ಬೆಂಗಳೂರು ಶರವೇಗದಲ್ಲಿ ಅಭಿವೃದ್ದಿ ಕಾಣುತ್ತಿರುವ ನಗರ. ಇಲ್ಲಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೇ ಜನದಟ್ಟನೆ ಅಧಿಕವಾಗಿದ್ದು ಈಗಾಗಲೇ ರಾಜ್ಯಸರ್ಕಾರ ಬೆಂಗಳೂರಿಗೆ ಮತ್ತೊಂದು ಹೊಸ ಏರ್ಪೋರ್ಟ್ ನಿರ್ಮಾಣಕ್ಕೆ ಯೋಜನೆ ಹಾಕಿಕೊಂಡಿದ್ದು ಇದಕ್ಕಾಗಿ ವಿಸ್ತೃತಾ ಯೋಜನೆ ವರದಿ ಸಿದ್ದಪಡಿಸುವ ತಯಾರಿಯಲ್ಲಿದೆ. ಹೀಗಿರುವಾಗ ಬೆಂಗಳೂರಿನ ರೈಲು ನಿಲ್ದಾಣದಲ್ಲಿ ಜನದಟ್ಟಣೆ , ಒತ್ತಡ ಎಷ್ಟಿರಬಹುದು ಎಂದು ನೀವೇ ಯೋಚಿಸಿ ನೋಡಿ.
ಇದಕ್ಕಾಗಿ ಕೇಂದ್ರ ರೈಲ್ವೆ ಇಲಾಖೆಯೂ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದ್ದು , ಬೆಂಗಳೂರು ಹೊರವಲಯದಲ್ಲಿ ಎರಡು ರೈಲ್ವೆ ಟರ್ಮಿನಲ್ಗಳನ್ನು ತೆರೆಯಲು ಕೇಂದ್ರ ರೈಲ್ವೆ ಇಲಾಖೆ ಮುಂದಾಗಿದೆ.. ಇದರ ಜೊತೆಗೆ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ 180 ಕೋಟಿ ರೂಪಾಯಿ ವೆಚ್ಚದಲ್ಲಿ ಎರಡು ಹೊಸ ಪ್ಲ್ಯಾಟ್ ಫಾರಂ ಗಳನ್ನು ಸೇರಿಸಲು ಮುಂದಾಗಿದೆ.

ಈ ಬಗ್ಗೆ ರೈಲ್ವೆ ರಾಜ್ಯ ಸಚಿವ ವಿ ಸೋಮಣ್ಣ ಮಾಹಿತಿ ನೀಡಿದ್ದು, "ಕರ್ನಾಟಕದ ಅತ್ಯಂತ ಜನನಿಬಿಡ ರೈಲು ನಿಲ್ದಾಣವಾಗಿರುವ ಕೆಎಸ್ಆರ್ ಬೆಂಗಳೂರು 1,500 ಕೋಟಿ ರೂಪಾಯಿಗಳ ಪುನರಾಭಿವೃದ್ಧಿ ಯೋಜನೆ ಮತ್ತು 180 ಕೋಟಿ ರೂಪಾಯಿ ವೆಚ್ಚದ ಎರಡು ಪ್ಲಾಟ್ಫಾರ್ಮ್ಗಳ ಸೇರ್ಪಡೆಯೊಂದಿಗೆ ಇನ್ಮುಂದೆ ಜನ ದಟ್ಟಣೆಯಿಂದ ಮುಕ್ತವಾಗುವ ಎಲ್ಲಾ ಸಾಧ್ಯತೆಗಳಿವೆ" ಎಂದು ಹೇಳಿದ್ಡಾರೆ.
ನಗರದ ರೈಲ್ವೆ ಮೂಲಸೌಕರ್ಯಗಳನ್ನು ಹೆಚ್ಚಿಸುವ ಮತ್ತು ಅಸ್ತಿತ್ವದಲ್ಲಿರುವ ನಿಲ್ದಾಣಗಳಲ್ಲಿ ದಟ್ಟಣೆಯನ್ನು ಕಡಿಮೆ ಮಾಡುವ ಅಗತ್ಯವನ್ನು ಒತ್ತಿ ಹೇಳಿದ ಸಚಿವರು, ರೈಲ್ವೆ ಇಲಾಖೆ ಇದನ್ನು ನಿಭಾಯಿಸಲು ಕೆ.ಎಸ್.ಆರ್. ಬೆಂಗಳೂರು ಮತ್ತು ಯಶವಂತಪುರದಲ್ಲಿ ಹೆಚ್ಚಿನ ಪ್ಲಾಟ್ಫಾರ್ಮ್ಗಳನ್ನು ನಿರ್ಮಿಸುವುದು, ಹೊಸ ಟರ್ಮಿನಲ್ಗಳನ್ನು ನಿರ್ಮಿಸುವುದು ಮತ್ತು ಕೆ.ಎಸ್.ಆರ್. ಬೆಂಗಳೂರು, ಯಶವಂತಪುರ ಮತ್ತು ಬೆಂಗಳೂರು ಕ್ಯಾಂಟನ್ಮೆಂಟ್ಗಳನ್ನು ಮರು ಅಭಿವೃದ್ಧಿಪಡಿಸುವ ಯೋಜನೆಯನ್ನು ಹೊಂದಿದೆ ಎಂದು ಹೇಳಿದ್ದಾರೆ.
ಎಲ್ಲಿ ಹೊಸ ಟರ್ಮಿನಲ್?
ಹೈದರಾಬಾದ್ ಇತ್ತೀಚೆಗೆ ಚಾರ್ಲಪಲ್ಲಿಯಲ್ಲಿ ಹೊಸ ರೈಲ್ವೆ ಟರ್ಮಿನಲ್ ಅನ್ನು ಪಡೆದುಕೊಂಡಿದೆ. ಹೆಚ್ಚುತ್ತಿರುವ ಪ್ರಯಾಣಿಕರ ಸಂಖ್ಯೆಯನ್ನು ನಿಭಾಯಿಸಲು ಬೆಂಗಳೂರಿಗೆ ಹೊಸ ಟರ್ಮಿನಲ್ಗಳ ಅಗತ್ಯವಿದೆ. ನಾವು ಮೊದಲಿಗೆ ವೈಟ್ಫೀಲ್ಡ್ನಲ್ಲಿ ಪರಿಗಣಿಸಿದ್ದೆವು ಆದರೆ ಅಲ್ಲಿ ಭೂಮಿ ಲಭ್ಯವಿಲ್ಲ. ನಾವು ದೇವನಹಳ್ಳಿಯಲ್ಲಿ 400 ಎಕರೆ ಭೂಮಿಯಲ್ಲಿ ಒಂದು ಟರ್ಮಿನಲ್ ನಿರ್ಮಿಸಲು ಯೋಜಿಸುತ್ತಿದ್ದೇವೆ. ರಾಮನಗರ, ಮಾಗಡಿ ಅಥವಾ ನೆಲಮಂಗಲದಲ್ಲಿ ಇನ್ನೊಂದು ಟರ್ಮಿನಲ್ ನಿರ್ಮಿಸುವ ಬಗ್ಗೆಯೂ ನಾವು ಪರಿಶೀಲಿಸುತ್ತಿದ್ದೇವೆ" ಎಂದು ಸಚಿವರು ವಿವರಿಸಿದ್ದಾರೆ. ಹೊಸ ರೈಲ್ವೆ ಸ್ಟೇಷನ್ ಕಾಮಗಾರಿಗೆ ತಯಾರಿ ಪ್ರಾರಂಭವಾಗಿದ್ದು ಸದ್ಯ ಅಧಿಕಾರಿಗಳಿಂದ ಜಾಗ ಗುರುತಿಸುವ ಕೆಲಸ ಆಗಿದೆ. ಶೀಘ್ರದಲ್ಲೇ ಕೇಂದ್ರ ಸರ್ಕಾರ ಕೂಡ ಇದಕ್ಕೆ ಒಪ್ಪಿಗೆ ಸೂಚಿಸುವ ಸಾಧ್ಯತೆಯಿದೆ. ಜನ ದಟ್ಟಣೆ ತಪ್ಪಿಸುವಲ್ಲಿ ಈ ಟರ್ಮಿನಲ್ಗಳು ಸಹಕಾರಿಯಾಗಲಿವೆ ಎಂದು ಹೇಳಿದ್ದಾರೆ. ಹೀಗಾಗಿ ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯ ನೆಲಮಂಗಲ, ಚಿಕ್ಕಬಳ್ಳಾಪುರ ಜಿಲ್ಲೆಯ ದೇವನಹಳ್ಳಿಯಲ್ಲಿ ಹೊಸದಾಗಿ ರೈಲ್ವೆ ನಿಲ್ದಾಣ ನಿರ್ಮಾಣವಾಗುವ ಸಾಧ್ಯತೆ ಇದೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications