ದೇಶಾದ್ಯಂತ ಈರುಳ್ಳಿ ಬೆಲೆ ಗಗನಕ್ಕೇರಿದೆ. ಒಂದೊಂದು ನಗರದಲ್ಲಿ ಒಂದೊಂದು ದರದಂತೆ ಬೆಲೆ ಏರಿಳಿತ ಕಾಣುತ್ತಿದೆ. ಆದರೆ ಬಿಹಾರದಲ್ಲಿ ಮಾತ್ರ ಒಂದು ಕಿಲೋ ಈರುಳ್ಳಿಗೆ 35 ರುಪಾಯಿ ಮಾತ್ರ. ಈರುಳ್ಳಿ ಕೊಳ್ಳಲು ಜನರು ಸರದಿ ಸಾಲಿನಲ್ಲಿ ನಿಂತಿದ್ದು, ರಕ್ಷಣೆಗಾಗಿ ಅಧಿಕಾರಿಗಳು ಹೆಲ್ಮೆಟ್ ಧರಿಸಿ ಈರುಳ್ಳಿ ವಿತರಿಸುತ್ತಿದ್ದಾರೆ.
ಬಿಹಾರದ ರಾಜ್ಯ ಸಹಕಾರಿ ಮಾರುಕಟ್ಟೆ ಕೇಂದ್ರದಲ್ಲಿ ಸರ್ಕಾರದ ಆದೇಶದಂತೆ ಈರುಳ್ಳಿಯನ್ನು ಕೆಜಿಗೆ 35 ರುಪಾಯಿಯಂತೆ ಮಾರಾಟ ಮಾಡಲಾಗುತ್ತಿದೆ. ದೇಶಾದ್ಯಂತ ಈರುಳ್ಳಿ ದರ ಗಗನಕ್ಕೇರಿದ್ದು, ಬಿಹಾರದ ಜನತೆಯು ನಿರಾಳತೆ ಎಂಬಂತೆ, ಸಹಕಾರಿ ಮಾರುಕಟ್ಟೆ ಕೌಂಟರ್ನಲ್ಲಿ ಕಳೆದ ವಾರದಿಂದ ಕಡಿಮೆ ಬೆಲೆಗೆ ಈರುಳ್ಳಿಯನ್ನು ಖರೀದಿಸುತ್ತಿದ್ದಾರೆ.

ಒಬ್ಬ ವ್ಯಕ್ತಿಯು ಇಲ್ಲಿ 2 ಕೆಜಿ ಈರುಳ್ಳಿ ಖರೀದಿಸಬಹುದು. ವಿವಾಹ ಕಾರ್ಯಕ್ರಮ ಆಗಿದ್ದಲ್ಲಿ ಆಮಂತ್ರಣ ಪತ್ರಿಕೆ ತೋರಿಸಿದರೆ ಆ ವ್ಯಕ್ತಿಗೆ 25 ಕೆಜಿ ಈರುಳ್ಳಿ ಖರೀದಿಸಬಹುದಾಗಿದೆ ಎಂದು ವರದಿಯಾಗಿದೆ.
ಕಡಿಮೆ ದರಕ್ಕೆ ಈರುಳ್ಳಿ ಮಾರಾಟ ಮಾಡುತ್ತಿರುವುದರಿಂದ ಜನರು ಈರುಳ್ಳಿ ಖರೀದಿಸಲು ಬಹುಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ ಮತ್ತು ಸರದಿ ಸಾಲಿನಲ್ಲಿ ನಿಂತಿದ್ದಾರೆ. ಈ ವೇಳೆ ಏನಾದರೂ ಕಾಲ್ತುಳಿತ ಇಲ್ಲವೇ ಕಲ್ಲು ತೂರಾಟ ನಡೆಯಬಹುದು ಎಂಬ ಭಯದಲ್ಲಿ ಮಾರಾಟಗಾರರು ಹೆಲ್ಮೆಟ್ ಧರಿಸಿ ಈರುಳ್ಳಿ ಮಾರಾಟ ಮಾಡುತ್ತಿದ್ದಾರೆ.
ನಾವು ನಮ್ಮ ಸುರಕ್ಷತೆಯ ದೃಷ್ಟಿಯಿಂದ ಹೆಲ್ಮೆಟ್ ಧರಿಸಿ ಬಂದಿದ್ದೇವೆ. ಅರ್ರಾದಲ್ಲಿ ನಿನ್ನೆ ಜನರು ಕಲ್ಲು ತೂರಾಟ ನಡೆಸಿದ್ದರು, ಇದರಿಂದ ಅನೇಕರು ಗಾಯಗೊಂಡಿದ್ದರು. ಆಡಳಿತ ಮಂಡಳಿ ಯಾವುದೇ ಭದ್ರತೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ' ಎಂದು ಅಧಿಕಾರಿ ರೋಹಿತ್ ಕುಮಾರ್ ಎಎನ್ಐಗೆ ತಿಳಿಸಿದ್ದಾರೆ.
'ನಾನು ಬೆಳಗ್ಗೆ 4 ಗಂಟೆಗೆ ಇಲ್ಲಿಗೆ ಬಂದು ಕ್ಯೂ ನಿಂತಿದ್ದೇನೆ. ಮಾರುಕಟ್ಟೆಯಲ್ಲಿ ಈರುಳ್ಳಿ ದರ ಕೆಜಿಗೆ 80 ರಿಂದ 100 ರುಪಾಯಿಗೆ ತಲುಪಿದೆ. ಆದರೆ ಈ ಮಳಿಗೆಗಳಲ್ಲಿ ಕೆಜಿಗೆ 35 ರುಪಾಯಿಯಂತೆ ಮಾರಾಟ ಮಾಡಲಾಗುತ್ತಿದೆ ಎಂದು ಈರುಳ್ಳಿ ಖರೀದಿಸಲು ಬಂದಿದ್ದ ಶೀಲಾ ದೇವಿ ಎಂಬ ಗ್ರಾಹಕಿ ಎಎನ್ಐಗೆ ಹೇಳಿದ್ದಾರೆ.
ದೇಶದ ಹಲವೆಡೆ ಈರುಳ್ಳಿ ಬೆಲೆಯಲ್ಲಿ ಸಾಕಷ್ಟು ಏರಿಕೆ ಕಾಣುತ್ತಿದೆ. ಅನೇಕ ನಗರಗಳಲ್ಲಿ ಕೆಜಿಗೆ 100 ರುಪಾಯಿ ದಾಖಲಾಗಿರುವುದು ವರದಿಯಾಗಿದೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications