ಮಳೆ.. ಮಳೆ ಎಂದು ಹೇಳುತ್ತಿದ್ದ ಜನ ಇದೀಗ ಚಳಿ.. ಚಳಿ ಹೇಳುವಂತಾಗಿದೆ. ರಾತ್ರಿ-ಬೆಳಗಾದರೆ ಸಾಕು ಮೈಕೊರೆಯುವಷ್ಟು ಚಳಿ ಆವರಿಸಿಬಿಡುತ್ತೆ. ಅದರಲ್ಲೂ ಬೆಂಗಳೂರಿನಲ್ಲಂತೂ ದಿನೇ ದಿನೇ ಚಳಿ ಹೆಚ್ಚಾಗುತ್ತಿದ್ದು, ಶೀತ ಗಾಳಿ ಕೂಡಾ ಬೀಸುತ್ತಿದೆ. ಬೆಂಗಳೂರು ನಗರದಲ್ಲಿ ಚಳಿ ಹೆಚ್ಚಾಗಿದ್ದು, ಮುಂಜಾನೆಯ ತಾಪಮಾನವಂತೂ ಭಾರೀ ಪ್ರಮಾಣದಲ್ಲಿ ಇಳಿಕೆಯಾಗುತ್ತಿದೆ. ಇದರಿಂದ ಚಳಿಗಾಲದ ತೀವ್ರತೆ ಹೇಗಿದೆ ಎಂದು ಅರಿಯಬಹುದು. ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯ ಪ್ರಕಾರ, ಕೆಲವು ದಿನಗಳವರೆಗೆ ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ 12 ರಿಂದ 17 ಡಿಗ್ರಿ ಸೆಲ್ಸಿಯಸ್ ನಡುವೆ ಇರಲಿದೆ ಎಂದು ಹೇಳಲಾಗಿದೆ. ಶುಕ್ರವಾರ, ಏರ್ಪೋರ್ಟ್ ಪ್ರದೇಶದಲ್ಲಿ 12.9°C ತಾಪಮಾನ ದಾಖಲಾಗಿದೆ. ಹಗಲಿನ ಗರಿಷ್ಠ ತಾಪಮಾನ 26-27°C ಆಸುಪಾಸಿನಲ್ಲಿತ್ತು ಎಂದು ಹೇಳಲಾಗಿದೆ.

ವೀಕೆಂಡ್ ವಾತಾವರಣ:
ಶನಿವಾರ ಮತ್ತು ಭಾನುವಾರ ಬೆಂಗಳೂರಿನಲ್ಲಿ ಇಡೀ ದಿನ ಬಿಸಿಲಿನ ವಾತಾವರಣವಿರಲಿದ್ದು, ಚಳಿಯೂ ಹೆಚ್ಚಿರಲಿದೆ ಎಂದು ಹೇಳಲಾಗಿದೆ. ಇನ್ನು ಈ ದಿನಗಳಲ್ಲಿ ಗರಿಷ್ಠ ತಾಪಮಾನ 26-27°C ಆಸುಪಾಸಿನಲ್ಲಿರಲಿದ್ದು, ಕನಿಷ್ಠ ತಾಪಮಾನ 12-15°C ಗೆ ಇಳಿಯಲಿದೆ. ಇದು ಹಗಲು-ರಾತ್ರಿ ತಾಪಮಾನದ ನಡುವೆ ಗಣನೀಯ ವ್ಯತ್ಯಾಸವನ್ನು ಸೃಷ್ಟಿಸುತ್ತದೆ.
ಈ ವಾರಾಂತ್ಯದಲ್ಲಿ ಸರಾಸರಿ ಗಾಳಿಯ ವೇಗ ಗಂಟೆಗೆ ಸುಮಾರು 16 ಕಿ.ಮೀ ಇರಲಿದೆ ಎನ್ನಲಾಗಿದೆ. ಮುಂಜಾನೆ ಮತ್ತು ಸಂಜೆ ವೇಳೆಗೆ ಜನರು ಜಾಕೆಟ್ಗಳು ಅಥವಾ ಸ್ವೆಟರ್ಗಳನ್ನು ಧರಿಸಿದರೆ ಒಳ್ಳೆಯದು ಎಂದು ಹವಾಮಾನ ಇಲಾಖೆ ಸಲಹೆ ನೀಡಿದೆ. ಆರೋಗ್ಯದ ಸಮಸ್ಯೆಯಲ್ಲಿದ್ದ
ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕ (AQI) 76-85 ರಷ್ಟಿದ್ದು, ಪ್ರಸ್ತುತ ಬೆಂಗಳೂರು ವಾಯುಗುಣಮಟ್ಟದಲ್ಲಿ 'ಮಧ್ಯಮ' ಶ್ರೇಣಿಯಲ್ಲಿದೆ. ಇದು ಉತ್ತರ ಭಾರತದ ನಗರಗಳ ತೀವ್ರ ಮಾಲಿನ್ಯಕ್ಕಿಂತ ಗಣನೀಯವಾಗಿ ಉತ್ತಮವಾಗಿದೆ. PM2.5 ಕಣಗಳ ಮಟ್ಟವು 99.78 µg/m³ ಹಾಗೂ PM10 ಮಟ್ಟವು 107 µg/m³ ರಷ್ಟಿದ್ದು, ಎರಡೂ ಸದ್ಯಕ್ಕೆ ಸಮಾನ್ಯವಾಗಿದೆ.
ಮುಂಜಾನೆಯ ವೇಳೆಯಲ್ಲಿ ಮಂಜು ಮತ್ತು ಇಬ್ಬನಿ ಆವರಿಸುವ ಸಾಧ್ಯತೆ ಹೆಚ್ಚಿದ್ದು, ಇದು ಸೂರ್ಯೋದಯದ ನಂತರದ ಮೊದಲ ಕೆಲವು ಗಂಟೆಗಳಲ್ಲಿ ಕಡಿಮೆಯಾಗಲಿದೆ. ಆದರೂ ಪ್ರಯಾಣದ ವೇಳೆ ಅಡ್ಡಿಯಾಗಬಹುದು ಎಂದು ಹೇಳಲಾಗಿದೆ. ಆರೋಗ್ಯದಲ್ಲಿ ಸಮಸ್ಯೆ ಇದ್ದವರು, ಆದಷ್ಟು ಈ ಸಂದರ್ಭದಲ್ಲಿ ಹೊರಹೋಗದಿದ್ದರೆ ಒಳ್ಳೆಯದು.
ಡಿಸೆಂಬರ್ ವಾತಾವರಣ
ಡಿಸೆಂಬರ್ ತಿಂಗಳು ಬೆಂಗಳೂರಿನಲ್ಲಿ ತಂಪಾದ ಮತ್ತು ಒಣ ಹವಾಮಾನದಿಂದ ಕೂಡಿರಲಿದೆ ಎಂದು ಹೇಳಲಾಗಿದೆ. ಆದರೆ ತಿಂಗಳ ಅಂತ್ಯದ ವೇಳೆಗೆ ತಾಪಮಾನವು ಸುಮಾರು 27°C ತಲುಪುವ ನಿರೀಕ್ಷೆಯಿದೆ. ಈ ಡಿಸೆಂಬರ್ನಲ್ಲಿ ಅಂದಾಜು 8 ದಿನ ಮಳೆಯಾಗಲಿದೆ ಎಂದು ವರದಿಯಾಗಿದೆ.
ಇನ್ನು ಮುಂದಿನ 2 ದಿನಗಳಲ್ಲಿ ಕರ್ನಾಟಕದಾದ್ಯಂತ ಬೆಳಗಾವಿ, ಬಾಗಲಕೋಟೆ, ವಿಜಯಪುರ, ರಾಯಚೂರು, ಬೀದರ್, ಕಲಬುರ್ಗಿ, ಯಾದಗಿರಿ ಜಿಲ್ಲೆಗಳಲ್ಲಿ ಶೀತ ಅಲೆಗಳು ಹೆಚ್ಚಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸದ್ಯ ರಾಜ್ಯದಲ್ಲಿ ಮಳೆ ಕಡಿಮೆಯಾಗಿದ್ದು, ಚಳಿ ವಾತಾವರಣ ಹೆಚ್ಚಾಗಿದೆ. ಅದರಲ್ಲೂ ಬೆಂಗಳೂರಿನಲ್ಲಿ ಬೆಳಗ್ಗೆ ಮನೆಯಿಂದ ಹೊರಗೆ ಹೋಗೋದೆ ಕಷ್ಟವಾಗಿಬಿಟ್ಟಿದೆ.
More From GoodReturns

Rapido Ownly: ರ್ಯಾಪಿಡೋದಿಂದ ಹೊಸ ಫುಡ್ ಡೆಲಿವರಿ ಆಪ್ ಲಾಂಚ್! ಏನಿದರ ವಿಶೇಷತೆ?

Karnataka Weather: ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Rain-Summer: ರಾಜ್ಯದಲ್ಲಿ ಮತ್ತೆ ವರುಣನ ಅಬ್ಬರ ಶುರು! ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Bengaluru Airport: ಇರಾನ್-ಇಸ್ರೇಲ್ ಯುದ್ಧ ಪರಿಣಾಮ ಬೆಂಗಳೂರು ಏರ್ಪೋರ್ಟ್ನಲ್ಲಿ 37 ವಿಮಾನಗಳು ರದ್ದು!

Karnataka Highway: ರಾಜ್ಯದ ಈ ಭಾಗಕ್ಕೆ ಹೈವೇ ಡಿಮ್ಯಾಂಡ್…ಕೇಂದ್ರಕ್ಕೆ ಮನವಿ ಮಾಡಿದ ಸಂಸದೆ ಪ್ರಭಾ ಮಲ್ಲಿಕಾರ್ಜುನ್!

Bengaluru Airport: ಬೆಂಗಳೂರು ಏರ್ಪೋರ್ಟ್ಗೂ ತಟ್ಟಿದ ಇಸ್ರೇಲ್-ಇರಾನ್ ವಾರ್ ಭೀತಿ! ಹಲವು ವಿಮಾನ ಹಾರಾಟ ರದ್ದು

Sugarcane Farmers: ಕರ್ನಾಟಕದ ಕಬ್ಬು ಬೆಳೆಗಾರರಿಗೆ ಗುಡ್ನ್ಯೂಸ್…ಸರ್ಕಾರದಿಂದ 300 ಕೋಟಿ ರೂ. ಪರಿಹಾರ ಬಿಡುಗಡೆ!

Bengaluru Metro: ಮೆಟ್ರೋ ದರ ಏರಿಕೆ ಬಿಸಿ, ಮತ್ತೆ ಖಾಸಗಿ ವಾಹನಗಳು ರಸ್ತೆಗೆ! ಹೊಸ ದರದಲ್ಲಿ ಎಷ್ಟು ಬದಲಾವಣೆ?

ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ವೇಗೆ ಇನ್ನು ಹೆಚ್ಚು ದಿನ ಕಾಯಬೇಕಿಲ್ಲ…ಆದಷ್ಟು ಬೇಗ 2 ಗಂಟೆಗಳ ಪ್ರಯಾಣ!



Click it and Unblock the Notifications