ದೊಡ್ಡ ಶಾಕ್! ರಾಜ್ಯದ 9 ವಿಶ್ವವಿದ್ಯಾಲಯ ಬಂದ್..ಸಂಪುಟ ಉಪಸಮಿತಿ ನಿರ್ಧಾರ! ಯಾವ ವಿವಿ, ಯಾಕೆ?

ಬಿಜೆಪಿ( BJP Government) ಅಧಿಕಾರವಧಿಯಲ್ಲಿ ಆರಂಭಿಸಲಾಗಿದ್ದ 10 ಹೊಸ ವಿಶ್ವವಿದ್ಯಾಲಯಗಳಲ್ಲಿ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಸಚಿವ ಸಂಪುಟ ಉಪಸಮಿತಿ(Cabinet Sub Committee)ತೀರ್ಮಾನಿಸಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌( DK Shivakur) ಹೇಳಿದ್ದಾರೆ.

ಹೌದು, ವಿಶ್ವವಿದ್ಯಾಲಯಗಳ ಆರ್ಥಿಕ ಸ್ಥಿತಿಗತಿಯ ಪರಿಶೀಲನೆ ಕುರಿತು ಗುರುವಾರ ನಡೆಸಿದ ಮೊದಲ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಧ್ಯಕ್ಷತೆಯ ಈ ಉಪಸಮಿತಿ ನಿರ್ಧರಿಸಿದೆ ಎಂದು ಹೇಳಿದ್ದಾರೆ.

ರಾಜ್ಯದ 9 ವಿಶ್ವವಿದ್ಯಾಲಯ ಬಂದ್;ಸಂಪುಟ ಉಪಸಮಿತಿ ನಿರ್ಧಾರ!

ಯಾವೆಲ್ಲಾ ವಿಶ್ವವಿದ್ಯಾಲಯಗಳನ್ನು ಮುಚ್ಚಲಾಗಿದೆ?

ಬೀದರ್ ವಿಶ್ವವಿದ್ಯಾಲಯ ಹೊರತುಪಡಿಸಿ ಬೆಂಗಳೂರಿನ ಮಹಾರಾಣಿ ಕ್ಲಸ್ಟರ್ ಮತ್ತು ನೃಪತುಂಗ ವಿಶ್ವವಿದ್ಯಾಲಯ ಸೇರಿ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ತೀರ್ಮಾನ ಕೈಗೊಂಡಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಈ ತಿರ್ಮಾನವನ್ನು ಕೈಗೊಳ್ಳಲು ಕಾರಣವೇನು?

ಇತರ ವಿಶ್ವವಿದ್ಯಾಲಯಗಳಿಗೆ ಹೋಲಿಸಿದರೆ, ಬೀದರ್ ವಿಶ್ವವಿದ್ಯಾಲಯ 150 ಸಂಯೋಜಿತ ಕಾಲೇಜುಗಳನ್ನು ಹೊಂದಿದ್ದು, ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಯಾವುದೇ ವಿಶ್ವವಿದ್ಯಾಲಯ ಸುಗಮವಾಗಿ ನಡೆಯಲು ಸಂಯೋಜಿತ ಕಾಲೇಜುಗಳ ಶುಲ್ಕ ಮುಖ್ಯವಾಗಿರುತ್ತದೆ. ಹೀಗಾಗಿ, ಈ ವಿಶ್ವವಿದ್ಯಾಲಯವನ್ನು ಉಳಿಸಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ಮಾಹಿತಿಯನ್ನು ತಿಳಿಸಿದೆ.

ಹೊಸದಾಗಿ ಸ್ಥಾಪನೆಯಾದ ವಿಶ್ವವಿದ್ಯಾಲಯಗಳನ್ನು ನಡೆಸಲು ಅಗತ್ಯವಿರುವ ಹಣಕಾಸಿನ ಮೊತ್ತದ ಬಗ್ಗೆ ಪರಿಶೀಲನೆ ನಡೆಸಲು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ವರದಿ ಸಲ್ಲಿಸಿತ್ತು. ಹೀಗಾಗಿ, ಸಂಪುಟ ಉಪಸಮಿತಿಯನ್ನು ರಚಿಸಲಾಯಿತು.

ಹೊಸ ವಿಶ್ವವಿದ್ಯಾಲಯ ನಿರ್ಮಾಣಕ್ಕೆ 342 ಕೋಟಿ ರೂಪಾಯಿ ಅಗತ್ಯ

ಹೊಸ ವಿಶ್ವವಿದ್ಯಾಲಯಗಳ ಸ್ಥಾಪನೆ ಮತ್ತು ಕಾರ್ಯಾಚರಣೆಗೆ ಜಮೀನಿನ ವೆಚ್ಚ ಬಿಟ್ಟು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವೇತನ, ಮೂಲ ಸೌಕರ್ಯ, ಸಲಕರಣೆಗಳು, ವಾಹನಗಳು, ಪೀಠೋಪಕರಣ ಮತ್ತು ಇತರೆ ವಸ್ತುಗಳ ಖರೀದಿಸಲು 342 ಕೋಟಿ ರೂಪಾಯಿ ಅಗತ್ಯವಿದೆ. ವಿಶ್ವವಿದ್ಯಾಲಯ ಸ್ಥಾಪನೆಗೆ 100 ರಿಂದ 200 ಎಕರೆ ಜಮೀನು ಕೂಡ ಅಗತ್ಯವಿರುತ್ತದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಯಾವ್ಯಾವ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಸಾಧ್ಯತೆ ಇದೆ

ಹಾಸನ, ಚಾಮರಾಜನಗರ, ಹಾವೇರಿ, ಕೊಡಗು, ಕೊಪ್ಪಳ, ಬಾಗಲಕೋಟೆ, ಮಹಾರಾಣಿ ಕ್ಲಸ್ಟರ್, ಮಂಡ್ಯ ಮತ್ತು ನೃಪತುಂಗ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಸಾಧ್ಯತೆ ಇದೆ.

ಈ ಹೊಸ ವಿಶ್ವವಿದ್ಯಾಲಯಗಳನ್ನು ನಡೆಸಲು ಮೊದಲ ಐದು ವರ್ಷಗಳ ಹಣಕಾಸಿನ ಅವಶ್ಯಕತೆಗಳನ್ನು ವಿವರಿಸುವ ವರದಿಯನ್ನು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಮಂಡಳಿ ಸಲ್ಲಿಸಿದ ನಂತರ ಉಪಸಮಿತಿಯನ್ನು ರಚಿಸಲಾಯಿತು. ವರದಿಯು ಅವುಗಳ ಸ್ಥಾಪನೆ ಮತ್ತು ಕಾರ್ಯಾಚರಣೆಗೆ 342 ಕೋಟಿ ರೂ.ಗಳಷ್ಟು ಅಗತ್ಯವಿರಬಹುದು ಎಂದು ಅಂದಾಜಿಸಲಾಗಿದೆ ಎಂದು ವರದಿಯನ್ನು ತಿಳಿಸಿದೆ.

ಈ ನಿರ್ಧಾರವು ವಿರೋಧ ಪಕ್ಷಗಳಿಂದ ಭಾರೀ ಟೀಕೆಗೆ ಗುರಿಯಾಯಿತು, ಮೇಲ್ಮನೆಯ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ತೀವ್ರ ಅಸಮ್ಮತಿ ವ್ಯಕ್ತಪಡಿಸಿದರು. ಈ ಸರ್ಕಾರವು ಬಿಜೆಪಿ ಸ್ಥಾಪಿಸಿದ ಒಂಬತ್ತು ವಿಶ್ವವಿದ್ಯಾಲಯಗಳನ್ನು ಹಿಂತೆಗೆದುಕೊಳ್ಳಲು ಬಯಸುತ್ತಿದೆ. ಅವುಗಳನ್ನು ನಿರ್ವಹಿಸಲು ಬಜೆಟ್ ಇಲ್ಲ ಎಂದು ಅವರು ಹೇಳುತ್ತಿದ್ದಾರೆ. ಬಹುಶಃ ಈ ಎಲ್ಲಾ ವಿಶ್ವವಿದ್ಯಾಲಯಗಳಿಗೆ 200-300 ಕೋಟಿ ರೂ. ಬೇಕಾಗಬಹುದು, ಆದರೆ ಅವರು ಇತರ ವಿಷಯಗಳಿಗೆ ಸಾವಿರಾರು ಕೋಟಿ ಖರ್ಚು ಮಾಡುತ್ತಿದ್ದಾರೆ. ಬಿಜೆಪಿ ಈ ವಿಶ್ವವಿದ್ಯಾಲಯಗಳನ್ನು ತಂದ ಕಾರಣ, ಅವರು ಅವುಗಳನ್ನು ಮುಚ್ಚಲು ತಿರ್ಮಾನಿಸಿದೆ ಎಂದು ಅವರು ಆರೋಪಿಸಿದರು.

ದೂರದ ಪ್ರದೇಶಗಳ ವಿದ್ಯಾರ್ಥಿಗಳಿಗೆ ಸುಲಭವಾಗಿ ಶಿಕ್ಷಣ ದೊರೆಯುವ ಮಹತ್ವವನ್ನು ನಾರಾಯಣಸ್ವಾಮಿ ಒತ್ತಿ ಹೇಳಿದರು. ವಿದ್ಯಾರ್ಥಿಗಳ ಒಳಿತಿಗಾಗಿ ಸರ್ಕಾರ ಈ ವಿಶ್ವವಿದ್ಯಾಲಯಗಳನ್ನು ನಡೆಸಬೇಕು. ಅವರು ವಿಶ್ವವಿದ್ಯಾಲಯಕ್ಕೆ ಹೋಗಲು ಪ್ರತಿದಿನ 200-300 ಕಿ.ಮೀ ಪ್ರಯಾಣಿಸಲು ಸಾಧ್ಯವಿಲ್ಲ. ಶಿಕ್ಷಣವು ಲಾಭ ಗಳಿಸುವ ಸಂಸ್ಥೆಯಲ್ಲ. ವಿದ್ಯಾರ್ಥಿಗಳು ಜೀವನದಲ್ಲಿ ಮೇಲೆ ಬರಲು ಸರ್ಕಾರವು ಸೌಲಭ್ಯಗಳನ್ನು ಒದಗಿಸಬೇಕು. ಇಲ್ಲದಿದ್ದರೆ, ಅನೇಕರು ಹೊರಗುಳಿಯಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+