ಹಬ್ಬದ ಸೀಸನ್ಗೂ ಮೊದಲೇ ರೈಲ್ವೇ ಉದ್ಯೋಗಿಗಳಿಗೆ ಕೇಂದ್ರ ಸರ್ಕಾರ ಗುಡ್ನ್ಯೂಸ್ ನೀಡಿದೆ. ಕಳೆದ ವರ್ಷದಂತೆ ರೈಲ್ವೆ ಉದ್ಯೋಗಿಗಳಿಗೆ ದೊಡ್ಡ ಮೊತ್ತದ ಬೋನಸ್ ಸಿಗಲಿದ್ದು, ಈ ವರ್ಷ ಉದ್ಯೋಗಿಗಳು ಪಡೆಯುವ 78 ದಿನದ ಸಂಬಳ ಬೋನಸ್ ರೂಪದಲ್ಲಿ ದೊರಕಲಿದೆ.
2020-21ರ ಆರ್ಥಿಕ ವರ್ಷದಲ್ಲಿ ಆರ್ಪಿಎಫ್/ಆರ್ಪಿಎಸ್ಎಫ್ ಸಿಬ್ಬಂದಿಯನ್ನು ಹೊರತುಪಡಿಸಿ ಭಾರತೀಯ ರೈಲ್ವೆಯ ಅರ್ಹ ನಾನ್-ಗೆಜೆಟೆಡ್ ಉದ್ಯೋಗಿಗಳಿಗೆ 78 ದಿನಗಳ ವೇತನಕ್ಕೆ ಸಮನಾದ ಪ್ರೊಡಕ್ಟಿವಿಟಿ ಆಧಾರಿತ ಬೋನಸ್ (PLB) ಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.
"2020-21ನೇ ಹಣಕಾಸು ವರ್ಷಕ್ಕೆ ಅರ್ಹವಾದ ನಾನ್-ಗೆಜೆಟೆಡ್ ರೈಲ್ವೇ ಉದ್ಯೋಗಿಗಳಿಗೆ (RPF/RPSF ಸಿಬ್ಬಂದಿ ಹೊರತುಪಡಿಸಿ) 78 ದಿನಗಳ ವೇತನಕ್ಕೆ ಸಮನಾದ ಪ್ರೊಡಕ್ಟಿವಿಟಿ ಲಿಂಕ್ಡ್ ಬೋನಸ್ ಅನ್ನು ಸಂಪುಟ ಅನುಮೋದಿಸಿದೆ. ಸುಮಾರು 11.56 ಲಕ್ಷ ನಾನ್-ಗೆಜೆಟೆಡ್ ರೈಲ್ವೇ ಉದ್ಯೋಗಿಗಳು ಈ ನಿರ್ಧಾರದಿಂದ ಪ್ರಯೋಜನ ಪಡೆಯುವ ಸಾಧ್ಯತೆಯಿದೆ'' ಎಂದು ಕೇಂದ್ರ ಸರ್ಕಾರ ಸಂಪುಟ ಸಭೆಯ ನಂತರ ಹೇಳಿದೆ.

ಸಚಿವ ಸಂಪುಟ ಸಭೆಯ ನಿರ್ಣಯಗಳನ್ನು ಸುದ್ದಿಗೋಷ್ಟಿ ಮೂಲಕ ತಿಳಿಸಿದ ಕೇಂದ್ರ ಸಚಿವ ಅನುರಾಗ್ ಠಾಕೂರ್ ಪ್ರತಿವರ್ಷದಂತೆ ಈ ಬಾರಿಯೂ ರೈಲ್ವೇಯ ನಾನ್ ಗೆಜೆಟೆಡ್ ಉದ್ಯೋಗಿಗಳಿಗೆ 78 ದಿನದ ಸಂಬಳಕ್ಕೆ ಸಮವಾದ ಬೋನಸ್ ಸಿಗಲಿದೆ ಎಂದು ಮಾಹಿತಿ ನೀಡಿದರು. 2019-20ರಲ್ಲಿ ನೀಡಲಾದ ಬೋನಸ್ 11.58 ಲಕ್ಷ ಜನ ಪಡೆದುಕೊಂಡಿದ್ದರು. ಸರ್ಕಾರ ಬೋನಸ್ ರೂಪದಲ್ಲಿ ಒಟ್ಟು 2,081.68 ಕೋಟಿ ರೂಪಾಯಿ ಮೀಸಲಿರಿತ್ತು. ಈ ವರ್ಷ 1984.73 ಕೋಟಿ ರೂ. ಖರ್ಚು ಮಾಡಲಿದೆ.
ವೇತನ ಲೆಕ್ಕಾಚಾರದ ಪ್ರಕಾರ ತಿಂಗಳಿಗೆ 7,000 ರೂ. ಅರ್ಹ ರೈಲ್ವೆ ಉದ್ಯೋಗಿಗೆ ಪಾವತಿಸಬಹುದಾದ ಗರಿಷ್ಠ ಮೊತ್ತವು 78 ದಿನಗಳವರೆಗೆ 17,951 ರೂ. ಆಗಿದೆ. ಪಿಎಲ್ಬಿ ಮೊತ್ತದ 78 ದಿನಗಳ ವೇತನವನ್ನು 2010-11 ರಿಂದ 2019-20ರ ಹಣಕಾಸು ವರ್ಷಗಳಿಗೆ ಪಾವತಿಸಲಾಗಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.
ಶೀಘ್ರದಲ್ಲಿಯೇ ಪ್ರಧಾನಿ ಮಂತ್ರಿ ಮಿತ್ರಾ ಯೋಜನೆ
ಶೀಘ್ರದಲ್ಲಿಯೇ ಪಿಎಂ ಮಿತ್ರ (MITRA- Mega Investment Textiles Region and Apparel Park) ಯೋಜನೆಯನ್ನು ಆರಂಭಿಸಲಾಗುವುದು. ಇದರಿಂದ ಟೆಕ್ಸಟೈಲ್ ಮತ್ತು ಗಾರ್ಮೆಂಟ್ ಕ್ಷೇತ್ರಗಳಿಗೆ ದೊಡ್ಡ ಯೋಗದಾನ ಸಿಗಲಿದೆ. ಈ ಯೋಜನೆಯಿಂದ ಲಕ್ಷಾಂತರ ಜನರಿಗೆ ಉದ್ಯೋಗ ಸಿಗಲಿದೆ. ಈ ಯೋಜನೆಗೆ ಕೇಂದ್ರ ಸರ್ಕಾರ ಐದು ವರ್ಷದಲ್ಲಿ 445 ಕೋಟಿ ರೂಪಾಯಿ ಖರ್ಚು ಮಾಡಲಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications