ಶಿಕ್ಷಣ ಸಂಸ್ಥೆಯಾದ ಬೈಜೂಸ್ ಒಂದೆರಡು ವರ್ಷಗಳ ಹಿಂದೆ ದೇಶದ ಅತ್ಯಂತ ಯಶಸ್ವಿ ಸ್ಟಾರ್ಟ್ಅಪ್ಗಳಲ್ಲಿ ಒಂದಾಗಿತ್ತು. ಆದರೆ ಹಣಕಾಸು ವರ್ಷ 2021ರಲ್ಲಿ ಕಂಪನಿಯು 4,564 ಕೋಟಿ ರೂಪಾಯಿಗಳಷ್ಟು ಭಾರೀ ನಷ್ಟವನ್ನು ಕಂಡಿದೆ. ನಂತರ, ಅಕ್ಟೋಬರ್ 2022 ರಲ್ಲಿ, ಕಂಪನಿಯು 2,500 ಉದ್ಯೋಗಿಗಳನ್ನು ವಜಾ ಮಾಡುವುದಾಗಿ ಘೋಷಿಸಿದೆ. ಅದಾದ ಬಳಿಕ ಈಗ ಸುಮಾರು 4000 ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲು ಸಂಸ್ಥೆ ಸಜ್ಜಾಗಿದೆ.
ವರದಿಗಳ ಪ್ರಕಾರ ಬೈಜೂಸ್ ಮತ್ತೊಂದು ಹಂತದ ಉದ್ಯೋಗ ಕಡಿತವನ್ನು ಮಾಡಲು ಮುಂದಾಗಿದೆ. ಈ ಬಾರಿ ಸುಮಾರು 4000 ದಿಂದ 5000 ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಲು ಸಂಸ್ಥೆಯು ಮುಂದಾಗಿದೆ. ಇತ್ತೀಚೆಗೆ ಬೈಜೂಸ್ ಸಂಸ್ಥೆಯ ನೂತನ ಸಿಇಒ ಆಗಿ ಅರ್ಜುನ್ ಮೋಹನ್ರನ್ನು ನೇಮಕ ಮಾಡಿಕೊಂಡಿದ್ದಾರೆ. ಈಗ ಹೊಸ ಸಿಇಒ ಅಡಿಯಲ್ಲಿ ಉದ್ಯೋಗ ಕಡಿತವನ್ನು ಘೋಷಿಸಲು ಸಂಸ್ಥೆ ಸಜ್ಜಾಗಿದೆ.

4-5 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಲಿದೆ ಬೈಜೂಸ್
ಹೊಸ ಸಿಇಒ ಅಡಿಯಲ್ಲಿ ಬೈಜೂಸ್ ಸುಮಾರು 4 ರಿಂದ 5 ಸಾವಿರ ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಬಹುದು ಎಂದು ವರದಿ ಹೇಳಿದೆ. ಇದು ಬೇರೆ ಬೇರೆ ವಿಧದ ಉದ್ಯೋಗಿಗಳ ಮೇಲೆ ಪ್ರಭಾವ ಬೀರಲಿದೆ. ಥಿಂಕ್ ಅಂಡ್ ಲರ್ನ್ ಪ್ರೈವೇಟ್ ಲಿಮಿಟೆಡ್ನ ಉದ್ಯೋಗಿಗಳನ್ನು ಹೆಚ್ಚಾಗಿ ಪರಿಣಾಮ ಅನುಭವಿಸಬೇಕಾಗಬಹುದು. ಆದರೆ ಆಕಾಶ್ ಸಂಸ್ಥೆಯ ಉದ್ಯೋಗಿಗಳ ವಜಾ ನಡೆಯದು ಎಂದು ವರದಿ ಉಲ್ಲೇಖಿಸಿದೆ.
ಹೊಸ ಸಿಇಒ ಈಗಾಗಲೇ ಈ ನಿರ್ಧಾರಗಳನ್ನು ಕಂಪನಿಯ ಹಿರಿಯ ನಾಯಕರಿಗೆ ತಿಳಿಸಿದ್ದಾರೆ ಎಂದು ವರದಿ ಹೇಳುತ್ತದೆ. ಮಾರಾಟ, ಮಾರ್ಕೆಟಿಂಗ್ ಮತ್ತು ಇತರ ಹಲವಾರು ತಂಡಗಳು ಮುಂಬರುವ ಈ ಲೇಆಫ್ಗೆ ಗುರಿಯಾಗುವ ಸಾಧ್ಯತೆಯಿದೆ. ಇನ್ನು "ರಚನಾತ್ಮಕ ಬದಲಾವಣೆ ತರುವ ನಿಟ್ಟಿನಲ್ಲಿ, ವೆಚ್ಚ ಕಡಿತ ಮಾಡಿ ನಗದು ಹರಿವು ನಿರ್ವಹಣೆ ಹೆಚ್ಚಿಸುವ ನಿಟ್ಟಿನಲ್ಲಿ ಈ ಉದ್ಯೋಗ ಕಡಿತದ ನಿರ್ಧಾರ ಮಾಡಲಾಗುತ್ತಿದೆ," ಎಂದು ವಕ್ತಾರರು ಹೇಳಿದ್ದಾರೆ.
ಉದ್ಯೋಗಿಗಳಿಗೆ ಮಾಜಿ- ಬೈಜೂಸ್ ಸಿಇಒ ಪತ್ರ
ಅಕ್ಟೋಬರ್ 2022 ರಲ್ಲಿ ಉದ್ಯೋಗ ಕಡಿತವನ್ನು ಘೋಷಿಸಿದ ನಂತರ, ಬೈಜೂಸ್ ಸಿಇಒ ಇಮೇಲ್ನಲ್ಲಿ ಉದ್ಯೋಗಿಗಳಿಗೆ ಕ್ಷಮೆಯಾಚಿಸಿದ್ದರು. "ನಾವು ನಮ್ಮ 2500 ಸಹೋದ್ಯೋಗಿಗಳನ್ನು ವಜಾ ಮಾಡಬೇಕಾಗಿದೆ. ನಮ್ಮ ಉದ್ಯೋಗಿಗಳನ್ನು ನೋಡಿಕೊಳ್ಳುವಲ್ಲಿ ಮತ್ತು ಅವರನ್ನು ಶಾಶ್ವತವಾಗಿ ಉಳಿಸಿಕೊಳ್ಳುವ ವಿಚಾರದಲ್ಲಿ ನಾವು ಯಾವಾಗಲೂ ಹೆಮ್ಮೆಪಡುತ್ತೇವೆ. ಈಗ ನೋವಿನಿಂದ ಬೀಳ್ಕೊಡುತ್ತಿದ್ದೇವೆ," ಎಂದು ಈ ಹಿಂದಿನ ಸಿಇಒ ಹೇಳಿದ್ದರು.
ಇದು ಮೊದಲೇನಲ್ಲ
ಜಾಗತಿಕವಾಗಿ ಕಳೆದ ವರ್ಷದಿಂದಲೇ ಉದ್ಯೋಗ ಕಡಿತವು ಆರಂಭವಾಗಿದೆ. ಹಣದುಬ್ಬರ, ಆರ್ಥಿಕ ಹಿಂಜರಿತದ ಆತಂಕದ ನಡುವೆ ಹಲವಾರು ಪ್ರತಿಷ್ಠಿತ ಸಂಸ್ಥೆಗಳು ಉದ್ಯೋಗ ಕಡಿತವನ್ನು ಮಾಡಿದೆ. ಅಷ್ಟಕ್ಕೂ ಒಂದು ಬಾರಿ ಉದ್ಯೋಗ ಕಡಿತ ಘೋಷಣೆ ಮಾಡಿದ ಬಳಿಕ ಈ ಪ್ರಕ್ರಿಯೆ ನಿಂತಿಲ್ಲ. ಬಹುತೇಕ ಸಂಸ್ಥೆಗಳು ಎರಡು ಮೂರು ಹಂತಗಳಲ್ಲಿ ಉದ್ಯೋಗ ಕಡಿತವನ್ನು ಮಾಡಿದೆ. ಅದರಂತೆಯೇ ಬೈಜೂಸ್ನಲ್ಲಿಯೂ ಈ ಹಿಂದೆಯೂ ಉದ್ಯೋಗ ಕಡಿತ ಮಾಡಲಾಗಿದೆ.
ಈ ಹಿಂದೆ ಅಕ್ಟೋಬರ್ 2022ರಲ್ಲಿ ಬೈಜೂಸ್ ಸುಮಾರು ಶೇಕಡ 5ರಷ್ಟು ಅಥವಾ 2500 ಉದ್ಯೋಗಿಗಳನ್ನು ಮುಂದಿನ ಆರು ತಿಂಗಳ ಅವಧಿಯಲ್ಲಿ ಉದ್ಯೋಗದಿಂದ ವಜಾಗೊಳಿಸಲಾಗುತ್ತದೆ ಎಂದು ಘೋಷಣೆ ಮಾಡಿದೆ. ಅದಾದ ಬಳಿಕ ಸಾಲದ ಸುಳಿಯಲ್ಲಿ ಸಿಲುಕಿ ಒದ್ದಾಡುತ್ತಿರುವ ಬೈಜೂಸ್ ಸಂಸ್ಥೆಯು ತನ್ನ ಎಲ್ಲ ವಿಭಾಗದಲ್ಲಿ ಸುಮಾರು ಒಂದು ಸಾವಿರ ಮಂದಿಗೆ ಪಿಂಕ್ ಸ್ಲಿಪ್ ನೀಡಿ ಮನೆಗೆ ಕಳುಹಿಸಿದೆ ಎಂದು ವರದಿಯಾಗಿದೆ.
More From GoodReturns

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications