ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶುಕ್ರವಾರ (ಜನವರಿ 29, 2021) ಸಂಸತ್ ನಲ್ಲಿ ವಾರ್ಷಿಕ ಆರ್ಥಿಕ ಸಮೀಕ್ಷೆ ಮಂಡಿಸಲಿದ್ದಾರೆ. ಸಂಶೋಧಕರು ಮತ್ತು ಭಾರತದ ಆರ್ಥಿಕತೆಯನ್ನು ಅನುಸರಿಸುವಂಥವರು 2021- 21ಕ್ಕೆ ಬೆಳವಣಿಗೆ ಅಂದಾಜು ಏನಿರಲಿದೆ ಎಂದು ಕುತೂಹಲದಿಂದ ಎದುರು ನೋಡುತ್ತಿದ್ದಾರೆ.
ಸಾಮಾನ್ಯವಾಗಿ ಕೇಂದ್ರ ಬಜೆಟ್ ಗೆ ಒಂದು ದಿನ ಮುಂಚೆ ಆರ್ಥಿಕ ಸಮೀಕ್ಷೆ (ಎಕನಾಮಿಕ್ ಸರ್ವೇ) ಮಂಡಿಸಲಾಗುತ್ತದೆ. ಆರ್ಥಿಕತೆಯ ಅಧಿಕೃತ ವರದಿಯಂತೆ ಇದು ಕಾರ್ಯ ನಿರ್ವಹಿಸುತ್ತದೆ. ಈ ವರ್ಷ ಹಣಕಾಸು ಸಚಿವೆ ಜನವರಿ 29ರಂದೇ ಸಂಸತ್ ನಲ್ಲಿ ಮಂಡನೆ ಮಾಡುತ್ತಾರೆ. ಅಂದರೆ, 2021- 22ನೇ ಸಾಲಿಗೆ ಫೆಬ್ರವರಿ 1ನೇ ತಾರೀಕಿನಂದು ಇರುವ ಬಜೆಟ್ ಗೆ ಎರಡು ದಿನ ಮೊದಲೇ ಆರ್ಥಿಕ ಸಮೀಕ್ಷೆ ತೆರೆದಿಡುತ್ತಾರೆ.
ಮುಖ್ಯ ಆರ್ಥಿಕ ಸಲಹೆಗಾರ ಕೃಷ್ಣಮೂರ್ತಿ ಸುಬ್ರಮಣಿಯನ್ ಮತ್ತು ತಂಡವು ಆರ್ಥಿಕ ಸಮೀಕ್ಷೆಯನ್ನು ಸಿದ್ಧಪಡಿಸಿದೆ. 2019ರಲ್ಲಿ ಮೊದಲ ಬಾರಿಗೆ ಆರ್ಥಿಕ ಸಮೀಕ್ಷೆ ಸಿದ್ಧಪಡಿಸಿದಾಗ ಸುಬ್ರಮಣಿಯನ್ ಅವರು 8% ಸುಸ್ಥಿರ ಗ್ರಾಸ್ ಡೊಮೆಸ್ಟಿಕ್ ಪ್ರಾಡೆಕ್ಟ್ (ಜಿಡಿಪಿ) ಬೆಳವಣಿಗೆ ಕಾರ್ಯಸೂಚಿ ಸಿದ್ಧಪಡಿಸಿದ್ದರು. ಪ್ರಧಾನಿ ಮೋದಿ ಅವರ ಆಕಾಂಕ್ಷೆಯಂತೆ 2024- 25ರ ಹೊತ್ತಿಗೆ ಭಾರತದ ಆರ್ಥಿಕತೆಯನ್ನು $ 5 ಟ್ರಿಲಿಯನ್ ಮಾಡುವ ನಿಟ್ಟಿನಲ್ಲಿ ಅದು ರೂಪಿಸಲಾಗಿತ್ತು.

ಆದರೆ, 2020ರಲ್ಲಿ ಭಾರತದ ಆರ್ಥಿಕತೆ ಮೇಲೆ ಕೊರೊನಾ ಬಿಕ್ಕಟ್ಟು ಭಾರೀ ಪರಿಣಾಮ ಬೀರಿತು. ಏಪ್ರಿಲ್ ನಿಂದ ಜೂನ್ ತ್ರೈಮಾಸಿಕದಲ್ಲಿ ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದಲ್ಲಿ 23.9% ಜಿಡಿಪಿ ಕುಸಿತ ಕಂಡಿತು. ನಲವತ್ತು ವರ್ಷಕ್ಕೂ ಹೆಚ್ಚು ಅವಧಿಯಲ್ಲಿ ಇದೇ ಮೊದಲ ಬಾರಿಗೆ ಜಿಡಿಪಿ ಇಂಥ ನಕಾರಾತ್ಮಕ ಬೆಳವಣಿಗೆ ದಾಖಲಿಸಿತು.
ಇನ್ನು ಜುಲೈನಿಂದ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ಕಳೆದ ವರ್ಷಕ್ಕೆ ಹೋಲಿಸಿದಲ್ಲಿ 7.5% ಕುಸಿತ ದಾಖಲಿಸಿತು. ಅಂದ ಹಾಗೆ ಆರ್ಥಿಕ ಸಮೀಕ್ಷೆ ಎಂಬುದು ಆರ್ಥಿಕತೆಯ ಸ್ಥಿತಿಗತಿ, ನೀತಿ ನಿರೂಪಣೆಯ ಸವಾಲುಗಳು ಹಾಗೂ ಸಾಧ್ಯತೆಗಳನ್ನು ತೆರೆದಿಡುವ ವರದಿ. ವಲಯಾಧಾರಿತ ನೋಟವನ್ನು ಅದು ತೆರೆದಿಡುತ್ತದೆ ಮತ್ತು ಸುಧಾರಣೆ ಕ್ರಮಗಳ ಬಗ್ಗೆ ಅಭಿಪ್ರಾಯವನ್ನು ತಿಳಿಸುತ್ತದೆ.
ಭವಿಷ್ಯದ ನೀತಿ ನಡೆಗಳ ನೋಟವನ್ನೂ ಇದು ಒಳಗೊಂಡಿರುತ್ತದೆ. ಈ ಸಮೀಕ್ಷೆಯು ಆರ್ಥಿಕ ಬೆಳವಣಿಗೆ ಅಂದಾಜು, ಆರ್ಥಿಕತೆ ಏಕೆ ವೇಗವಾಗಿ ವಿಸ್ತರಣೆ ಆಗುತ್ತದೆ ಅಥವಾ ಕುಗ್ಗುತ್ತದೆ ಎಂಬುದಕ್ಕೆ ಕಾರಣಗಳು, ಕೆಲವು ಸಲ ಬಲವಂತವಾಗಿ ಕೆಲವು ನಿರ್ದಿಷ್ಟ ಸುಧಾರಣೆ ಕ್ರಮಗಳ ಬಗ್ಗೆ ತಿಳಿಸುತ್ತದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications