ಬಿಜೆಪಿ( BJP Government) ಅಧಿಕಾರವಧಿಯಲ್ಲಿ ಆರಂಭಿಸಲಾಗಿದ್ದ 10 ಹೊಸ ವಿಶ್ವವಿದ್ಯಾಲಯಗಳಲ್ಲಿ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಸಚಿವ ಸಂಪುಟ ಉಪಸಮಿತಿ(Cabinet Sub Committee)ತೀರ್ಮಾನಿಸಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್( DK Shivakur) ಹೇಳಿದ್ದಾರೆ.
ಹೌದು, ವಿಶ್ವವಿದ್ಯಾಲಯಗಳ ಆರ್ಥಿಕ ಸ್ಥಿತಿಗತಿಯ ಪರಿಶೀಲನೆ ಕುರಿತು ಗುರುವಾರ ನಡೆಸಿದ ಮೊದಲ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಧ್ಯಕ್ಷತೆಯ ಈ ಉಪಸಮಿತಿ ನಿರ್ಧರಿಸಿದೆ ಎಂದು ಹೇಳಿದ್ದಾರೆ.

ಯಾವೆಲ್ಲಾ ವಿಶ್ವವಿದ್ಯಾಲಯಗಳನ್ನು ಮುಚ್ಚಲಾಗಿದೆ?
ಬೀದರ್ ವಿಶ್ವವಿದ್ಯಾಲಯ ಹೊರತುಪಡಿಸಿ ಬೆಂಗಳೂರಿನ ಮಹಾರಾಣಿ ಕ್ಲಸ್ಟರ್ ಮತ್ತು ನೃಪತುಂಗ ವಿಶ್ವವಿದ್ಯಾಲಯ ಸೇರಿ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ತೀರ್ಮಾನ ಕೈಗೊಂಡಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಈ ತಿರ್ಮಾನವನ್ನು ಕೈಗೊಳ್ಳಲು ಕಾರಣವೇನು?
ಇತರ ವಿಶ್ವವಿದ್ಯಾಲಯಗಳಿಗೆ ಹೋಲಿಸಿದರೆ, ಬೀದರ್ ವಿಶ್ವವಿದ್ಯಾಲಯ 150 ಸಂಯೋಜಿತ ಕಾಲೇಜುಗಳನ್ನು ಹೊಂದಿದ್ದು, ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಯಾವುದೇ ವಿಶ್ವವಿದ್ಯಾಲಯ ಸುಗಮವಾಗಿ ನಡೆಯಲು ಸಂಯೋಜಿತ ಕಾಲೇಜುಗಳ ಶುಲ್ಕ ಮುಖ್ಯವಾಗಿರುತ್ತದೆ. ಹೀಗಾಗಿ, ಈ ವಿಶ್ವವಿದ್ಯಾಲಯವನ್ನು ಉಳಿಸಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ಮಾಹಿತಿಯನ್ನು ತಿಳಿಸಿದೆ.
ಹೊಸದಾಗಿ ಸ್ಥಾಪನೆಯಾದ ವಿಶ್ವವಿದ್ಯಾಲಯಗಳನ್ನು ನಡೆಸಲು ಅಗತ್ಯವಿರುವ ಹಣಕಾಸಿನ ಮೊತ್ತದ ಬಗ್ಗೆ ಪರಿಶೀಲನೆ ನಡೆಸಲು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ವರದಿ ಸಲ್ಲಿಸಿತ್ತು. ಹೀಗಾಗಿ, ಸಂಪುಟ ಉಪಸಮಿತಿಯನ್ನು ರಚಿಸಲಾಯಿತು.
ಹೊಸ ವಿಶ್ವವಿದ್ಯಾಲಯ ನಿರ್ಮಾಣಕ್ಕೆ 342 ಕೋಟಿ ರೂಪಾಯಿ ಅಗತ್ಯ
ಹೊಸ ವಿಶ್ವವಿದ್ಯಾಲಯಗಳ ಸ್ಥಾಪನೆ ಮತ್ತು ಕಾರ್ಯಾಚರಣೆಗೆ ಜಮೀನಿನ ವೆಚ್ಚ ಬಿಟ್ಟು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವೇತನ, ಮೂಲ ಸೌಕರ್ಯ, ಸಲಕರಣೆಗಳು, ವಾಹನಗಳು, ಪೀಠೋಪಕರಣ ಮತ್ತು ಇತರೆ ವಸ್ತುಗಳ ಖರೀದಿಸಲು 342 ಕೋಟಿ ರೂಪಾಯಿ ಅಗತ್ಯವಿದೆ. ವಿಶ್ವವಿದ್ಯಾಲಯ ಸ್ಥಾಪನೆಗೆ 100 ರಿಂದ 200 ಎಕರೆ ಜಮೀನು ಕೂಡ ಅಗತ್ಯವಿರುತ್ತದೆ ಎಂದು ವರದಿಯಲ್ಲಿ ಹೇಳಲಾಗಿದೆ.
ಯಾವ್ಯಾವ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಸಾಧ್ಯತೆ ಇದೆ
ಹಾಸನ, ಚಾಮರಾಜನಗರ, ಹಾವೇರಿ, ಕೊಡಗು, ಕೊಪ್ಪಳ, ಬಾಗಲಕೋಟೆ, ಮಹಾರಾಣಿ ಕ್ಲಸ್ಟರ್, ಮಂಡ್ಯ ಮತ್ತು ನೃಪತುಂಗ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಸಾಧ್ಯತೆ ಇದೆ.
ಈ ಹೊಸ ವಿಶ್ವವಿದ್ಯಾಲಯಗಳನ್ನು ನಡೆಸಲು ಮೊದಲ ಐದು ವರ್ಷಗಳ ಹಣಕಾಸಿನ ಅವಶ್ಯಕತೆಗಳನ್ನು ವಿವರಿಸುವ ವರದಿಯನ್ನು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಮಂಡಳಿ ಸಲ್ಲಿಸಿದ ನಂತರ ಉಪಸಮಿತಿಯನ್ನು ರಚಿಸಲಾಯಿತು. ವರದಿಯು ಅವುಗಳ ಸ್ಥಾಪನೆ ಮತ್ತು ಕಾರ್ಯಾಚರಣೆಗೆ 342 ಕೋಟಿ ರೂ.ಗಳಷ್ಟು ಅಗತ್ಯವಿರಬಹುದು ಎಂದು ಅಂದಾಜಿಸಲಾಗಿದೆ ಎಂದು ವರದಿಯನ್ನು ತಿಳಿಸಿದೆ.
ಈ ನಿರ್ಧಾರವು ವಿರೋಧ ಪಕ್ಷಗಳಿಂದ ಭಾರೀ ಟೀಕೆಗೆ ಗುರಿಯಾಯಿತು, ಮೇಲ್ಮನೆಯ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ತೀವ್ರ ಅಸಮ್ಮತಿ ವ್ಯಕ್ತಪಡಿಸಿದರು. ಈ ಸರ್ಕಾರವು ಬಿಜೆಪಿ ಸ್ಥಾಪಿಸಿದ ಒಂಬತ್ತು ವಿಶ್ವವಿದ್ಯಾಲಯಗಳನ್ನು ಹಿಂತೆಗೆದುಕೊಳ್ಳಲು ಬಯಸುತ್ತಿದೆ. ಅವುಗಳನ್ನು ನಿರ್ವಹಿಸಲು ಬಜೆಟ್ ಇಲ್ಲ ಎಂದು ಅವರು ಹೇಳುತ್ತಿದ್ದಾರೆ. ಬಹುಶಃ ಈ ಎಲ್ಲಾ ವಿಶ್ವವಿದ್ಯಾಲಯಗಳಿಗೆ 200-300 ಕೋಟಿ ರೂ. ಬೇಕಾಗಬಹುದು, ಆದರೆ ಅವರು ಇತರ ವಿಷಯಗಳಿಗೆ ಸಾವಿರಾರು ಕೋಟಿ ಖರ್ಚು ಮಾಡುತ್ತಿದ್ದಾರೆ. ಬಿಜೆಪಿ ಈ ವಿಶ್ವವಿದ್ಯಾಲಯಗಳನ್ನು ತಂದ ಕಾರಣ, ಅವರು ಅವುಗಳನ್ನು ಮುಚ್ಚಲು ತಿರ್ಮಾನಿಸಿದೆ ಎಂದು ಅವರು ಆರೋಪಿಸಿದರು.
ದೂರದ ಪ್ರದೇಶಗಳ ವಿದ್ಯಾರ್ಥಿಗಳಿಗೆ ಸುಲಭವಾಗಿ ಶಿಕ್ಷಣ ದೊರೆಯುವ ಮಹತ್ವವನ್ನು ನಾರಾಯಣಸ್ವಾಮಿ ಒತ್ತಿ ಹೇಳಿದರು. ವಿದ್ಯಾರ್ಥಿಗಳ ಒಳಿತಿಗಾಗಿ ಸರ್ಕಾರ ಈ ವಿಶ್ವವಿದ್ಯಾಲಯಗಳನ್ನು ನಡೆಸಬೇಕು. ಅವರು ವಿಶ್ವವಿದ್ಯಾಲಯಕ್ಕೆ ಹೋಗಲು ಪ್ರತಿದಿನ 200-300 ಕಿ.ಮೀ ಪ್ರಯಾಣಿಸಲು ಸಾಧ್ಯವಿಲ್ಲ. ಶಿಕ್ಷಣವು ಲಾಭ ಗಳಿಸುವ ಸಂಸ್ಥೆಯಲ್ಲ. ವಿದ್ಯಾರ್ಥಿಗಳು ಜೀವನದಲ್ಲಿ ಮೇಲೆ ಬರಲು ಸರ್ಕಾರವು ಸೌಲಭ್ಯಗಳನ್ನು ಒದಗಿಸಬೇಕು. ಇಲ್ಲದಿದ್ದರೆ, ಅನೇಕರು ಹೊರಗುಳಿಯಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications