ಹೊಸ ವರ್ಷದಲ್ಲಿ ಜಿಎಸ್ಟಿ ಏರಿಕೆಯ ಪರಿಣಾಮದಿಂದಾಗಿ ಉಡುಪುಗಳ ಬೆಲೆಯು ಅಧಿಕ ಆಗಲಿದೆ ಎಂಬ ಬೇಸರದಲ್ಲಿದ್ದ ಗ್ರಾಹಕರಿಗೆ ಒಂದು ಸಿಹಿಸುದ್ದಿ ಇದೆ. ಜಿಎಸ್ಟಿ ಕೌನ್ಸಿಲ್ ಸಭೆಯಲ್ಲಿ ಉಡುಪುಗಳ ಮೇಲಿನ ಜಿಎಸ್ಟಿ ಏರಿಕೆಯನ್ನು ಸದ್ಯಕ್ಕೆ ಮುಂದೂಡಿಕೆ ಮಾಡುವ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ಜಿಎಸ್ಟಿ ಸಮಿತಿಯು ಶುಕ್ರವಾರ (ಡಿಸೆಂಬರ್ 31, 2021) ನಡೆದ ಸಭೆಯಲ್ಲಿ ಜವಳಿ ಮೇಲಿನ ಜಿಎಸ್ಟಿ ದರ ಶೇ 5ರಿಂದ 12ಕ್ಕೆ ಏರಿಕೆ ಮಾಡುವ ನಿರ್ಧಾರವನ್ನು ಮುಂದೂಡುವುದಕ್ಕೆ ಸರ್ವಾನುಮತದಿಂದ ಸಮ್ಮತಿ ನೀಡಿದೆ. ಈ ಬಗ್ಗೆ ಮುಂದಿನ ಜಿಎಸ್ಟಿ ಸಮಿತಿ ಸಭೆಯಲ್ಲಿ ಚರ್ಚೆ ನಡೆಸಲು ಕೂಡಾ ನಿರ್ಧಾರ ಮಾಡಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ಹಿಮಾಚಲ ಪ್ರದೇಶದ ಕೈಗಾರಿಕಾ ಸಚಿವ, ಬಿಕ್ರಮ್ ಸಿಂಗ್, "ಜಿಎಸ್ಟಿ ಕೌನ್ಸಿಲ್ ಜವಳಿ ಮೇಲಿನ ಜಿಎಸ್ಟಿ ದರವನ್ನು ಏರಿಕೆ ಮಾಡುವುದನ್ನು ಸದ್ಯಕ್ಕೆ ಮುಂದೂಡಿಕೆ ಮಾಡಿದೆ. ಕೌನ್ಸಿಲ್ ಈ ವಿಷಯವನ್ನು ಫೆಬ್ರವರಿ 2022 ರಲ್ಲಿ ತನ್ನ ಮುಂದಿನ ಸಭೆಯಲ್ಲಿ ಪರಿಶೀಲಿಸುತ್ತದೆ," ಎಂದು ತಿಳಿಸಿದ್ದಾರೆ.

ಜನವರಿ ಒಂದರಿಂದ ಉಡುಪುಗಳು ಹಾಗೂ ಪಾದರಕ್ಷೆಗಳ ಮೇಲಿನ ಜಿಎಸ್ಟಿಯು ಶೇಕಡ 5 ರಿಂದ ಶೇಕಡ 12 ಕ್ಕೆ ಏರಿಕೆ ಮಾಡಲು ನಿರ್ಧಾರ ಮಾಡಲಾಗಿತ್ತು. ಈಗ ಉಡುಪಿನ ಮೇಲಿನ ಜಿಎಸ್ಟಿ ಏರಿಕೆಯನ್ನು ಸದ್ಯಕ್ಕೆ ಕೈಬಿಡಲಾಗಿದೆ. ಇನ್ನು ಉಡುಪು ಮೇಲಿನ ಜಿಎಸ್ಟಿ ಏರಿಕೆಗೆ ವ್ಯಾಪಾರಸ್ಥರು ಭಾರೀ ವಿರೋಧ ವ್ಯಕ್ತಪಡಿಸಿದ್ದರು. ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟ (ಸಿಎಐಟಿ), "ಸರ್ಕಾರವು ಜಿಎಸ್ಟಿ ತೆರಿಗೆ ವ್ಯವಸ್ಥೆಯನ್ನು ಸರಳ ಮಾಡುವ ಬದಲಾಗಿ ಅದನ್ನು ಇನ್ನಷ್ಟು ಕಠಿಣ ಮಾಡುತ್ತಿದೆ," ಎಂದು ಹೇಳಿತ್ತು.
ಎಐಟಿ ರಾಷ್ಟ್ರೀಯ ಅಧ್ಯಕ್ಷ ಬಿ ಸಿ ಬಾರ್ತಿಯಾ ಹಾಗೂ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಖಂಡೇಲ್ವಾಲ್, "ಹತ್ತಿ ಜವಳಿ ಉದ್ಯಮದಲ್ಲಿ ಯಾವುದೇ ಕಠಿಣ ತೆರಿಗೆ ರಚನೆ ಇರಲಿಲ್ಲ. ಹಾಗಿರುವಾಗ ಜವಳಿ ಮೇಲೆ ಜಿಎಸ್ಟಿಯನ್ನು ಶೇಕಡ 12 ಕ್ಕೆ ಏಕೆ ಏರಿಕೆ ಮಾಡಲಾಗಿದೆ," ಎಂದು ಪ್ರಶ್ನಿಸಿದ್ದರು. ಹಾಗೆಯೇ "ರೊಟ್ಟಿ, ಬಟ್ಟೆ ಹಾಗೂ ಮನೆ ಜೀವನದ ಮೂರು ಮೂಲಭೂತ ವಿಷಯಗಳು. ಬೆಲೆ ಏರಿಕೆಯ ಪರಿಣಾಮದಿಂದಾಗಿ ಈಗಾಗಲೇ ಆಹಾರದ ಬೆಲೆಯು ಏರಿಕೆ ಆಗಿದೆ. ಮನೆ ಖರೀದಿಯು ಸಾಮಾನ್ಯ ಜನರಿಗೆ ಸಾಧ್ಯವಿಲ್ಲ. ಈಗ ಬಟ್ಟೆಯನ್ನು ಕೂಡಾ ಖರೀದಿಸಲು ಸಾಧ್ಯವಾಗದಂತೆ ಜಿಎಸ್ಟಿ ಕೌನ್ಸಿಲ್ ಮಾಡಿದೆ," ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications