ಭಾರತೀಯ ಜೀವ ವಿಮಾ ನಿಗಮ(ಎಲ್ಐಸಿ) ಯನ್ನು ಷೇರುಪೇಟೆ ವಹಿವಾಟಿನ ಪಟ್ಟಿಯಲ್ಲಿ ಸೇರಿಸಲು ಕೇಂದ್ರ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ತಾತ್ವಿಕ ಒಪ್ಪಿಗೆ ನೀಡಿದೆ ಎಂದು ಹಣಕಾಸು ಸಚಿವಾಲಯದ ಅಧಿಕಾರಿ ತಿಳಿಸಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ.
ದೇಶದ ಅತಿದೊಡ್ಡ ವಿಮಾ ಕಂಪನಿ ಎಲ್ಐಸಿಯ ಐಪಿಒ ತರುವ ಪ್ರಕ್ರಿಯೆಯನ್ನು ಚುರುಕುಗೊಳಿಸಲಾಗಿದೆ. ಎಲ್ಐಸಿ ಆರಂಭಿಕ ಸಾರ್ವಜನಿಕ ಕೊಡುಗೆ (ಐಪಿಒ) ಪ್ರತಿ ಷೇರಿಗೆ 400 ರಿಂದ 600 ರೂ.ಗಳಷ್ಟಿರಬಹುದು ಎಂದು ಅಂದಾಜಿಸಲಾಗಿದೆ.
ಎಲ್ಐಸಿ ಸಾರ್ವಜನಿಕ ಕೊಡುಗೆ (ಐಪಿಒ) ಪ್ರಸಕ್ತ ಹಣಕಾಸು ವರ್ಷದಲ್ಲಿ ಹೂಡಿಕೆ ಮಾಡುವ ಮೂಲಕ 1.75 ಲಕ್ಷ ಕೋಟಿ ರೂಪಾಯಿಗಳನ್ನು ಸಂಗ್ರಹಿಸುವ ಸರ್ಕಾರದ ಪ್ರಯತ್ನಗಳ ಒಂದು ಭಾಗವಾಗಿದೆ. ಮಾರ್ಚ್ 2022 ರಲ್ಲಿ ಕೊನೆಗೊಳ್ಳುವ ಪ್ರಸಕ್ತ ಹಣಕಾಸು ವರ್ಷದೊಳಗೆ ಎಲ್ಐಸಿ ಐಪಿಒ ಖಚಿತಪಡಿಸಿಕೊಳ್ಳಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಎಲ್ಐಸಿ ದೇಶದ ಅತಿದೊಡ್ಡ ವಿಮಾ ಕಂಪನಿಯಾಗಿದ್ದು, ಇದು 77.61 ಪರ್ಸೆಂಟ್ರಷ್ಟು ಮಾರುಕಟ್ಟೆ ಪಾಲನ್ನು ಹೊಂದಿದೆ. ಇದು ಒಟ್ಟು ಪ್ರೀಮಿಯಂ ಆದಾಯದ 70 ಪರ್ಸೆಂಟ್ಕ್ಕಿಂತ ಹೆಚ್ಚು. ಬಂಡವಾಳದ ಮೂಲವನ್ನು ಈಗಿರುವ 100 ಕೋಟಿ ರೂ.ಗಳಿಂದ 25 ಸಾವಿರ ಕೋಟಿಗೆ ಹೆಚ್ಚಿಸಲು ಸರ್ಕಾರ ಈಗಾಗಲೇ ಪ್ರಸ್ತಾಪಿಸಿದೆ. 25,000 ಕೋಟಿ ರೂ. ಪ್ರಸ್ತುತ ಕಡಿಮೆ ಬಂಡವಾಳದ ಆಧಾರದಲ್ಲಿ ಪಟ್ಟಿ ಮಾಡಲು ಅನುಕೂಲವಾಗುವಂತೆ ಐಪಿಒ ಬೆಲೆ ನಿಗದಿಪಡಿಸಲಿದ್ದು, ಪ್ರತಿ ಷೇರಿನ ಆಧಾರದ ಮೇಲೆ ಬಂಡವಾಳ ನಿಗದಿಯಾಗುತ್ತದೆ.
ಕೇಂದ್ರ ಸರ್ಕಾರ ಎಲ್ ಐಸಿಯಲ್ಲಿ ಶೇಕಡಾ 100ರಷ್ಟು ಷೇರುಗಳನ್ನು ಹೊಂದಿದ್ದು, ಅದರ ಒಂದು ಭಾಗವನ್ನು ಪ್ರಕ್ರಿಯೆಗೆ ಮಾರಾಟ ಮಾಡಲು ಯೋಜಿಸಿದೆ. ಕಳೆದ ಬಜೆಟ್ ಅಧಿವೇಶನದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಎಲ್ಐಸಿ ಐಪಿಒಗೆ ದಾರಿ ಮಾಡಿಕೊಡಲು ಜೀವ ವಿಮಾ ಕಾಯ್ದೆಯಲ್ಲಿ ಅಗತ್ಯ ತಿದ್ದುಪಡಿಗಳನ್ನು ತಂದಿದ್ದರು.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications