ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಫೆಬ್ರವರಿ 1 ರಂದು 2021-22ರ ಹಣಕಾಸು ವರ್ಷದ ಸಾಮಾನ್ಯ ಬಜೆಟ್ ಅನ್ನು ಮಂಡಿಸಲಿದ್ದಾರೆ. ಕೊರೊನಾವೈರಸ್ನಿಂದಾಗಿ ಆರ್ಥಿಕತೆಯ ಮಂದಗತಿಯು ಬಹುತೇಕ ಎಲ್ಲಾ ಕ್ಷೇತ್ರಗಳ ಮೇಲೆ ಪರಿಣಾಮ ಬೀರಿದೆ. ಇದು ಲಕ್ಷಾಂತರ ಉದ್ಯೋಗ ನಷ್ಟಕ್ಕೂ ಕಾರಣವಾಗಿದೆ.
ಕೋವಿಡ್-19 ಲಾಕ್ಡೌನ್ ಜನರ ಗಳಿಕೆಯ ಮೇಲೆ ಸಾಕಷ್ಟು ಪರಿಣಾಮವನ್ನು ಬೀರಿದೆ. ಇಂತಹ ಸಂದರ್ಭದಲ್ಲಿ ಕೇಂದ್ರ ಬಜೆಟ್ ಕುರಿತು ಸಾಮಾನ್ಯ ಜನರು ಸರ್ಕಾರದಿಂದ 5 ವಿಶೇಷ ನಿರೀಕ್ಷೆಗಳನ್ನು ಹೊಂದಿದ್ದಾರೆ.
ಆದಾಯ ತೆರಿಗೆ ವಿನಾಯಿತಿ
ಪ್ರತಿ ವರ್ಷದ ಬಜೆಟ್ನಲ್ಲೂ ಜನ ಸಾಮಾನ್ಯ ಆಶಯ ಆದಾಯ ತೆರಿಗೆ ವಿನಾಯಿತಿ ಆಗಿರುತ್ತದೆ. ಕಳೆದ ಬಜೆಟ್ನಲ್ಲಿ ಹೊಸ ವೈಯಕ್ತಿಕ ಆದಾಯ ತೆರಿಗೆ ನಿಯಮವನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪರಿಚಯಿಸಿಸದರು. ತೆರಿಗೆ ಮಿತಿಯನ್ನು 2.5 ಲಕ್ಷದಿಂದ 5 ಲಕ್ಷ ರೂಪಾಯಿಗೆ ಹೆಚ್ಚಿಸುವುದಾಗಿ ಆಶಿಸಿದ್ದಾರೆ.
ಆದರೆ ಈ ಬಾರಿ ಕೊರೊನಾದಿಂದ ಆಗಿರುವ ಆರ್ಥಿಕ ನಷ್ಟದ ನಡುವೆ ಸರ್ಕಾರ ಮತ್ತಷ್ಟು ವಿನಾಯಿತಿ ನೀಡಲು ಹೋದರೆ ನಷ್ಟವಾಗಬಹುದು. ಹೀಗಾಗಿ ಸರ್ಕಾರ ಇದಕ್ಕೆ ಪ್ರಧಾನ್ಯತೆ ನೀಡದ ಇರಬಹುದು ಎಂಬುದು ಆರ್ಥಿಕ ತಜ್ಞರ ಅಭಿಪ್ರಾಯವಾಗಿದೆ.
ವರ್ಕ್ ಫ್ರಮ್ ಹೋಮ್ ವಿನಾಯಿತಿ
ಮನೆಯಿಂದ ಕೆಲಸ ಮಾಡುವ ಉದ್ಯೋಗಿಗಳು ಕಚೇರಿ ರೀತಿಯ ವ್ಯವಸ್ಥೆ ಮಾಡಿಕೊಳ್ಳಲು ಸಾಕಷ್ಟು ಹಣವನ್ನು ಖರ್ಚು ಮಾಡಬೇಕಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಅಂತಹ ಜನರು ಈ ಬಜೆಟ್ನಿಂದ ಸ್ವಲ್ಪ ಪರಿಹಾರವನ್ನು ನಿರೀಕ್ಷಿಸುತ್ತಿದ್ದಾರೆ.
ಸೆಕ್ಷನ್ 80 ಸಿಸಿಡಿ (1 ಬಿ) ಅಡಿಯಲ್ಲಿ ಕಡಿತ
ಸೆಕ್ಷನ್ 80 ಸಿ ಅಡಿಯಲ್ಲಿ ಗರಿಷ್ಠ 1.5 ಲಕ್ಷ ರೂ.ಗಳ ಕಡಿತದ ಮೇಲೆ ಕ್ಲೈಮ್ ಪಡೆಯಬಹುದು. ಈ ಕಡಿತವು ಜೀವ ವಿಮಾ ಪ್ರೀಮಿಯಂ ಪಾವತಿ, ಗೃಹ ಸಾಲಗಳ ಪ್ರಿನ್ಸಿಪಲ್ ಅಮೌಂಟ್ ಹಾಗೂ ಬೋಧನಾ ಶುಲ್ಕವನ್ನು ಒಳಗೊಂಡಿರುತ್ತದೆ. 1.5 ಲಕ್ಷ ರೂಪಾಯಿಗಳ ಸೀಲಿಂಗ್ ಅನ್ನು ಕೊನೆಯದಾಗಿ 2014-15ನೇ ಹಣಕಾಸು ವರ್ಷದಲ್ಲಿ ಪರಿಷ್ಕರಿಸಲಾಯಿತು ಮತ್ತು ಮೇಲ್ಮುಖವಾದ ಪರಿಷ್ಕರಣೆ ಮಾಡಿ ಬಹಳ ಸಮಯ ಕಳೆದಿದೆ. ಇದು ಸಾಮಾನ್ಯ ಜನರ ಬಹುದಿನಗಳ ಬೇಡಿಕೆಯಾಗಿದ್ದು, ಈ ಮಿತಿಯನ್ನು ಕನಿಷ್ಠ 2.5 ಲಕ್ಷಕ್ಕೆ ಏರಿಸಬಹುದು ಎಂಬುದು ಜನರ ಆಶಯವಾಗಿದೆ.
ಆರೋಗ್ಯ ವಿಮೆಗಳಿಗೆ ತೆರಿಗೆ ವಿನಾಯಿತಿ
ಕೋವಿಡ್-19 ಬಂದ ಬಳಿಕ ಆರೋಗ್ಯ ವಿಮಾ ಉತ್ಪನ್ನಗಳಿಗೆ ಹೆಚ್ಚಿನ ಅವಶ್ಯಕತೆ ಇದೆ ಎಂದು ಸಾಬೀತುಪಡಿಸಿದೆ. ಇಲ್ಲಿಯವರೆಗೆ ಅವುಗಳನ್ನು ಒಂದು ಆಯ್ಕೆಯಾಗಿ ಪರಿಗಣಿಸಲಾಗಿದೆ. ಅನೇಕ ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ಆರೋಗ್ಯ ವಿಮೆಯನ್ನು ಕಡ್ಡಾಯಗೊಳಿಸಿವೆ. ಇದನ್ನು ಗಮನದಲ್ಲಿಟ್ಟುಕೊಂಡು, ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 80 ಡಿ ಯ ಗರಿಷ್ಠ ಮಿತಿಯನ್ನು ಹೆಚ್ಚಿಸುವ ಬಗ್ಗೆಯೂ ಸರ್ಕಾರ ಕೆಲವು ನಿರ್ಧಾರ ತೆಗೆದುಕೊಳ್ಳಬಹುದು ಎಂದು ನಿರೀಕ್ಷಿಸಬಹುದು.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications