ಬೆಂಗಳೂರು, ಫೆಬ್ರವರಿ 9: 2027ರ ಡಿಸೆಂಬರ್ ಹೊತ್ತಿಗೆ ಬೆಂಗಳೂರು ಉಪನಗರ ರೈಲು ಯೋಜನೆ ಪೂರ್ಣಗೊಳ್ಳಲಿದೆ ಎಂದು ಸಚಿವ ಎಂಬಿ ಪಾಟೀಲ್ ತಿಳಿಸಿದ್ದಾರೆ.
ಮಹತ್ವಾಕಾಂಕ್ಷಿ ಬೆಂಗಳೂರು ಉಪನಗರ ರೈಲು ಯೋಜನೆ(BSRP) ಗಾಗಿ ಜಮರ್ನಿಯ KFW ಡೆವಲಪ್ಮೆಂಟ್ ಬ್ಯಾಂಕ್ ರಾಜ್ಯ ಸರಕಾರದ ಕೆ-ರೈಡ್ ಸಂಸ್ಥೆಗೆ ₹4,561 ಕೋಟಿ (500 ಮಿಲಿಯನ್ ಯೂರೋ) ಸಾಲ ನೀಡುತ್ತಿದ್ದು, ಶುಕ್ರವಾರ ಅಧಿಕೃತವಾಗಿ ಒಡಂಬಡಿಕೆಗೆ ಸಹಿ ಹಾಕಲಾಗಿದೆ.

ಕೆ-ರೈಡ್ ಪರವಾಗಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿಯೂ ಆದ ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿಯವರಾದ ಎನ್. ಮಂಜುಳಾ ಮತ್ತು ಕೆಎಫ್ ಡಬ್ಲ್ಯೂ ಪರವಾಗಿ ಅದರ ಭಾರತದ ನಿರ್ದೇಶಕರಾದ ವೂಲ್ಫ್ ಮೌತ್ ಸಹಿ ಹಾಕಿದ್ದಾರೆ.
ಕಾರ್ಯಕ್ರಮದಲ್ಲಿ ಬೆಂಗಳೂರಿನಲ್ಲಿರುವ ಜರ್ಮನಿ ಕಾನ್ಸುಲ್ ಜನರಲ್ ಅಕಿಂ ಬರ್ಕಾರ್ಟ್, ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಕಾರ್ಯದರ್ಶಿಯವರಾದ ರಾಕೇಶ್ ಸಿಂಗ್, KFW ಹಿರಿಯ ಪರಿಣತೆ ಸ್ವಾತಿ ಖನ್ನಾ ಮತ್ತು ಕಾಂಚಿ ಅರೋರ ಮತ್ತಿತರರು ಉಪಸ್ಥಿತರಿದ್ದರು.
ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿರುವ ಬೆಂಗಳೂರಿಗೆ ಬ್ರ್ಯಾಂಡ್ ಮೌಲ್ಯವಿದೆ. ಜೊತೆಗೆ, ನಗರಗಳಲ್ಲಿ ಸುಗಮ ಸಂಚಾರ ಜಾಲವನ್ನು ಅಭಿವೃದ್ಧಿ ಪಡಿಸುವುದು ಸರಕಾರದ ಗುರಿಯಾಗಿದ್ದು, 2027ರ ಡಿಸೆಂಬರ್ ವೇಳೆಗೆ BSRP ರೈಲು ಯೋಜನೆ ಪೂರ್ಣಗೊಳ್ಳಲಿದ್ದು, ರಾಜಧಾನಿಯ ಚಹರೆಯನ್ನೇ ಆಮೂಲಾಗ್ರವಾಗಿ ಬದಲಿಸಲಿದೆ.
ಬೆಂಗಳೂರು ಉಪನಗರ ರೈಲು ಯೋಜನೆಯ ಪ್ರಮುಖ ಕಾರಿಡಾರ್ಗಳು:
- ಕಾರಿಡಾರ್ 1: ಬೆಂಗಳೂರು - ದೇವನಹಳ್ಳಿ (41.4 ಕಿಮೀ)
- ಕಾರಿಡಾರ್ 2: ಚಿಕ್ಕಬಾಣಾವರ - ಬೆನ್ನಿಗಾನಹಳ್ಳಿ (25.2 ಕಿಮೀ)
- ಕಾರಿಡಾರ್ 3: ಕೆಂಗೇರಿ - ವೈಟ್ ಫೀಲ್ಡ್
- ಕಾರಿಡಾರ್ 4: ಹೀಲಾಳಿಗೆ - ರಾಜನಕುಂಟೆ (46.24 ಕಿಮೀ)
ಸಚಿವ ಎಂಬಿ ಪಾಟೀಲ್, ಯೋಜನೆಯ ಅನುಷ್ಠಾನವು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ನಡುವಿನ ಸಹಯೋಗದ ಪ್ರಯತ್ನವನ್ನು ಒಳಗೊಂಡಿರುತ್ತದೆ, ಯೋಜನೆಯ ನಿಧಿಯ 20% ಪ್ರತಿ ಘಟಕದಿಂದ ಮೂಲವಾಗಿದೆ. ಉಳಿದವು ಬ್ಯಾಂಕಿಂಗ್ ಮಾರ್ಗಗಳ ಮೂಲಕ ಸುರಕ್ಷಿತವಾಗಿದೆ. 2027ರ ವೇಳೆಗೆ ಯೋಜನೆ ಸಕಾಲದಲ್ಲಿ ಪೂರ್ಣಗೊಳ್ಳುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಗಮನಾರ್ಹವಾಗಿ, ಬೆಂಗಳೂರು ಉಪನಗರ ರೈಲು ಯೋಜನೆಯ ಕಾರಿಡಾರ್ 2 ಭಾರತೀಯ ರೈಲ್ವೆಯಲ್ಲಿ 31 ಮೀಟರ್ ಉದ್ದದ ಯು-ಗಿರ್ಡರ್ಗಳ ಸ್ಥಾಪನೆಗೆ ತಯಾರಿ ಮಾಡುವ ಮೂಲಕ ಹೊಸ ಮಾದರಿಯನ್ನು ಸ್ಥಾಪಿಸಿದೆ, ಇದು ಮೆಟ್ರೋ ನಿರ್ಮಾಣದಲ್ಲಿ ಹಿಂದಿನ ದಾಖಲೆಗಳನ್ನು ಮೀರಿಸಿದೆ. ಪಾಟೀಲ್ ಅವರು ಜನವರಿ 8 ರಂದು ಟ್ವೀಟ್ ಮೂಲಕ ಕಾರಿಡಾರ್ 2 ರ ವೇಗವರ್ಧಿತ ಪ್ರಗತಿಯನ್ನು ಘೋಷಿಸಿದರು.
More From GoodReturns

Bengaluru: ಬೀದಿ ಬದಿ ವ್ಯಾಪಾರಕ್ಕೆ ಅವಕಾಶವಿಲ್ಲ; ಈ ರಸ್ತೆಯ ವ್ಯಾಪಾರಿಗಳಿಗೆ ದೊಡ್ಡ ಸಂಕಷ್ಟ

Ugadi 2026 Wishes: ಈ ವರ್ಷದ ‘ಯುಗಾದಿ’ ಹೊಸ ಬೆಳಕು ತರಲಿ- ನಿಮ್ಮ ಪ್ರೀತಿ ಪಾತ್ರರಿಗೆ ಈ ರೀತಿ ಶುಭಾಶಯ ತಿಳಿಸಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ ಸ್ಥಳ ಆಯ್ಕೆ ಬಗ್ಗೆ ಹೊಸ ಅಪ್ಡೇಟ್; ಡಿ.ಕೆ ಶಿವಕುಮಾರ್ ಬಳಿ ಸುಳಿವು

Gold Rate: ಚಿನ್ನಪ್ರಿಯರಿಗೆ ‘ಯುಗಾದಿ’ ಸಿಹಿ; ಬೆಂಗಳೂರಿನಲ್ಲಿ 24K ಬಂಗಾರದ ಬೆಲೆಯಲ್ಲಿ 27,800 ರೂ. ಕುಸಿತ

Credit Score: ಸಾಲ ಪಡೆಯಲಷ್ಟೇ ಅಲ್ಲ, ಬ್ಯಾಂಕ್ ಉದ್ಯೋಗಕ್ಕೂ ಬೇಕಿದೆ ಕ್ರೆಡಿಟ್ ಸ್ಕೋರ್; ಈ ಬಗ್ಗೆ ತಿಳಿಯಿರಿ

Gold Rates & Silver Rates Today Live: ಚಿನ್ನ-ಬೆಳ್ಳಿ ದರದಲ್ಲಿ ಭಾರಿ ಏರಿಕೆ-ಮಾರುಕಟ್ಟೆಯ ಲೈವ್ ಅಪ್ಡೇಟ್ ತಿಳಿಯಿರಿ

Karnataka Rain: ರಾಜ್ಯದಲ್ಲಿ ಸದ್ಯಕ್ಕೆ ನಿಲ್ಲಲ್ಲ ವರುಣಾರ್ಭಟ; ಎಷ್ಟು ದಿನ ಈ ಮಳೆ ಎಂದು ತಿಳಿಯಿರಿ

Ballari Airport: ಬಳ್ಳಾರಿ ವಿಮಾನ ನಿಲ್ದಾಣಕ್ಕೆ ಈ ವಿಚಾರಕ್ಕೆ ಅಡ್ಡಿಯಾಗ್ತಿದ್ಯಾ-ಏನದು ಹೊಸ ವಿಚಾರ ತಿಳಿಯಿರಿ

Bank Holiday: ನಾಳೆ ಕರ್ನಾಟಕದಲ್ಲಿ ಬ್ಯಾಂಕ್ ತೆರೆದಿರುತ್ತೋ, ಇಲ್ಲವೋ? ಸ್ಪಷ್ಟ ಮಾಹಿತಿ ತಿಳಿಯಿರಿ

Silver Price Today: ಬೆಳ್ಳಿ ದರದಲ್ಲಿ ಇಂದು 5,000 ಕುಸಿತ; ಭಾರತದಲ್ಲಿ ಇಂದಿನ ಬೆಲೆ ತಿಳಿಯಿರಿ

LPG Crisis Bengaluru: ಕೋಳಿ ವ್ಯಾಪಾರಕ್ಕೂ ತಟ್ಟಿದ LPG ಕೊರತೆ ಬಿಸಿ; ಬೆಂಗಳೂರಲ್ಲಿ ಮಾರಾಟ ಭಾರಿ ಕುಸಿತ



Click it and Unblock the Notifications