ಬೆಂಗಳೂರು: ನಮ್ಮ ಮೆಟ್ರೋ (Namma Metro) ಪ್ರತಿಯೊಬ್ಬರಿಗೂ ಬೇಕಾದ ಅಗತ್ಯ ಸಾರಿಗೆ ವ್ಯವಸ್ಥೆ. ಬೆಲೆ ಏರಿಕೆ ಬಗ್ಗೆ ಎಷ್ಟೇ ವಿರೋಧ ವ್ಯಕ್ತವಾದರೂ, ಜನ ಮೆಟ್ರೋ ಬಳಸೋದನ್ನು ಮಾತ್ರ ಇನ್ನೂ ನಿಲ್ಲಿಸಿಲ್ಲ. ಪ್ರತಿದಿನ ಲಕ್ಷಗಟ್ಟಲೆ ಮಂದಿ ಈ ಮೆಟ್ರೋ ಮೂಲಕ ಪ್ರಯಾಣಿಸ್ತಾರೆ. ಗಂಟೆಗಟ್ಟಲೆ ಪ್ರಯಾಣ ಮಾಡಬೇಕಾದ ಅನಿವಾರ್ಯತೆಯ ನಡುವೆ, ಮೆಟ್ರೋ ಕೆಲವೇ ನಿಮಿಷಗಳಲ್ಲಿ ಜನರನ್ನು ಗಮ್ಯಸ್ಥಾನಕ್ಕೆ ಮುಟ್ಟುವಂತೆ ಮಾಡುತ್ತೆ. ಇದೇ ಕಾರಣದಿಂದ ನಮ್ಮ ಮೆಟ್ರೋ ಎಲ್ಲರಿಗು ಅಗತ್ಯವಾಗಿಬಿಟ್ಟಿದೆ. ಇದೀಗ ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL) ನಡೆಸುತ್ತಿರುವ ಮೆಟ್ರೋ ಕಾಮಗಾರಿಗಾಗಿ ಔಟರ್ ರಿಂಗ್ ರೋಡ್ನ (Outer Ring Road) 9ನೇ ಮೇನ್ ಜಂಕ್ಷನ್ ನಿಂದ 5ನೇ ಮೇನ್ವರೆಗಿನ ಸರ್ವಿಸ್ ರಸ್ತೆಯನ್ನು ಮುಂದಿನ 45 ದಿನಗಳ ಕಾಲ ಬಂದ್ ಮಾಡುವುದಾಗಿ ಸಂಚಾರಿ ಪೊಲೀಸರು ಸೂಚನೆ ನೀಡಿದ್ದಾರೆ. ಸಂಚಾರ ದಟ್ಟಣೆಯಂತಹ ಸಮಸ್ಯೆಗಳನ್ನು ಪರಿಹರಿಸುವ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪತ್ರದಲ್ಲಿ ಸೂಚನೆ ನೀಡಿದ್ದಾರೆ.

ಪೋಲೀಸರ ಪತ್ರದಲ್ಲಿ ಏನಿದೆ?
ಎಚ್ಎಸ್ಆರ್ ಲೇಔಟ್ ಸಂಚಾರ ಪೊಲೀಸರು ಎಕ್ಸ್ ನಲ್ಲಿ ಹೊರಡಿಸಿದ ಸಂಚಾರ ಸಲಹೆಯ ಪ್ರಕಾರ, ಔಟರ್ ರಿಂಗ್ ರೋಡ್ನ 9 ನೇ ಮೇನ್ ರೋಡ್ ಜಂಕ್ಷನ್ನಿಂದ 5 ನೇ ಮೇನ್ ರೋಡ್ ಜಂಕ್ಷನ್ವರೆಗಿನ ಸರ್ವಿಸ್ ರಸ್ತೆಯನ್ನು ಅಕ್ಟೋಬರ್ 6, 2025 ರಿಂದ 45 ದಿನಗಳವರೆಗೆ ಮುಚ್ಚಲಾಗುವುದು. ಹೆಚ್.ಎಸ್.ಆರ್ ಲೇಔಟ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಹೊರವರ್ತುಲ ರಸ್ತೆಯ 9ನೇ ಮುಖ್ಯರಸ್ತೆ ಜಂಕ್ಷನ್ನಿಂದ 5ನೇ ಮುಖ್ಯ ರಸ್ತೆ ಜಂಕ್ಷನ್ ವರೆಗೆ ಸರ್ವಿಸ್ ರಸ್ತೆಯಲ್ಲಿ ನಮ್ಮ ಮೆಟ್ರೋ ವಿಸ್ತರಣೆ ಕಾಮಗಾರಿ ಪ್ರಗತಿಯಲ್ಲಿರುವ ಕಾರಣ ಈ ನಿರ್ಧಾರ ಕೈಗೊಂಡಿರುವುದಾಗಿ ಬರೆದುಕೊಂಡಿದ್ದಾರೆ.
ಪರ್ಯಾಯ ಮಾರ್ಗ ಬಳಸಲು ಮನವಿ:
ಇನ್ನು ಈ 45 ದಿನಗಳಲ್ಲಿ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ ನೀಡಿದ್ದು, ಕಾಮಗಾರಿ ಮುಗಿಯುವ ವರೆಗೆ ಇಬ್ಬಲೂರ್ ಕಡೆಯಿಂದ ಬಂದು ಸಿಲ್ಕ್ ಬೋರ್ಡ್ ಜಂಕ್ಷನ್ ಕಡೆಗೆ ಸಂಚರಿಸುವ ವಾಹನ ಸವಾರರು 14ನೇ ಮುಖ್ಯ ರಸ್ತೆ ಫೈಓವರ್ ಮೂಲಕ ಮುಖ್ಯರಸ್ತೆಯಲ್ಲಿಯೇ 5ನೇ ಮುಖ್ಯರಸ್ತೆ ಜಂಕ್ಷನ್ ಗೆ ಸಾಗಿ ಅಥವಾ ಇತರ ಹೆಚ್.ಎಸ್.ಆರ್. ಲೇಔಟ್ ಒಳಭಾಗದ ರಸ್ತೆಗಳ ಮೂಲಕ ಸಾಗಿ ಸಿಲ್ಕ್ ಬೋರ್ಡ್ ಹಾಗು ಹೊಸೂರು ಮುಖ್ಯರಸ್ತೆ ಮೂಲಕ ಸಂಚರಿಸಬೇಕು ಎಂದು ಸೂಚನೆ ನೀಡಿದ್ದಾರೆ.
ಸಂಚಾರಿ ಇಲಾಖೆ ಮತ್ತು ಪೊಲೀಸ್ ಇಲಾಖೆಯ ಸೂಚನೆಯಂತೆ, ಕಾಮಗಾರಿಯ ಅವಧಿಯಲ್ಲಿ ವಾಹನ ಸವಾರರು ಪರ್ಯಾಯ ಮಾರ್ಗಗಳನ್ನು ಬಳಸಬೇಕು. ಇಬ್ಬಲೂರ್ ಕಡೆಯಿಂದ ಬಂದು ಸಿಲ್ಕ್ ಬೋರ್ಡ್ ಜಂಕ್ಷನ್ ಕಡೆಗೆ ಹೋಗುವ ವಾಹನಗಳು 14ನೇ ಮುಖ್ಯ ರಸ್ತೆ ಫೈಓವರ್ ಮೂಲಕ 5ನೇ ಮುಖ್ಯರಸ್ತೆ ಜಂಕ್ಷನ್ಗೆ ಸಾಗಬಹುದು. ಅಥವಾ, ಹೌಸ್ಹೋಲ್ ದಾರಿಗಳ ಮೂಲಕ ಒಳಭಾಗದ ರಸ್ತೆಗಳ ಮೂಲಕ ಸಿಲ್ಕ್ ಬೋರ್ಡ್ ಮತ್ತು ಹೊಸೂರು ಮುಖ್ಯರಸ್ತೆ ಮೂಲಕ ಸಂಚರಿಸುವಂತೆ ಸೂಚಿಸಲಾಗಿದೆ.
More From GoodReturns

Siddaramaiah: ಹೋಟೆಲ್ ಉದ್ಯಮಿಗಳ ಸಂಕಷ್ಟಕ್ಕೆ ಧ್ವನಿಯಾದ ಸಿಎಂ ಸಿದ್ದರಾಮಯ್ಯ; ಪತ್ರ ಬರೆದು ಮನವಿ

Hotel Bandh: ಬೆಂಗಳೂರಿಗೂ ತಟ್ಟಿದ ಯುದ್ಧದ ಬಿಸಿ; ಇಂದಿನಿಂದ ಹಲವು ಹೋಟೆಲ್ ಬಂದ್

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Bengaluru - Stock Market: ಷೇರು ಮಾರುಕಟ್ಟೆಯಲ್ಲಿ ಭಾರೀ ನಷ್ಟ; ಮನನೊಂದು ಬೆಂಗಳೂರಿನ ವ್ಯಕ್ತಿ ಆತ್ಮಹತ್ಯೆ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Bengaluru: ಬೆಂಗಳೂರಿಗೆ 5,000 ರೂ. ಕೋಟಿ ಪ್ರವಾಹ ಯೋಜನೆ, 41 ಕಿ.ಮೀ ಮೆಟ್ರೋ, 450 ಕಿ.ಮೀ ರಸ್ತೆ ಅಭಿವೃದ್ಧಿ!

Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಇರಲ್ಲ ಕರೆಂಟ್! ಎಲ್ಲೆಲ್ಲಿ ಗೊತ್ತಾ?

Bengaluru: ಬೆಂಗಳೂರು ಮೂಲಸೌಕರ್ಯ ಮತ್ತು ಸ್ಮಾರ್ಟ್ ಸಿಟಿ ಯೋಜನೆಗಳಿಗೆ 7000 ಕೋಟಿ ರೂ. ಹೂಡಿಕೆ!

Bengaluru Special Trains: ಮಾರ್ಚ್ 11 ರಿಂದ ಬೆಂಗಳೂರಿಗೆ ಬರಲಿದೆ ಮತ್ತೊಂದು ಸ್ಪೆಷಲ್ ರೈಲು! ಎಲ್ಲಿಂದ ಎಲ್ಲಿಗೆ?

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ



Click it and Unblock the Notifications