ದೂರಸಂಪರ್ಕ ಇಲಾಖೆ ಶೀಘ್ರದಲ್ಲೇ ಹೊಸ ಯಾಂತ್ರಿಕ ವ್ಯವಸ್ಥೆಯನ್ನು ಹೊರತರಲಿದೆ. ಈ ಹೊಸ ವ್ಯವಸ್ಥೆಯಲ್ಲಿ ನಮಗೆ ಯಾರು ಕರೆ ಮಾಡುತ್ತಾರೋ ಅವರು ಕೆವೈಸಿ ವೇಳೆ ನೀಡಿದ ಹೆಸರೇ ಮೊಬೈಲ್ ಫೋನ್ ಪರದೆಯ ಮೇಲೆ ಕಾಣಲಿದೆ ಎಂದು ಮಾಹಿತಿ ಲಭ್ಯವಾಗಿದೆ.
ಟೆಲಿಕಾಂ ಆಪರೇಟರ್ಗಳಿಗೆ ಜನರು know-your-customer (KYC) ದಾಖಲೆಯನ್ನು ಸಲ್ಲಿಕೆ ಮಾಡಿದ ಪ್ರಕಾರ ಹೆಸರು ಇರಲಿದೆ. ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ (ಟ್ರಾಯ್) ಅಧ್ಯಕ್ಷ ಪಿಡಿ ವಘೇಲಾ ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.
"ಈ ಕುರಿತು ಮಧ್ಯಸ್ಥಗಾರರ ಅಭಿಪ್ರಾಯಗಳನ್ನು ಪಡೆಯಲು ಶೀಘ್ರದಲ್ಲೇ ಸಮಾಲೋಚನಾ ಪತ್ರವನ್ನು ಹೊರಡಿಸಲಾಗುವುದು. ಇದರ ಪರಿಣಾಮದ ಬಗ್ಗೆಯೂ ನಾವು ಚರ್ಚೆ ಮಾಡಬೇಕಾಗಿದೆ," ಎಂದು ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ (ಟ್ರಾಯ್) ಅಧ್ಯಕ್ಷ ಪಿಡಿ ವಘೇಲಾ ತಿಳಿಸಿದ್ದಾರೆ.

"ನಮಗೆ ಈಗ ಮಾಹಿತಿ ಲಭ್ಯವಾಗಿದೆ. ನಾವು ಈ ಕಾರ್ಯವನ್ನು ಶೀಘ್ರದಲ್ಲೇ ಆರಂಭ ಮಾಡಲಿದ್ದೇವೆ. ಯಾರಾದರೂ ಕರೆ ಮಾಡಿದಾಗ ಕರೆ ಸ್ವೀಕರಿಸುವವರ ಮೊಬೈಲ್ ಸ್ಕ್ರೀನ್ ಮೇಲೆ ಕೆವೈಸಿ ದಾಖಲೆ ಪ್ರಕಾರ ಹೆಸರು ಕಾಣಿಸಿಕೊಳ್ಳಲಿದೆ," ಎಂದು ವಘೇಲಾ ವಿವರಿಸಿದ್ದಾರೆ.
ನಂಬರ್ ಸೇವ್ ಇಲ್ಲದಿದ್ದರೂ ಕರೆ ಮಾಡಿದವರ ಹೆಸರು ಗೊತ್ತಾಗುತ್ತೆ!
ಮಾಹಿತಿ ಪ್ರಕಾರ ಟೆಲಿಕಾಂ ಕಂಪನಿಗಳು ಸಂಗ್ರಹಿಸಿದ ಕೆವೈಸಿ ಮಾಹಿತಿಗೆ ಅನುಗುಣವಾಗಿ ಕರೆ ಮಾಡುವವರ ಹೆಸರನ್ನು ಪರದೆಯ ಮೇಲೆ ಕಾಣಿಸಿಕೊಳ್ಳಲು ಕಾರ್ಯವಿಧಾನವನ್ನು ಸಕ್ರಿಯಗೊಳಿಸಲಿದೆ. ಮೊಬೈಲ್ ಹೊಂದಿರುವವರು ತಮ್ಮ ಕಾಂಟ್ಯಾಕ್ಟ್ ಲೀಸ್ಟ್ನಲ್ಲಿ ಯಾವುದೇ ಫೋನ್ ಸಂಖ್ಯೆಯನ್ನು ಸೇವ್ ಮಾಡಿಕೊಂಡಿಲ್ಲದಿದ್ದರೂ ಕೂಡಾ ಕರೆ ಮಾಡಿದವರ ಹೆಸರು ತಿಳಿದುಕೊಳ್ಳಲು ಸಾಧ್ಯವಾಗಲಿದೆ.
ಪ್ರಸ್ತುತ ಕೆಲವು ಬಳಕೆದಾರರು ಟ್ರೂಕಾಲರ್ನಂತಹ ಖಾಸಗಿ ಅಪ್ಲಿಕೇಶನ್ಗಳನ್ನು ಬಳಕೆ ಮಾಡುತ್ತಿದ್ದಾರೆ. ಇದರಲ್ಲಿ ಕರೆ ಮಾಡಿದವರ ಹೆಸರು ತಿಳಿಯಬಹುದು. ಆದರೆ ಇದು ಶೇಕಡ ನೂರರಷ್ಟು ಅಧಿಕೃತವಾಗಿರಲಾರದು. ಆದರೆ ಈ ಹೊಸ ವ್ಯವಸ್ಥೆಯು ಕೆವೈಸಿ ಡೇಟಾದಿಂದ ಜನರ ಹೆಸರನ್ನು ಖಾತರಿಪಡಿಸುತ್ತದೆ.
ಇನ್ನು ಕರೆ ಸ್ವೀಕರಿಸುವವರು ಸ್ಕ್ಯಾಮ್ ಅಥವಾ ತಮಗೆ ಬೇಡದ ಕರೆಯನ್ನು ತಪ್ಪಿಸಲು, ಅಗತ್ಯ ಕ್ರಮಕ್ಕಾಗಿ ಪ್ರಾಧಿಕಾರಕ್ಕೆ ವರದಿ ಮಾಡಲು ಸಾಧ್ಯವಾಗುತ್ತದೆ. ಈವರೆಗೆ ಹಲವಾರು ಕ್ರಮಗಳನ್ನು ಕೈಗೊಂಡರು ಕೂಡಾ ಸ್ಕ್ಯಾಮ್ ಕರೆಗಳನ್ನು ಸಂಪೂರ್ಣವಾಗಿ ನಿಲ್ಲಿಸಲು ಇಲಾಖೆಗೆ ಸಾಧ್ಯವಾಗಿಲ್ಲ. ಆದರೆ ಈ ಹೊಸ ವಿಧಾನದ ಮೂಲಕ ಸ್ಪ್ಯಾಮ್ ಕರೆಯನ್ನು ಕರೆ ಸ್ವೀಕಾರ ಮಾಡುವವರೇ ತಪ್ಪಿಸಲು ಸಾಧ್ಯವಾಗುವಂತೆ ಮಾಡಲಾಗಿದೆ.
More From GoodReturns

Gold Rate: ಬೆಂಗಳೂರಲ್ಲಿ ಚಿನ್ನದ ಬೆಲೆ ಏರಿಕೆ…24K/100 ಗ್ರಾಂ ಚಿನ್ನದಲ್ಲಿ ಬರೋಬ್ಬರಿ 5,500 ರೂ. ಏರಿಕೆ!

Bengaluru Airport: ಫ್ರಾಂಕ್ಫರ್ಟ್ ಕಾರ್ಗೋ ಜೊತೆ ಕೆಂಪೇಗೌಡ ಏರ್ಪೋರ್ಟ್ ಮೈತ್ರಿ… ಭಾರತ–ಯುರೋಪ್ ವ್ಯಾಪಾರಕ್ಕೆ ಹೊಸ ವೇಗ!

Silver Rate Today: ಮತ್ತೆ ಸ್ಥಿರವಾದ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Bus Fare Hike: ಯುಗಾದಿ ಹತ್ತಿರದಲ್ಲಿರೋವಾಗ್ಲೇ ಬಸ್ ಟಿಕೆಟ್ ಹೆಚ್ಚಳದ ಸೂಚನೆ! ಎಷ್ಟಾಗಲಿದೆ ಗೊತ್ತಾ ದರ?

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Gold Rate: ಅಂತೂ ಇಳಿಕೆ ಹಾದಿಗೆ ಬಂದ ಚಿನ್ನದ ಬೆಲೆ…ಬೆಂಗಳೂರಿನಲ್ಲಿ ಇಂದಿನ ರೇಟ್ ಎಷ್ಟು?

Tata Groups: ಕರ್ನಾಟಕದಲ್ಲಿ ಟಾಟಾ ಸಂಸ್ಥೆ 2.9 ಬಿಲಿಯನ್ ಡಾಲರ್ ಹೂಡಿಕೆ…ಸಾವಿರಾರು ಉದ್ಯೋಗಿಗಳಿಗೆ ಗುಡ್ನ್ಯೂಸ್!

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Bengaluru Gold Rate: ಬೆಂಗಳೂರಿನಲ್ಲಿ ಗಗನಕ್ಕೇರಿದ ಚಿನ್ನದ ಬೆಲೆ! ದಿಢೀರ್ 31,600 ರೂ. ಏರಿಕೆ

Power Cut: ಇಂದು ಇಲ್ಲೆಲ್ಲಾ ಇರಲ್ಲ ಕರೆಂಟ್! ಬೆಸ್ಕಾಂ ಇಲಾಖೆಯಿಂದ ಕ್ರಮ

Iran-Israel War: ಇಸ್ರೇಲ್-ಅಮೆರಿಕ ವೈಮಾನಿಕ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮರಣ!



Click it and Unblock the Notifications