ಪ್ರಸ್ತುತ ಕೊರೊನಾ ವೈರಸ್ ಸಾಂಕ್ರಾಮಿಕದ ಹೊಸ ತಳಿ BF.7 ಕಾಣಿಸಿಕೊಂಡಿದ್ದು, ಜಾಗತಿಕವಾಗಿ ಮತ್ತೆ ಆರ್ಥಿಕ ಸ್ಥಿತಿ ಬಿಗಡಾಯಿಸುವ ಸಾಧ್ಯತೆಯಿದೆ. ಈಗಾಗಲೇ ಕೋವಿಡ್ ಸಂದರ್ಭದಲ್ಲಿ ಭಾರೀ ನಷ್ಟವನ್ನು ಅನುಭವಿಸಿರುವ ಏರ್ಲೈನ್ ಸಂಸ್ಥೆಗಳು ಈಗ ಮತ್ತೆ ನಿರ್ಬಂಧಕ್ಕೆ ಒಳಗಾಗುವ ಆತಂಕದಲ್ಲಿದೆ. ಈ ನಡುವೆ ಏರ್ ಇಂಡಿಯಾ ಎಕ್ಸ್ಪ್ರೆಸ್ ಯುಎಇಯಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ಕೋವಿಡ್ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಯುನೈಟೆಡ್ ಅರಬ್ ಎಮಿರೇಟ್ಸ್ನಿಂದ ಭಾರತಕ್ಕೆ ಆಗಮಿಸುವವರಿಗೆ ಏರ್ ಇಂಡಿಯಾ ಎಕ್ಸ್ಪ್ರೆಸ್ ಕೋವಿಡ್ ಮಾರ್ಗಸೂಚಿಯನ್ನು ಮಂಗಳವಾರ ಜಾರಿ ಮಾಡಿದೆ. ಈ ಮಾರ್ಗಸೂಚಿ ಪ್ರಕಾರ ಕೋವಿಡ್ ಲಸಿಕೆ ಪಡೆದಿರುವುದು ಕಡ್ಡಾಯವಾಗಿದೆ. ಮಾಸ್ಕ್ ಕೂಡಾ ಕಡ್ಡಾಯವಾಗಿದೆ.
ಎಲ್ಲ ಪ್ರಯಾಣಿಕರು ತಮ್ಮ ದೇಶದಲ್ಲಿ ಯಾವ ಕೋವಿಡ್ ಲಸಿಕೆಯನ್ನು ಅನುಮೋದನೆ ಮಾಡಿ ನೀಡಲಾಗುತ್ತಿದೆಯೋ ಹಾಗೂ ಎಷ್ಟು ಡೋಸ್ಗಳನ್ನು ಕಡ್ಡಾಯ ಮಾಡಲಾಗಿದೆಯೋ ಅಷ್ಟು ಡೋಸ್ ಅನ್ನು ಪಡೆದಿರಬೇಕು ಎಂದು ಉಲ್ಲೇಖಿಸಲಾಗಿದೆ. ಹಾಗೆಯೇ ಮಾಸ್ಕ್ ಧರಿಸುವಂತೆ ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆಯೂ ಸೂಚನೆ ನೀಡಲಾಗಿದೆ.
ಮಾರ್ಗಸೂಚಿಯಲ್ಲಿ ಬೇರೆ ಏನೇನಿದೆ?
"ಎಲ್ಲ ಪ್ರಯಾಣಿಕರು ತಮ್ಮ ದೇಶದಲ್ಲಿ ಎಷ್ಟು ಡೋಸ್ ಕಡ್ಡಾಯವಾಗಿದೆಯೋ ಅಷ್ಟು ಡೋಸ್ ಅನ್ನು ಪಡೆದಿರಬೇಕು. ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಅನ್ನು ಧರಿಸಬೇಕು. ವಿಮಾನದಲ್ಲಿ/ಪ್ರಯಾಣ ಮಾಡುವಾಗ, ಎಲ್ಲ ಎಂಟ್ರಿ-ಎಕ್ಸಿಟ್ಗಳಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು," ಎಂದು ಏರ್ ಇಂಡಿಯಾ ಎಕ್ಸ್ಪ್ರೆಸ್ ತನ್ನ ಸಾಮಾಜಿಕ ಜಾಲತಾಣ ಟ್ವಿಟ್ಟರ್ನ ಅಧಿಕೃತ ಖಾತೆಯಲ್ಲಿ ಟ್ವೀಟ್ ಮಾಡಿದೆ. ಮಾರ್ಗಸೂಚಿ ಪ್ರಕಾರ 12 ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಭಾರತಕ್ಕೆ ತಲುಪಿದ ಬಳಿಕ ರ್ಯಾಡಮ್ ಟೆಸ್ಟಿಂಗ್ ಇಲ್ಲ. ಆದದರೆ ಮಕ್ಕಳಲ್ಲಿ ಕೋವಿಡ್ ಸಂಬಂಧಿತ ಯಾವುದೇ ಲಕ್ಷಣಗಳು ಕಂಡುಬಂದರೆ, ಪರೀಕ್ಷೆಗೆ ಒಳಗಾಗಬೇಕಾಗುತ್ತದೆ. ಹಾಗೆಯೇ ಕೋವಿಡ್ ಕಂಡುಬಂದರೆ ಸರಿಯಾದ ಚಿಕಿತ್ಸೆಯನ್ನು ಪಡೆಯಬೇಕಾಗುತ್ತದೆ.
ಯಾವೆಲ್ಲ ದೇಶದವರಿಗೆ ಟೆಸ್ಟಿಂಗ್ ಕಡ್ಡಾಯ
ವಿಮಾನದ ಮೂಲಕ ಭಾರತದ ಆಗಮಿಸುವ ಜನರ ಶೇಕಡ 2ರಷ್ಟಾದರೂ ಜನರಿಗೆ ರ್ಯಾಡಮ್ ಟೆಸ್ಟಿಂಗ್ ಮಾಡಬೇಕು. ಭಾರತದಲ್ಲಿ ಕೋವಿಡ್ ಮತ್ತಷ್ಟು ಹರಡುವ ನಿಟ್ಟಿನಲ್ಲಿ ಈ ಕ್ರಮವನ್ನು ಕೈಗೊಳ್ಳಬೇಕು ನಾಗರಿಕ ವಿಮಾನಯಾನ ಸಚಿವಾಲಯ ಕಳೆದ ಗುರುವಾರ ತಿಳಿಸಿದೆ. ಇನ್ನು ಚೀನಾ, ಜಪಾನ್, ದಕ್ಷಿಣ ಕೊರಿಯಾ, ಹಾಂಗ್ ಕಾಂಗ್, ತೈಲ್ಯಾಂಡ್ನಿಂದ ಭಾರತಕ್ಕೆ ಆಗಮಿಸುವವರಿಗೆ ಕೋವಿಡ್ ಟೆಸ್ಟಿಂಗ್ ಕಡ್ಡಾಯಗೊಳಿಸಲಾಗಿದೆ.
ಏರ್ ಇಂಡಿಯಾ ಎಕ್ಸ್ಪ್ರೆಸ್ಗೆ ನಷ್ಟ
ಏರ್ ಇಂಡಿಯಾವು ಕಳೆದ 7 ವರ್ಷದಲ್ಲಿ ಮೊದಲ ಬಾರಿಗೆ ನಷ್ಟವನ್ನು ಕಂಡಿದೆ. ಹಣಕಾಸು ವರ್ಷ 2022ರಲ್ಲಿ 72.33 ಕೋಟಿ ರೂಪಾಯಿ ಏರ್ ಇಂಡಿಯಾದ ನಿವ್ವಳ ಲಾಭವಾಗಿದೆ. ಆದರೆ ಹಣಕಾಸು ವರ್ಷ 2021ರಲ್ಲಿ ನಿವ್ವಳ ಲಾಭವು 98.21 ಕೋಟಿ ರೂಪಾಯಿ ಆಗಿತ್ತು. 2022ರ ಜನವರಿಯಲ್ಲಿ ಏರ್ ಇಂಡಿಯಾ ಸಂಸ್ಥೆಯು ಟಾಟಾ ಗ್ರೂಪ್ ತೆಕ್ಕೆಗೆ ಸೇರಿದ್ದು ಖಾಸಗಿ ಸಂಸ್ಥೆಯಾಗಿ ಮಾರ್ಪಟ್ಟಿದೆ. ಆದರೆ ಏರ್ ಇಂಡಿಯಾ ಸಂಸ್ಥೆ ಕೋವಿಡ್ ಸಂದರ್ಭದಲ್ಲಿ ಭಾರೀ ನಷ್ಟವನ್ನು ಅನುಭಿಸಿದೆ
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications