ರೈತಪರ ಬಜೆಟ್ ಮಂಡಿಸುತ್ತೇನೆ: ಬಿ.ಎಸ್. ಯಡಿಯೂರಪ್ಪ

ಫೆಬ್ರವರಿ ತಿಂಗಳಿನಲ್ಲಿ ಕೇಂದ್ರ ಬಜೆಟ್ ಬಳಿಕ ಗುರುವಾರ (ಮಾರ್ಚ್ 05)ರಂದು ಕರ್ನಾಟಕದ ಬಜೆಟ್‌ಗೆ ರಾಜ್ಯದ ಜನತೆ ಎದುರು ನೋಡುತ್ತಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬೆಳಗ್ಗೆ 11 ಗಂಟೆಗೆ ರಾಜ್ಯ ಬಜೆಟ್ ಮಂಡಿಸಲಿದ್ದಾರೆ.

ಕಳೆದ ಸಾಲಿನ ಬಜೆಟ್ ಗಾತ್ರಕ್ಕಿಂತ ಈ ಬಾರಿ ಬಜೆಟ್ ಗಾತ್ರ ಮೀರುವ ನಿರೀಕ್ಷೆಯಿದೆ. ಕಳೆದ ಸಾಲಿನ ಬಜೆಟ್ ಗಾತ್ರ 2,34,153 ಕೋಟಿ ರುಪಾಯಿ ಇದ್ದು, ಹೊಸ ಬಜೆಟ್ ಗಾತ್ರ 2.50 ಲಕ್ಷ ಕೋಟಿ ದಾಟುವ ನಿರೀಕ್ಷೆ ಇದೆ.

ಈ ಹಿಂದೆ ಜೆಡಿಎಸ್-ಬಿಜೆಪಿ ಮೈತ್ರಿ ಸರ್ಕಾರದಲ್ಲೂ ಹಣಕಾಸು ಇಲಾಖೆಯನ್ನು ಯಶಸ್ವಿಯಾಗಿ ನಿರ್ವಹಿಸಿದ್ದ ಯಡಿಯೂರಪ್ಪ ಮಂಡಿಸಲಿರುವ 7ನೇ ಬಜೆಟ್ ಇದಾಗಿದೆ.

ರೈತಪರ ಬಜೆಟ್ ಮಂಡಿಸುತ್ತೇನೆ: ಬಿ.ಎಸ್. ಯಡಿಯೂರಪ್ಪ

''ರೈತಪರ ಬಜೆಟ್ ರೂಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಪ್ರತಿಪಕ್ಷಗಳು ಸಹಕಾರ ಕೊಡಬೇಕು. ಬಜೆಟ್ ಮೇಲಿನ ಚರ್ಚೆಗೆ ಒಂದು ತಿಂಗಳು ಅವಕಾಶವಿದೆ. ಕೃಷಿಯ ಅಗತ್ಯಗಳನ್ನು ಪೂರೈಸಲು ಶಕ್ತಿಮೀರಿ ಪ್ರಯತ್ನ ಪಟ್ಟಿದ್ದೇನೆ'' ಎಂದು ಬಜೆಟ್ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಆರ್ಥಿಕ ಹಿಂಜರಿತ ಮತ್ತು ಕೇಂದ್ರದಿಂದ ಬಾರದ ನಿರೀಕ್ಷಿತ ಅನುದಾನ ಮತ್ತು ವಿತ್ತೀಯ ಕೊರತೆಗಳ ಸವಾಲುಗಳ ಜೊತೆಗೆ ಜನಪ್ರಿಯ ಯೋಜನೆಗಳನ್ನು ಅನುದಾನ ಕಡಿಮೆ ಬಾರದೆನ್ನುವ ಒತ್ತಡವು ಅವರ ಮೇಲಿದೆ. ಇವೆಲ್ಲವನ್ನೂ ಹೇಗೆ ನಿರ್ವಹಿಸಲಿದ್ದಾರೆ ಎಂಬುದು ಪ್ರಶ್ನೆಯಾಗಿದೆ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+