ದೊಡ್ಡ ಘೋಷಣೆ!ಬೆಂಗಳೂರು ನಗರದಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡುವ ನಿಟ್ಟಿನಿಂದ ರಾಜ್ಯ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ.ಬೆಂಗಳೂರಲ್ಲಿ114 ಕಿಲೋಮೀಟರ್ ಎಲಿವೆಟೆಡ್ ಕಾರಿಡಾರ್ ನಿರ್ಮಾಣಕ್ಕೆ ನಿರ್ಧರಿಸಿದೆ.
ಹೌದು,ಈಗಲೇ ಬೆಂಗಳೂರಿನಲ್ಲಿ ಮೊದಲ ಸುರಂಗ ರಸ್ತೆ ನಿರ್ಮಾಣಕ್ಕೂ ಸಂಪುಟ ಸಭೆ ಒಪ್ಪಿಗೆಯನ್ನು ಸೂಚಿಸಿದೆ. ಇದೀಗ ಎಲಿವೆಟೆಡ್ ಕಾರಿಡಾರ್ ನಿರ್ಮಾಣಕ್ಕೂ ಸೂಚನೆಯನ್ನು ನೀಡಿದೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ ಶಿಮಕುಮಾರ್ ಬೆಂಗಳೂರಲ್ಲಿ ಎಲಿವೆಟೆಡ್ ಕಾರಿಡಾರ್ ನಿರ್ಮಾಣಕ್ಕೆ ತೀರ್ಮಾನಿಸಿದ್ದೇವೆ. ಬೆಂಗಳೂರಿನಲ್ಲಿ 114 ಕಿಲೋಮೀಟರ್ ಎಲಿವೆಟೆಡ್ ಕಾರಿಡಾರ್ ನಿರ್ಮಿಸಲಾಗುತ್ತಿದೆ. ಈ ಯೋಜನೆ ಸಂಬಂಧ ಅಭಿಪ್ರಾಯ ಪಡೆಯಲಾಗಿದೆ. ಸಂಚಾರ ಪೊಲೀಸ್ ಅಧಿಕಾರಿಗಳ ಅಭಿಪ್ರಾಯ ಪಡೆದಿದ್ದೇವೆ ಎಂದು ಹೇಳಿಕೆಯನ್ನು ನೀಡಿದ್ದಾರೆ.

ಸ್ವಚ್ಛ ಬೆಂಗಳೂರುಗಾಗಿ 4,000 ಕೋಟಿ ರೂ. ವೆಚ್ಚ
ಬೆಂಗಳೂರನ್ನು 'ಸ್ವಚ್ಛ ಬೆಂಗಳೂರು' (ಸ್ವಚ್ಛ ಬೆಂಗಳೂರು) ಉಪಕ್ರಮದಡಿಯಲ್ಲಿ ನಗರದ ತ್ಯಾಜ್ಯ ನಿರ್ವಹಣಾ ವ್ಯವಸ್ಥೆಯ ಪ್ರಮುಖ ನವೀಕರಣವನ್ನು 4,000 ಕೋಟಿ ರೂ. ವೆಚ್ಚದಲ್ಲಿ ಘೋಷಿಸಿದರು. "ಈ ಯೋಜನೆ ಸುರಂಗ ರಸ್ತೆ ಗಾಗಿ ಈಗಾಗಲೇ ಸಂಚಾರ ಪೊಲೀಸರಿಂದ ಅಭಿಪ್ರಾಯವನ್ನು ಹೇಳಿದ್ದಾರೆ.
ಸಚಿವ ಸಂಪುಟ ಸಭೆಯಲ್ಲಿ ಮಹತ್ವಾಕಾಂಕ್ಷೆಯ ಎರಡು ಹಂತದ ಸುರಂಗ ರಸ್ತೆ ಯೋಜನೆಯ ಬಗ್ಗೆಯೂ ಚರ್ಚಿಸಲಾಯಿತು, ಇದರ ಮೊದಲ ಹಂತದ ಟೆಂಡರ್ಗಳು ಶೀಘ್ರದಲ್ಲೇ ಆರಂಭವಾಗುವ ನಿರೀಕ್ಷೆಯಿದೆ. ಸುರಂಗ ಪ್ರವೇಶ ಮತ್ತು ನಿರ್ಗಮನ ಸ್ಥಳಗಳಲ್ಲಿ ಸಂಭವನೀಯ ಸಂಚಾರ ಅಡಚಣೆಗಳನ್ನು ಪರಿಹರಿಸಲು, ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಮತ್ತು ಪೊಲೀಸರ ಉನ್ನತ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ವಿಧಾನಸೌಧದ ಒಂದು ಕಿ.ಮೀ ವ್ಯಾಪ್ತಿಯಲ್ಲಿ ಯಾವುದೇ ನಿರ್ಗಮನ ದ್ವಾರಗಳನ್ನು ಅನುಮತಿಸಲಾಗುವುದಿಲ್ಲ.ಅಲ್ಲಿ ಸಂಚಾರ ದಟ್ಟಣೆ ಉಂಟಾದರೆ, ಇಡೀ ನಗರವೇ ಪರಿಣಾಮ ಬೀರುತ್ತದೆ ಎಂದಿದ್ದಾರೆ.
33 ತ್ಯಾಜ್ಯ ವಲಯ
ಹೊಸ ತ್ಯಾಜ್ಯ ನಿರ್ವಹಣಾ ಯೋಜನೆಯ ಪ್ರಕಾರ, ಬೆಂಗಳೂರನ್ನು 33 ಪ್ರತ್ಯೇಕ ತ್ಯಾಜ್ಯ ನಿರ್ವಹಣಾ ವಲಯಗಳಾಗಿ ವಿಂಗಡಿಸಲಾಗುವುದು. ಸರಿಸುಮಾರು ಪ್ರತಿ ವಾರ್ಡ್ ಅಥವಾ ಪ್ರಮುಖ ಕ್ಷೇತ್ರಕ್ಕೆ ಒಂದೊಂದು ಆಗಿ ವಿಭಜನೆಯನ್ನು ಮಾಡಲಾಗುತ್ತದೆ.
7 ವರ್ಷಗಳ ಕಾರ್ಯಾಚರಣೆ ಟೆಂಡರ್
ಬೆಂಗಳೂರಿನ ಎಲಿವೆಟೆಡ್ ಕಾರಿಡಾರ್ ನಿರ್ಮಾಣಕ್ಕೆ 4,000 ಕೋಟಿ ರೂಪಾಯಿ ಅಂದಾಜು ವೆಚ್ಚದ ಈ ಯೋಜನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆಯನ್ನು ನೀಡಿದೆ. ಏಳು ವರ್ಷಗಳ ಕಾರ್ಯಾಚರಣೆಯ ಅವಧಿಗೆ ಶೀಘ್ರದಲ್ಲೇ ಟೆಂಡರ್ ಕರೆಯಲಾಗುವುದು.
ಸ್ವಚ್ಛ ಬೆಂಗಳೂರು ಅಭಿಯಾನದ ಭಾಗವಾಗಿ, ನಗರದಾದ್ಯಂತ ತ್ಯಾಜ್ಯಗಳನ್ನು ತೆಗೆದುಹಾಕಲು ಒಂದು ಬಾರಿಯ ತೆರವು ಅಭಿಯಾನವನ್ನು ಕೈಗೊಳ್ಳಲಾಗುವುದು. ತ್ಯಾಜ್ಯವನ್ನು ಕಂಡರೆ ಜಿಬಿಎಗೆ ತಿಳಿಸುವ ಮೂಲಕ ಭಾಗವಹಿಸಲು ನಾಗರಿಕರನ್ನು ಪ್ರೋತ್ಸಾಹಿಸಲಾಗುತ್ತದೆ. ಇದಕ್ಕಾಗಿ ಮಾರ್ಷಲ್ಗಳು ಮತ್ತು ಅಧಿಕಾರಿಗಳನ್ನು ನಿಯೋಜಿಸಲಾಗುವುದು ಎಂದು ಡಿಸಿಎಂ ಹೇಳಿದರು.
ಮುಂದಿನ 15 ದಿನಗಳಲ್ಲಿ ಸಮಗ್ರ ಘನತ್ಯಾಜ್ಯ ನಿರ್ವಹಣಾ ವ್ಯವಸ್ಥೆಗೆ ಸರ್ಕಾರ ಟೆಂಡರ್ ನೀಡಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ ಜಾರಿಯಾದ ಮೇಲೆ ಮುಖ್ಯಮಂತ್ರಿಯವರ ನೇತೃತ್ವದ 'ಗ್ರೇಟರ್ ಬೆಂಗಳೂರು ಪ್ರಾಧಿಕಾರ' (ಜಿಬಿಎ) 120 ದಿನಗಳಲ್ಲಿ ರಚನೆಯಾಗಲಿದೆ.ಆಡಳಿತಾಧಿಕಾರಿ ನೇಮಕಗೊಳ್ಳಲಿದ್ದಾರೆ. ಗ್ರೇಟರ್ ಬೆಂಗಳೂರು ಪ್ರದೇಶ (ಜಿಬಿಎ) ಗಡಿಗುರುತು ನಡೆಯಲಿದ್ದಾರೆ.
ಬರೋಬ್ಬರಿ 17,780 ಕೋಟಿ ಸುರಂಗ ರಸ್ತೆ ಯೋಜನೆ
ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಬೃಹತ್ ಟನಲ್ ಸುರಂಗ ರಸ್ತೆ ಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ.ಇದೀಗ ಬರೋಬ್ಬರಿ 17,780 ಕೋಟಿ ರೂ. ವೆಚ್ಚದ ಸುರಂಗ ರಸ್ತೆ ಯೋಜನೆಗೆ ಜಾಗತಿಕ ಟೆಂಡರ್ ಆಹ್ವಾನಿಸಲು ಸಚಿವ ಸಂಪುಟ ತಿರ್ಮಾನ ಮಾಡಿದೆ.
ಬೆಂಗಳೂರು ನಗರದಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಹೆಬ್ಬಾಳದಿಂದ ಸಿಲ್ಕ್ ಬೋರ್ಡ್ ಜಂಕ್ಷನ್ವರೆಗೆ 18 ಕಿಲೋಮೀಟರ್ ಉದ್ದದ ಅವಳಿ ಭೂಗತ ಸುರಂಗ ರಸ್ತೆ ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಜಾಗತಿಕ ಟೆಂಡರ್ಗಳನ್ನು ಆಹ್ವಾನಿಸಿದೆ.


Click it and Unblock the Notifications