ಮೂಲ್ಕಿ ಸುಂದರರಾಮ ಶೆಟ್ಟಿಯವರ ನೇತೃತ್ವದಲ್ಲಿ ಪ್ರಾರಂಭವಾದ, ಕರ್ನಾಟಕ ಮೂಲದ ವಿಜಯಾ ಬ್ಯಾಂಕ್, ಗುಜರಾತ್ ಮೂಲದ ಬ್ಯಾಂಕ್ ಆಫ್ ಬರೋಡದ ಜೊತೆ 01.04.2020ರಂದು ಅಧಿಕೃತವಾಗಿ ವಿಲೀನಗೊಳ್ಳಲಿದೆ. ಲಾಭದಲ್ಲಿದ್ದ ವಿಜಯಾ ಬ್ಯಾಂಕ್ ಅನ್ನು ನಷ್ಠದಲ್ಲಿದ್ದ ಬ್ಯಾಂಕ್ ಆಫ್ ಬರೋಡಾ ಜೊತೆ ವಿಲೀನಗೊಳಿಸುವುದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು.
ವಿಜಯಾ ಬ್ಯಾಂಕ್ ಜೊತೆ ದೇನಾ ಬ್ಯಾಂಕ್ ಕೂಡಾ ಮರ್ಜ್ ಆಗುತ್ತಿರುವುದು ತಿಳಿದಿರುವ ವಿಚಾರ. 01.04.2017ರಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಜೊತೆಗೆ, ಕರ್ನಾಟಕದ ಮತ್ತೊಂದು ಹೆಮ್ಮೆಯ ಮೋಕ್ಷಗುಂಡಂ ವಿಶ್ವೇಶ್ವರಯ್ಯನವರು ಸ್ಥಾಪಿಸಿದ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಕೂಡಾ ವಿಲೀನಗೊಂಡಿತ್ತು.
ಈ ಮಹಾ ಬ್ಯಾಂಕ್ ಗಳ ವಿಲೀನದ ನಂತರ, 45.85 ಲಕ್ಷ ಕೋಟಿ ಮೌಲ್ಯದ ವ್ಯವಹಾರಗಳೊಂದಿಗೆ ಸ್ಟೇಟ್ ಬ್ಯಾಂಕ್ ದೇಶದ ಅತಿದೊಡ್ಡ ಬ್ಯಾಂಕ್ ಎನಿಸಿಕೊಂಡಿದೆ. ವಿಜಯಾ ಬ್ಯಾಂಕ್ ಜೊತೆಗಿನ ವಿಲೀನದಿಂದ, ಬ್ಯಾಂಕ್ ಆಫ್ ಬರೋಡಾ, ಐಸಿಐಸಿಸಿ ಬ್ಯಾಂಕ್ ಅನ್ನು ಹಿಂದಕ್ಕೆ ತಳ್ಲಿ ಮೂರನೇ ಸ್ಥಾನದಲ್ಲಿದೆ. ಎಚ್ ಡಿ ಎಫ್ ಸಿ ಎರಡನೇ ಸ್ಥಾನದಲ್ಲಿದೆ.
ಉತ್ತಮವಾಗಿ ಮತ್ತು ಪ್ರಗತಿಪಥದಲ್ಲಿದ್ದ ವಿಜಯಾ ಬ್ಯಾಂಕ್ ಅನ್ನು ವಿಲೀನಗೊಳಿಸಿದ್ದು ಒಂದೆಡೆಯಾದರೆ, ಹೈಕೋರ್ಟ್ ಆದೇಶವೊಂದು, ಬ್ಯಾಂಕ್ ಆಫ್ ಬರೋಡಾ ಸಮೂಹ ಬ್ಯಾಂಕುಗಳ ಬುಡವನ್ನೇ ಅಲ್ಲಾಡಿಸಿದೆ.
ಕೋಲ್ಕತ್ತಾ ಉಚ್ಚನ್ಯಾಯಾಲಯ
"ಬೇಷರತ್ ಬ್ಯಾಂಕ್ ಗ್ಯಾರಂಟಿಯ ಪಾವತಿಯ ವಿಚಾರದಲ್ಲಿ ಬ್ಯಾಂಕ್ ಆಫ್ ಬರೋಡಾ ಅವ್ಯವಸ್ಥೆಯಿಂದ ಕಾರ್ಯನಿರ್ವಹಿಸುತ್ತಿದೆ" ಎಂದು ಕೋಲ್ಕತ್ತಾ ಉಚ್ಚನ್ಯಾಯಾಲಯ ಕಿಡಿಕಾರಿದ್ದು. ಸೂಕ್ತ ಕ್ರಮ ತೆಗೆದುಕೊಳ್ಳುವಂತೆ, ಭಾರತೀಯ ರಿಸರ್ವ್ ಬ್ಯಾಂಕ್ ಗೆ ಸೂಚಿಸಿದ್ದು ಒಂದು ಕಡೆ.
ರಿಸರ್ವ್ ಬ್ಯಾಂಕ್ ಗೆ ನೀಡಿದ ಆದೇಶ
ನ್ಯಾಯಾಲಯ, ರಿಸರ್ವ್ ಬ್ಯಾಂಕ್ ಗೆ ನೀಡಿದ ಆದೇಶದಲ್ಲಿ ಬ್ಯಾಂಕ್ ಆಫ್ ಬರೋಡಾಗೆ ನೀಡಿದ ಲೈಸೆನ್ಸ್ ಅನ್ನು ರದ್ದುಪಡಿಸುವಂತೆ ಸೂಚಿಸಿರುವುದು, ಬಹುದೊಡ್ಡ ಆಘಾತವಾಗಿದೆ. ನ್ಯಾಯಮೂರ್ತಿಗಳಾದ ಜ.ಸಂಜೀಬ್ ಮುಖರ್ಜಿ ಮತ್ತು ಜ.ಕೌಶಿಕ್ ಚಂದ್ರ ಇದ್ದ ನ್ಯಾಯಪೀಠ ಈ ಆದೇಶವನ್ನು ನೀಡಿದೆ.
ಇಂಡಿಯನ್ ಆಯಿಲ್ ಕಾರ್ಪೋರೇಶನ್
ಐಓಸಿ (ಇಂಡಿಯನ್ ಆಯಿಲ್ ಕಾರ್ಪೋರೇಶನ್) ಸಲ್ಲಿಸಿದ್ದ ಆಕ್ಷೇಪಣೆ ಅರ್ಜಿಯ ವಿಚಾರಣೆ ವೇಳೆ, ಕೋಲ್ಕತ್ತಾ ಹೈಕೋರ್ಟ್ ಮೇಲಿನ ಆದೇಶವನ್ನು ನೀಡಿದೆ. ಸಿಂಪ್ಲೆಕ್ಸ್ ಪ್ರಾಜೆಕ್ಟ್ಸ್ ಸಂಸ್ಥೆಯ ಪರವಾಗಿ ಐಓಸಿ 6.97 ಕೋಟಿ ರೋಪಾಯಿಯ ಬ್ಯಾಂಕ್ ಗ್ಯಾರಂಟಿಯನ್ನು ನೀಡಿತ್ತು. ಈ ಹಣವನ್ನು ಬಿಡುಗಡೆ ಮಾಡುವಲ್ಲಿ ಬ್ಯಾಂಕ್ ಆಫ್ ಬರೋಡಾ ವಿಫಲಗೊಂಡಿತ್ತು.
ವಿಜಯಾ ಬ್ಯಾಂಕ್ ಗೆ ಬರಸಿಡಿಲಿನಂತೆ ಅಪ್ಪಳಿಸಿದ ಹೈಕೋರ್ಟ್ ಆದೇಶ
ಐಓಸಿ ಪ್ರಕಾರ, ಸಿಂಪ್ಲೆಕ್ಸ್ ಸಂಸ್ಥೆ ತನ್ನ ಜೊತೆಗಿನ ಒಪ್ಪಂದದ ಪ್ರಕಾರ ನಡೆದುಕೊಂಡಿಲ್ಲ. ಬ್ಯಾಂಕ್ ಆಫ್ ಬರೋಡಾ ಒಂದು ರಾಷ್ಟ್ರೀಕೃತ ಬ್ಯಾಂಕ್ ರೀತಿಯಲ್ಲಿ ಕಾರ್ಯ ನಿರ್ವಹಿಸಿಲ್ಲ. ಹಾಗಾಗಿ, ಬ್ಯಾಂಕಿನ ಲೈಸೆನ್ಸ್ ಅನ್ನು ರದ್ದುಗೊಳಿಸಬೇಕೆಂದು, ಕೋಲ್ಕತ್ತಾ ನ್ಯಾಯಾಲಯದಲ್ಲಿ ಐಓಸಿ ವಾದಿಸಿತ್ತು.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications