ಫೆಬ್ರವರಿ 1ರಂದು ಕೇಂದ್ರ ಸರ್ಕಾರವು ತನ್ನ ಎರಡನೇ ಅವಧಿಯ ಮೂರನೇ ಬಜೆಟ್ ಅನ್ನು ಮಂಡಿಸಲಿದೆ. ಕೋವಿಡ್-19 ಲಾಕ್ಡೌನ್ನಿಂದಾಗಿ ಆರ್ಥಿಕ ವ್ಯವಸ್ಥೆಯು ಹಳಿ ತಪ್ಪಿತ್ತು.ಹೀಗಾಗಿ ಈ ಬಾರಿಯ ಕೇಂದ್ರ ಬಜೆಟ್ ಹಿಂದೆಂದೂ ಕಾಣದ ರೀತಿಯಲ್ಲಿ ಸಾಕಷ್ಟು ನಿರೀಕ್ಷೆಗಳನ್ನು ಹೆಚ್ಚಿಸಿದೆ. ಇದರ ಜೊತೆಗೆ ಕೆಲವು ಅಗತ್ಯ ವಸ್ತುಗಳ ಮೇಲಿನ ಕಸ್ಟಮ್ ಸುಂಕವನ್ನು ಕಡಿಮೆ ಮಾಡಬಹುದು ಎಂದು ನಂಬಲಾಗಿದೆ.
ಹಿಂದೂಸ್ತಾನ್ ಟೈಮ್ಸ್ ಮೂಲಗಳನ್ನು ಉಲ್ಲೇಖಿಸಿ, ಈ ಬಾರಿ ಬಜೆಟ್ನಲ್ಲಿ ಮೋದಿ ಸರ್ಕಾರವು ಪೀಠೋಪಕರಣಗಳ ಕಚ್ಚಾ ವಸ್ತುಗಳು, ತಾಮ್ರ, ಕೆಲವು ರಾಸಾಯನಿಕ, ಟೆಲಿಕಾಂ ಉಪಕರಣಗಳು, ರಬ್ಬರ್ ಉತ್ಪನ್ನಗಳು ಮುಂತಾದ ಕೆಲವು ವಸ್ತುಗಳ ಮೇಲಿನ ಕಸ್ಟಮ್ ಸುಂಕವನ್ನು ಕಡಿಮೆ ಮಾಡಿದೆ.
ದೇಶೀಯ ಉತ್ಪನ್ನಗಳನ್ನು ಹೆಚ್ಚಿಸುವುದು ಮತ್ತು ಅವುಗಳನ್ನು ಹೆಚ್ಚು ಹೆಚ್ಚು ರಫ್ತು ಮಾಡುವುದು ಈ ನಿರ್ಧಾರದ ಉದ್ದೇಶವಾಗಿದೆ. ಇದಲ್ಲದೆ, ವಜ್ರ, ರಬ್ಬರ್ ಸರಕುಗಳು, ಚರ್ಮದ ಬಟ್ಟೆಗಳು, ರತ್ನಗಂಬಳಿಗಳು ಸೇರಿದಂತೆ ಸುಮಾರು 20 ಉತ್ಪನ್ನಗಳ ಆಮದು ಸುಂಕವನ್ನು ಕಡಿಮೆ ಮಾಡಲು ಸರ್ಕಾರ ಚಿಂತಿಸುತ್ತಿದೆ.

ಮತ್ತೊಂದೆಡೆ, ಹಾರ್ಡ್ ಬೋರ್ಡ್ ಮುಂತಾದ ಆಯ್ದ ಕಚ್ಚಾ ವಸ್ತುಗಳಿಂದ ಕಸ್ಟಮ್ ಸುಂಕವನ್ನು ತೆಗೆದುಹಾಕಬಹುದು. ದೇಶದ ಪೀಠೋಪಕರಣ ರಫ್ತು ತೀರಾ ಕಡಿಮೆ (ಸುಮಾರು ಒಂದು ಪ್ರತಿಶತ), ಆದರೆ ಚೀನಾ ಮತ್ತು ವಿಯೆಟ್ನಾಂನಂತಹ ದೇಶಗಳು ಈ ವಲಯದಲ್ಲಿ ಅಗ್ರಸ್ಥಾನದಲ್ಲಿವೆ. ಅದೇ ಸಮಯದಲ್ಲಿ, ಕೇಂದ್ರ ಸರ್ಕಾರವು ದೇಶೀಯ ಉತ್ಪಾದನೆಯನ್ನು ಉತ್ತೇಜಿಸಲು ಈಗಾಗಲೇ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ,
ಉದಾಹರಣೆಗೆ ಹವಾನಿಯಂತ್ರಣ ಮತ್ತು ಎಲ್ಇಡಿ ದೀಪಗಳು ಸೇರಿದಂತೆ ಅನೇಕ ಕ್ಷೇತ್ರಗಳಿಗೆ ಉತ್ಪಾದನಾ-ಸಂಬಂಧಿತ ಪ್ರೋತ್ಸಾಹಕ ಯೋಜನೆ (ಪಿಎಲ್ಐ) ಪ್ರಾರಂಭಿಸಲಾಗಿದೆ. ಈ ಎಲ್ಲ ನಿರ್ಧಾರಗಳ ಉದ್ದೇಶ ಸ್ವಾವಲಂಬಿ ಭಾರತ ಯೋಜನೆಯನ್ನು ಮತ್ತಷ್ಟು ಉತ್ತೇಜಿಸುವುದು ಆಗಿದೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications