ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರದಿಂದ ಕೇಂದ್ರ ಬಜೆಟ್ ಮಂಡಿಸಿದ ನಂತರ, ರಾಜ್ಯಸಭೆಯಿಂದ ಸದಸ್ಯ ಸುಬ್ರಮಣಿಯನ್ ಸ್ವಾಮಿ ಟ್ವಿಟ್ಟರ್ ನಲ್ಲಿ ಮಾಡಿದ ಪೋಸ್ಟ್ ಭಾರೀ ಸುದ್ದಿ ಆಗುತ್ತಿದೆ. ಬಿಜೆಪಿಯ ಸಂಸದ ಆಗಿರುವ ಸ್ವಾಮಿ, ಭಾರತದಲ್ಲಿನ ತೈಲ ಬೆಲೆಯನ್ನು ನೆರೆಯ ನೇಪಾಳ ಹಾಗೂ ಶ್ರೀಲಂಕಾದೊಂದಿಗೆ ಹೋಲಿಕೆ ಮಾಡಿದ್ದಾರೆ. ತಮ್ಮ ಅಭಿಪ್ರಾಯವನ್ನು ಮಂಡಿಸುವ ವಿಚಾರಕ್ಕೆ ಬಂದರೆ, ಸುಬ್ರಮಣಿಯನ್ ಸ್ವಾಮಿ ಯಾವ ಮುಲಾಜು ನೋಡದ ವ್ಯಕ್ತಿ.
ರಾಮನ ಭಾರತದಲ್ಲಿ ಪೆಟ್ರೋಲ್ ಲೀಟರ್ ಗೆ ರು. 93, ಸೀತೆಯ ನೇಪಾಳದಲ್ಲಿ ರು. 53 ಹಾಗೂ ರಾವಣನ ಲಂಕೆಯಲ್ಲಿ ರು. 51 ಎಂದು ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ದೇಶದಲ್ಲಿ ಏರಿಕೆ ಆಗುತ್ತಿರುವ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಬಗ್ಗೆ ಸುಬ್ರಮಣಿಯನ್ ಸ್ವಾಮಿ ಅಸಮಾಧಾನ ತುಂಬ ಸ್ಪಷ್ಟವಾಗುತ್ತದೆ.
ಈ ಮಧ್ಯೆ ಸತತ ಆರನೇ ದಿನ ಮೆಟ್ರೋ ನಗರಗಳಲ್ಲಿ ಪೆಟ್ರೋಲ್- ಡೀಸೆಲ್ ದರದಲ್ಲಿ ಯಾವ ಬದಲಾವಣೆಯೂ ಆಗಿಲ್ಲ. ದೆಹಲಿ ಹಾಗೂ ಮುಂಬೈನಲ್ಲಿ ಕ್ರಮವಾಗಿ ಪೆಟ್ರೋಲ್ ಲೀಟರ್ ಗೆ ರು. 86.30 ಹಾಗೂ ರು. 92.86 ಇದೆ. ದೆಹಲಿಯಲ್ಲಿ ಡೀಸೆಲ್ ಲೀಟರ್ ಗೆ ರು. 76.48 ಮತ್ತು ಮುಂಬೈನಲ್ಲಿ ರು. 83.30 ಇದೆ.

ಬಜೆಟ್ ನಲ್ಲಿ ತೈಲ ಬೆಲೆಯ ಮೇಲೆ ಕೃಷಿ ಮೂಲಸೌಕರ್ಯ ಮತ್ತು ಅಭಿವೃದ್ಧಿ ಸೆಸ್ ಹಾಕಲಾಗಿದೆ. ಆದರೆ ಇದರಿಂದ ಬೆಲೆ ಏರಿಕೆ ಆಗುವುದಿಲ್ಲ ಎಂದು ಹೇಳಲಾಗಿದೆ. "ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಏರಿಕೆ ಆಗಲ್ಲ. ಜನರ ಮೇಲೆ ಹೆಚ್ಚಿನ ಹೊರೆ ಆಗುವುದಿಲ್ಲ. ತೆರಿಗೆಯ ಮರು ಹೊಂದಾಣಿಕೆಗಾಗಿ ಸೆಸ್ ಹಾಕಲಾಗಿದೆ. ಸರ್ಕಾರದಿಂದ ಸುಂಕ ಕಡಿಮೆ ಮಾಡಲಾಗಿದೆ. ಹೊಸದಾಗಿ ಕೃಷಿ ಸೆಸ್ ಶುರು ಮಾಡಲಾಗಿದೆ," ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications