ನಾನು ಕೂಡಾ ಮಧ್ಯಮ ವರ್ಗಕ್ಕೆ ಸೇರಿದವಳು, ನನಗೆ ಮಧ್ಯಮ ವರ್ಗದ ಜನರಲ್ಲಿ ಇರುವ ಒತ್ತಡ ಅರ್ಥವಾಗುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಆರ್ಆರ್ಎಸ್ನ ಪಂಚಜನ್ಯ ಮ್ಯಾಗಜೀನ್ನ ಕಾರ್ಯಕ್ರಮದಲ್ಲಿ ಮಾತನಾಡಿ ಕೇಂದ್ರ ವಿತ್ತ ಸಚಿವೆ ತಾನು ಮಧ್ಯಮ ವರ್ಗದವಳು ಎಂದು ಹೇಳಿಕೊಂಡಿದ್ದಾರೆ.
ಮಧ್ಯಮ ವರ್ಗದ ಮೇಲೆ ಬಿಜೆಪಿ ಸರ್ಕಾರ ಯಾವುದೇ ಹೆಚ್ಚುವರಿ ತೆರಿಗೆಯನ್ನು ವಿಧಿಸಿಲ್ಲ ಎಂದು ಕೂಡಾ ಈ ಸಂದರ್ಭದಲ್ಲಿ ಸೀತಾರಾಮನ್ ತಿಳಿಸಿದ್ದಾರೆ. ಫೆಬ್ರವರಿ ಒಂದರಂದು ಕೇಂದ್ರ ಬಜೆಟ್ ಅನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಲಿದ್ದಾರೆ. ಮಧ್ಯಮ ವರ್ಗವು ತೆರಿಗೆ ವಿನಾಯಿತಿ ಹೆಚ್ಚಳ ಮೊದಲಾದ ತೆರಿಗೆ ಸಂಬಂಧಿತ ಬೇಡಿಕೆಯನ್ನು, ನಿರೀಕ್ಷೆಯನ್ನು ಹೊಂದಿದೆ. ಈ ನಿಟ್ಟಿನಲ್ಲಿ ಸಚಿವೆ ನೀಡಿದ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ.
"ನಾನು ಕೂಡಾ ಮಧ್ಯಮ ವರ್ಗಕ್ಕೆ ಸೇರಿದವಳು. ಹಾಗಿರುವಾಗ ನಾನು ಮಧ್ಯಮ ವರ್ಗದ ಮೇಲೆ ಎಂತಹ ಒತ್ತಡ ಇದೆ ಎಂಬುವುದನ್ನು ತಿಳಿದಿದ್ದೇನೆ. ನಾನು ಮಧ್ಯಮ ವರ್ಗಕ್ಕೆ ಸೇರಿದವಳಾಗಿ ಗುರುತಿಸಿಕೊಳ್ಳುತ್ತೇನೆ, ಆದ್ದರಿಂದಾಗಿ ನನಗೆ ಕಷ್ಟ ತಿಳಿದಿದೆ," ಎಂದು ನಿರ್ಮಲಾ ಸೀತಾರಾಮನ್ ವಿವರಿಸಿದ್ದಾರೆ.

"ಮಧ್ಯಮ ವರ್ಗದ ಮೇಲೆ ಅಧಿಕ ತೆರಿಗೆ ವಿಧಿಸಿಲ್ಲ"
5 ಲಕ್ಷ ರೂಪಾಯಿವರೆಗೆ ವಾರ್ಷಿಕ ಆದಾಯವನ್ನು ಹೊಂದಿರುವವರಿಗೆ ಯಾವುದೇ ಆದಾಯ ತೆರಿಗೆ ಇಲ್ಲ. ಅವರಿಗೆ ಆದಾಯ ತೆರಿಗೆ ವಿನಾಯಿತಿ ಲಭ್ಯವಾಗುತ್ತದೆ. ಮಧ್ಯಮ ವರ್ಗದ ಮೇಲೆ ಹೊಸದಾಗಿ ಯಾವುದೇ ತೆರಿಗೆಯನ್ನು ವಿಧಿಸಲಾಗಿಲ್ಲ ಎಂದು ಕೂಡಾ ಉಲ್ಲೇಖಿಸಿದ್ದಾರೆ. ಮೆಟ್ರೋ ರೈಲು ಸಂಪರ್ಕವನ್ನು 27 ನಗರಗಳಲ್ಲಿ ವಿಸ್ತರಿಸಲು, 100 ಸ್ಮಾರ್ಟ್ ಸಿಟಿಯನ್ನು ಆರಂಭಿಸಲು ಕ್ರಮವನ್ನು ಸರ್ಕಾರ ಕೈಗೊಳ್ಳುತ್ತಿದೆ ಎಂದು ಈ ವೇಳೆಯೇ ವಿತ್ತ ಸಚಿವೆ ಹೇಳಿದ್ದಾರೆ.
"ಮಧ್ಯಮ ವರ್ಗದ ಜನಸಂಖ್ಯೆಯು ಪ್ರಸ್ತುತ ಹೆಚ್ಚಳವಾಗುತ್ತಿದೆ. ಈ ಕಾರಣದಿಂದಾಗಿ ಸರ್ಕಾರವು ಮಧ್ಯಮ ವರ್ಗಕ್ಕಾಗಿ ಹೆಚ್ಚಿನ ಸಹಾಯವನ್ನು ಮಾಡಲಿದೆ. ನಾನು ಸುಲಭವಾಗಿ ಮಧ್ಯಮ ವರ್ಗದ ಸಮಸ್ಯೆಯನ್ನು ಅರ್ಥ ಮಾಡಿಕೊಳ್ಳಬಲ್ಲೆ. ಸರ್ಕಾರವು ಮಧ್ಯಮ ವರ್ಗಕ್ಕಾಗಿ ಹಲವಾರು ಕಾರ್ಯಗಳನ್ನು ಮಾಡಿದೆ, ಮುಂದೆಯೂ ಕೂಡಾ ಮಧ್ಯಮ ವರ್ಗದ ಪ್ರಯೋಜನಕ್ಕಾಗಿ ಸರ್ಕಾರ ಕ್ರಮಕೈಗೊಳ್ಳುತ್ತದೆ," ಎಂದು ತಿಳಿಸಿದ್ದಾರೆ.
ರೈತರು ಹಾಗೂ ಉಚಿತ ಯೋಜನೆಗಳ ಬಗ್ಗೆಯೂ ಕೇಂದ್ರ ಹಣಕಾಸು ಸಚಿವೆ ಉಲ್ಲೇಖಿಸಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ರೈತರುಗಳ ಆದಾಯವನ್ನು ದುಪ್ಪಟ್ಟು ಮಾಡುವತ್ತ ಹೆಚ್ಚಿನ ಗಮನವನ್ನು ಹರಿಸಿದೆ. ಅದಕ್ಕಾಗಿ ಸರ್ಕಾರವು ಹಲವಾರು ಕ್ರಮಗಳನ್ನು ಕೂಡಾ ಸರ್ಕಾರ ಕೈಗೊಂಡಿದೆ.
ನಾಲ್ಕು R ಗಳನ್ನು ಉಲ್ಲೇಖಿಸಿದ ಸಚಿವೆ
ಕೇಂದ್ರ ಸರ್ಕಾರವು ನಾಲ್ಕು Rಗಳ ಆದಾರದಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದೆ. Reduce (ಕಡಿತ ಮಾಡು), resolve (ಪರಿಹಾರ), recapitalise (ಮತ್ತೆ ಬಂಡವಾಳ ಪರಿವರ್ತನೆ), reform (ಕ್ರಾಂತಿ, ಬದಲಾವಣೆ) ಕನ್ನೋಟವನ್ನು ಇಟ್ಟುಕೊಂಡು ಸರ್ಕಾರವು ಕಾರ್ಯನಿರ್ವಹಣೆ ಮಾಡುತ್ತಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications