ಬೆಂಗಳೂರು, ಜೂನ್ 02: ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಸ್ವಿಡ್ಜರ್ಲೆಂಡ್ ಮೂಲದ ಪ್ರಮುಖ ಸಲಹಾ ಸಂಸ್ಥೆಯಾದ ಸ್ಮಡ್ಜಾ & ಸ್ಮಡ್ಜಾ ಆಯೋಜಿಸಿದ ಭಾರತದ ಮೊಟ್ಟಮೊದಲ ಜಾಗತಿಕ ಸ್ಟಾರ್ಟ್ ಅಪ್ ಸಮ್ಮೇಳನವಾದ "ಇಂಡಿಯಾ ಗ್ಲೋಬಲ್ ಇನ್ನೊವೇಶನ್ ಕನೆಕ್ಟ್" ಅನ್ನು ಉದ್ಘಾಟಿಸಿದರು. ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ), ಕ್ಯಾಟಮರನ್ ವೆಂಚರ್ಸ್ ಮತ್ತು ಟಾಟಾ ಡಿಜಿಟಲ್ನೊಂದಿಗಿನ ಸಹಭಾಗಿತ್ವದಲ್ಲಿ ಸಮ್ಮೇಳನ ಆಯೋಜಿಸಿವೆ.
ಕರ್ನಾಟಕದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಮಾತನಾಡಿ, ''ಸ್ಟಾರ್ಟ್ ಅಪ್ ಆವಿಷ್ಕಾರದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಫಾರ್ಚೂನ್ 500 ಕಂಪನಿಗಳ ಪೈಕಿ 400 ಕಂಪನಿಗಳಿಗೆ ಬೆಂಗಳೂರು ನೆಲೆಯಾಗಿದೆ ಮತ್ತು ವಿಶ್ವದ ಯಾವುದೇ ದೇಶವು ಅಂತಹ ಕಂಪನಿಗಳನ್ನು ಹೊಂದಿಲ್ಲ. "ಸ್ಟಾರ್ಟಪ್ ಕರ್ನಾಟಕಕ್ಕೆ ಹೊಸದಲ್ಲ ಮತ್ತು ಕರ್ನಾಟಕವು ಅಗ್ರ ರಾಜ್ಯಗಳಲ್ಲಿ ಒಂದು ಮಾತ್ರವಾಗಿರದೇ ಸ್ಟಾರ್ಟಪ್ಗಳಿಗೆ ಅಗ್ರ ತಾಣವಾಗಿದೆ" ಎಂದು ಹೇಳಿದರು.
"ಸ್ಟಾರ್ಟ್ಅಪ್ಗಳನ್ನು ಬೆಂಬಲಿಸುವಲ್ಲಿ ಕರ್ನಾಟಕ ಸರ್ಕಾರವು ಎಷ್ಟು ದೂರ ಬೇಕಾದರು ಹೋಗಲು ಸಿದ್ಧವಿದೆ. ನಾವು ಸ್ಪರ್ಧೆಯ ಬಗ್ಗೆ ಚಿಂತಿಸುವುದಿಲ್ಲ. ಇದು ನಮ್ಮನ್ನು ಮುಂದುವರಿಸುತ್ತದೆ ಮತ್ತು ಬೆಳೆಸುತ್ತದೆ. ನಾವು ಸ್ಪರ್ಧೆಯನ್ನು ವೇಗವರ್ಧಕವಾಗಿ ಪರಿವರ್ತಿಸುತ್ತೇವೆ" ಎಂದು ಗುರುವಾರ ಇಲ್ಲಿ ಇಂಡಿಯಾ ಗ್ಲೋಬಲ್ ಇನ್ನೋವೇಶನ್ ಕನೆಕ್ಟ್ ಎಂಬ ಎರಡು ದಿನಗಳ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿದ ನಂತರ ಸ್ಮಡ್ಜ್ & ಸ್ಮಡ್ಜ್ ಅಡ್ವೆಸರಿಯ ಅಧ್ಯಕ್ಷ ಕ್ಲೌಡ್ ಸ್ಮಾಡ್ಜಾ ಅವರ ಜತೆ ನಡೆಸಿದ ಸಂವಾದದ ವೇಳೆ ಸ್ಪಷ್ಟಪಡಿಸಿದರು.
ಉದ್ಘಾಟನಾ ಸಮಾರಂಭದಲ್ಲಿ ಹೂಡಿಕೆದಾರರು
ದೇಶದಲ್ಲೇ ಸ್ಟಾರ್ಟ್ ಅಪ್ ನೀತಿಯನ್ನು ಪರಿಚಯಿಸಿದ ಮೊದಲ ರಾಜ್ಯ ಕರ್ನಾಟಕ ಎಂದು ಹೇಳಿದ ಅವರು, ದೇಶಕ್ಕೆ ಸ್ವಾತಂತ್ರ್ಯ ಸಿಗುವ ಮೊದಲೇ ಕೈಗಾರಿಕೀಕರಣ, ಬ್ಯಾಂಕಿಂಗ್ ಮತ್ತು ಅನುಶೋಧನೆಯನ್ನು ಬೆಂಬಲಿಸಿದ ಮೈಸೂರು ಮಹಾರಾಜರು ಸ್ಟಾರ್ಟ್ ಅಪ್ ಕ್ರಾಂತಿಯ ಬೀಜಗಳನ್ನು ಬಿತ್ತಿದರು ಎಂದು ಬಣ್ಣಿಸಿದರು.
ಉದ್ಘಾಟನಾ ಸಮಾರಂಭದಲ್ಲಿ ಸಿಂಗಾಪುರ, ಇಸ್ರೇಲ್, ಸ್ವಿಡ್ಜರ್ಲೆಂಡ್, ಯುಎಸ್, ಜಪಾನ್, ಕೊರಿಯಾ ಮತ್ತು ಜರ್ಮನಿಯ ಅಂತಾರಾಷ್ಟ್ರೀಯ ಹೂಡಿಕೆದಾರರು, ಖಾಸಗಿ ಈಕ್ವಿಟಿ ಸಂಸ್ಥೆಗಳು, ಉದ್ಯಮಿಗಳು ಮತ್ತು ಅನುಶೋಧಕರು ಭಾಗವಹಿಸಿದ್ದರು. ಸಮಾರಂಭದಲ್ಲಿ ಹಾಜರಿದ್ದ ಕೆಲ ಪ್ರಮುಖರೆಂದರೆ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಅಧ್ಯಕ್ಷ ಬಿ ವಿ ನಾಯ್ಡು, ಕ್ಯಾಟಮಾರನ್ ವೆಂಚರ್ಸ್ ಅಧ್ಯಕ್ಷ ರಂಗನಾಥ್ ಎಮ್ ಡಿ, ಆಕ್ಸೆಲ್ ಪಾರ್ಟ್ನರ್ಸ್, ಇಂಡಿಯಾದ ಪ್ರಶಾಂತ್ ಪ್ರಕಾಶ್ ಮತ್ತು ಬಿಗ್ ಬಾಸ್ಕೆಟ್, ಇಂಡಿಯಾದ ಸಹ- ಸಂಸ್ಥಾಪಕರು ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರಿ ಮೆನನ್ ಉಪಸ್ಥಿತರಿದ್ದರು.
4 ನೇ ಕೈಗಾರಿಕಾ ವಿಕಾಸವು ಪ್ರಾರಂಭ
ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಸ್ಮಡ್ಜಾ & ಸ್ಮಡ್ಜಾ ಅಧ್ಯಕ್ಷ ಕ್ಲೌಡ್ ಸ್ಮಾಡ್ಜಾ, "ಭಾರತವು ಯಾವಾಗಲೂ ನನಗೆ ಉತ್ತಮ ಉದ್ಯಮಶೀಲ ಭರವಸೆಯ ದೇಶವಾಗಿದೆ. 4 ನೇ ಕೈಗಾರಿಕಾ ವಿಕಾಸವು ಪ್ರಾರಂಭವಾದಂತೆ, ಭಾರತವು ವಿಶೇಷವಾಗಿ ತನಗೆ ಮತ್ತು ಜಗತ್ತಿಗೆ ಪರಿಹಾರಗಳನ್ನು ಆವಿಷ್ಕರಿಸುವ ಸಾಮರ್ಥ್ಯದೊಂದಿಗೆ ವೇಗವರ್ಧಕದ ಪಾತ್ರವನ್ನು ವಹಿಸುತ್ತದೆ ಎಂದು ಒಪ್ಪಿಕೊಳ್ಳುವುದು ಸೂಕ್ತವಾಗಿದೆ. ಭಾರತವು ಈಗ ವಿಶ್ವದ ಮೂರನೇ ಅತಿದೊಡ್ಡ ಸ್ಟಾರ್ಟ್- ಅಪ್ ಪರಿಸರ ವ್ಯವಸ್ಥೆಯನ್ನು ಹೊಂದಿದೆ. ಇದರ ಪರಿಣಾಮವಾಗಿ, ಇಂಡಿಯಾ ಗ್ಲೋಬಲ್ ಇನ್ನೋವೇಶನ್ ಕನೆಕ್ಟ್ ಭಾರತದ ಸ್ಟಾರ್ಟ್- ಅಪ್ ಮತ್ತು ಅನುಶೋಧನೆಯ ಕಥೆಯು ಹೇಗೆ ಜಾಗತಿಕವಾಗುತ್ತಿದೆ ಎಂಬುದರ ಸಾಮರ್ಥ್ಯವನ್ನು ಇದು ಎತ್ತಿ ತೋರಿಸುತ್ತದೆ. ಪ್ರಪಂಚದ ಹೊಸ ಸಿಲಿಕಾನ್ ವ್ಯಾಲಿಯಾಗಿ ಹೊರಹೊಮ್ಮುವುದು ಉತ್ತಮ, ಸುರಕ್ಷಿತ ಮತ್ತು ಬಲವಾದ ನಾಳೆಗೆ ಕಾರಣವಾಗುತ್ತದೆ" ಎಂದು ಬಣ್ಣಿಸಿದರು.
2 ದಿನಗಳ ಈ ಸಮ್ಮೇಳನ
ಬೆಂಗಳೂರಿನ ಹೋಟೆಲ್ ಕಾನ್ರಾಡ್ನಲ್ಲಿ ನಡೆಯುತ್ತಿರುವ 2 ದಿನಗಳ ಈ ಸಮ್ಮೇಳನದಲ್ಲಿ ಭಾರತ ಮತ್ತು ಸಿಂಗಾಪುರ, ಇಸ್ರೇಲ್, ಸ್ವಿಡ್ಜರ್ಲೆಂಡ್, ಅಮೆರಿಕ, ಜಪಾನ್, ಕೊರಿಯಾ ಮತ್ತು ಜರ್ಮನಿಯಂತಹ ದೇಶಗಳಿಂದ ಆಗಮಿಸಿದ 100 ಕ್ಕೂ ಹೆಚ್ಚು ಭಾಷಣಕಾರರು ಭಾಗವಹಿಸುತ್ತಿದ್ದಾರೆ. 22 ಅಧಿವೇಶನಗಳಲ್ಲಿ ಪ್ಯಾನೆಲಿಸ್ಟ್ ಗಳು ತಾಂತ್ರಿಕ ಪಾಲುದಾರಿಕೆಗಳು, ಗ್ರೀನ್ಟೆಕ್, ಫಿನ್ಟೆಕ್, ಡೀಪ್ಟೆಕ್, ಎಡ್ಟೆಕ್, ವೆಬ್ 3.0, ಸೂಪರ್ ಆ್ಯಪ್ಗಳು ಮತ್ತು ಯುನಿಕಾರ್ನ್ ಗ್ರೋತ್ ಕಥೆಗಳು ಮತ್ತು ಪಾಲುದಾರಿಕೆಗಳ ಕುರಿತು ವಿಚಾರಗಳನ್ನು ಕೇಂದ್ರೀಕರಿಸುತ್ತಾರೆ.
ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್
ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಏಆಇಒ) ಕರ್ನಾಟಕ ಸರ್ಕಾರ ಮತ್ತು ಉದ್ಯಮದ ನಡುವಿನ ಜ್ಞಾನ ಸೇತುವೆಯಾಗಿ ಕಾರ್ಯನಿರ್ವಹಿಸಲು ವಿನ್ಯಾಸಗೊಳಿಸಲಾಗಿದ್ದು, ಕರ್ನಾಟಕದಲ್ಲಿ ಐಟಿ, ಬಿಟಿ ಮತ್ತು ಎಸ್ & ಟಿ ಕ್ಷೇತ್ರಗಳ ಬೆಳವಣಿಗೆ ಮತ್ತು ಹೂಡಿಕೆಗಳನ್ನು ವೇಗಗೊಳಿಸಲು ವಿನ್ಯಾಸಗೊಳಿಸಲಾಗಿದೆ. ಚಾಲನಾ ಸೀಟಿನಲ್ಲಿ ಕೈಗಾರಿಕೆಗಳೊಂದಿಗೆ, ಕೆಡಿಇಎಂ ಕರ್ನಾಟಕದ ಡಿಜಿಟಲ್ ಆರ್ಥಿಕತೆಯ ಅನಿಯಮಿತ ಸಾಮರ್ಥ್ಯವನ್ನು ಬಳಸಿಕೊಳ್ಳಲು ಕೆಲಸ ಮಾಡುತ್ತಿದೆ, ಬೆಳವಣಿಗೆಯನ್ನು ಬೆಂಗಳೂರಿನ ಆಚೆಗೆ ಉದಯೋನ್ಮುಖ ಕ್ಲಸ್ಟರ್ಗಳಿಗೆ ವಿಸ್ತರಿಸುವ ಮೂಲಕ ಮತ್ತು ಆ ಮೂಲಕ ರಾಜ್ಯದ ಜನರ ಜೀವನವನ್ನು ಪರಿವರ್ತಿಸುತ್ತದೆ. ಐಟಿ ಪರಿಸರ ವ್ಯವಸ್ಥೆಯು ಉದ್ಯಮದಲ್ಲಿನ ವೃತ್ತಿಪರರ ಜೀವನವನ್ನು ಮಾತ್ರ ಉನ್ನತೀಕರಿಸುತ್ತದೆ ಆದರೆ, ಇತರ ಕೈಗಾರಿಕೆಗಳಾದ್ಯಂತ ಲಕ್ಷಾಂತರ ಇತರ ಸಹಾಯಕ ಉದ್ಯೋಗಗಳಿಗೆ ಶಕ್ತಿ ನೀಡುತ್ತದೆ, ಹೀಗಾಗಿ ದೇಶದ ಒಟ್ಟಾರೆ ಆರ್ಥಿಕತೆಗೆ ಕೊಡುಗೆ ನೀಡುತ್ತದೆ.


Click it and Unblock the Notifications