ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1ರಂದು ಸೋಮವಾರ ಬೆಳಿಗ್ಗೆ 11 ಗಂಟೆಗೆ ಕೇಂದ್ರ ಬಜೆಟ್ ಅನ್ನು ಮಂಡಿಸಲಿದ್ದಾರೆ. ವಿವಿಧ ಕ್ಷೇತ್ರಗಳು ಸಾಕಷ್ಟು ನಿರೀಕ್ಷೆಗಳ ಜೊತೆಗೆ ಆತ್ಮನಿರ್ಭರ್ ಭಾರತ್ ಕೇಂದ್ರ ಬಜೆಟ್ನ ಪ್ರಮುಖ ವಿಷಯವಾಗಿದೆ.
ಸ್ವತಂತ್ರ ಭಾರತದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕೇಂದ್ರ ಬಜೆಟ್ ಪ್ರತಿಗಳನ್ನು ಮುದ್ರಿಸಲಿಲ್ಲ. ಸಾಮಾನ್ಯವಾಗಿ, ಬಜೆಟ್ ಕಾಗದವನ್ನು ಹಣಕಾಸು ಸಚಿವಾಲಯದ ಆಂತರಿಕ ಮುದ್ರಣಾಲಯದಲ್ಲಿ ಮುದ್ರಿಸಲಾಗುತ್ತದೆ. ಈ ಬಜೆಟ್ ಪ್ರತಿ ಮುದ್ರಿಸುವ ಹದಿನೈದು ದಿನಗಳ ಈ ಕಾರ್ಯದಲ್ಲಿ ಸುಮಾರು 100 ಉದ್ಯೋಗಿಗಳು ಭಾಗಿಯಾಗುತ್ತಿದ್ದರು. ಆದರೆ, ಇದೇ ಮೊದಲ ಬಾರಿಗೆ ಬಜೆಟ್ ಪ್ರತಿಯನ್ನು ಸರ್ಕಾರ ಮುದ್ರಿಸಿಲ್ಲ. ಕೋವಿಡ್ ಹಿನ್ನಲೆಯಲ್ಲಿ ಬಜೆಟ್ ಮುದ್ರಣಕ್ಕೆ ತಡೆ ನೀಡಲಾಗಿದೆ. ಬಜೆಟ್ ಮಂಡನೆ ವೇಳೆ ಕೂಡ ಸಂಸದರಿಗೆ ಹಾರ್ಡ್ ಕಾಪಿ ಬದಲು ಸಾಫ್ಟ್ ಕಾಪಿ ನೀಡಲು ನಿರ್ಧರಿಸಲಾಗಿದೆ.
ಬಜೆಟ್ ಸಂದರ್ಭದಲ್ಲಿ ಸಾಂಪ್ರದಾಯಿಕವಾಗಿ ಆಚರಿಸಿಕೊಂಡು ಬರಲಾಗುತ್ತಿರುವ ಹಲ್ವಾ (ಸಿಹಿ ಖಾದ್ಯ) ಸಮಾರಂಭ ಈ ಬಾರಿ ನಡೆಯುವುದಿಲ್ಲ. ಬಜೆಟ್ ಮುದ್ರಣ ಸಂದರ್ಭದಲ್ಲಿ ಬಜೆಟ್ ಪ್ರಕ್ರಿಯೆಯಲ್ಲಿ ಭಾಗಿಯಾಗುವ ಸಿಬ್ಬಂದಿಗಳಿಗೆ ಸಿಹಿ ಖಾದ್ಯ ವಿತರಿಸಲಾಗುತ್ತದೆ. ಈ ಬಾರಿ ಈ ಸಿಹಿ ಹಂಚುವ ಸಂಭ್ರಮವಿರುವುದಿಲ್ಲ.

ಜೊತೆಗೆ ಕೋವಿಡ್ ಮಾರ್ಗಸೂಚಿಗಳು ಇನ್ನು ಜಾರಿಯಲ್ಲಿರುವ ಹಿನ್ನಲೆ ಸಾಮಾಜಿಕ ಅಂತರದಂತಹ ಸುರಕ್ಷತಾ ನಿಯಮವನ್ನು ಕಾಪಾಡಲಾಗುವುದು. ಮೊದಲ ಬಾರಿಗೆ ಸಂಸತ್ ಸದಸ್ಯರು ಮೂರು ವಿಭಿನ್ನ ಸ್ಥಳಗಳಲ್ಲಿ ಕೂರಲಿದ್ದಾರೆ.
ಕೇಂದ್ರ ಬಜೆಟ್ 2021: ನೇರ ಪ್ರಸಾರ ವೀಕ್ಷಣೆ ಹೇಗೆ ?
ಕೇಂದ್ರ ಬಜೆಟ್ 2021 ಲೋಕಸಭಾ ಟಿವಿಯಲ್ಲಿ ಲೈವ್ ಪ್ರಸಾರವಾಗಲಿದೆ. ಯೂಟ್ಯೂಬ್ ಮತ್ತು ಟ್ವಿಟರ್ನಂತಹ ಅನೇಕ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳು ಬಜೆಟ್ ಪ್ರಸ್ತುತಿಯನ್ನು ಲೈವ್ ಆಗಿ ಪ್ರಸಾರ ಮಾಡುತ್ತವೆ.
ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 29 ರಂದು ತಮ್ಮ ಸಾಂಪ್ರದಾಯಿಕ ಭಾಷಣದಲ್ಲಿ ಈ ವರ್ಷದ ಬಜೆಟ್ ಹೇಗಿರುತ್ತದೆ ಎಂಬುದರ ಬಗ್ಗೆ ಸುಳಿವು ನೀಡಿದರು.
"ಬಹುಶಃ ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ ಈ ಬಜೆಟ್ ಅನ್ನು ನಾಲ್ಕು-ಐದು ಮಿನಿ ಬಜೆಟ್ಗಳ ಸರಣಿಯ ಭಾಗವಾಗಿ ನೋಡಲಾಗುವುದು ಎಂದು ನನಗೆ ವಿಶ್ವಾಸವಿದೆ" ಎಂದು ಸಂಸತ್ತಿನ ಬಜೆಟ್ ಅಧಿವೇಶನ ಪ್ರಾರಂಭವಾಗುವ ಮೊದಲು ಪ್ರಧಾನಿ ನರೇಂದ್ರ ಮೋದಿ ಮಾಧ್ಯಮಗಳಿಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications