ಬೆಂಗಳೂರಿನ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಬಹುನಿರೀಕ್ಷಿತ ಹೆಬ್ಬಾಳ ಸಿಲ್ಕ್ ಬೋರ್ಡ್ ನಡುವಿನ ಅಂದಾಜು 22,000 ಕೋಟಿ ವೆಚ್ಚದ ಸುರಂಗ ರಸ್ತೆಯ ಯೋಜನೆಯು ಸದ್ಯಕ್ಕೆ ಪರಿಶೀಲನೆಯ ಹಂತದಲ್ಲಿದೆ. ಆದರೆ ಈ ಕಾಮಗಾರಿಕೆಯು ಸಂಚಾರ ದಟ್ಟಣೆ ಕಡಿಮೆ ಮಾಡುವ ಬದಲು ಮತ್ತಷ್ಟು ಹೆಚ್ಚಳ ಆಗುವುದಕ್ಕೆ ಕಾರಣವಾಗಿದೆ.

ಈ ಯೋಜನೆಯು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕನಸಿನ ಕೂಸು ಆಗಿದೆ.ಆದರೆ, ಯೋಜನೆಯ ಅಂತಿಮ ವರದಿಯ ಪ್ರಕಾರ, ಸುರಂಗದ ಪ್ರವೇಶ ಮತ್ತು ನಿರ್ಗಮನಕ್ಕೆ ಇರುವ ಇಳಿಜಾರುಗಳು 16 ಹೊಸ ಸಂಚಾರ ದಟ್ಟಣೆಯ ತಾಣಗಳನ್ನು ಸೃಷ್ಟಿಸುವ ಸಾಧ್ಯತೆಯಿದೆ ಎಂದು 'ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್' ವರದಿಯನ್ನು ಕೂಡ ಮಾಡಿದೆ.
ಬೆಂಗಳೂರಿನ ಈ ಸುರಂಗದ ಪ್ರವೇಶ ಮತ್ತು ನಿರ್ಗಮನ ಇಳಿಜಾರುಗಳನ್ನು ಈಗಾಗಲೇ ಸಂಚಾರ ದಟ್ಟಣೆಯಿಂದ ಕೂಡಿರುವುದರಿಂದ ಇದೇ ಪ್ರದೇಶಗಳಲ್ಲಿ ನಿರ್ಮಿಸಲು ಪ್ಲಾನ್ ಮಾಡಿಕೊಳ್ಳಲಾಗಿದೆ. ಅವುಗಳಲ್ಲಿ ಹೆಬ್ಬಾಳ ಫ್ಲೈಓವರ್, ಐಐಎಸ್ಸಿ ಕ್ಯಾಂಪಸ್, ಮಹಾರಾಣಿ ಕಾಲೇಜು ಜಂಕ್ಷನ್, ಫ್ರೀಡಂ ಪಾರ್ಕ್, ಅಶೋಕ ಸ್ತಂಭದ ಬಳಿಯ ವಿಲ್ಸನ್ ಗಾರ್ಡನ್ ಮತ್ತು ಹೊಸೂರು ರಸ್ತೆಗಳು ಸೇರಿಗೊಂಡಿವೆ.
ಬೆಂಗಳೂರಿನ ಸುರಂಗದ ಮಧ್ಯ ಭಾಗದ ಉದ್ದ 16.68 ಕಿ.ಮೀ. ಆದರೆ, ಇಳಿಜಾರುಗಳ ಕಾರಣದಿಂದಾಗಿ ವಾಸ್ತವವಾಗಿ ವಾಹನ ಸವಾರರು ಒಂದು ದಿಕ್ಕಿನಲ್ಲಿ ಸುಮಾರು 18.91 ಕಿ.ಮೀ. ಪ್ರಯಾಣಿಸಬೇಕಾಗುತ್ತದೆ. ಇದರ ಜೊತೆಗೆ ಮೇಲ್ಮೈ ರಸ್ತೆಗಳಲ್ಲಿನ ಹೆಚ್ಚುವರಿ ಪ್ರಯಾಣವು ಒಟ್ಟು ದೂರವನ್ನು 19 ಕಿ.ಮೀ.ಗಿಂತಲೂ ಹೆಚ್ಚಿಸಬಹುದು ಎಂದು ಅಂದಾಜು ಮಾಡಲಾಗಿದೆ.
ಈ ಯೋಜನೆ ವೇಗದ ಪ್ರಯಾಣವನ್ನು ಈಡೇರುವುದಿಲ್ಲ. ಬದಲಿಗೆ ಪ್ರಯಾಣದ ಸಮಯ, ಇಂಧನ ಬಳಕೆ ಮತ್ತು ಸಾರ್ವಜನಿಕರ ಹತಾಶೆಯನ್ನು ಹೆಚ್ಚಿಸುಸಲು ಕಾರಣವಾಗುತ್ತದೆ ಎಂದು ಹೇಳುತ್ತಿದ್ದಾರೆ.
ಬೆಂಗಳೂರು ನಗರದಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಹೆಬ್ಬಾಳದಿಂದ ಸಿಲ್ಕ್ ಬೋರ್ಡ್ ಜಂಕ್ಷನ್ವರೆಗೆ 18 ಕಿಲೋಮೀಟರ್ ಉದ್ದದ ಅವಳಿ ಭೂಗತ ಸುರಂಗ ರಸ್ತೆ ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಜಾಗತಿಕ ಟೆಂಡರ್ಗಳನ್ನು ಆಹ್ವಾನವನ್ನು ಮಾಡಲಾಗುತ್ತದೆ. ಇದು ಬೃಹತ್ ಟನಲ್ ಸುರಂಗ ರಸ್ತೆ ಯೋಜನೆಯಾಗಿದೆ.
ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ಗುರಿ
ಹೆಬ್ಬಾಳದಿಂದ ಸಿಲ್ಕ್ ಬೋರ್ಡ್ವರೆಗಿನ ಉತ್ತರ-ದಕ್ಷಿಣ ಕಾರಿಡಾರ್ ಮತ್ತು ಪೂರ್ವ-ಪಶ್ಚಿಮ ಕಾರಿಡಾರ್ ಅನ್ನು ಒಳಗೊಂಡಿರುವ ಬಿಬಿಎಂಪಿಯ ಸುರಂಗ ಯೋಜನೆಯು ಬೆಂಗಳೂರಿನಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ಗುರಿಯನ್ನು ಈ ಯೋಜನೆಯನ್ನು ಹೊಂದಿದೆ.
ಹೊಸ ಯು-ಟರ್ನ್ಗಳು, ಕಿರಿದಾದ ರಸ್ತೆಗಳು, ತಿರುವುಗಳು ನಗರದ ಸಂಚಾರವನ್ನು ಇನ್ನಷ್ಟು ಹದಗೆಡಿಸುತ್ತವೆ ಎಂದು ಸಿಟಿಜನ್ಸ್ ಫಾರ್ ಸಿಟಿಜನ್ಸ್ (C4C) ಸಂಸ್ಥೆಯ ಸಂಸ್ಥಾಪಕ ರಾಜ್ಕುಮಾರ್ ದುಗರ್ ಎಚ್ಚರಿಸಿದ್ದಾರೆ. ಈ ಸುರಂಗ ಮಾರ್ಗವನ್ನು ಬಳಸದವರಿಗೂ ಇದು ತೊಂದರೆ ಉಂಟುಮಾಡಬಹುದು ಎಂದು ಅವರು ಅಭಿಪ್ರಾಯವನ್ನು ಮಾಡಿದ್ದಾರೆ.
ಸುರಂಗ ರಸ್ತೆ ಪ್ರವೇಶ ಮತ್ತು ನಿರ್ಗಮನ ಸ್ಥಳಗಳಲ್ಲಿ ಅಡಚಣೆಗಳು ಉಂಟಾಗುವ ಸಾಧ್ಯತೆ ಇದೆ ಎಂದು ತಜ್ಞರು ಕೂಡ ಹೇಳಿದ್ದಾರೆ.
ಸುರಂಗ ಮಾರ್ಗವು ಹಮವಾರು ತೊಂದರೆಗಳನ್ನು ಅನುಭವಿಸುತ್ತಿದೆ. ಸದ್ಯದಲ್ಲಿ ಎಲ್ಲಾ ಸಮಸ್ಯೆಯೂ ಪರಿಹಾರವಾಗಿ ಸುರಂಗ ಮಾರ್ಗ ಉದ್ಘಾಟನೆಗೆ ಸಿದ್ದವಾಗುತ್ತದೆ.
More From GoodReturns

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru - Stock Market: ಷೇರು ಮಾರುಕಟ್ಟೆಯಲ್ಲಿ ಭಾರೀ ನಷ್ಟ; ಮನನೊಂದು ಬೆಂಗಳೂರಿನ ವ್ಯಕ್ತಿ ಆತ್ಮಹತ್ಯೆ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಇರಲ್ಲ ಕರೆಂಟ್! ಎಲ್ಲೆಲ್ಲಿ ಗೊತ್ತಾ?

Bengaluru-Mangaluru Flight: ಬೆಂಗಳೂರು-ಮಂಗಳೂರು ವಿಮಾನ ಪ್ರಯಾಣಿಕರಿಗೆ ಬಂಪರ್ ಸುದ್ದಿ! ಇನ್ಮೇಲೆ ತಡರಾತ್ರಿಯೂ ವಿಮಾನ ಸೇವೆ

BMTC Bus: ಬೆಂಗಳೂರು-ರಾಮನಗರ ಮತ್ತು ಕನಕಪುರಕ್ಕೆ ಬಿಎಂಟಿಸಿ ಬಸ್… ಬಸ್ ನಿಲ್ದಾಣಗಳ ಬಗ್ಗೆ ತಿಳಿಯಿರಿ

Bengaluru Special Trains: ಮಾರ್ಚ್ 11 ರಿಂದ ಬೆಂಗಳೂರಿಗೆ ಬರಲಿದೆ ಮತ್ತೊಂದು ಸ್ಪೆಷಲ್ ರೈಲು! ಎಲ್ಲಿಂದ ಎಲ್ಲಿಗೆ?

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Bengaluru Airport: ಬೆಂಗಳೂರು ಏರ್ಪೋರ್ಟ್ಗೆ 2025ರ ACI ಪ್ರಶಸ್ತಿ... ಪ್ರಯಾಣಿಕರ ಹೃದಯ ಗೆದ್ದ ವಿಮಾನ ನಿಲ್ದಾಣ!



Click it and Unblock the Notifications