ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತವನ್ನು ವಿಮರ್ಶೆ ಮಾಡಿದರೆ ಆ ನಂತರ ಅದರ ಪರಿಣಾಮ ಎದುರಿಸಬೇಕಾಗುತ್ತದೆ ಎಂಬ ಬಗ್ಗೆ ಭಾರತದ ಉದ್ಯಮ ವಲಯದಲ್ಲಿ ಆತಂಕ ಇದೆ ಎಂದು ಶತಕೋಟ್ಯಧಿಪತಿ- ಉದ್ಯಮಿ ರಾಹುಲ್ ಬಜಾಜ್ ಶನಿವಾರ ಹೇಳಿದ್ದಾರೆ. ಈ ರೀತಿ ಕಾರ್ಪೊರೇಟ್ ವಲಯದ ಪ್ರಮುಖರೊಬ್ಬರು ಹೀಗೆ ಸರ್ಕಾರದ ಬಗ್ಗೆ ಸಾರ್ವಜನಿಕವಾಗಿ ಅಭಿಪ್ರಾಯ ವ್ಯಕ್ತಪಡಿಸುತ್ತಿರುವುದು ವಿರಳ.
"ನಮ್ಮ ಕೈಗಾರಿಕಾ ವಲಯದ ಯಾವುದೇ ಸ್ನೇಹಿತರು ಈ ಬಗ್ಗೆ ಮಾತನಾಡಲ್ಲ. ಆದರೆ ನಾನು ಬಹಿರಂಗವಾಗಿ ಹೇಳುತ್ತೇನೆ" ಎಂದು ರಾಹುಲ್ ಬಜಾಜ್ ಮುಂಬೈನಲ್ಲಿ ಹೇಳಿದ್ದು, ಈ ಸಂದರ್ಭದಲ್ಲಿ ಪ್ರೇಕ್ಷಕ ವರ್ಗದಲ್ಲಿ ಕೇಂದ್ರ ಗೃಹ ಸಚಿವರೂ- ಪ್ರಧಾನಿ ಮೋದಿ ಪರಮಾಪ್ತರೂ ಆದ ಅಮಿತ್ ಶಾ ಹಾಜರಿದ್ದರು.
"ನೀವು ಉತ್ತಮ ಕೆಲಸ ಮಾಡುತ್ತಿದ್ದೀರಿ. ಆದರೆ ಅದರ ಹೊರತಾಗಿಯೂ ನಾವು ಬಹಿರಂಗವಾಗಿ ನಿಮ್ಮನ್ನು ವಿಮರ್ಶೆ ಮಾಡಿದರೆ ಅದನ್ನು ಮೆಚ್ಚಿಕೊಳ್ಳಬಹುದು ಎಂಬ ವಿಶ್ವಾಸ ನಮಗಿಲ್ಲ" ಎಂದು ಬಜಾಜ್ ಹೇಳಿದ್ದಾರೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಶುಕ್ರವಾರ ಮಾತನಾಡುತ್ತಾ, ಕೈಗಾರಿಕೋದ್ಯಮಿಗಳಿಂದ ನೀತಿ ನಿರೂಪಕರ ತನಕ ಮತ್ತು ಬ್ಯಾಂಕರ್ಸ್ ಗಳಿಗೆ ಕೂಡ ಭಯ ಮತ್ತು ಅಪನಂಬಿಕೆ ಕಾಡುತ್ತಿದೆ ಎಂದು ಹೇಳಿದ್ದರು.

ಎಂಬತ್ತೊಂದು ವರ್ಷದ ರಾಹುಲ್ ಬಜಾಜ್ ಅವರು ಬಜಾಜ್ ಆಟೋದ ಅಧ್ಯಕ್ಷರು. ರಾಹುಲ್ ಅವರ ತಾತ ಜಮ್ನಾಲಾಲ್ ಬಜಾ ಸ್ವಾತಂತ್ರ್ಯ ಹೋರಾಟಗಾರರು ಮತ್ತು ಮಹಾತ್ಮ ಗಾಂಧಿ ಆಪ್ತರಾಗಿದ್ದರು.
ನೀವು ಈ ಪ್ರಶ್ನೆ ಕೇಳಿದ ನಂತರ ಯಾರಾದರೂ ಹೆದರುತ್ತಾರೆ ಎಂಬ ಮಾತನ್ನು ಜನರು ನಂಬುತ್ತಾರೆ ಎಂದು ನನಗೆ ಅನಿಸುವುದಿಲ್ಲ ಎಂದು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅಮಿತ್ ಶಾ ಉತ್ತರ ನೀಡಿದ್ದಾರೆ. ಸರ್ಕಾರವು ಪಾರದರ್ಶಕವಾಗಿ ನಡೆಯುತ್ತಿದೆ. ಯಾವುದೇ ವಿರೋಧ ಪಕ್ಷವನ್ನೂ ನಾವು ಬೆದರಿಸುತ್ತಿಲ್ಲ ಎಂದಿದ್ದಾರೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications