ಬೆಂಗಳೂರು, ಮೇ 4: ಹೊರ ವರ್ತುಲ ರಸ್ತೆಯ (ORR) ದಕ್ಷಿಣ ಭಾಗದಲ್ಲಿ ನಮ್ಮ ಮೆಟ್ರೋ (namma Metro) ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ಬೆಂಗಳೂರು ಸಂಚಾರ ಪೊಲೀಸರು ನಗರದ ನಿವಾಸಿಗಳಿಗೆ ಸಂಚಾರಿ ಸಲಹೆಯನ್ನು ನೀಡಿದ್ದಾರೆ.
ಪ್ರಕಟಣೆಯ ಪ್ರಕಾರ, ನಿರ್ಮಾಣ ಕಾಮಗಾರಿಯು ಮೇ 1 ರಿಂದ 20 ದಿನಗಳವರೆಗೆ ಪ್ರತಿದಿನ ರಾತ್ರಿ 11 ರಿಂದ ಬೆಳಿಗ್ಗೆ 6 ರವರೆಗೆ ನಡೆಯುತ್ತದೆ. ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ (BMRCL) ಈಗಾಗಲೇ ಮೆಟ್ರೊ ಮಾರ್ಗದ ಉದ್ದಕ್ಕೂ 220 ಕೆವಿ ಕೇಬಲ್ ಹಾಕುವ ಕೆಲಸವನ್ನು ಪ್ರಾರಂಭಿಸಿದೆ ಎಂದು ನಗರ ಸಂಚಾರ ಪೊಲೀಸರು ತಿಳಿಸಿದ್ದಾರೆ.

ಇಬ್ಬಲೂರು ಸರ್ವಿಸ್ ರಸ್ತೆಯಲ್ಲಿ ಸಲಾರ್ಪುರಿಯಾ ಸಾಫ್ಟ್ ಝೋನ್ನಿಂದ ಬೆಳ್ಳಂದೂರಿನ ಸೆಂಟ್ರೊ ಮಾಲ್ ಕಡೆಗೆ ಬಿಎಂಆರ್ಸಿಎಲ್ ಕಾಮಗಾರಿ ನಡೆಸಲಿದೆ ಎಂದು ಪ್ರಕಟಣೆ ತಿಳಿಸಿದೆ. 620 ಮೀಟರ್ ಉದ್ದದ ರಸ್ತೆಯಲ್ಲಿ ಅಡಚಣೆ ಉಂಟಾಗುವುದರಿಂದ ಮುಖ್ಯ ರಸ್ತೆಯಲ್ಲಿ ನಿಧಾನಗತಿಯ ಸಂಚಾರಕ್ಕೆ ಕಾರಣವಾಗಬಹುದು, ದಟ್ಟಣೆ ಹೆಚ್ಚಿರುವ ದಿನದಲ್ಲಿ ಯಾವುದೇ ದೊಡ್ಡ ದಟ್ಟಣೆ ಉಂಟಾಗುವುದಿಲ್ಲ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.
ಬಿಎಂಆರ್ಸಿಕೆ ಕೇಬಲ್ ಅಳವಡಿಕೆ ಕಾಮಗಾರಿಯಿಂದಾಗಿ ಇಬ್ಬಲೂರಿನಿಂದ ಬೆಳ್ಳಂದೂರು ಕಡೆಗೆ ನಿಧಾನಗತಿಯ ಸಂಚಾರ (ಪ್ರತಿದಿನ ರಾತ್ರಿ 11ರಿಂದ ಬೆಳಗ್ಗೆ 6ರವರೆಗೆ) ಎಂದು ಸಂಚಾರ ಸಲಹೆಗಾರ ತಿಳಿಸಿದೆ.
ಮೆಟ್ರೋ 3ನೇ ಹಂತದ ಯೋಜನೆ ಅಪಡೇಟ್:
ನಮ್ಮ ಮೆಟ್ರೋ 3ನೇ ಹಂತದ ಯೋಜನೆ ಕಾಮಗಾರಿಗಾಗಿ ಭೂಸ್ವರೂಪದ ಅಧ್ಯಯನದ ವರದಿ ಪಡೆಯಲು ಬೆಂಗಳೂರು ಮೆಟ್ರೋ ರೈಲು ನಿಗಮವು ಶೀಘ್ರ ಜಿಯೋಟೆಕ್ನಿಕಲ್ ಇನ್ವೆಸ್ಟಿಗೇಶನ್ ಕೈಗೊಳ್ಳಲಿದೆ. ಮೂರನೇ ಹಂತದ ಮೆಟ್ರೋ ಎರಡು ಮಾರ್ಗ ಒಳಗೊಂಡಿದ್ದು, ಒಟ್ಟು 44.65 ಕಿ.ಮೀ. ಉದ್ದದ ಯೋಜನೆ. ಜೆ.ಪಿ.ನಗರ 4ನೇ ಹಂತದಿಂದ ಕೆಂಪಾಪುರ (32.5 ಕಿ.ಮೀ.) ಹಾಗೂ ಹೊಸಹಳ್ಳಿಯಿಂದ ಮಾಗಡಿ ರಸ್ತೆಯ ಕಡಬಗೆರೆವರೆಗೆ (12.5 ಕಿ.ಮೀ.) ಸಂಪರ್ಕ ಕಲ್ಪಿಸಲಿದೆ. ಈ ಮಾರ್ಗದ ಕಾಮಗಾರಿ 2024ರ ಅಂತ್ಯ ಅಥವಾ 2025ರ ಆರಂಭಿಕ ತಿಂಗಳಲ್ಲೇ ಶುರುವಾಗುವ ನಿರೀಕ್ಷೆ ಇದೆ.
More From GoodReturns

Bengaluru: ಬೆಂಗಳೂರಿಗೆ 5,000 ರೂ. ಕೋಟಿ ಪ್ರವಾಹ ಯೋಜನೆ, 41 ಕಿ.ಮೀ ಮೆಟ್ರೋ, 450 ಕಿ.ಮೀ ರಸ್ತೆ ಅಭಿವೃದ್ಧಿ!

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Bengaluru: ಮಳೆಗಾಲಕ್ಕೂ ಮುನ್ನ ಫೀಲ್ಡ್ಗೆ ಇಳಿದ ಶಾಸಕ ಗೋಪಾಲಯ್ಯ...ಮಹಾಲಕ್ಷ್ಮಿ ಲೇಔಟ್ನಲ್ಲಿ ಕಾಮಗಾರಿಗಳ ಪರಿಶೀಲನೆ!

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಇರಲ್ಲ ಕರೆಂಟ್! ಎಲ್ಲೆಲ್ಲಿ ಗೊತ್ತಾ?

BMTC Bus: ಬೆಂಗಳೂರು-ರಾಮನಗರ ಮತ್ತು ಕನಕಪುರಕ್ಕೆ ಬಿಎಂಟಿಸಿ ಬಸ್… ಬಸ್ ನಿಲ್ದಾಣಗಳ ಬಗ್ಗೆ ತಿಳಿಯಿರಿ

Bengaluru-Mangaluru Flight: ಬೆಂಗಳೂರು-ಮಂಗಳೂರು ವಿಮಾನ ಪ್ರಯಾಣಿಕರಿಗೆ ಬಂಪರ್ ಸುದ್ದಿ! ಇನ್ಮೇಲೆ ತಡರಾತ್ರಿಯೂ ವಿಮಾನ ಸೇವೆ

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!



Click it and Unblock the Notifications