಂದರೆ ದಾಬಸ್ಪೇಟೆ, ನೆಲಮಂಗಲ, ತುಮಕೂರು, ಬಿಡದಿ ಮತ್ತು ಹಾರೋಹಳ್ಳಿ ಸ್ಥಳದಲ್ಲಿ ಎಲ್ಲಿಯಾದರೂ ಒಂದು ಜಾಗದಲ್ಲಿ ಎರಡನೇ ವಿಮಾನ ನಿಲ್ದಣ ನಿರ್ಮಾಣ ಮಾಡುವ ಬಗ್ಗೆ ಚರ್ಚೆಗಳು ಈಗಲೇ ನಡೆಯುತ್ತಿದೆ. ಆದ್ದರಿಂದ ಈ ಪ್ರದೇಶದಲ್ಲಿ ಭೂಮಿ ಬೆಲೆ ಏರಿಕೆಯಾಗುತ್ತಿದೆ.
More From GoodReturns

Biggest Airport: ಭಾರತದ ಅತಿದೊಡ್ಡ ವಿಮಾನ ನಿಲ್ದಾಣ ಸಂಚಾರಕ್ಕೆ ಸಿದ್ಧ; 45 ದಿನದೊಳಗೆ ಆರಂಭ

Bengaluru Airport: ಬೆಂಗಳೂರು ಏರ್ಪೋರ್ಟ್ಗೆ 2025ರ ACI ಪ್ರಶಸ್ತಿ... ಪ್ರಯಾಣಿಕರ ಹೃದಯ ಗೆದ್ದ ವಿಮಾನ ನಿಲ್ದಾಣ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications