ಸಚಿವರ ಹಗ್ಗಜಗ್ಗಾಟದ ನಡುವೆಯೇ ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ಸ್ಥಳದ ಬಗ್ಗೆ ರಾಜ್ಯ ಸರ್ಕಾರ ಅಂತಿಮ ನಿರ್ಧಾರವನ್ನು ಕೈಗೊಂಡಿದೆ. ಹೌದು,ಕಾಂಗ್ರೆಸ್ ಸಚಿವರು ತಮ್ಮ ತವರು ಜಿಲ್ಲೆಗಳಿಗಾಗಿ ಲಾಬಿ ನಡೆಸುತ್ತಿದ್ದರೂ, ಕರ್ನಾಟಕ ಸರ್ಕಾರ ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣಕ್ಕಾಗಿ ಮೂರು ಸ್ಥಳಗಳನ್ನು ಶಾರ್ಟ್ಲಿಸ್ಟ್ ಮಾಡಿದೆ.
ಬಿಡದಿ (ಮೈಸೂರು ರಸ್ತೆ), ಹಾರೋಹಳ್ಳಿ (ಕನಕಪುರ ರಸ್ತೆ) ಮತ್ತು ಸೋಲೂರು (ನೆಲಮಂಗಲ ಮತ್ತು ಕುಣಿಗಲ್ ನಡುವೆ ಇದೆ) ಎಂಬ ಮೂರು ಸಂಭಾವ್ಯ ತಾಣಗಳನ್ನು ಶಾರ್ಟ್ಲಿಸ್ಟ್ ಮಾಡಲಾಗಿದೆ ಎಂದು ರಾಜ್ಯ ಸರ್ಕಾರಿ ಮೂಲಗಳು ಮಾಹಿತಿಯನ್ನು ತಿಳಿಸಿದ್ದಾರೆ.

ಬಿಡದಿ ಮತ್ತು ಹಾರೋಹಳ್ಳಿ ಉಪಮುಖ್ಯಮಂತ್ರಿ ಮತ್ತು ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಅವರ ತವರು ಜಿಲ್ಲೆ ರಾಮನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುತ್ತವೆ. ಮತ್ತೊಂದೆಡೆ, ಸೋಲೂರು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿದೆ.
ಜೂನ್ 2024 ರಲ್ಲಿ, ರಾಜ್ಯ ಮೂಲಸೌಕರ್ಯ ಅಭಿವೃದ್ಧಿ ಇಲಾಖೆ (IDD) ಸಚಿವ ಎಂಬಿ ಪಾಟೀಲ್, ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣಕ್ಕಾಗಿ ಏಳು ಸ್ಥಳಗಳ ಪಟ್ಟಿಯಿಂದ ಭೂಮಿಯನ್ನು ಸರ್ಕಾರ ಹುಡುಕುತ್ತಿದೆ ಎಂದು ಹೇಳಿದರು.ಸಚಿವರ ಪ್ರಸ್ತಾವನೆಯನ್ನು ಇನ್ನೂ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ (AAI) ಕಳುಹಿಸಲಾಗಿಲ್ಲ.
ಈ ವಿಮಾನ ನಿಲ್ದಾಣವು ವಾರ್ಷಿಕವಾಗಿ 100 ಮಿಲಿಯನ್ ಪ್ರಯಾಣಿಕರನ್ನು ನಿರ್ವಹಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ ಮತ್ತು ಸುಮಾರು 4,500 ರಿಂದ 5,000 ಎಕರೆ ಭೂಮಿ ಬೇಕಾಗುತ್ತದೆ ಎಂದು ಪಾಟೀಲ್ ಈ ಹಿಂದೆಯೇ ಮಾಹಿತಿಯನ್ನು ತಿಳಿಸಿದ್ದರು.
ಮೂರು ತಾಣಗಳನ್ನು ಶಾರ್ಟ್ಲಿಸ್ಟ್
ಬಿಡದಿ (ಮೈಸೂರು ರಸ್ತೆ), ಹಾರೋಹಳ್ಳಿ (ಕನಕಪುರ ರಸ್ತೆ) ಮತ್ತು ಸೋಲೂರು (ನೆಲಮಂಗಲ ಮತ್ತು ಕುಣಿಗಲ್) ಮೂರು ತಾಣಗಳನ್ನು ಶಾರ್ಟ್ಲಿಸ್ಟ್ ಮಾಡಲಾಗಿದೆ, ಆದರೆ ಮುಖ್ಯಮಂತ್ರಿಯೊಂದಿಗೆ ಸಮಾಲೋಚಿಸಿದ ನಂತರ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಹಾಗೂ ಮುಖ್ಯಮಂತ್ರಿ ಅನುಮೋದನೆಯ ನಂತರ ಪ್ರಸ್ತಾವನೆಯನ್ನು AAI ಗೆ ಕಳುಹಿಸಲಾಗುತ್ತದೆ ಎಂದು ಮೂಲವೊಂದು ಮಾಹಿತಿಯನ್ನು ತಿಳಿಸಿದೆ.
ಡಿಸಿಎಂ ಡಿ.ಕೆ ಶಿವಕುಮಾರ್ ರಾಮನಗರದಲ್ಲಿ ಎರಡನೇ ವಿಮಾನ ನಿಲ್ದಾಣವನ್ನು ಬಯಸಿದರೆ, ಗೃಹ ಸಚಿವ ಡಾ. ಜಿ. ಪರಮೇಶ್ವರ ತುಮಕೂರಿಗೆ ಒತ್ತಾಯಿಸುತ್ತಿದ್ದಾರೆ.
ತುಮಕೂರಿನ ಸುತ್ತಮುತ್ತ ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸ್ಥಾಪಿಸಲು ನಾನು ಪಾಟೀಲ್ ಅವರನ್ನು ವಿನಂತಿಸಿದ್ದೇನೆ. ವಸಂತ ನರಸಾಪುರ ಕೈಗಾರಿಕಾ ಪ್ರದೇಶದ ಬಳಿಯ NH-48 ರಿಂದ 3,000 ಎಕರೆ ಮತ್ತು ಸಿರಾ ತಾಲ್ಲೂಕಿನ ಸೀಬಿ ದೇವಸ್ಥಾನದ ಬಳಿ 4,000 ದಿಂದ 5,000 ಎಕರೆ ಭೂಮಿಯನ್ನು ಈಗಾಗಲೇ ಗುರುತಿಸಲಾಗಿದೆ ಎಂದು ಪರಮೇಶ್ವರ ಹೇಳಿಕೆ ನೀಡಿದ್ದಾರೆ.
ವಿಮಾನ ನಿಲ್ದಾಣಕ್ಕಾಗಿ ಕನಕಪುರ ರಸ್ತೆ, ಮೈಸೂರು ರಸ್ತೆ, ಮಾಗಡಿ, ದೊಡ್ಡಬಳ್ಳಾಪುರ, ದಾಬಸ್ ಪೇಟೆ ಮತ್ತು ತುಮಕೂರು ಸೇರಿದಂತೆ ಏಳು ಸ್ಥಳಗಳನ್ನು ಗುರುತಿಸಲಾಗಿದೆ ಎಂದು ಪಾಟೀಲ್ ಈ ಹಿಂದೆ ಹೇಳಿದ್ದರು. ಅಂತಿಮ ಸ್ಥಳವನ್ನು ಸಂಪೂರ್ಣವಾಗಿ ಅರ್ಹತೆಯ ಆಧಾರದ ಮೇಲೆ ನಿರ್ಧರಿಸಲಾಗುವುದು ಎಂದು ಅವರು ಹೇಳಿದರು. ಎಲ್ಲಾ ಸಾಧಕ ಬಾಧಕಗಳನ್ನು ಪರಿಗಣಿಸಿ ಬೆಂಗಳೂರಿನ ಹಿತದೃಷ್ಟಿಯಿಂದ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುವುದು, ಅದನ್ನು AAI ಗೆ ಕಳುಹಿಸಲಾಗುವುದು ಎಂದು ಮಾಹಿತಿ ತಿಳಿದು ಬಂದಿದೆ.
ರಿಯಲ್ ಎಸ್ಟೇಟ್ಗೆ ಚಿನ್ನದ ಬೆಲೆ
ಉತ್ತರ ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಅಭಿವೃದ್ಧಿಗೆ ನಾಂದಿ ಹಾಡಿದ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಂತೆಯೇ, ಎರಡನೇ ವಿಮಾನ ನಿಲ್ದಾಣದ ಸ್ಥಳವು ರಿಯಲ್ ಎಸ್ಟೇಟ್ ಬೆಲೆಗಳ ಮೇಲೆ ಪರಿಣಾಮ ಬೀರುತ್ತದೆ ಮತ್ತು ವಸತಿ, ವಾಣಿಜ್ಯ ಸಂಸ್ಥೆಗಳು ಮತ್ತು ಮೂಲಸೌಕರ್ಯಗಳ ಅಭಿವೃದ್ಧಿಯನ್ನು ಉತ್ತೇಜಿಸುತ್ತದೆ ಎಂದು ತಜ್ಞರು ಹೇಳಿದ್ದಾರೆ.
ಜನವರಿ 30 ರಂದು ಕರ್ನಾಟಕ ಸಚಿವ ಸಂಪುಟವು ಬಿಡದಿ ಮತ್ತು ಹಾರೋಹಳ್ಳಿ ನಡುವಿನ ಇಂಟಿಗ್ರೇಟೆಡ್ ಸ್ಯಾಟಲೈಟ್ ಟೌನ್ಶಿಪ್ಗೆ ಪ್ರತ್ಯೇಕವಾಗಿ ಅನುಮೋದನೆಯನ್ನು ಸಹ ನೀಡಿತು.
ಸ್ಕೈಡೆಕ್ ಯೋಜನೆ
250 ಮೀಟರ್ ಎತ್ತರದ ಸ್ಕೈಡೆಕ್ ಯೋಜನೆಯನ್ನು ತಡೆಹಿಡಿಯುವಂತೆ ಡಿ.ಕೆ ಶಿವಕುಮಾರ್ ಬಿಬಿಎಂಪಿಗೆ ಸೂಚನೆ ನೀಡಿದ್ದಾರೆ ಎಂದು ವರದಿಯಾಗಿದೆ ಏಕೆಂದರೆ ಎರಡನೇ ವಿಮಾನ ನಿಲ್ದಾಣವು ಪ್ರಸ್ತಾವಿತ ಸ್ಕೈಡೆಕ್ಗೆ ತುಂಬಾ ಹತ್ತಿರದಲ್ಲಿರಬಾರದು. ಈ ಕ್ರಮವು ರಾಮನಗರದ ಸ್ಕೈಡೆಕ್ಗಿಂತ ಎರಡನೇ ವಿಮಾನ ನಿಲ್ದಾಣಕ್ಕೆ ಆದ್ಯತೆ ನೀಡುವಂತೆ ಕಂಡುಬರುತ್ತದೆ.
ರಾಮನಗರ ಜಿಲ್ಲೆಯ ಭೂಮಿಗೆ ಚಿನ್ನದ ಬೆಲೆ: ಡಿ.ಕೆ ಶಿವಕುಮಾರ್
ರಾಮನಗರ ಜಿಲ್ಲೆಯ ನಿವಾಸಿಗಳು ತಮ್ಮ ಭೂಮಿಯ ಮೌಲ್ಯಗೆ ಚಿನ್ನದ ಬೆಲೆ ಸಿಗುತ್ತದೆ ಮುನ್ಸೂಚನೆ ನೀಡಿ ಅದನ್ನು ಉಳಿಸಿಕೊಳ್ಳುವಂತೆ ಡಿ.ಕೆ ಶಿವಕುಮಾರ್ ಸಲಹೆ ನೀಡಿದ್ದಾರೆ.
ರಾಮನಗರ ಜಿಲ್ಲೆಯನ್ನು ಶೀಘ್ರದಲ್ಲೇ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಕರೆಯಲಾಗುವುದು. ಕೇಂದ್ರ ಸರ್ಕಾರದ ಅನುಮೋದನೆಯ ನಂತರ ಹೊಸ ಹೆಸರನ್ನು ಅಧಿಕೃತವಾಗಿ ಘೋಷಿಸಲಾಗುವುದು. ಮೌಲ್ಯ ಹೆಚ್ಚಾಗುವುದರಿಂದ ಜನರು ತಮ್ಮ ಭೂಮಿಯನ್ನು ಮಾರಾಟ ಮಾಡಬೇಡಿ ಎಂದು ನಾನು ಸಲಹೆ ನೀಡುತ್ತೇನೆ ಎಂದು ಅವರು ಹೇಳಿದರು.
ನಾನು ನಿಮಗೆ ನೇರವಾಗಿ ಹಣ ನೀಡಲು ಸಾಧ್ಯವಾಗದಿದ್ದರೂ, ನಿಮ್ಮ ಆಸ್ತಿಯ ಮೌಲ್ಯವನ್ನು ಹೆಚ್ಚಿಸಲು ನಾನು ಸಹಾಯ ಮಾಡಿದ್ದೇನೆ. ನಾನು ನಿಮ್ಮ ಜೇಬಿನಲ್ಲಿ ಹಣವನ್ನು ಹಾಕಲು ಸಾಧ್ಯವಿಲ್ಲ, ಆದರೆ ದೇವರು ನನಗೆ ನಿಮ್ಮ ಆಸ್ತಿ ಮೌಲ್ಯವನ್ನು ಹತ್ತು ಪಟ್ಟು ಹೆಚ್ಚಿಸುವ ಶಕ್ತಿಯನ್ನು ನೀಡಿದ್ದಾನೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದರು.
ಗೃಹ ಸಚಿವ ಪರಮೇಶ್ವರ್ ಬೆಂಗಳೂರಿನಿಂದ ಕೇವಲ 70 ಕಿ.ಮೀ ದೂರದಲ್ಲಿರುವ ತುಮಕೂರು ವೇಗವಾಗಿ ಬೆಳೆಯುತ್ತಿದೆ. ಸರ್ಕಾರ ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವುದರಿಂದ ಇದು ಶೀಘ್ರದಲ್ಲೇ ಗ್ರೇಟರ್ ಬೆಂಗಳೂರಿನ ಭಾಗವಾಗಲಿದೆ ಎಂದು ಹೇಳಿದರು.
ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕ ಮತ್ತು ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಅವರು ತುಮಕೂರು ಜಿಲ್ಲೆಯ ಸಿರಾ ಬಳಿ ಎರಡನೇ ವಿಮಾನ ನಿಲ್ದಾಣವನ್ನು ನಿರ್ಮಿಸಬೇಕೆಂದು ಒತ್ತಾಯಿಸಿದ್ದಾರೆ, ಏಕೆಂದರೆ ಇದು ಉತ್ತರ ಕರ್ನಾಟಕ ಜಿಲ್ಲೆಗಳ ಅಭಿವೃದ್ಧಿಯನ್ನು ಉತ್ತೇಜನ ಸಿಗುತ್ತದೆ.
ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿ ಮತ್ತು ಹತ್ತಿರದ ಪ್ರದೇಶಗಳಿಗೆ ಹತ್ತಿರದಲ್ಲಿರುವ ಹೊಸೂರಿನಲ್ಲಿ ವಿಮಾನ ನಿಲ್ದಾಣವನ್ನು ಅಭಿವೃದ್ಧಿಪಡಿಸುವ ತಮಿಳುನಾಡು ಸರ್ಕಾರದ ಯೋಜನೆಯ ನಂತರ ಕರ್ನಾಟಕವು ಎರಡನೇ ವಿಮಾನ ನಿಲ್ದಾಣವನ್ನು ವೇಗವಾಗಿ ನಿರ್ಮಿಸುತ್ತಿದೆ. 150 ಕಿಲೋಮೀಟರ್ ವ್ಯಾಪ್ತಿಯಲ್ಲಿ ಮತ್ತೊಂದು ವಿಮಾನ ನಿಲ್ದಾಣ ನಿರ್ಮಾಣವನ್ನು ತಡೆಯುವ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (BIAL) ಜೊತೆಗಿನ ವಿಶೇಷ ಒಪ್ಪಂದವು 2033 ರಲ್ಲಿ ಮುಕ್ತಾಯಗೊಳ್ಳಲಿದೆ.
ಎರಡನೇ ವಿಮಾನ ನಿಲ್ದಾಣಕ್ಕೆ ಅನುಮತಿ
ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣಕ್ಕೆ ಸ್ಥಳ ಅಂತಿಮಗೊಂಡ ನಂತರ ಅನುಮತಿ ನೀಡಲಾಗುವುದು ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಫೆಬ್ರವರಿ 3 ರಂದು ರಾಜ್ಯಸಭೆಗೆ ಭರವಸೆ ನೀಡಿದರು.
ಬೆಂಗಳೂರಿನ ಪ್ರಸ್ತುತ ವಿಮಾನ ನಿಲ್ದಾಣವನ್ನು (ಕೆಐಎ) ಮಂಜೂರು ಮಾಡಿದ ಮಾಜಿ ಪ್ರಧಾನಿ ಎಚ್ಡಿ ದೇವೇಗೌಡರು, ಕರ್ನಾಟಕ ಸರ್ಕಾರ ಹೊಸ ವಿಮಾನ ನಿಲ್ದಾಣವನ್ನು ಪ್ರಸ್ತಾಪಿಸಿದೆ ಮತ್ತು ಅದು ಬೆಂಗಳೂರಿನ ಬೆಳವಣಿಗೆಗೆ ಸಹಾಯಕವಾಗುತ್ತದೆ ಎಂದು ಹೇಳಿದ್ದಾರೆ.
More From GoodReturns

Bengaluru - Stock Market: ಷೇರು ಮಾರುಕಟ್ಟೆಯಲ್ಲಿ ಭಾರೀ ನಷ್ಟ; ಮನನೊಂದು ಬೆಂಗಳೂರಿನ ವ್ಯಕ್ತಿ ಆತ್ಮಹತ್ಯೆ

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Airport: ಬೆಂಗಳೂರು ಏರ್ಪೋರ್ಟ್ಗೆ 2025ರ ACI ಪ್ರಶಸ್ತಿ... ಪ್ರಯಾಣಿಕರ ಹೃದಯ ಗೆದ್ದ ವಿಮಾನ ನಿಲ್ದಾಣ!

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಇರಲ್ಲ ಕರೆಂಟ್! ಎಲ್ಲೆಲ್ಲಿ ಗೊತ್ತಾ?

Bengaluru: ಬೆಂಗಳೂರು ಮೂಲಸೌಕರ್ಯ ಮತ್ತು ಸ್ಮಾರ್ಟ್ ಸಿಟಿ ಯೋಜನೆಗಳಿಗೆ 7000 ಕೋಟಿ ರೂ. ಹೂಡಿಕೆ!

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Bengaluru-Mangaluru Flight: ಬೆಂಗಳೂರು-ಮಂಗಳೂರು ವಿಮಾನ ಪ್ರಯಾಣಿಕರಿಗೆ ಬಂಪರ್ ಸುದ್ದಿ! ಇನ್ಮೇಲೆ ತಡರಾತ್ರಿಯೂ ವಿಮಾನ ಸೇವೆ



Click it and Unblock the Notifications