ಕರ್ನಾಟಕದಲ್ಲಿ ಭಾನುವಾರ (ಜನವರಿ 30) ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ, ಕಾಫಿ, ಮೆಣಸು ಹಾಗೂ ಏಲಕ್ಕಿ ಮಾರುಕಟ್ಟೆ ದರ ಕ್ವಿಂಟಾಲ್ ಅಥವಾ ಕೆಜಿಗೆ ಎಷ್ಟಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ. ಈ ಬಾರಿ ಬಜೆಟ್ ಅಧಿವೇಶನದಲ್ಲಿ ವಾಣಿಜ್ಯ ಬೆಲೆಗಳಿಗೆ ಮುಖ್ಯವಾಗಿ ಕಾಫಿ, ಏಲಕ್ಕಿ, ಮೆಣಸು ಬೆಳೆಗಾರರು ತಮ್ಮ ಬೇಡಿಕೆ ಈಡೇರಲಿದೆ ಎಂಬ ನಿರೀಕ್ಷೆಯಲ್ಲಿದ್ದಾರೆ.
ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ನೈಟ್ ಕರ್ಫ್ಯೂ, ವಾರಾಂತ್ಯದ ಕರ್ಫ್ಯೂ ತೆರವುಗೊಳಿಸಲಾಗಿದೆ. ತಮಿಳುನಾಡಿನಲ್ಲಿ ಭಾನುವಾರದಂದು ಮಾತ್ರ ಸಂಪೂರ್ಣ ಲಾಕ್ ಡೌನ್ ಇದೆ. ಹೀಗಾಗಿ ಕೆಲವು ಹಣ್ಣು ತರಕಾರಿ ಸಾರಿಗೆ ಸಂಪರ್ಕ ವ್ಯತ್ಯಯ ಉಂಟಾಗಿ, ಬೆಲೆ ವ್ಯತ್ಯಾಸ ಉಂಟಾಗಬಹುದು. ಸಗಟು ಮಾರುಕಟ್ಟೆ ದರದಲ್ಲಿ ಏರಿಳಿತ ಇನ್ನೂ ಮುಂದುವರೆದಿದೆ. ಆದರೆ, ಓಮಿಕ್ರಾನ್ ಭೀತಿ ನಡುವೆ, ಮಿಕ್ಕ ವಾಣಿಜ್ಯ ಬೆಳೆಗಳ ದರ ಸ್ಥಿರವಾಗಿದೆ.
ಬಜೆಟ್ ಅಧಿವೇಶನ ಜನವರಿ 31 ರಂದು ಆರಂಭವಾಗಲಿದ್ದು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1 ರಂದು ವಾರ್ಷಿಕ ಬಜೆಟ್ ಮಂಡಿಸಲಿದ್ದಾರೆ. ಭಾರತದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1, 2022 ರಂದು ತಮ್ಮ ನಾಲ್ಕನೇ ಕೇಂದ್ರ ಬಜೆಟ್ ಅನ್ನು ಘೋಷಿಸಲಿದ್ದಾರೆ. 2022 ರ ಬಜೆಟ್ ಹಲವಾರು ನಿರೀಕ್ಷೆಗಳನ್ನು ಹೊಂದಿದೆ. ಕೃಷಿ, ಆರೋಗ್ಯ ಮತ್ತು ರಿಯಲ್ ಎಸ್ಟೇಟ್ ಅಥವಾ ಉದ್ಯಮಿಗಳು ಮತ್ತು ಸಂಬಳ ವೃತ್ತಿಪರರಂತಹ ವ್ಯಕ್ತಿಗಳಿಗೆ ಈ ಬಜೆಟ್ ಮೇಲೆ ಹಲವಾರು ನಿರೀಕ್ಷೆಗಳು ಇದೆ.
ಕರ್ನಾಟಕದ ವಿವಿಧ ಪಟ್ಟಣಗಳ ಎಪಿಎಂಸಿ ಹಾಗೂ ಸ್ಥಳೀಯ ಮಾರುಕಟ್ಟೆಗಳ ಸಂಗ್ರಹ ಅಂಕಿ ಅಂಶ ಇಲ್ಲಿ ಸಿಗಲಿದೆ.



Click it and Unblock the Notifications